Breaking News
Home / 2021 / ಮೇ / 18 (page 3)

Daily Archives: ಮೇ 18, 2021

ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ

ಬೆಳಗಾವಿ – ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಳೆದ 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೋಯುಸಿರೆಳೆದರು. ಹನುಮಾನ್ ನಗರ ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಪತ್ನಿ, ಮಗ, ಮಗಳು ಇದ್ದಾರೆ.

Read More »

ಪತ್ನಿಯಿಂದಲೇ ಸುಪಾರಿ ಹತ್ಯೆ;ಪತ್ನಿ ಸೇರಿ ಇಬ್ಬರ ಬಂಧನ

ಬೆಂಗಳೂರು, : ಆತನ ದೇಹ ರೈಲ್ವೇ ಹಳಿಯ ಮೇಲೆ ಛಿದ್ರವಾಗಿತ್ತು. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಅಂತಲೇ ಪೊಲೀಸರು ಭಾವಿಸಿದ್ದರು. ಆದರೆ, ಕುತ್ತಿಗೆ ಮೇಲಿನ ಗುರುತು ಕೊಲೆಯ ಬಗ್ಗೆ ಸಣ್ಣ ಅನುಮಾನ ಮೂಡಿಸಿತ್ತು. ಅದು ರೈಲ್ವೇ ಪೊಲೀಸರ ತನಿಖೆಯಲ್ಲಿ ನಿಜವಾಗಿದೆ. ಕೊಲೆ ಹಂತಕರನ್ನು ಕೇವಲ 24 ತಾಸಿನಲ್ಲಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾಗಿದ್ದು ಕೆ.ಆರ್.ಪುರಂ ನಿವಾಸಿ ಲೋಕನಾಥ್ . ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವುದು ಮೃತನ ಪತ್ನಿ ಯಶೋಧಾ, ವಿಜಿನಾಪುರದ …

Read More »

ಜಿಯೋದಿಂದ ಎರಡು ಹೊಸ ಸಬ್‌ಸೀ ಕೇಬಲ್ ವ್ಯವಸ್ಥೆ ಯೋಜನೆ

ಮುಂಬೈ, : ಭಾರತದ ಮುಂಚೂಣಿ 4ಜಿ ಮತ್ತು ಮೊಬೈಲ್ ಬ್ರಾಡ್‌ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (ಜಿಯೋ), ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಅತಿ ದೊಡ್ಡ ಅಂತಾರಾಷ್ಟ್ರೀಯ ಜಲಾಂತರ್ಗಾಮಿ (ಸಬ್‌ಮೆರಿನ್) ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ವಿವಿಧ ಪ್ರಮುಖ ಜಾಗತಿಕ ಪಾಲುದಾರರು ಮತ್ತು ವಿಶ್ವದರ್ಜೆಯ ಜಲಾಂತರ್ಗಾಮಿ ಕೇಬಲ್ ಪೂರೈಕೆದಾರ ಸಬ್‌ಕಾಮ್ ಸಹಯೋಗದೊಂದಿಗೆ ಜಿಯೋ ಪ್ರಸ್ತುತ ಪ್ರದೇಶದೆಲ್ಲೆಡೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಡೇಟಾ ಬೇಡಿಕೆಗೆ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರಿನ …

Read More »

ಲಾಕ್​ಡೌನ್​ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟ ಪ್ರಧಾನಿ ಮೋದಿ

ನವದೆಹಲಿ: ಕರೊನಾ ವೈರಸ್​ ಬಿಕ್ಕಟ್ಟು ಹಿನ್ನೆಲೆಯಲ್ಲಿ 9 ರಾಜ್ಯಗಳ ಸಿಎಂ, 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ, ಲಾಕ್​ಡೌನ್​ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟರು. ಕರೊನಾ ನಿಯಂತ್ರಿಸಲು ಎಲ್ಲರು ಒಗ್ಗಟಾಗಿ ಕೆಲಸ ಮಾಡಬೇಕು. ಕರೊನಾ ವಾರಿಯರ್ಸ್​ಗೆ ಸ್ಫೂರ್ತಿ ತುಂಬಿರಿ. ನಿಮ್ಮ ಸ್ಫೂರ್ತಿದಾಯಕ ಮಾತುಗಳಿಂದ ವಾರಿಯರ್ಸ್​ಗೆ ವಿಶ್ವಾಸ ಹೆಚ್ಚುತ್ತದೆ. ಕರೊನಾ ನಿಯಂತ್ರಿಸಲು ಯಾವುದೇ ಮಾರ್ಗವಿದ್ದರೂ ಅದನ್ನು ಅಳವಡಿಸಿಕೊಳ್ಳಿ ಎಂದು ಪ್ರಧಾನಿ …

Read More »

ಕೊರೊನಾ ವೈರಸ್ ಗೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಕೊರೊನಾ ವೈರಸ್ ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಶಶಿಕಲಾ ಜೊಲ್ಲೆ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟ 12 ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.   ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರನಾ ವೈರಸ್ ಸೋಂಕಿನ …

