Home / 2021 / ಮೇ / 13

Daily Archives: ಮೇ 13, 2021

ಸಿಎಂ, ಸಚಿವರ 1 ವರ್ಷದ ವೇತನ ಕೋವಿಡ್ ಪರಿಹಾರ ನಿಧಿಗೆ

ಬೆಂಗಳೂರು, ಮೇ 13; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಭಾರೀ ಆಘಾತವನ್ನು ಉಂಟು ಮಾಡಿದೆ. ಸರ್ಕಾರ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ 14 ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದೆ. ಪರಿಹಾರ ಕಾರ್ಯಗಳಿಗಾಗಿ ಸಚಿವರ ವೇತನವನ್ನು ಪರಿಹಾರ ನಿಧಿಗೆ ನೀಡಲಾಗುತ್ತದೆ. ಗುರುವಾರ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಸಂಪುಟದ 32 ಸಚಿವರು ಒಂದು ವರ್ಷದ ವೇತನವನ್ನು ಕೋವಿಡ್ -19 ಪರಿಹಾರ ನಿಧಿಗೆ ನೀಡಲಿದ್ದಾರೆ. …

Read More »

ಕೋವಿಡ್: 12ದಿನದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು; ಇಬ್ಬರು ಮಕ್ಕಳು ಅನಾಥ

ನವದೆಹಲಿ: ಭಾರತದಲ್ಲಿ ಕೋವಿಡ್ ನ ಎರಡನೇ ರೂಪಾಂತರಿ ಅಲೆ ತೀವ್ರಗತಿಯಲ್ಲಿ ಹರಡುತ್ತಿದೆ. ಕೋವಿಡ್ ಸೋಂಕಿನಿಂದ ಕುಟುಂಬಗಳು ಒಡೆದು ಹೋಗಿದ್ದು, ಜನರ ಬದುಕು ಹಳಿತಪ್ಪಿದ ರೈಲಿನಂತಾಗಿದೆ ಎಂದು ತಿಳಿಸಿದೆ. ಕೋವಿಡ್ ಸೋಂಕಿನಿಂದ ಸಂಭವಿಸಿದ ಹೃದಯವಿದ್ರಾವಕ ಘಟನೆಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದು, ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲೂ ಇಂತಹ ಘಟನೆಯೊಂದು ನಡೆದಿದೆ. ಕೋವಿಡ್ ಸೋಂಕಿನಿಂದಾಗಿ ತಂದೆ, ತಾಯಿ ಮತ್ತು ಅಜ್ಜ, ಅಜ್ಜಿ ನಿಧನರಾಗಿದ್ದು, ಇದರ ಪರಿಣಾಮ ಅರು ಮತ್ತು ಎಂಟು ವರ್ಷದ ಇಬ್ಬರು ಹೆಣ್ಣುಮಕ್ಕಳು …

Read More »

ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ – KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು : ‘ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ‘ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು …

Read More »

ಒಂದು ಪರ್ಸೆಂಟ್ ಜನಕ್ಕೆ ವ್ಯಾಕ್ಸಿನ್ ಕೊಡಲು ಸಾಧ್ಯವಾಗಿಲ್ಲ ಯಾಕೆ?: ಹೈಕೋರ್ಟ್ ತರಾಟೆ

ಬೆಂಗಳೂರು, ಮೇ. 13: ರಾಜ್ಯದ ಜನತೆಗೆ ಯಾವಾಗ ವ್ಯಾಕ್ಸಿನ್ ಕೊಡ್ತೀರಿ ? 31 ಲಕ್ಷ ಮಂದಿಗೆ ಎರಡನೇ ಡೋಸ್ ವ್ಯಾಕ್ಸಿನ್ ಯಾವಾಗ ನೀಡ್ತೀರಾ? ನಿಮಗೆ ನೀಡಲು ಸಾಧ್ಯವಿಲ್ಲ ಎನ್ನುವುದಾದರೆ ಹೇಳಿ. ನಿಮ್ಮ ಹೇಳಿಕೆಯನ್ನು ಹಾಗೇ ನ್ಯಾಯಾಲಯ ದಾಖಲಿಸಿಕೊಳ್ಳುತ್ತದೆ ! ಕೊರೊನಾ ಎರಡನೇ ಅಲೆಗೆ ತುತ್ತಾಗಿರುವ ಜನರ ಆರೋಗ್ಯ ರಕ್ಷಣೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಎಡವಿದೆ. …

Read More »

ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ : ಕಾಂಗ್ರೆಸ್

ಬೆಂಗಳೂರು: ಕೊವೀಡ್ ನಿರ್ವಹಣೆಯ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಮಾಡುತ್ತಿರುವ ಟೀಕಾ ಪ್ರಹಾರವನ್ನು ಮುಂದುವರಿಸಿರುವ ಕಾಂಗ್ರೆಸ್ , ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ ಎಂದು ಕಿಡಿಕಾರಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ” ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು, ತಿಕ್ಕಲು ಸಚಿವರಿಗೆ ಪರಿಜ್ಞಾನ, …

