Breaking News
Home / 2021 / ಮೇ / 27 (page 2)

Daily Archives: ಮೇ 27, 2021

ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ ಸಿ.ಪಿ. ಯೋಗೇಶ್ವರ್

ಮುಖ್ಯಮಂತ್ರಿ ಬದಲಾವಣೆ ನನ್ನ ಉದ್ದೇಶವಲ್ಲ. ಅಷ್ಟೊಂದು ಶಕ್ತಿಯೂ ನನಗಿಲ್ಲ. ಆದರೆ ನನಗೆ ಸಚಿವ ಸ್ಥಾನ ಸಿಕ್ಕಿರುವುದು ನನ್ನ ಮಗ ಮೂಗು ತೂರಿಸುವುದು ಸರಿಯಲ್ಲ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಯಿಸುವ ಅಭಿಪ್ರಾಯ ನನಗೆ ಇಲ್ಲ. ನನ್ನ ಸಮಸ್ಯೆ ಹೇಳಿಕೊಳ್ಳಲು ದೆಹಲಿಗೆ ಹೋಗಿದ್ದೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಕ್ಕಾಗಲ್ಲ. ಮುಂದಿನ …

Read More »

ಸಚಿವ ಸಿಪಿ ಯೋಗೇಶ್ವರ್ ಅವರನ್ನು ಅರೆಸ್ ಮಾಡಿ – ಶಾಸಕ ಎಂ.ಪಿ.ರೇಣುಕಾಚಾರ್ಯ ಗುಡುಗು

ಹೊನ್ನಾಳ್ಳಿ : ವಿಜಯೇಂದ್ರ, ಸಿಎಂ ಯಡಿಯೂರಪ್ಪ ಅವರನ್ನು ಹಿಂಭಾಗಿಲಿನಿಂದ ಕಾಲು ಹಿಡಿದು, ಗೋಗರೆದು, ಕಣ್ಣೀರಿಟ್ಟು ಸಚಿವರಾದಂತವರು ಸಿಪಿ ಯೋಗೀಶ್ವರ್. ಮೆಗಾ ಸಿಟಿ ಹಗರಣದಲ್ಲಿ ಏನೆಗ್ಗಾ ಹಗರಣ ಮಾಡಿದ್ದಾರೆ ಎಂಬುದು ನನಗೆ ಗೊತ್ತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಆಗ್ರಹಿಸುತ್ತೇನೆ. ಅವರನ್ನು ಮೊದಲು ಬಂಧಿಸಿ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅವನ್ಯಾರ್ ರೀ.. ನನ್ನ ಬಗ್ಗೆ ಮಾತನಾಡೋಕೆ.. …

Read More »

ಮೈಸೂರು ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್‍ಡೌನ್

ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಯಾಗಲಿದೆ. ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಬಗ್ಗೆ ಆದೇಶ ಮಾಡಿದ್ದಾರೆ. ಸೋಮವಾರ ಮತ್ತು ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ. ಮೇ 29ರಿಂದ ಜೂನ್ 7ರ ಬೆಳಗ್ಗೆ 6 …

Read More »

ರೈತರ ಹೋರಾಟಕ್ಕೆ 6 ತಿಂಗಳು: ಬೇಡಿಕೆ ಈಡೇರಿಸಿ, ಕಾಯಿದೆಗಳನ್ನು ವಾಪಸ್ ಪಡೆಯಲು ಸಿದ್ದು ಆಗ್ರಹ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಆರು ತಿಂಗಳಾಗಿದ್ದು ಬೇಡಿಕೆಗಳನ್ನು ಪ್ರಜಾತಾಂತ್ರಿವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಿರಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದ ಆರ್ಥಿಕ ಭದ್ರತೆಯನ್ನು ನಾಶ ಮಾಡುವ ಮತ್ತು ರೈತರ, ಕಾರ್ಮಿಕರ ಪಾಲಿಗೆ ಮಾರಣಾಂತಿಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಮೋದಿಯವರ ಸರ್ಕಾರ ಜಾರಿಗೆ ತಂದು ಒಂದು ವರ್ಷವಾಗುತ್ತಿದೆ. ಪ್ರತಿಭಟನೆಯ …

Read More »

ಜನ್ಮದಿನಕ್ಕೆ ಬಟ್ಟೆ ಕೊಡಿಸಲಿಲ್ಲ ಅಂತ ನವವಿವಾಹಿತೆ ಆತ್ಮಹತ್ಯೆ: ಕೊಲೆ ಕೇಸು ದಾಖಲು!

