Breaking News
Home / 2021 / ಮೇ / 20 (page 2)

Daily Archives: ಮೇ 20, 2021

ಗ್ರಾಮಗಳಲ್ಲೇ ಕೊರೊನಾ ತಡೆಗೆ ಸ್ವಂತ ಟಫ್ ರೂಲ್ಸ್, ಊರನ್ನು ಕಾಪಾಡಿಕೊಳ್ಳಲು ಮುಂದಾದ ಜನ !

ಗದಗ: ರಾಜ್ಯದಲ್ಲೆಡೆ ಕೊರೊನಾ ಮಹಾಮಾರಿ ಅಟ್ಟಹಾಸ ಮೆರಿತಿದೆ. ಅದರಲ್ಲೂ ಕರ್ನಾಟಕದಲ್ಲಿ‌ ಆಗ್ತಿರೋ ಸಾವಿನ ಸಂಖ್ಯೆ ಭಾರತದ ಎರಡನೇ ಸ್ಥಾನದಲ್ಲಿದೆ. ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಕಣ್ಣಿಗೆ ಕಾಣದ ಮಾಯಾವಿ ಇದೀಗ ಹಳ್ಳಿ ಹಳ್ಳಿಗಳಿಗೂ ವ್ಯಾಪಿಸುತ್ತಿದೆ. ಅದಕ್ಕಂತಾನೆ‌ ಈ ಗ್ರಾಮದವರು ಮಾಡಿರೋ ಪ್ಲ್ಯಾನ್ ಏನು ಗೊತ್ತಾ. ಕೋವಿಡ್ ಎರಡನೇ ಅಲೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಚಿಕ್ಕ ನರಗುಂದ ಗ್ರಾಮ ಪಂಚಾಯತಿ ಮುಂದಾಗಿದ್ದು, ಗ್ರಾಮದಲ್ಲಿ ಮಾಸ್ಕ್ ಹಾಕದೇ ತಿರುಗುವವರಿಗೆ 100 ರೂ, ದಂಡ, …

Read More »

ಒಂದೇ ತಾಂಡಾದ 100 ಜನರಿಗೆ ಕೊರೊನಾ.. 8 ಮಕ್ಕಳಿಗೂ ಪಾಸಿಟಿವ್

ಬಳ್ಳಾರಿ: ಜಿಲ್ಲೆಯ ಮಕ್ಕಳಲ್ಲೂ ಕೊರೊನಾ ವೈರಸ್ ಕಾಣಿಸಿಕೊಳ್ತಿದ್ದು.​. ವಿಜಯನಗರ ಜಿಲ್ಲೆಯ ಕೊಡ್ಲಗಿ ತಾಲೂಕಿನ ಶ್ರೀಕಂಠಪುರ ತಾಂಡಾದ 8 ಮಕ್ಕಳಲ್ಲಿ ಕೊರೊನಾ ಕಾಣಿಕೊಂಡಿದೆ. ಹೀಗಾಗಿ, ಇಡೀ ತಾಂಡಾದ ಜನರಿಗೆ ಆತಂಕ ಶುರುವಾಗಿದೆ. 8 ರಿಂದ 15 ವರ್ಷದೊಳಗಿನ ಎಂಟು ಮಕ್ಕಳಿಗೆ ಕೋವಿಡ್ ವೈರಸ್ ಧೃಡಪಟ್ಟಿದ್ದು, ಎಲ್ಲರು ಭಯದ ವಾತಾವರಣದಲ್ಲಿದ್ದಾರೆ. ಕಳೆದ ಮಂಗಳವಾರವಷ್ಟೇ ಅರ್‌ಟಿ‍ಪಿಸಿಆರ್ ಟೆಸ್ಟ್ ನಡೆದಿತ್ತು, ಈ ಪೈಕಿ 8 ಮಕ್ಕಳಲ್ಲಿ ಕೊರೊನಾ ದೃಢ ಪಟ್ಟಿತ್ತು. ಇಂದು ಕೂಡ 20 ಪಾಸಿಟಿವ್​ …

Read More »

ಸಿಂಗಾಪುರ, ಯುಎಇಯಲ್ಲಿ 12-15 ವರ್ಷದ ಮಕ್ಕಳಿಗೂ ಕೊರೋನಾ ಲಸಿಕೆ : ಭಾರತದಲ್ಲಿ ಯಾವಾಗ?