Read More »

ಮತ್ತೊಮ್ಮೆ ನಿರೀಕ್ಷೆ ಹುಸಿಯಾಗಿಸಿದ ಸರ್ಕಾರ; ವಿಶೇಷ ಪ್ಯಾಕೇಜ್ ಘೋಷಿಸದ ಸಿಎಂ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕಠಿಣ ಕ್ರಮಗಳಿಂದಾಗಿ ರಾಜ್ಯದಲ್ಲಿ ಹಲವರು ಸಂಕಷ್ಟಕ್ಕೀಡಾಗಿದ್ದು, ಬಡವರಿಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ನಿರೀಕ್ಷೆಯನ್ನು ಸರ್ಕಾರ ಮತ್ತೊಮ್ಮೆ ಹುಸಿಯಾಗಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಶೇಷ ಪ್ಯಾಕೇಜ್ ಬಗ್ಗೆ ಪರೋಕ್ಷವಾಗಿ ನಿರಾಕರಿಸಿದ್ದಾರೆ. ಯಾವುದೇ ಆರ್ಥಿಕ ಪ್ಯಾಕೇಜ್ ಪ್ರಸ್ತಾಪಿಸದ ಸಿಎಂ, ಕೊರೊನಾ ಹೆಚ್ಚಾಗುತ್ತಿರುವುದರಿಂದ ಸೋಂಕಿತರ ಜೀವ ಉಳಿಸುವುದು ಸರ್ಕಾರದ ಮೊದಲ ಆದ್ಯತೆ ಎಂದಿದ್ದಾರೆ. ಕಠಿಣ ಕ್ರಮ ಜಾರಿ ಮಾಡಿರುವುದರಿಂದ ಜನರು ತೊಂದರೆಗೀಡಾಗಿದ್ದಾರೆ ನಿಜ. …

Read More »

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿ

ಬೆಂಗಳೂರು : ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿರುವ ಅವರು, ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ …

Read More »

ಸುಮಾರು 50 ಲಕ್ಷ ರೂಪಾಯಿಗಳಲ್ಲಿ 60 ಬೆಡ್ ಗಳ ಉಚಿತ ಕೋವಿಡ್ ಕೇರ್ ಸೆಂಟರ್

ಬೆಳಗಾವಿ: ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ  ತಿಳಿಸಿದರು. ಕೊರೊನಾ ಮಹಾಮಾರಿಯಿಂದ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ …

Read More »

ಬಂಗಾಳ: 11 ದಿನದಲ್ಲೇ ಶಾಸಕತ್ವ ತ್ಯಜಿಸಿದ ಬಿಜೆಪಿ ಸಂಸದರು!

ಕೊಲ್ಕತ್ತಾ: ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯಬಲ 77ರಿಂದ 75ಕ್ಕೆ ಇಳಿದಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಬಿಜೆಪಿಯ ಇಬ್ಬರು ಸಂಸದರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹೈಕಮಾಂಡ್ ಆದೇಶದಂತೆ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಬಿಜೆಪಿಯ ಕ್ರಮವನ್ನು ಲೋಕಸಭೆಯಲ್ಲಿ ಸ್ಥಾನ ಭದ್ರಪಡಿಸಿಕೊಳ್ಳುವ ಕ್ರಮ ಇದಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಎಲ್ಲ ಬಿಜೆಪಿ ಶಾಸಕರಿಗೆ ಕೇಂದ್ರೀಯ ಭದ್ರತೆ ನೀಡಿರುವ ಕೇಂದ್ರ …

Read More »

ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಭಾರತದ ರಾಜ್ಯಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಸ್ಪರ ಸ್ಪರ್ಧಿಸುವಂತಾಗಿದೆ. ಯುಪಿ ವಿರುದ್ಧ ಮಹಾರಾಷ್ಟ್ರ, ಮಹಾರಾಷ್ಟ್ರ ವಿರುದ್ದ ಒರಿಸ್ಸಾ, ಒರಿಸ್ಸಾ ದೆಹಲಿಯ ವಿರುದ್ಧ ಹೋರಾಡುತ್ತಿದೆ” ಎಂದು ಹೇಳಿದ್ದಾರೆ. “ಭಾರತ ಎಲ್ಲಿದೆ?” ಎಂದು ಪ್ರಶ್ನಿಸಿರುವ ಅವರು, “ಈ ಎಲ್ಲ ಬೆಳವಣಿಗೆಗಳು ಭಾರತದ …

Read More »