Home / 2021 / ಮೇ / 29

Daily Archives: ಮೇ 29, 2021

ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಉಚಿತ ಅಂಬ್ಯುಲೆನ್ಸ್ ಸೇವೆ

ಗೋಕಾಕ: ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಅಂಬ್ಯುಲೆನ್ಸ್ ಉಚಿತ ಸೇವೆಗೆ ಆರ್‍ಎಸ್‍ಎಸ್‍ನ ಬೆಳಗಾವಿ ವಿಭಾಗ ಸಂಚಾಲಕ ಎಮ್.ಡಿ.ಚುನಮರಿ ಅವರು ಶನಿವಾರದಂದು ನಗರದ ಪಟಗುಂದಿ ಮಾರುತಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು. ಭಜರಂಗದಳದ ಬೆಳಗಾವಿ ವಿಭಾಗೀಯ ಸಂಯೋಜಕ ಸದಾಶಿವ ಗುದಗಗೋಳ ಅವರು ಮಾತನಾಡಿ, ಜನತೆ ಧೈರ್ಯದಿಂದ ಈ ಕೊರೋನಾ ವೈರಸ್‍ನ್ನು ಎದುರಿಸಿ, ನಿಮ್ಮೊಂದಿಗೆ …

Read More »

ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ

ಗೋಕಾಕ: ನಗರದ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ …

Read More »

ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಲಕ್ಷ್ಮಣ ಸವದಿ ಅಸಮಾಧಾನ

ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಲ್ಲಿನ ಜಿಲ್ಲಾಸ್ಪತ್ರೆ (ಬಿಮ್ಸ್)ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಅವರು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ‌ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘ಕೂಡಲೇ ವ್ಯವಸ್ಥೆ ಸರಿಪಡಿಸಬೇಕು. ಶುಚಿತ್ವ ಕಾಪಾಡಿಕೊಳ್ಳಬೇಕು. ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು …

Read More »

ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ತಹಶೀಲ್ದಾರ್​ ಎಚ್ಚರಿಕೆ

ಬಳ್ಳಾರಿ: ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ಜಿಲ್ಲೆಯ ಸಂಡೂರು ತಾಲೂಕಿನ ತಹಶೀಲ್ದಾರ್​ ರಶ್ಮಿ ಅವರು ಎಚ್ಚರಿಕೆ ನೀಡಿದ್ದು, ಯಾರಿಗೂ ಔಷಧಿ ನೀಡದಂತೆ ಸೂಚನೆ ಕೊಟ್ಟಿದ್ದಾರೆ. ಸಂಡೂರು ತಾಲೂಕಿನ ಹಳೆ ದರೋಜಿ ಗ್ರಾಮದಲ್ಲಿ ಕೊರೊನಾಗೆ ಮಹಿಳೆಯೊಬ್ಬರು ನಾಟಿ ಔಷಧ ನೀಡುತ್ತಿದ್ದರು. ಈ ಔಷಧ ಪಡೆದರೆ ಕೊರೊನಾ ವಾಸಿಯಾಗುತ್ತೆ ಎಂದು ನಂಬಿರುವ ಹಲವರು ಔಷಧ ಪಡೆಯಲು ಮಹಿಳೆಯ ನಿವಾಸದ ಎದುರು ಆಗಮಿಸುತ್ತಿದ್ದರು. ಮಹಿಳೆ ಮನೆಯಲ್ಲಿ ಔಷಧ ತಯಾರಿಸಿ ಜನರಿಗೆ ನೀಡುತ್ತಿದ್ದಾರೆ …

Read More »

ಸಿಎಂ ವಿಡಿಯೋ ಸಂವಾದ

ಬೆಳಗಾವಿ : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿರೀಕ್ಷೆಗೂ ಮೀರಿ ಹರಡಿದ್ದು, ಸದ್ಯಕ್ಕೆ ಸೋಂಕುಗಳ ತೀವ್ರತೆ ಕಡಿಮೆಯಾಗಿದೆ. ಆದರೆ ಕೊವಿಡ್ ಸೋಂಕು ತಡೆಗಟ್ಟಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿನ ಸೋಂಕಿತರನ್ನು ಹೋಮ್ ಐಸೋಲೇಷನ್ ಬದಲಾಗಿ ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು. ಕೋವಿಡ್ ಸೋಂಕು ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಬೆಳಗಾವಿ ಸೇರಿದಂತೆ ಐದು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ …

Read More »

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹ: M.G..ಹಿರೇಮಠ

ಬೆಳಗಾವಿ  : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಕುರಿತು 36,352 ಪ್ರಕರಣಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ 240 ಪ್ರಕರಣಗಳು ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಅಡಿಯಲ್ಲಿ 117 ಪ್ರಕರಣಗಳು ದಾಖಲಿಸಲಾಗಿದೆ ಎಂದು …

Read More »

ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡ ಲಕ್ಷ್ಮಣ ಸವದಿ

ಬೆಳಗಾವಿ: ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ, ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಮಾಧ್ಯಮಗಳ ವರದಿ ನಂತರ ಆಸ್ಪತ್ರೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಹೌಹಾರಿದರು. ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ …

Read More »

ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ. ಆಹಾರ, ಆಶ್ರಯವಿಲ್ಲದೆ ಬೀದಿ ಬದಿಯಲ್ಲಿದ್ದ ವೃದ್ಧ ದಂಪತಿಯನ್ನು ಕೊನೆಗೆ ಕೆಲವು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ. ಮಹದೇವ ದೇವನ್(70 ವ) ಮತ್ತು ಅವರ ಪತ್ನಿ 65 ವರ್ಷದ ಶಾಂತ ಹಿಂಡ್ವಾಡಿ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ನ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. ಅಲ್ಲಿ ಮಹದೇವ್ ವಾಚ್ ಮೆನ್ ಆಗಿ …

Read More »

ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ

ದೆಹಲಿ: ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್ ಗೆ 25 ರಿಂದ 26 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 28ರಿಂದ 30 ಪೈಸೆ ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ಈವರೆಗೆ 15 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂ ಗಡಿ ದಾಟಿದ್ದು, 100.19 ರೂಪಾಯಿಯಾಗಿದೆ. ಡೀಸೆಲ್ ದರ 92.17 ರೂಪಾಯಿ …

Read More »

ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ.?

ಬೆಂಗಳೂರು: ಸರ್ಕಾರದಿಂದ ಕೊಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಇಂತದ್ದೊಂದು ಆರೋಪ ಮಾಡಿದ್ದು, ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ. ಶಾಸಕರು ವ್ಯಾಕ್ಸಿನ್ ಪಡೆದು ಅನುಗ್ರಹ ವಿಠಲ ಎಂಬ ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದು, ಪ್ರತಿ …

Read More »