ನವದೆಹಲಿ : ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದ ನಂತರ, ಸಿಂಗಾಪುರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ 12-15 ವಯೋಮಾನದ ತುರ್ತು ಬಳಕೆಗಾಗಿ ಫೈಜರ್-ಬಯೋಎನ್ ಟೆಕ್ ಕೋವಿಡ್-19 ಲಸಿಕೆಯನ್ನು ಅನುಮೋದಿಸಿವೆ. ಯುರೋಪಿಯನ್ ವೈದ್ಯಕೀಯ ಏಜೆನ್ಸಿಯು ಮಕ್ಕಳಲ್ಲಿ ಫೈಜರ್ ಲಸಿಕೆಯ ಬಳಕೆಯನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ. ಕೊರೊನಾ ವೈರಸ್ ನ ಹೆಚ್ಚು ಟ್ರಾನ್ಸ್ ಮಿಸಿಬಲ್ ರೂಪಾಂತರಗಳು ಹೊರಹೊಮ್ಮುತ್ತಿರುವುದರಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೆಲವು ದೇಶಗಳು ಮಕ್ಕಳಲ್ಲಿ ಹೆಚ್ಚಿನ ಸೋಂಕುಗಳನ್ನು ನೋಡುತ್ತಿರುವ ನಡುವೆ …

Read More »

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಇಳಿಕೆ: ಮೂರನೇ ಅಲೆ ಎದುರಿಸಲು ಸಿದ್ಧತೆ

ದೆಹಲಿ, ಮೇ 20: ಕಳೆದ ನಾಲ್ಕು ವಾರಗಳ ಹಿಂದೆ ದೇಶದ ರಾಜಧಾನಿ ದೆಹಲಿ ಕೊರೊನಾ ವೈರಸ್‌ನಿಂದ ತತ್ತರಿಸಿಹೋಗಿತ್ತು. ಎರಡನೇ ಅಲೆ ದೇಶಾದ್ಯಂತ ದೊಡ್ಡ ಆಘಾತವನ್ನು ನೀಡುತ್ತಿರುವಂತೆಯೇ ದೆಹಲಿ ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್, ಬೆಡ್ ಸಮಸ್ಯೆಗಳು ಭಾರೀ ಪ್ರಮಾಣದಲ್ಲಿ ತಲೆದೂರಿತ್ತು. ಆದರೆ ಸದ್ಯ ಕೊರೊನಾ ವೈರಸ್‌ ಪ್ರಕರಣಗಳು ದೆಹಲಿಯಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ದೆಹಲಿ ಸರ್ಕಾರ ಮೂರನೇ ಅಲೆ ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೂರನೇ ಅಲೆ ಎದುರಿಸಲು …

Read More »

ಕೊರೊನಾವೈರಸ್: ಹೊಸ ಪ್ರಕರಣಗಳ ಇಳಿಕೆ, ಗುಣಮುಖರ ಸಂಖ್ಯೆ ಏರಿಕೆ!

ನವದೆಹಲಿ, ಮೇ 20: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಏರುಮುಖವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲಿ ಮಹಾಮಾರಿಗೆ 3,874 ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿ ಒಟ್ಟು 2,57,72,400 …

Read More »

ಮನೆಯಿಂದ ಹೊರ ಬರುವ ಮುನ್ನ ಎಚ್ಚರ: ಬಿಗಿ ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ಇನ್ನು ಮುಂದೆ ಅನಗತ್ಯವಾಗಿ ಮನೆಯಿಂದ ವಾನಹದೊಂದಿಗೆ ಹೊರಬಂದರೆ ವಾಹನದ ಆಸೆ ಬಿಟ್ಟು, ಕೇಸು ಹಾಕಿಸಿಕೊಳ್ಳಲು ಸಿದ್ದರಾಗಿ. ಯಾಕೆಂದರೆ ಇಂತಹ ಸೂಚನೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಜನರು ಕೋವಿಡ್ ನಿಯಮ ಪಾಲನೆ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಇದ್ದರೂ ಜನ ಅನಗತ್ಯ ಓಡಾಟ ನೆಡೆಸುತ್ತಿದ್ದಾರೆ. ಇದರಿಂದ ಲಾಕ್ ಡೌನ್ …

Read More »

ಮೇ 25ರವರೆಗೆ ಹಾವೇರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್

ಹಾವೇರಿ, ಮೇ 20: ಏಲಕ್ಕಿ ನಾಡು ಹಾವೇರಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಕಠಿಣ ಲಾಕ್‌ಡೌನ್‌ಗೆ ಹಾವೇರಿ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾದ್ಯಂತ ಕೋವಿಡ್ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ಈ ಕುರಿತು ಆದೇಶ ಹೊರಡಿಸಿರುವ ಹಾವೇರಿ ಜಿಲ್ಲಾಧಿಕಾರಿ ಎಸ್.ಬಿ ಶೆಟ್ಟೆಣ್ಣನವರ ಅವರು ಇದೇ ಮೇ 21ರಿಂದ ಮೇ 25ರ ತನಕ ಹಾವೇರಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಮೇ …

Read More »

ಯಡಿಯೂರಪ್ಪ ಸರಕಾರಕ್ಕೆ ಕಾಂಗ್ರೆಸ್ ಕೇಳಿದ 10 ಪ್ರಶ್ನೆಗಳು: ಉತ್ತರಿಸುವಿರಾ?

