Breaking News
Home / 2021 / ಮೇ / 13 (page 2)

Daily Archives: ಮೇ 13, 2021

ಇಂದು ಸಂಜೆ ಸಿಎಂ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಚೈನ್ ಲಿಂಕ್ ಕತ್ತರಿಸುವ ಸಲುವಾಗಿ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಆದರೆ ಈ ಲಾಕ್ ಡೌನ್ ಅವಧಿ ಮುಗಿಯುವ ಮೊದಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ವಿಷಯವನ್ನು ತಿಳಿಸಲಿದ್ದಾರೆ. ಹೌದು. ಇಂದು ಸಂಜೆ 5 ಗಂಟೆಗೆ ಬಿಎಸ್‍ವೈ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲ ಹುಟ್ಟಿಸಿದೆ. ಯಾಕಂದ್ರೆ ಲಾಕ್ ಡೌನ್ ಅವಧಿ ಪೂರ್ಣಗೊಳ್ಳುವ ಮೊದಲೇ ಸಿಎಂ ಸಚಿವರ ಜೊತೆ ಸಭೆ ನಡೆಸುತ್ತಿದ್ದಾರೆ. ಲಾಕ್ ಡೌನ್ …

Read More »

ಐಸಿಯುಗೆ ಸ್ಥಳಾಂತರಿಸಲು ಕೇಳಿಕೊಂಡ್ರು ಜನರಲ್​ ವಾರ್ಡ್​ನಲ್ಲೇ ಚಿಕಿತ್ಸೆ: ಯುವಕ ಸಾವು

ಚಿಕ್ಕಮಗಳೂರು: ಸರಿಯಾದ ಸಮಯಕ್ಕೆ ವೆಂಟಿಲೇಟರ್​ ಸಿಗದೇ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೇಘರಾಜ್(31) ಮೃತ ಯುವಕ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ನಿವಾಸಿ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಜನರಲ್ ವಾರ್ಡ್​ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಐಸಿಯುಗೆ ಶಿಫ್ಟ್ ಮಾಡುವಂತೆ ಯುವಕ ಕೇಳಿಕೊಂಡಿದ್ದ. ಆದರೆ, ಯುವಕನ ಮನವಿಯನ್ನು ಪುರಷ್ಕರಿಸಿದೇ ಕೊನೆಯ ಕ್ಷಣದವರೆಗೂ ಜನರಲ್ ವಾರ್ಡ್​ನಲ್ಲೇ ಯುವಕನಿಗೆ ಚಿಕಿತ್ಸೆ …

Read More »

ರಾತ್ರಿ 2 ಗಂಟೆಗೆ ಆಕ್ಸಿಜನ್​ ತಂದುಕೊಟ್ಟ ರೇಣುಕಾಚಾರ್ಯ; 20 ರೋಗಿಗಳು ಅಪಾಯದಿಂದ ಪಾರು

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ವೈದ್ಯಕೀಯ ಆಕ್ಸಿಜನ್ ಖಾಲಿಯಾಗುವ ಹಂತ ತಲುಪಿದ್ದು, ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಂದ ರಾತ್ರಿ 2 ಗಂಟೆ ಸುಮಾರಿಗೆ ಆಕ್ಸಿಜನ್ ಪೂರೈಕೆ ಆಗಿದೆ. ಪಿಪಿಇ ಕಿಟ್ ಹಾಕಿಕೊಂಡು ವಾರ್ಡ್‌ಗೆ ಭೇಟಿ ನೀಡುವ ಸಲುವಾಗಿ ರೇಣುಕಾಚಾರ್ಯ ಆಸ್ಪತ್ರೆಗೆ ಬಂದಿದ್ದಾಗ ಮೆಡಿಕಲ್ ಆಕ್ಸಿಜನ್ ಖಾಲಿಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕೇವಲ 3 ಗಂಟೆಗಳಿಗೆ ಆಗುವಷ್ಟು ಆಕ್ಸಿಜನ್ ಮಾತ್ರ ಇದೆ, ಆಕ್ಸಿಜನ್ ಬೇಕೆಂದು ವೈದ್ಯರು ಶಾಸಕರಿಗೆ ತಿಳಿಸಿದ್ದರು. …

Read More »

ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು.: H.D.K.

