Breaking News
Home / 2021 / ಮೇ / 25

Daily Archives: ಮೇ 25, 2021

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »

ಬೆಳಗಾವಿ ನಗರದಲ್ಲಿ 328 ಜನರಿಗೆ ಸೋಂಕು ಪತ್ತೆ, 24 ಜನರ ಸಾವು

ಬೆಳಗಾವಿಯಲ್ಲಿ ಮಂಗಳವಾರ ಒಂದೇ ದಿನ 1260 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 24 ಜನರು ಸಾವಿಗೀಡಾಗಿದ್ದಾರೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನೂ ಮುರಿದು ಹಾಕಿದೆ. ಬೆಳಗಾವಿ ನಗರದಲ್ಲಿ 328 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿ 186, ಚಿಕ್ಕೋಡಿ 119, ಗೋಕಾಕ 136, ಸವದತ್ತಿ 123 ಜನರಲ್ಲಿ ಸೋಂಕು ದೃಢಪಟ್ಟಿದೆ. ಗೋಕಾಕಲ್ಲಿ 8, ರಾಯಬಾಗ 5, ಅಥಣಿ 3, ಖಾನಾಪುರ 3, ಹುಕ್ಕೇರಿ 2, ಬೆಳಗಾವಿ 2, ಬೈಲಹೊಂಗಲ 1 ಸಾವು …

Read More »

ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ, ಮೋದಿಗೆ ಎಚ್ ಡಿ ದೇವೇಗೌಡರ ಪತ್ರ

ಬೆಂಗಳೂರು: ರೈತರ ತೋಟಗಾರಿಕೆ ಬೆಳೆಗಳಿಗೆ ಸರಿಯಾದ ಬೆಳೆ ಸಿಗ್ತಿಲ್ಲ ಹೀಗಾಗಿ ಸೂಕ್ತ ಮಾರುಕಟ್ಟೆ ಕಲ್ಪಿಸಿ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ. ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವುದು ಕಷ್ಟವಾಗಿದೆ. ಕೋಲಾರದಲ್ಲಿ ಅತಿ ಹೆಚ್ಚು ಟೊಮೊಟೋ ಬೆಳೆಯಲಾಗುತ್ತೆ. ಕೊಳ್ಳುವವರಿಲ್ಲದೆ ತಿಪ್ಪೆಗೆ ಎಸೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲೂ ಇದೇ ಪರಿಸ್ಥಿತಿಯಿದೆ. ಕಲ್ಲಂಗಡಿ ಬೆಳೆದ ರೈತರಿಗೂ ನಷ್ಟವಾಗಿದೆ. ಇನ್ನಿತರ ಬೆಳೆಗಳಿಗೂ …

Read More »

ಬಿಜೆಪಿಯು ಲಸಿಕೆಗಳನ್ನು ರಫ್ತು ಮಾಡಿದೆ. ಲಸಿಕೆಗಳು ನಮ್ಮಲ್ಲೆ ಇದ್ದಿದ್ದರೆ ಅದೆಷ್ಟೋ ಜನರ ಜೀವಗಳನ್ನು ಉಳಿಸಬಹುದಿತ್ತು: ಹೆಬ್ಬಾಳ್ಕರ್

ಭಾರತವನ್ನು ಇತರ ದೇಶಗಳ ಎದುರು ಮಾದರಿಯಾಗಿಸುವ ಬದಲು, ಬಿಜೆಪಿಯು ಲಸಿಕೆಗಳನ್ನು ರಫ್ತು ಮಾಡಿದೆ. ಲಸಿಕೆಗಳು ನಮ್ಮಲ್ಲೆ ಇದ್ದಿದ್ದರೆ ಅದೆಷ್ಟೋ ಜನರ ಜೀವಗಳನ್ನು ಉಳಿಸಬಹುದಿತ್ತು. ಕಾಂಗ್ರೆಸ್ ತನ್ನ 100 ಕೋಟಿ ಯೋಜನೆಯೊಂದಿಗೆ ಲಸಿಕೆ ನೀಡಲು ಸಿದ್ಧವಿದ್ದು, ಬಿಜೆಪಿ ಇದಕ್ಕೆ ಅನುಮತಿ ನೀಡಬೇಕು ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಲಕ್ಷ್ಮೀ ಹೆಬ್ಬಾಳ್ಕರ್ ವಿರೋಧ ಪಕ್ಷದಲ್ಲಿದ್ದರೂ ಕಾಂಗ್ರೆಸ್ ತನ್ನ ಜವಾಬ್ದಾರಿಯನ್ನು …

Read More »

ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಚಾಮರಾಜನಗರ: ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜನಾಯಕ್ ಮಂಗಳವಾರ ವಿಧಿವಶರಾಗಿದ್ದಾರೆ. ಕಾಡುಗಳ್ಳ ವೀರಪ್ಪನ ಜತೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್‌ ಅವರು ಬದುಕುಳಿದಿದ್ದರು. 1992ರಲ್ಲಿ ಎಸ್ಪಿ‌ ಹರಿಕೃಷ್ಣ ಹಾಗೂ ಎಸ್‌ಐ ಶಕೀಲ್ ಅಹಮದ್ ಜೊತೆ ಕಾರ್ಯಾಚರಣೆಯಲ್ಲಿ ಇವರು ಭಾಗಿಯಾಗಿದ್ದರು.