ಬೆಂಗಳೂರು, ಮೇ 20: ಕೋವಿಡ್ ನಿರ್ವಹಣೆ, ರಾಜ್ಯದ ಸಂಸದರ ಅಸಾಮರ್ಥ್ಯ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ಘಟಕ ಯಡಿಯೂರಪ್ಪ ಸರಕಾರಕ್ಕೆ ಹತ್ತು ಪ್ರಶ್ನೆಗಳನ್ನು ಕೇಳಿದೆ. ಅದು ಹೀಗಿದೆ: 1. ಕೊರೊನಾ ಬಂದು ವರ್ಷ ಕಳೆದಿದೆ, ತಜ್ಞರ ಎಚ್ಚರಿಕೆಗೂ ಹಲವು ತಿಂಗಳುಗಳು ಕಳೆದಿವೆ, ಎಲ್ಲಾ ಸಿದ್ಧತೆಗಳಿಗೂ ಅವಕಾಶಗಳಿದ್ದವು, ಸಮಯವೂ ಇತ್ತು. ಇಷ್ಟಿದ್ದರೂ ಬೇಜವಾಬ್ದಾರಿತನದಿಂದ ನಡೆದುಕೊಂಡು ರಾಜ್ಯದ ಜನತೆಯ ಜೀವಕ್ಕೆ ಮುಳುವಾಗಿದೆ ಸರ್ಕಾರ. @BJP4Karnataka ಸರ್ಕಾರ, @BSYBJP ಅವರು ಈ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯವಿದೆಯೇ? …

Read More »

ಅಪರಿಪೂರ್ಣ ಪ್ಯಾಕೇಜ್: ಸಂಗಮೇಶ ಬಬಲೇಶ್ವರ

ವಿಜಯಪುರ: ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಅವೈಜ್ಞಾನಿಕ, ಅಪರಿಪೂರ್ಣ ಹಾಗೂ ನಿಜವಾಗಿ ತೊಂದರೆಗೊಳಗಾದ ಎಲ್ಲರನ್ನೂ ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಕೋವಿಡ್‌ನಿಂದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗಾಗಿ ಪ್ಯಾಕೇಜ್‌ನಲ್ಲಿ ನೇರವು ಘೋಷಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ದೆಹಲಿ ರಾಜ್ಯ ಸರ್ಕಾರದ ಮಾದರಿಯಲ್ಲಿ ಅನಾಥ ಮಕ್ಕಳ ಬಾಳಿಗೆ ಬೆಳಕು ನೀಡುವ ಪ್ರಯತ್ನ ಮಾಡಬೇಕು ಎಂದು ಅವರು …

Read More »

ಕೊರೊನಾದಿಂದ ಗುಣಮುಖರಾದವರಿಗೆ ಸಿಹಿ ಹಂಚಿ, ಪುಷ್ಪವೃಷ್ಟಿ ಮಾಡಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಕೊರೊನಾ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕೊರೊನಾ ಸೋಂಕಿತರನ್ನು ಸೂಕ್ತ ರೀತಿಯಿಂದ ನೋಡಿಕೊಳ್ಳಲು ಸರ್ಕಾರ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದೆ. ಆದರೂ ಸಾಮಾಜಿಕವಾಗಿ ಕೊರೊನಾ ಸೋಂಕಿತರನ್ನು ಕಾಣುವ ವಿಧಾನ ಹಲವೆಡೆ ಅಷ್ಟೊಂದು ಉತ್ತಮವಾಗಿಲ್ಲ. ಈ ಮಧ್ಯೆ ಬಿಜೆಪಿ ಶಾಸಕ ರೇಣುಕಾಚಾರ್ಯ ಕೊರೊನಾ ಸೋಂಕಿತರಿಗೆ ವಿವಿಧ ರೀತಿಯ ಬೆಂಬಲ, ಧೈರ್ಯ ನೀಡುತ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯಲ್ಲಿ ಇಂದು ನಡೆದಿದೆ. ಕೊರೊನಾದಿಂದ ಗುಣಮುಖರಾದವರಿಗೆ ಶಾಸಕರು ಪುಷ್ಪವೃಷ್ಟಿ ಸುರಿಸಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ …

Read More »