ಬೆಂಗಳೂರು: ರಾಜ್ಯದಲ್ಲಿಯೂ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದ್ದು, ಕರ್ನಾಟಕಕ್ಕೆ 1,200 ಟನ್‌ ಆಮ್ಲಜನಕ ಪೂರೈಸುವಂತೆ ಕೋರ್ಟ್‌ ಈಗಾಗಲೇ ಆದೇಶಿಸಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ 120 ಟನ್‌ ಆಮ್ಲಜನಕ ಮಾತ್ರ ಪೂರೈಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ‘ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ?’ ಎಂದಿದ್ದಾರೆ.ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಕರ್ನಾಟಕಕ್ಕಿಂತ ಉತ್ತರ ಪ್ರದೇಶಕ್ಕೆ ಹೆಚ್ಚು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಯಾಗಿದೆ. …

Read More »

ರೈಲ್ವೆ ಪ್ರಯಾಣಕ್ಕೆ ನಕಲಿ ‘ನೆಗಟಿವ್’ ವರದಿ; ಆರೋಪಿ ಬಂಧನ

ಬೆಂಗಳೂರು: ನಗರದಿಂದ ರೈಲಿನ ಮೂಲಕ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಪ್ರಯಾಣಿಸುತ್ತಿದ್ದ ಜನರಿಗೆ ಕೋವಿಡ್ ನೆಗಟಿವ್ ನಕಲಿ ವರದಿ ಪ್ರಪತಿ ನೀಡುತ್ತಿದ್ದ ಆರೋಪದಡಿ ಸಂಪತ್‌ ಲಾಲ್ ಎಂಬಾತನನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಅಕ್ಕಿಪೇಟೆ ಮುಖ್ಯರಸ್ತೆ ನಿವಾಸಿ ಸಂಪತ್ ಲಾಲ್, ಹಲವು ದಿನಗಳಿಂದ ಕೃತ್ಯ ಎಸಗುತ್ತಿದ್ದ. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಆತನಿಂದ 3 ನಕಲಿ ನೆಗಟಿವ್ ವರದಿ ಪ್ರತಿ ಹಾಗೂ ಮೊಬೈಲ್ …

Read More »

ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ; ಐವರ ಬಂಧನ

ಮೈಸೂರು, : ರಾಜ್ಯದಲ್ಲಿ ರೆಮ್‌ಡಿಸಿವಿರ್ ಚುಚ್ಚುಮದ್ದು ಕೊರತೆ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ ಮಾಡುತ್ತಿದ್ದ ಎರಡು ಜಾಲಗಳನ್ನು ಪತ್ತೆ ಮಾಡಿರುವ ಮೈಸೂರು ಸಿಸಿಬಿ ಪೊಲೀಸರು, ಐವರನ್ನು ಬಂಧಿಸಿದ್ದಾರೆ.ಮೈಸೂರಿನ ಜೆಪಿ ನಗರದ ಕಾಮಾಕ್ಷಿ ಆಸ್ಪತ್ರೆಯ ಸ್ಟಾಫ್ ನರ್ಸ್ ಜಿ.ಸುರೇಶ್ (27), ಕೆ.ಆರ್ ಆಸ್ಪತ್ರೆ ಇನ್‌ಸ್ಟಿಟ್ಯೂಟ್ ಆಫ್ ನೆಪ್ರೋ ನ್ಯೂರೋ ಸ್ಟಾಫ್ ನರ್ಸ್ ಡಿ.ಎಂ ರಾಘವೇಂದ್ರ(27), ಕೆ.ಆರ್ ಆಸ್ಪತ್ರೆ ಸ್ಟಾಫ್ ನರ್ಸ್ ಅಶೋಕ (31), ವಿಶ್ವೇಶ್ವರ ನಗರದ ಗಿರೀಶ್ ಚಂದ್ರ …

Read More »

2 ರಿಂದ 18 ವರ್ಷದ ಮಕ್ಕಳ ಮೇಲೆ ಕೋವ್ಯಾಕ್ಸೀನ್ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗುರುವಾರ (ಮೇ 13) 2 ರಿಂದ 18 ವರ್ಷದ ಮಕ್ಕಳ ಮೇಲೆ ಭಾರತ್ ಬಯೋಟೆಕ್‌ನ ಕೊವ್ಯಾಕ್ಸೀನ್ ಪ್ರಯೋಗ ನಡೆಸಲು ಅನುಮತಿ ನೀಡಿದೆ. ಭಾರತ್ ಬಯೋಟೆಕ್ ತನ್ನ ದ್ವಿತೀಯ ಹಾಗೂ ತೃತೀಯ ಹಂತದ ಪ್ರಯೋಗಗಳನ್ನು “525 ಆರೋಗ್ಯವಂತ ಸ್ವಯಂಸೇವಕರ” ಮೇಲೆ ನಡೆಸಲಾಗುವುದು ಎಂದು ಹೇಳಿದೆ. ಪ್ರಯೋಗವು ಒಂದನೇ ದಿನ ಹಾಗೂ 28ನೇ ದಿನದಂದು ನೀಡಲಾಗುವ ಲಸಿಕೆಗಳ ಎರಡು ಡೋಸ್ ಗಳನ್ನು ಒಳಗೊಂಡಿರುತ್ತದೆ. …

