Breaking News
Home / 2021 / ಮೇ / 27

Daily Archives: ಮೇ 27, 2021

ಡಾ.‌ಪದ್ಮಜೀತ ಪಾಟೀಲ್ ಅಂಬ್ಯುಲೆನ್ಸ್ ಸೇವೆ: ಮನೆಯಿಂದ ಕೋವಿಡ್ ಕೇರ್ ಸೆಂಟರ್

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಯಾವದೇ ಆಸ್ಪತ್ರೆಗೆ ತೆರಳಲು ಉಚಿತ ಅಂಬ್ಯುಲೆನ್ಸ್ ಹಾಗು ಕೊರೊನಾದಿಂದ ಮೃತಪಟ್ಟ ಶವ ಸಾಗಿಸಲೂ ಪ್ರತ್ಯೇಕ ವಾಹನದ ಜೊತೆಗೆ ಆಕ್ಸಿಜನ್ ಸಹಿತ ವಾಹನವನ್ನೂ ಉಚಿತ ಸೇವೆ ಮಾಡಲು ಡಾ. ಪದ್ಮಜೀತ್ ನಾಡಗೌಡ ಪಾಟೀಲ ಫೌಂಡೇಶನ್ ಮುಂದಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಪದ್ಮಜೀತ್ ನಾಡಗೌಡ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತೇರದಾಳ ವಿಧಾನಸಭಾ ಕ್ಷೇತ್ರದ ಸರ್ವ ಜನತೆಗೆ ಉಚಿತವಾಗಿ …

Read More »

ಸ್ನೇಹಿತರ ಸಹಾಯ; ಧಾರವಾಡಕ್ಕೆ ಬಂತು ಆಕ್ಸಿಜನ್ ಕಾನ್ಸ್‌ನ್‌ಟ್ರೇಟರ್

ಧಾರವಾಡ, ಮೇ 27; ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ತಮ್ಮ ಸ್ನೇಹಿತರು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಮುನ್ನಡೆಸುತ್ತಿರುವ ‘ಮೆಡಿಕಲ್ ಆಕ್ಸಿಜನ್ ಫಾರ್ ಆಲ್’ ತಂಡದಿಂದ ಪಡೆದ ಆಕ್ಸಿಜನ್ ಕಾನ್ಸನ್‍ಟ್ರೇಟರ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಿದರು. ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಿವಿಧ ಕಡೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ, ಅಲ್ಲಿ ದಾಖಲಿರುವ ಸೋಂಕಿತರಿಗೆ ಉಸಿರಾಟ ತೊಂದರೆ ಉಂಟಾದರೆ ತಕ್ಷಣ ಅವರ ಸಹಾಯಕ್ಕೆ ನೆರವಾಗಲು ಆಕ್ಸಿಜನ್ ಕಾನ್ಸನ್‍ಟ್ರೇಟರ್ …

Read More »

ಅನಾರೋಗ್ಯಕ್ಕೀಡಾದ ಆರೋಗ್ಯ ಸಚಿವ ಡಾ. ಸುಧಾಕರ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗದೇ ಗೈರಾಗಿದ್ದಾರೆ. ಇತ್ತೀಚೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ವಿವಿಧ ಜಿಲ್ಲೆಗಳ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ, ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಆಕ್ಸಿಜನ್ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಸದಾಶಿವ ನಗರದ ನಿವಾಸದಲ್ಲಿ …

Read More »

ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಜಿಂದಾಲ್ ಗೆ ಭೂಮಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಂದಾಲ್ ಗೆ ಭೂಮಿ ನೀಡುವ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ ಎಂದರು. ಜಿಂದಾಲ್ ಗೆ 3,667 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ಬಗ್ಗೆ …

Read More »

ಅಗ್ನಿಶಾಮಕ ದಳದ ಸಿಬ್ಬಂದಿಗೆಪಿಪಿಇ ಕಿಟ್ ಗಳನ್ನು ವಿತರಿಸಿದರಾಹುಲ್ ಜಾರಕಿಹೊಳಿ

ಗೋಕಾಕ: ಇಲ್ಲಿನ ನಗರಸಭೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ಇವರ ಪಾತ್ರ ಮಹತ್ವದ್ದಾಗಿದೆ‌. ವಾರಿಯರ್ಸ್ ಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಾವು‌‌ ಚಿಕ್ಕ ಸಹಾಯ …

Read More »

BSY ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಿ: ಎಂ.ಪಿ. ಕುಮಾರಸ್ವಾಮಿ

ಚಿಕ್ಕಮಗಳೂರು: ಬಿ.ಎಸ್. ಯಡಿಯೂರಪ್ಪ ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಲಿ. ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ. ಈ ಕುರಿತು ಕೇಂದ್ರದ ನಾಯಕರ ಬಳಿ ಶಾಸಕರ ನಿಯೋಗ ಹೋಗಲು ತಯಾರಿದ್ದೇವೆ. ನಾಯಕತ್ವ ಬದಲಾವಣೆ ಮಾಡದಂತೆ …

Read More »

ಕೋವಿಡ್ ಲಸಿಕೆ ಹಾಕಿಸಿಕೊಂಡವರು ಈ ತಪ್ಪನ್ನು ಮಾಡಲೇಬೇಡಿ!

