Breaking News
Home / 2021 / ಮೇ / 14

Daily Archives: ಮೇ 14, 2021

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು : ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ಅವರು ಕೊರೊನಾಗೆ ಬಲಿಯಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. 10 ದಿನಗಳ ಹಿಂದೆ ಮಹಾದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರು ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದ ಮಹಾದೇವ ಪ್ರಕಾಶ್ …

Read More »

ಕಾಲ್ ಸೆಂಟರ್ ನ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್- ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರು :ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ …

Read More »

ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ: 13 ರೋಗಿಗಳು ಸಾವು

ಪಣಜಿ: ಕಳೆದ ಕೆಲವು ದಿನಗಳಿಂದ ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ ಸಾವಿಗೀಡಾದವರ ಸಂಖ್ಯೆ 75ಕ್ಕೇರಿದೆ. ಸತತ 6 ರಾತ್ರಿ ಇಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ಏರಿಳಿತ ಕಂಡು ಬಂದಿದ್ದು, ಕಳೆದ ರಾತ್ರಿ 13 ರೋಗಿಗಳು ಮೃತಪಟ್ಟಿದ್ದಾರೆ. ರೋಗಿಗಳ ಸಂಬಂಧಿಕರು ಸೋಷಿಯಲ್ ಮೀಡಿಯಾದಲ್ಲಿ ಸಹಾಯ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದು, ಆರೋಗ್ಯ ಕಾರ್ಯದರ್ಶಿ ರವಿ ಧವನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸರಬರಾಜನ್ನು ಪುನಃಸ್ಥಾಪಿಸಲು ಆಸ್ಪತ್ರೆಗೆ ಧಾವಿಸಿದ್ದಾರೆ. …

Read More »

ಕೋವಿಡ್ ಉಲ್ಬಣಗೊಳ್ಳಲು ಕೇಂದ್ರ ಸರ್ಕಾರವೇ ಕಾರಣ: ಕೋಳಿವಾಡ

ರಾಣಿಬೆನ್ನೂರು: ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳು ದೇಶದಲ್ಲಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡಲು ಕಾರಣವಾಗಿದೆ ಎಂದು ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಆರೋಪಿಸಿದ್ದಾರೆ. ಸ್ಥಳೀಯ ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, 2021ರ ಮಾರ್ಚ್‌ನಲ್ಲಿಯೇ ತಜ್ಞರು ಎರಡನೇ ಅಲೆಯ ಭೀಕರತೆ ಕುರಿತು ಸೂಚನೆ ನೀಡಿದ್ದರೂ ಕೇಂದ್ರ ಸರ್ಕಾರ ಅದನ್ನು ಕಡೆಗಣಿಸಿ ವಿದೇಶಗಳಿಗೆ ಲಸಿಕೆ ರಫ್ತು ಮಾಡಿತು. ಕುಂಭಮೇಳದಲ್ಲಿ ಲಕ್ಷಾಂತರ ಜನರು ಸೇರಲು ಅವಕಾಶ ಮಾಡಿಕೊಟ್ಟಿದ್ದು ದೊಡ್ಡ ತಪ್ಪು. ರಾಜ್ಯದಲ್ಲಿ …

Read More »

ಮೇ 16 ರಿಂದ 31 ವೇಳೆಗೆ ರಾಜ್ಯಗಳಿಗೆ ಕೇಂದ್ರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಆರೋಗ್ಯ ಇಲಾಖೆ

ನವದೆಹಲಿ: ಮೇ 16 ರಿಂದ 31 ವೇಳೆಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮೇ 16 ರಿಂದ ಮೇ 31 ರವರೆಗೆ ಒಟ್ಟು 161.99 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ಸರಬರಾಜು …

Read More »

ಜುಲೈ ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಲಭ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ದೇಶದ ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಕೊರೊನಾ ಲಸಿಕೆ ಅಭಾವದ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಷಿ ಇದಕ್ಕೆ ವಿರೋಧಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವ್ರು ಭಾರತದಲ್ಲಿ ಲಸಿಕೆಗಳನ್ನ ತಯಾರು ಮಾಡಲಾಗುತ್ತಿತ್ತು. ಆದರೆ ಎಷ್ಟೋ ಮಂದಿ ಲಸಿಕೆಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡಿದರು. ನಕಾರಾತ್ಮಕ ಅಭಿಪ್ರಾಯ ಹೆಚ್ಚಾಗಿ ಬಂದಿದ್ದರಿಂದ ಕಂಪನಿಗಳು ಲಸಿಕೆ ಉತ್ಪಾದನೆಯನ್ನ ಕಡಿಮೆ ಮಾಡಿದವು. ಲಸಿಕೆ ಕುರಿತಾದ ತಪ್ಪು ತಿಳುವಳಿಕೆಯಿಂದಾಗಿ ಉತ್ಪಾದನೆ ಕುಂಠಿತವಾಯ್ತು ಎಂದು ಹೇಳಿದರು. …