Read More »

Covid-19 Vaccine:ವ್ಯಾಕ್ಸಿನ್ ಹಾಕಿಸಿಕೊಂಡ ಬಳಿಕ ಮದ್ಯ ಸೇವನೆ ಮಾಡಬಹುದೇ? ಇಲ್ಲಿದೆ ಉತ್ತರ

ನವದೆಹಲಿ: Covid-19 Vaccine – ದೇಶಾದ್ಯಂತ ಮೇ 1 ರಿಂದ 18 ವಯಸ್ಸಿಗಿಂತ ಮೇಲ್ಪಟ್ಟ ಜನರಿಗೆ ಲಸಿಕಾಕರಣ ಅಭಿಯಾನ ಆರಂಭಗೊಂಡಿದೆ. ಕೊರೊನಾ ವೈರಸ್ ನಿಂದ ರಕ್ಷಣೆ ಪಡೆಯಲು ಅಪಾರ ಸಂಖ್ಯೆಯಲ್ಲಿ ಜನರು ಲಸಿಕಾಕರಣ ಕೇಂದ್ರಕ್ಕೆ ಧಾವಿಸುತ್ತಿದ್ದಾರೆ. ಏತನ್ಮಧ್ಯೆ ಲಸಿಕಾಕರಣ ಹಾಗೂ ಮದ್ಯ ವಿಷಯ ಅತಿ ಹೆಚ್ಚು ಪ್ರಶ್ನೆಗೆ ಒಳಗಾದ ವಿಷಯವಾಗಿ ಹೊರಹೊಮ್ಮುತ್ತಿದೆ. ಕೊವಿಡ್-19 (Covid-19) ಲಸಿಕೆ ಹಾಕಿಸಿಕೊಳ್ಳುವುದರ ಅರ್ಥ No Alcohol? ಕೊವಿಡ್ -19 ಲಸಿಕೆ ಹಾಕಿಸಿಕೊಂಡ ಬಳಿಕ ಅಲ್ಕೋಹಾಲ್ …

Read More »

ಕೋವಿಡ್ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ಎಷ್ಟು ದಿನಗಳ ನಂತರ ಎರಡನೇ ಡೋಸ್‌ ತೆಗೆದುಕೊಳ್ಳಬೇಕು?

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ವಿರುದ್ಧದ ವ್ಯಾಕ್ಸಿನೇಷನ್ ಅಭಿಯಾನವು ಕಳೆದ ಒಂದೂವರೆ ತಿಂಗಳಲ್ಲಿ ವೇಗವನ್ನು ಪಡೆದುಕೊಂಡಿದೆ. ಪ್ರತಿದಿನ 20 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಈವರೆಗೆ 17.52 ಮಿಲಿಯನ್ ಕೊರೋನಾ ಲಸಿಕೆಗಳನ್ನು ನೀಡಲಾಗಿದೆ. ಎರಡೂ ಲಸಿಕೆ ಪ್ರಮಾಣವನ್ನು ತೆಗೆದುಕೊಂಡ ಲಕ್ಷಾಂತರ ಜನರಿದ್ದಾರೆ. ಲಸಿಕೆಯ ಎರಡನೇ ಪ್ರಮಾಣವನ್ನು ಯಾವಾಗ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಜನರಲ್ಲಿ ಇನ್ನೂ ಗೊಂದಲವಿದೆ. ವಿಶೇಷವಾಗಿ ಹೆಚ್ಚಿನ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಲಭ್ಯವಿರುವ ಕೋವಿಶೀಲ್ಡ್ …

Read More »

ಗ್ರಾಹಕರಿಗೆ ಶುಭ ಸುದ್ದಿ ನೀಡಿದ ಟಾಟಾ ಮೋಟಾರ್ಸ್ !

ಮುಂಬೈ: ದೇಶದಲ್ಲಿ ಕರೋನಾ ಮಹಾಮಾರಿಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳು ಲಾಕ್‌ಡೌನ್‌ಗಳನ್ನು ವಿಧಿಸಿವೆ. ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶೀಯ ವಾಹನ ದೈತ್ಯ ಟಾಟಾ ಮೋಟಾರ್ಸ್ ತನ್ನ ಗ್ರಾಹಕರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಟಾಟಾ ಮೋಟಾರ್ಸ್ ಪ್ರಕಟಣೆಯ ಪ್ರಕಾರ, ಏಪ್ರಿಲ್ 31, 2021 ಮತ್ತು ಮೇ 31, 2021 ರ ಅವಧಿಯವರೆಗೆ ಮುಕ್ತಾಯಗೊಳ್ಳುವ ಕಾರುಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ಪರಿಷ್ಕೃತವಾಗಿ 2021 ರ ಜೂನ್ …

Read More »