Breaking News
Home / 2021 / ಮೇ / 25 (page 4)

Daily Archives: ಮೇ 25, 2021

ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ – ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ. ಫ್ರುಟ್ ಮಾರ್ಕೆೆಟ್ ನಲ್ಲಿ 8 ಹಣ್ಣಿನ ಅಂಗಡಿ, ನಾವಿಗಲ್ಲಿಯಲ್ಲಿ 1 ಚಿಕನ್ ಸೆಂಟರ್, ಆಝಾದ್ ನಗರದಲ್ಲಿ ಒಂದು ಮಠನ್ ಶಾಪ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾಳ ಮಾರುತಿ ಮತ್ತು ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

Read More »

ನಕಲಿ ನೆಗೆಟಿವ್‌ ರಿಪೋರ್ಟ್ ತಯಾರಿಸಿ ಕೊಡುತಿದ್ದ ಪತ್ರಕರ್ತನ ಬಂಧನ.

ಮಡಿಕೇರಿ ಕೊರೋನ ಮಹಾಮಾರಿ ರಣಕೇಕೆ ಹಾಕುತ್ತಿರಬೇಕಾದರೆ ರೋಗ ಹರಡದ ರೀತಿಯಲ್ಲಿ ಸಮಾಜಮುಖಿ ಕೆಲಸ ಮಾಡಬೇಕಾದ ಸಮಾಜವನ್ನು ತಿದ್ದಬೇಕಾದ ಪತ್ರಕರ್ತನೊಬ್ಬ ವೃತ್ತಿಗೇ ಅವಮಾನಕಾರಿ ವರ್ತನೆ ತೋರಿದ್ದಾರೆ. ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಆಗಿರಬೇಕಾದ ಪತ್ರಕರ್ತ ನಕಲಿ ನೆಗೆಟಿವ್‌ ವರದಿ ತಯಾರಿಸಿ ಮಾರಾಟ ಮಾಡಿ ಸಿಕ್ಕು ಬಿದ್ದಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಹೋಗುವವರಿಗೆ ಕೊರೋನಾ ನೆಗಟೀವ್ ರಿಪೋರ್ಟ್ ಕಡ್ಡಾಯವಾಗಿದ್ದು, ವೀರಾಜಪೇಟೆ ತಾಳಳೂಕು ಸಿದ್ಧಾಪುರದ ವಿಜಯವಾಣಿ ಪತ್ರಿಕೆಯ ವರದಿಗಾರ ಅಬ್ದುಲ್ ಅಜೀಜ್ ಎಂಬಾತ ಕೇರಳಕ್ಕೆ ಗಿಡ …

Read More »

ಗೌತಮ್‌ ಗಂಭೀರ್‌ ಔಷಧವನ್ನು ದಾಸ್ತಾನು ಮಾಡಿದ್ದು ಹೇಗೆ?: HC

ನವದೆಹಲಿ, ಮೇ 25: ಮಾಜಿ ಕ್ರಿಕೆಟರ್, ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಅವರು ಫ್ಯಾಬಿಫ್ಲೂ ಔಷಧವನ್ನು ಅಕ್ರಮವಾಗಿ ದಾಸ್ತಾನು ಮತ್ತು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿಯ ಔಷಧ ನಿಯಂತ್ರಕಕ್ಕೆ ದೆಹಲಿ ಹೈಕೋರ್ಟ್‌ನಿರ್ದೇಶನ ನೀಡಿದೆ. ಕೋವಿಡ್‌ ಔಷಧಗಳ ಅಕ್ರಮ ದಾಸ್ತಾನಿಗೆ ಸಂಬಂಧಿಸಿದಂತೆ ಗಂಭೀರ್‌ ಹಾಗೂ ಎಎಪಿಯ ಇಬ್ಬರು ಶಾಸಕರ ವಿರುದ್ಧ ಎರಡು ಪ್ರತ್ಯೇಕ ಮೊಕದ್ದಮೆಗಳ ವಿಚಾರಣೆ ದೆಹಲಿ ನ್ಯಾಯಾಲಯದಲ್ಲಿ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು …

Read More »

ಸಿಬಿಐ ಮುಖ್ಯಸ್ಥರ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮ ಪ್ರಸ್ತಾಪಿಸಿದ ಸಿಜೆಐ

ಹೊಸದಿಲ್ಲಿ: ಸಿಬಿಐಗೆ ಹೊಸ ಮುಖ್ಯಸ್ಥರ ನೇಮಕಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮುಂದಿಟ್ಟ ನಿಯಮವು ಕನಿಷ್ಠ ಇಬ್ಬರು ಅಧಿಕಾರಿಗಳನ್ನು, ಕಣದಿಂದ ಹೊರಗುಳಿಯುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಮತ್ತು ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನು ಒಳಗೊಂಡ ಅತ್ಯುನ್ನತ ಅಧಿಕಾರ ಆಯ್ಕೆ ಸಮಿತಿ ನಡೆಸಿದ 90 ನಿಮಿಷಗಳ ಸಭೆಯಲ್ಲಿ ಮೂರು ಹೆಸರುಗಳಲ್ಲಿ ಯಾವ ಹೆಸರನ್ನೂ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾ …

Read More »

ಬ್ಲ್ಯಾಕ್ ಫಂಗಸ್ ಚಿಕಿತ್ಸೆ:ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನೆ

ಗಂಗೊಳ್ಳಿ (ಉಡುಪಿ): ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅತ್ಯಂತ ಪರಿಣಾಮಕಾರಿ ಎನಿಸಿರುವ ‘ಲೈಪೊಸೊಮನ್ ಆಂಪೊಟೆರಿಸಿನ್ ಬಿ ಔಷಧವನ್ನು ಭಾರತ್ ಸೀರಮ್ಸ್​ ಆಯಂಡ್​ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪನಿ ಸಂಶೋಧಿಸಿದ್ದು, ಕರಾವಳಿ ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನಾ ತಂಡದ ನೇತೃತ್ವ ವಹಿಸಿದ್ದರೆಂಬ ಹೆಮ್ಮೆಯ ವಿಚಾರ ಬೆಳಕಿಗೆ ಬಂದಿದೆ. ಶ್ರೀಕಾಂತ ಪೈ ನೇತೃತ್ವದ ತಂಡವು ವಿಭಿನ್ನ ಪರಿಣಾಮಕಾರಿತ್ವ, ಸುರಕ್ಷತೆ ಮತ್ತು ವಿಷತ್ವ ಪ್ರೊಫೈಲ್​ಗಳನ್ನು ಹೊಂದಿರುವ 4 ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದೀಗ ಈ ಉತ್ಪನ್ನಗಳೇ ಬ್ಲಾಯಕ್ ಫಂಗಸ್ …

Read More »