Breaking News
Home / 2021 / ಮೇ / 10 (page 3)

Daily Archives: ಮೇ 10, 2021

ಲಾಕ್ ಡೌನ್: ಸಂಚಾರಕ್ಕೆ ಕಠಿಣ ನಿರ್ಬಂಧ

ವಿಜಯಪುರ: ನಗರದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ ಸಿಬ್ಬಂದಿಯೊಂದಿಗೆ ಸ್ವತಃ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಿದರು. ವಾಹನಗಳನ್ನು ಠಾಣೆಯಲ್ಲಿ ನಿಲ್ಲಿಸಿ, ನಡೆದುಕೊಂಡು ಹೋಗುವಂತೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಮಹಾರಾಷ್ಟ್ರ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ವಿಜಯಪುರ ನಗರ …

Read More »

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

ಬೆಂಗಳೂರು: ಕೊರೊನಾ ದೇಶದೆಲ್ಲೇಡೆ ಹಬ್ಬಿದ್ದು, ಸಾವು-ನೋವು ಸಂಭವಿಸಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಪತಿಸ್ಥಿತಿಯನ್ನು ಹತೋಟಿಗೆ ತರಲು ಲಾಕ್​ಡೌನ್ ಘೋಷಣೆ ಮಾಡಿದ್ದು, ಜನರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸಿನಿಮಾ ರಂಗದವರು ಕೂಡ ಈ ಸಂಕಷ್ಟದಿಂದ ಹೊರತಾಗಿಲ್ಲ. ಹೀಗಾಗಿ ಅನೇಕರು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಸಹಾಯ ಹಸ್ತ ನೀಡುತ್ತಿದ್ದಾರೆ. ಈ ರೀತಿ ನೆರವಿಗೆ ದಾವಿಸಿದವರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಪುತ್ರ ನಟ ವಿನೋದ್ ರಾಜ್ ಕೂಡ ಒಬ್ಬರು. ಇದೀಗ ಸಿನಿಮಾ …

Read More »

ಇಂದಿನಿಂದ ಕಟ್ಟುನಿಟ್ಟಿನ ಲಾಕ್‍ಡೌನ್

ಕೊರೊನಾ ಸೋಂಕು ಹರಡುವಿಕೆ ತಡೆಗೆ ರಾಜ್ಯ ಸರ್ಕಾರ ಮೇ 10ರಿಂದ 24ರ ವರೆಗೆ ಘೋಷಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾ ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ದಂಡಾಧಿಕಾರಿ ರಾಮಚಂದ್ರನ್ ಆರ್ ಅವರು ಈಗಾಗಲೇ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ನಿಯಮ ಉಲ್ಲಂಘಿಸಿ ರಸ್ತೆಗಿಳಿಸಿದರೆ ವಾಹನಗಳನ್ನೂ ವಶಕ್ಕೆ ತೆಗೆದುಕೊಳ್ಳಲಿದ್ದಾರೆ. ಅನಗತ್ಯ ಸಂಚರಿಸುವಂತಿಲ್ಲ: …

Read More »

ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ‌ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ. ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ‌ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ …

Read More »

ಎಲ್ಲರೂ ಒಟ್ಟಾಗಿ ಕೋವಿಡ್ ಸೋಂಕನ್ನು ಸೋಲಿಸೋಣ: ಸಿಎಂ ಯಡಿಯೂರಪ್ಪ

ಬೆಂಗಳೂರು: ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಕಠಿಣ ನಿಯಮಗಳು ಯಶಸ್ವಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೋನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. …