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸದೇ ಗಂಡ ರೇಗಾಡಿದ್ದರಿಂದ ನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಪುತ್ರಿ ಮಮತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಯುವಕ ಮಹದೇವ ಅಲಿಯಾಸ್ ಮಣಿಕಂಠ ಮೂರು ತಿಂಗಳ ಅಪ್ರಾಪ್ತೆಯಾಗಿದ್ದ ಮಮತಾಳನ್ನು ಅಪಹರಿಸಿ ಮದುವೆಯಾಗಿದ್ದ. ಜನ್ಮದಿನವಾದ ಇಂದು ಹೊಸಬಟ್ಟೆ ಕೊಡಿಸುವಂತೆ ಗಂಡ ಮಣಿಕಂಠನಿಗೆ ಕೇಳಿದ್ದಾಳೆ. …

Read More »

ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ

ಶಿವಮೊಗ್ಗ: ಮದುವೆ ಆದ ಮೇಲೆ ಹೆಂಡತಿಯನ್ನ ಚೆನ್ನಾಗಿ ಓದಿಸಿದ್ದ. ಕೆಎಎಸ್​ ಅಧಿಕಾರಿ ಸ್ಥಾನಕ್ಕೇರಲೂ ಬೆನ್ನೆಲುಬಾಗಿ ನಿಂತಿದ್ದ. ತಾನು ಕಂಡಿದ್ದ ಕನಸು ನನಸಾದ ಖುಷಿಯಲ್ಲಿ ಬದುಕಿನ ಪಯಣ ನಡೆಸಬೇಕಿದ್ದವ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ. ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಈತ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ನಾನಂತೂ ಓದಿಲ್ಲ ಹಾಗಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಕನಸುಕಂಡಿದ್ದ‌. ಹೀಗಾಗಿ …

Read More »

ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ.. ಸೂಚಿಸಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಶಾಸನ ಎಸ್.ರಾಮಪ್ಪ ಕಿಡಿ

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಆರೋಪ ಮಾಡಿದ್ದು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದರು ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ಹೊರ ಹಾಕಿದ್ದಾರೆ. ಕೊರೊನಾ ಲಾಕ್ಡೌನ್ ವೇಳೆ ಹರಿಹರದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರಾಜನಹಳ್ಳಿಯಲ್ಲಿ ಗ್ರಾಮಸ್ಥರು ಟಿಪ್ಪರ್ ತಡೆದು ಆಕ್ರೋಶ ಹೊರ ಹಾಕಿದ್ದರು. ಈ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 …

Read More »

ಕೋವಿಡ್​ ಸೋಂಕಿತರ ಕುಟುಂಬಸ್ಥರಿಗೆ ಸ್ಥಳೀಯರ ಕಿರುಕುಳ.. ಬೆಂಕಿ ಹಚ್ಚಿಕೊಂಡು ಸಾಯ್ತೀವಿ. ಕಣ್ಣೀರಿಟ್ಟ ಮಹಿಳೆಯರು

ಅರಕಲಗೂಡು: ಕೋವಿಡ್ ಕೇರ್ ಸೆಂಟರ್​​​​​ಗೆ ದಾಖಲಾಗಿರುವ ರೋಗಿಗಳ ಕುಟುಂಬಸ್ಥರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ತಾಲೂಕಿನ ಎಚ್.ಆರ್.ಪಿ. ವಡ್ಡರಹಳ್ಳಿ ಗ್ರಾಮದ ವಿವಿಧ ಮನೆಯ ಐವರು ಪುರುಷರಿಗೆ ಕೋವಿಡ್ ಸೋಂಕು ದೃಢವಾಗಿದ್ದ ಹಿನ್ನೆಲೆ ಅವರೆಲ್ಲ ಕೋವಿಡ್ ಸೆಂಟರ್​​ಗೆ ದಾಖಲಾಗಿದ್ದರು. ಈ ವೇಳೆ, ಗ್ರಾಮದಲ್ಲಿ ರೋಗಿಯ ಕುಟುಂಬದಲ್ಲಿರುವ ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದು, ಮನೆಯಿಂದ ಹೊರ ಬಾರದಂತೆ ತಾಕೀತು ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ವಿಡಿಯೋದಲ್ಲಿ ಆರೋಪಿಸಿದ್ದಾರೆ. ನಮಗೆ ಅಗತ್ಯ …

Read More »

ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ; ಬಾಲಕಿ ರಕ್ಷಣೆ

ಬಾಗಲಕೋಟೆ: ಕೊರೊನಾ ಲಾಕ್ ಡೌನ್ ನಡುವೆ ಗ್ರಾಮಗಳಲ್ಲಿ ಮತ್ತೆ ಬಾಲ್ಯವಿವಾಹ ಪದ್ಧತಿಗಳು ಹೆಚ್ಚುತ್ತಿವೆ. ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ ಮಾಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.   ಗ್ರಾಮದಲ್ಲಿ ಬಾಲ್ಯವಿವಾಹ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾಮಾರಿಸಿದ ಪೋಷಕರು ನಮ್ಮ ಮನೆಯಲ್ಲಿ ಸಾವಾಗಿದೆ. ನಾವೇಕೆ ಈಗ ವಿವಾಹ ಮಾಡಿಸಲಿ ಎಂದು ಹೇಳಿದ್ದರು. ಪೋಷಕರ …

Read More »

ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ …

Read More »