Read More »

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ:  ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.೨೭ ರಿಂದ ೭ ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ ೧.೫೦ ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »

ಬ್ಲಾಕ್ ಫಂಗಸ್ – ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ

ಹಾಸನ: ಕೊರೊನಾ ಎರಡನೇ ಅಲೆ ನಡುವೆ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಮುಖ್ಯಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.   ಹಾಸನದಲ್ಲಿ ಮಾತನಾಡಿದ ರವಿಕುಮಾರ್, ಬ್ಲ್ಯಾಕ್ ಫಂಗಸ್ ಗೆ ಔಷಧ ಬಂದಿದೆ. ರಾಜ್ಯದ ಜನತೆ ಆತಂಕ್ಕೀಡಾಗುವ ಅಗತ್ಯವಿಲ್ಲ. ಮೆಡಿಕಲ್ ಕಾಲೇಜುಗಳಿರುವ ಕಡೆಗಳಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳನ್ನು ಅಲ್ಲಿಯೇ ಚಿಕಿತ್ಸೆಗೊಳಪಡಿಸಲಾಗುವುದು. ಅಂತಹ ಸೋಂಕಿತರನ್ನು ಬೇರೆಡೆ ಶಿಫ್ಟ್ ಮಾಡುವಂತಿಲ್ಲ ಎಂದು ಸರ್ಕಾರದಿಂದ ಆದೇಶ …

Read More »

ರಾಧೇ ಪೈರಸಿ ಮಾಡಿದ್ರೆ ವಾಟ್ಸಾಪ್ ರದ್ದುಗೊಳಿಸಿ: ದೆಹಲಿ ಹೈ ಕೋರ್ಟ್

ಸಲ್ಮಾನ್ ಖಾನ್ ನಟನೆಯ ರಾಧೇ ಸಿನಿಮಾ ಇತ್ತೀಚಿಗಷ್ಟೆ ತೆರೆಕಂಡಿತ್ತು. ಲಾಕ್‌ಡೌನ್ ಕಾರಣದಿಂದ ಚಿತ್ರಮಂದಿರಗಳು ತೆರೆದಿಲ್ಲ. ಹಾಗಾಗಿ, ಒಟಿಟಿಯಲ್ಲಿ ರಾಧೇ ಸಿನಿಮಾ ಬಿಡುಗಡೆಯಾಗಿತ್ತು. ರಿಲೀಸ್ ಆದ ದಿನವೇ ರಾಧೇ ಚಿತ್ರಕ್ಕೆ ಪೈರಸಿ ಕಾಟ ಎದುರಾಯಿತು. ರಾಧೇ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು ಒಂದು ಕಡೆಯಾದರೆ, ಸಿನಿಮಾ ಪೈರಸಿಯಾಗಿದ್ದು ಸಹಜವಾಗಿ ತಯಾರಕರಿಗೆ ತಲೆಬಿಸಿ ಹೆಚ್ಚಿಸಿತು. ಹಾಗಾಗಿ, ಪೈರಸಿ ಹರಡಿಸುವವರ ವಿರುದ್ಧ ನಿರ್ಮಾಪಕರು ಹೈ ಕೋರ್ಟ್ ಮೊರೆ ಹೋದರು. ಈ ಅರ್ಜಿ ವಿಚಾರಣೆ ಮಾಡಿದ ದೆಹಲಿ …

Read More »

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 80 ವರ್ಷದ ಕೃಷ್ಣೇಗೌಡ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇತ್ತೀಚೆಗೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕೃಷ್ಣೇಗೌಡ …

Read More »

ಸಾವಿನಲ್ಲೂ ಒಂದಾದ ದಂಪತಿ

ಬಳ್ಳಾರಿ: ಪತಿ ಸಾವನ್ನಪಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಪಂ ವ್ಯಾಪ್ತಿಯಾ ಅಪ್ಪೇನಹಳ್ಳಿಯಲ್ಲಿ ನಡೆದಿದೆ. ಪರಮೇಶ್ವರ, ಅಂಗಡಿ ವಾಮದೇವಮ್ಮ(60) ಮೃತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ವರ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದ ಪತ್ನಿ ಅಂಗಡಿ ವಾಮದೇವಮ್ಮ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಕಳೆದ ಒಂದು ವಾರದ ಹಿಂದ ಪರಮೇಶ್ವರಗೆ ಕೊರೊನಾ ಸೋಂಕು ತಗುಲಿರುವುದು …

Read More »