Read More »

alert! ಪಾಲಿಸಿದಾರರಿಗೆ `LIC’ ಯಿಂದ ಮಹತ್ವದ ಮಾಹಿತಿ

ನವದೆಹಲಿ : ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ತನ್ನ ಗ್ರಾಹಕರಿಗೆ ಇಡೀ ಪ್ರಕ್ರಿಯೆಯನ್ನು ತೊಂದರೆರಹಿತ ಮತ್ತು ಸುಲಭಗೊಳಿಸಲು ಕ್ಲೇಮ್ ಇತ್ಯರ್ಥ ಅಗತ್ಯಗಳಿಗೆ ಸಂಬಂಧಿಸಿದಂತೆ ಹಲವಾರು ಸಡಿಲಿಕೆಗಳನ್ನು ಹೊರತಂದಿದೆ. ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಲಾಗಿದೆ ವಿಮಾ ದಾರ ವ್ಯಕ್ತಿಯು ಆಸ್ಪತ್ರೆಯ ಆವರಣದೊಳಗೆ ಸತ್ತರೆ ಪರಿಶೀಲನೆ ವಿಧಾನವಾಗಿ ಎಲ್ ಐಸಿ ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಿದೆ. ಮುನ್ಸಿಪಲ್ ಮರಣ ಪ್ರಮಾಣಪತ್ರಗಳಲ್ಲದೆ, ಈಗ ಎಲ್‌ಐಸಿ ಅಂಗೀಕರಿಸಿದ ಸಾವುಗಳ ಇತರ ಪುರಾವೆಗಳಲ್ಲಿ, ಮರಣ ಪ್ರಮಾಣಪತ್ರ, …

Read More »

ಕುಂಟು ನೆಪ ಹೇಳಿ ರಸ್ತೆಗಿಳಿದವ್ರಿಗೆ ಬಿಸಿ ಮುಟ್ಟಿಸುತ್ತಿರೋ ಪೊಲೀಸ್​, ಸಾಲು ಸಾಲು ವಾಹನಗಳು ಸೀಜ್

ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಲಾಕ್​ಡೌನ್ ಜಾರಿಯಾಗಿದೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಸುಖಾಸುಮ್ಮನೆ ವಾಹನಗಳಲ್ಲಿ ರಸ್ತೆಗಿಳಿಯದಂತೆ ಸೂಚಿಸಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಕುಂಟು ನೆಪಗಳನ್ನ ಹೇಳಿಕೊಂಡು ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಜೊತೆಗೆ ವಾಹನಗಳನ್ನ ಸೀಜ್ ಮಾಡ್ತಿದ್ದಾರೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲ ಜನರು ಅನಾವಶ್ಯಕ ಓಡಾಡೋದಲ್ಲದೆ ಪೊಲೀಸರ ಜೊತೆ ವಾಗ್ವಾದ ಮಾಡ್ತಿದ್ದಾರೆ. …

Read More »

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

ಭೋಪಾಲ್​: ಆತ್ಮಹತ್ಯೆ ಮಾಡಿಕೊಂಡ ಮಗಳ ಮೃತದೇಹವನ್ನು ತಂದೆ ಮಂಚದ ಮೇಲೆ ಮಲಗಿಸಿ, ಕಟ್ಟಿಕೊಂಡು ಸುಮಾರು 35 ಕಿಮೀ ಹೊತ್ತು ನಡೆದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ನಡೆದಿದೆ. ಮಗಳ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ಶವವನ್ನು ಸಾಗಿಸಲು ಒಂದು ವಾಹನದ ವ್ಯವಸ್ಥೆ ಮಾಡಲು ಸಾಧ್ಯವಾಗದೆ ಮಗಳ ಶವವನ್ನು ಹೊತ್ತು 35 ಕಿಮೀ ದೂರವನ್ನು ಏಳು ಗಂಟೆಗಳಲ್ಲಿ ಕ್ರಮಿಸಿದ್ದಾರೆ. ಇವರೊಂದಿಗೆ ಹಳ್ಳಿಯ ಕೆಲವರೂ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ …

Read More »

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

ದೆಹಲಿ: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ನೀತಿ ಆಯೋಗ (National Institution for Transforming India-NITI Aayog) ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ. ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ …

Read More »

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.   ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ …

Read More »