Read More »

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಮಂಗಳೂರು: ಅವರ ವಯಸ್ಸಿನ್ನೂ 24 ವರ್ಷ. ಚಿಕ್ಕ ವಯಸ್ಸಿಗೆ ಪೊಲೀಸ್​ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಕೋಲಾರ ಮೂಲದ ಯುವತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಆಗಿದ್ದರು. 7 ತಿಂಗಳ ಗರ್ಭಿಣಿ ಆಗಿದ್ದ ಅವರು ಹೆರಿಗೆ ರಜೆ ಮೇಲೆ ತವರಿಗೆ ಹೋಗಿದ್ದರು. ಎಲ್ಲವೂ ಸರಿಯಾಗಿದ್ದರೆ ಇನ್ನೆರಡು ತಿಂಗಳಲ್ಲಿ ಆ ಮನೆಗೆ ಪುಟ್ಟ ಕಂದನ ಆಗಮನದ ಖುಷಿಯ ಹೂರಣವೇ ತುಂಬಿರುತ್ತಿತ್ತು. ಅಷ್ಟರಲ್ಲಿ ಕ್ರೂರಿ ಕರೊನಾ ಗರ್ಭಿಣಿ ಪಿಎಸ್​ಐ ಅನ್ನು …

Read More »

88ನೇ ವಸಂತಕ್ಕೆ ಕಾಲಿಟ್ಟ ಎಚ್‌.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಗಳವಾರ 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಇಂದು ಬೆಳಿಗ್ಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ಇತ್ತ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ ಸುಮಲತಾ ಅಂಬರೀಶ್, ಸಚಿವರಾದ ಡಾ.ಕೆ.ಸುಧಾಕರ್, …

Read More »

ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ ನಿರ್ಲಕ್ಷಕ್ಕೆ ಕಿಡಿಕಾರಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಇದೇ ವೇಳೆ ಶಿಕ್ಷಕರ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಕೆಲ ಸಲಹೆ ನೀಡಿದ್ದಾರೆ. ಮೊದಲಿನಿಂದಲೂ ಚುನಾವಣೆಗಳು, ಜನಗಣತಿ ಸೇರಿದಂತೆ ಎಲ್ಲ ಆಪತ್ತುಗಳ ಸಂದರ್ಭದಲ್ಲಿ ಸರಕಾರದ ಎಲ್ಲ ಕೆಲಸಗಳಿಗೂ ಶಿಕ್ಷಕರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಆದರೆ ಅಂತಹ ಕೆಲಸ ನಿರ್ವಹಣೆಯಲ್ಲಿ ಅವರಿಗೆ ಏನಾದರೂ ತೊಂದರೆ ಅನಾಹುತ …

Read More »

ಕಷ್ಟದಲ್ಲಿರುವವವರಿಗೆ ಹೆಗಲು ಕೊಡ್ತಿರೋ ಕಿಚ್ಚ & ಟೀಂ

ಸ್ಯಾಂಡಲ್​ವುಡ್​ ಬಾದ್ಶಾ ಕಿಚ್ಚ ಸುದೀಪ್​ ಕಡೆಯಿಂದ ನಿರಂತರವಾಗಿ ಸಾಮಾಜಿಕ ಕಾರ್ಯಗಳು ನಡೀತಾನೇ ಇದೆ. ಈ ಕೊರೊನ ಸಂಕಷ್ಟದಲ್ಲಂತೂ ಕೈ ಮೀರಿ ಸಹಾಯ ಮಾಡುತ್ತಿದ್ದಾರೆ ಕಿಚ್ಚ ಅಂಡ್​ ಟೀಂ. ಇದೀಗ ಮಹಿಳಾ ಅಭಿಮಾನಿಯೊಬ್ಬರ ಕಷ್ಟಕ್ಕೆ ಹೆಗಲು ಕೊಟ್ಟಿದೆ ಕಿಚ್ಚ ಚಾರಿಟೇಬಲ್​ ಟ್ರಸ್ಟ್. ಕಿಚ್ಚನ ಸಹಾಯ ನೆನೆದು ಅಭಿಮಾನಿ ಕಣ್ಣೀರಿಟ್ಟಿದ್ದಾರೆ. ಬಾದ್ಶಾ ಕಿಚ್ಚ ಸುದೀಪ್​ ನಿರಂತರವಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ..ಕೊರೊನಾ ಸಂಧರ್ಭ ಮಾತ್ರವಲ್ದೆ ಬಹಳ ಹಿಂದಿನಿಂದಲೂ ತಮ್ಮ ಚಾರಿಟೇಬಲ್​ ಟ್ರಸ್ಟ್ ವತಿಯಿಂದ ನಿಸ್ವಾರ್ಥ …

Read More »

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ ದಿನಕ್ಕೊಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ತಮ್ಮ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಲಕ್ಷ್ಮಿ ರೈ ಇದೀಗ ತಮ್ಮ ಹಾಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ. ಕರ್ನಾಟಕದ …

Read More »