ನವದೆಹಲಿ, ಮೇ 27: ದೇಶದಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆ ಹೆಚ್ಚಾದ ನಂತರ ಲಸಿಕೆ ಕಾರ್ಯಕ್ರಮಗಳು ಕೂಡ ಚುರುಕು ಪಡೆದುಕೊಂಡಿತು. ಈ ಮಧ್ಯೆ ಕೊರೊನಾ ವೈರಸ್‌ನ ಲಸಿಕೆ ಹಾಕಿಸಿಕೊಂಡವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವುದು ಸಾಮಾನ್ಯ. ಇದರಿಂದಾಗಿ ಮತ್ತಷ್ಟು ಜನರು ಲಸಿಕೆ ಹಾಕಿಸಿಕೊಳ್ಳಲು ಪ್ರೇರಣೆಯೂ ಆಗಬಹುದು. ಆದರೆ ಈ ಉತ್ಸಾಹದಲ್ಲಿ ಒಂದು ತಪ್ಪನ್ನು ನೀವು ಮಾಡಿದರೆ ಮುಂದೆ ಸಂಕಷ್ಟಗಳು ಉಂಟಾಗಬಹುದು. ಹೌದು, ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡವರಲ್ಲಿ ಹಲವರು ತಮ್ಮ ಕೊರೊನಾ …

Read More »

ತಳ್ಳುವ ಗಾಡಿಯಲ್ಲೇ ಗಂಡನನ್ನ ಕೂರಿಸಿಕೊಂಡು ಮೈಲಿ ದೂರದ ಆಸ್ಪತ್ರೆಗೆ ಕರೆದೊಯ್ದ ಪತ್ನಿ-ಮಗ!

ಗದಗ: ಕರೊನಾ ಲಾಕ್​ಡೌನ್​ ಹಿನ್ನೆಲೆ ಸಾರಿಗೆ ಸೌಲಭ್ಯ ಬಂದ್ ಆಗಿದ್ದು, ​ಮನೆಯಿಂದ ಮೈಲಿ ದೂರದ ಆಸ್ಪತ್ರೆಗೆ ತಳ್ಳುವ ಗಾಡಿಯಲ್ಲೇ ರೋಗಿಯನ್ನ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ವೈರಲ್​ ಆಗಿದೆ. ಗದಗನ ಸಿದ್ದರಾಮೇಶ್ವರ ನಗರದ ನಿವಾಸಿ ಗೋವಿಂದಪ್ಪಗೆ ಎರಡು ತಿಂಗಳ ಹಿಂದೆ ಆಪರೇಷನ್ ಆಗಿದ್ದು, ವೈದ್ಯರು ಒಂದು ಕಾಲು ತೆಗೆದಿದ್ದಾರೆ. ಔಷಧ ಹಾಗೂ ಚಿಕಿತ್ಸೆ ಪಡೆಯಲು ಗದಗ ಜಿಮ್ಸ್ ಆಸ್ಪತ್ರೆಗೆ ಹೋಗಬೇಕಿದ್ದರಿಂದ ವಾಹನ ಸೌಲಭ್ಯವಿಲ್ಲದೆ ತಳ್ಳುವ ಗಾಡಿ ಮೂಲಕವೇ ಆತನನ್ನು ಕೂರಿಸಿಕೊಂಡು ಪತ್ನಿ …

Read More »

ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ: ಐಎಂಎಗೆ ಸೆಡ್ಡುಹೊಡೆದ ಬಾಬಾ ರಾಮ್ ದೇವ್

ನವದೆಹಲಿ: ಅಲೋಪತಿ ಮೂರ್ಖತನದ ಪದ್ಧತಿ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದು, ನನ್ನನ್ನು ಬಂಧಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಹೇಳುವ ಮೂಲಕ ಭಾರತೀಯ ವೈದ್ಯಕೀಯ ಸಂಘಕ್ಕೆ ಸಡ್ಡುಹೊಡೆದಿದ್ದಾರೆ. ಅಲೋಪತಿ ಮೂರ್ಖತನದ ವಿಜ್ಞಾನ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ದೇವ್ ಅವರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ …

Read More »

ಜಿಂದಾಲ್ ಜಮೀನು : ಕೋರ್ಟ್ ತೀರ್ಪಿನ ನಂತರ ತೀರ್ಮಾನ : ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು : ಜಿಂದಾಲ್ ಸಂಸ್ಥೆಗೆ ಜಮೀನು ನೀಡುವುದು ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನ, ಈ ಸಂಪುಟ ಒಪ್ಪಿಗೆ ನೀಡಿಲ್ಲ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತಾಡಿರುವ ಅವರು, ಜಿಂದಾಲ್ ಗೆ ಜಮೀನು ನೀಡಿರುವ ಕುರಿತು ಮುಂದೆ ಏನ್ ಆಗುತ್ತದೆ ಎನ್ನುವುದರ ಬಗ್ಗೆ ಗೊತ್ತಿಲ್ಲ. ಈ ಕುರಿತು ಹೈ ಕೋರ್ಟ್ ನಲ್ಲಿ ಪಿಐಎಲ್ ಇದೆ. ಸುಪ್ರೀಂ ಕೋರ್ಟ್ ನಲ್ಲಿಯೂ ಪ್ರಕರಣ ಇದೆ. ಅವತ್ತು ಕರ್ನಾಟಕ ಹೈಕೋರ್ಟ್ ಹೇಳಿತ್ತು. …

Read More »