Read More »

ಕೋವಿಡ್ ದುರಂತ: ಪೋಷಕರನ್ನು ಕಳೆದುಕೊಂಡ ಕುಟುಂಬ, ಮಕ್ಕಳಿಗೆ ಆರ್ಥಿಕ ನೆರವು; ಕೇಜ್ರಿವಾಲ್

ನವದೆಹಲಿ:ಕೋವಿಡ್ ಸೋಂಕಿನಿಂದ ದುಡಿಯುತ್ತಿದ್ದ ಕುಟುಂಬದ ವ್ಯಕ್ತಿಯನ್ನು ಕಳೆದುಕೊಂಡಿದ್ದ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದನ್ನು ವಿಸ್ತರಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ(ಮೇ 14) ಘೋಷಿಸಿದ್ದಾರೆ. ವರ್ಚುವಲ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ದೆಹಲಿ ಸರ್ಕಾರ ಭರಿಸಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 8,500 ಕೋವಿಡ್ …

Read More »

ರಾಧೆ’ ಸಿನಿಮಾ, ಬಿಡುಗಡೆ ಆದ ದಿನವೇ ಲೀಕ್!

ಮುಂಬೈ: ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಕೊರೊನಾ ಹಾವಳಿಯ ನಡುವೆಯೂ ಅಭಿಮಾನಿಗಳನ್ನು ರಂಜಿಸಲು ಸಲ್ಲು ರಾಧೆ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಸಲ್ಮಾನ್ ಸಿನಿಮಾ ಅಂದ್ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿರುತ್ತೆ. ರಾಧೆ ನೋಡಲು ತುದಿಗಾಲಿನಲ್ಲಿ ನಿಂತಿದ್ದರು. ಆದರಂತೆ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದಂತೆ ಅಭಿಮಾನಿಗಳು ಮುಗಿಬಿದ್ದು ವೀಕ್ಷಿಸಿದ್ದಾರೆ. ಚಿತ್ರಕ್ಕೆ ಮೊದಲ ದಿನ ಮಿಶ್ರ …

Read More »

ಕೊರೋನಾ ಸಂಬಂಧಿತ ಲಸಿಕೆ ಪಡೆದಲ್ಲಿ ಮಾಸ್ಕ್ ಹಾಕುವುದು ಅಗತ್ಯವಿಲ್ಲ ಎಂದು ಅಮೇರಿಕಾ

ನ್ಯೂಯಾರ್ಕ್ – ಕೊರೋನಾ ಸಂಬಂಧಿತ ಲಸಿಕೆ ಪಡೆದಲ್ಲಿ ಮಾಸ್ಕ್ ಹಾಕುವುದು ಅಗತ್ಯವಿಲ್ಲ ಎಂದು ಅಮೇರಿಕಾದ ರೋಗ ನಿಯಂತ್ರಣ ಮಂಡಳಿ ತಿಳಿಸಿದೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅಗತ್ಯವಿಲ್ಲ ಎಂದು ಮಂಡಳಿ ತಿಳಿಸಿದೆ. ಅಮೇರಿಕಾ ಅಧ್ಯಕ್ಷ ಜೊ ಬೈಡನ್ ಕೂಡಾ ಈ ಹೇಳಿಕೆಯನ್ನು ಶೇರ್ ಮಾಡಿದ್ದಾರೆ. ಇದರಿಂದಾಗಿ ಅಮೇರಿಕಾದಲ್ಲಿ ಲಸಿಕೆ ಪಡೆಯಲು ಇನ್ನಷ್ಟು ಜನರು ಮುಂದೆ ಬರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಆದರೆ ಭಾರತದಲ್ಲಿ …

Read More »

ಬೆಳಗಾವಿ ನಗರದಲ್ಲಿ  ಗೋವಿಂದ ಕಾರಜೋಳ ಪತ್ರಿಕಾಗೋಷ್ಠಿ

ಬೆಳಗಾವಿ – ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಗುರುವಾರ (ಮೇ 13) ಬೆಳಗಾವಿ ನಗರದಲ್ಲಿ   ಪತ್ರಿಕಾಗೋಷ್ಠಿ ನಡೆಸಿದರು. ಅದರ ಪ್ರಮುಖಾಂಶಗಳು ಇಲ್ಲಿವೆ- * ನಗರ ಮತ್ತು ಗ್ರಾಮಗಳಲ್ಲಿ ಸ್ಮಶಾನ ಜಾಗ ಒದಗಿಸಲು ತಕ್ಷಣವೇ ಕ್ರಮ‌ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ. ತಹಶೀಲ್ದಾರರ ಮೂಲಕ ತ್ವರಿತ ಕ್ರಮಕ್ಕೆ ನಿರ್ದೇಶನ. * ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಕರಣ ಆರಂಭಿಸಲು ಡಿ.ಎಚ್.ಓ. ಅವರಿಗೆ ಸೂಚನೆ. * ಜನಪ್ರತಿನಿಧಿಗಳ …

Read More »