Breaking News
Home / 2021 / ಮೇ / 29 (page 3)

Daily Archives: ಮೇ 29, 2021

ನಾನು ಗರ್ಭಿಣಿ, ಹೊಟ್ಟೆ ನೋವು ಎಂದರೂ ಬಿಡುತ್ತಿಲ್ಲ: ಪೊಲೀಸರ ವಿರುದ್ಧ ಮಹಿಳೆ ಆರೋಪ

ಮೈಸೂರು, : ಕೊರೋನ ಲಾಕ್ ಡೌನ್ ಹಿನ್ನಲೆಯಲ್ಲಿ ವಾಹನ ತಪಾಸಣೆ ವೇಳೆ ಗರ್ಭಿಣಿ ಮಹಿಳೆ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಗರ್ಭಿಣಿ ಮಹಿಳೆ ಕಣ್ಣೀರಿಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ರಾಮಸ್ವಾಮಿ ವೃತ್ತದಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಸಂಬಂಧಿಯೊಂದಿಗೆ ವಾಹನದಲ್ಲಿ ಬರುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರು ತಡೆದಿದ್ದಾರೆ. ನಾನು ಗರ್ಭಿಣಿ, ಆಸ್ಪತ್ರೆಗೆ ಹೋಗುತ್ತಿದ್ದೇನೆ ಎಂದರೂ ಲೇಡಿ ಸಬ್ ಇನ್ಸ್ ಪೆಕ್ಟರ್ ಬಿಡಲಿಲ್ಲ. ಇದರಿಂದ ಮಹಿಳೆ ಮತ್ತು ಮಹಿಳಾ …

Read More »

ಮದ್ವೆಯಾಗಿ ನಾಲ್ಕೇ ದಿನಗಳಲ್ಲಿ ಕರೊನಾಗೆ ಬಲಿಯಾದ ಯುವತಿ; ಸೋಂಕಿರುವುದು ಆಕೆಯ ಮರಣದ ಬಳಿಕ ಗೊತ್ತಾಯಿತು..!

ಶಿವಮೊಗ್ಗ: : ಮದುವೆಯಾಗಿ ಕೇವಲ ನಾಲ್ಕು ದಿನಕ್ಕೆ ನವ ವಿವಾಹಿತೆಯೊಬ್ಬಳು ಕರೊನಾಕ್ಕೆ ಬಲಿಯಾಗಿರುವ ಘಟನೆ ಶುಕ್ರವಾರ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಹರಿಗೆ ನಿವಾಸಿ ಪೂಜಾ (24) ಮೃತಪಟ್ಟ ನವ ವಿವಾಹಿತೆ. ಹೊರವಲಯದ ನಿದಿಗೆ ಟಿಇಎಸ್ ಕಾಲನಿಯ ಪೂಜಾಳನ್ನು ಹರಿಗೆ ನಿವಾಸಿ ಮಹೇಶ್ ಮದುವೆಯಾಗಿದ್ದ. ನಗರದ ನಿದಿಗೆ ಟಿಇಎಸ್ ಕಾಲನಿಯ ವಧುವಿನ ಮನೆಯಲ್ಲಿಯೇ ಸೋಮವಾರ ಮದುವೆಯಾಗಿತ್ತು. ಆದರೆ ಎರಡೇ ದಿನಗಳಲ್ಲಿ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿತ್ತು. ಒಂದೆರಡು ದಿನ ಮೆಡಿಕಲ್‌ನಿಂದ ಮಾತ್ರೆಗಳನ್ನು …

Read More »

ಆರೋಗ್ಯ ಇಲಾಖೆಯ ನೌಕರ ಕುಟುಂಬವೇ ಅನಾಥ!

ಜಮಖಂಡಿ: ತಾಲೂಕಿನ ಚಿಕ್ಕಲಕಿ ಕ್ರಾಸ್‌ನ ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು,ಕುಟುಂಬವೇ ಈಗ ಅನಾಥ ವಾಗಿದೆ. ತಾಲೂಕಿನ ಚಿಕ್ಕಲಕಿ ಕ್ರಾಸ್‌ದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ದುಂಡಪ್ಪ ಮುರನಾಳ (39) ಕೊರೊನಾ ಸೋಂಕಿನಿಂದ 13ರಂದು ಮೃತಪಟ್ಟಿದ್ದಾರೆ. ಆನವಾಡ ಪುನರ್‌ ವಸತಿ ಕೇಂದ್ರದಲ್ಲಿವಾಸವಿರುವ ದುಂಡಪ್ಪ ಮುರನಾಳ ಅವರಿಗೆ ಪತ್ನಿ ದಾನಮ್ಮಾ, ಪುತ್ರ ಸೃಜನ ಹಾಗೂ ಪುತ್ರಿ ಶ್ರೀನಿಧಿ ಮಕ್ಕಳಿದ್ದಾರೆ. 2010ರಲ್ಲಿ ಬೀದರ ಜಿಲ್ಲೆಯಲ್ಲಿ ಆರೋಗ್ಯ …

Read More »

ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಲಾಕ್ ಡೌನ್ ನಂತರ ಬೆಳಗಾವಿಯಲ್ಲಿ ಅಧಿಕಾರ ಸ್ವೀಕಾರ,ಕೆಎಟಿ ವಿಚಾರಣೆ ನಡೆಸಿ ಅವರ ಅಮಾನತನ್ನು ರದ್ದುಪಡಿಸಿದೆ..

ಬೆಂಗಳೂರು  – ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅಮಾನತು ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ವಿಷ್ಣುತೀರ್ಥ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ಅಮಾನ್ಯಗೊಳಿಸಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಅವರ ಅಮಾನತನ್ನು ರದ್ಧುಪಡಿಸಿದೆ. ಜೊತೆಗೆ ಬೆಳಗಾವಿಯಲ್ಲೇ ಪುನಃ ಅಧಿಕಾರ ಮುಂದುವರಿಸುವಂತೆ ಸೂಚಿಸಿದೆ.  ಆಸ್ತಿ ನೊಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೊಂದಣಿ ಮಾಡಲಾಗಿದೆ. ಇದರಿಂದ ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟವಾಗಿದೆ ಎಂದು ಆರೋಪಿಸಿ ಬೆಳಗಾವಿ ಸಬ್ …

Read More »

ಪತಿಯನ್ನು ಜಿಲ್ಲಾಸ್ಪತ್ರೆಗೆ ತಳ್ಳುಗಾಡಿಯಲ್ಲಿ ಕರೆತಂದ ಪತ್ನಿ

ಗದಗ: ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ ಡೌನ್‌ ಘೋಷಣೆಯಾಗಿದ್ದರಿಂದ ವಾಹನ ಸಿಗದೇ ಮಹಿಳೆಯೊಬ್ಬರು ಪತಿಯನ್ನು ಸುಮಾರು 4 ಕಿ.ಮೀ. ದೂರದ ಜಿಲ್ಲಾ ಆಸ್ಪತ್ರೆಗೆ ತಳ್ಳುಗಾಡಿಯಲ್ಲೇ ಕರೆದೊಯ್ದ ಮನಕಲುಕುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಇಲ್ಲಿನ ಸಿದ್ಧರಾಮೇಶ್ವರ ನಗರದ ಗೋವಿಂದಪ್ಪ ಎಂಬಾತ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ತಿಂಗಳ ಹಿಂದೆ ಶಸ್ತ್ರ ಚಿಕಿತ್ಸೆ ನಡೆಸಿದ್ದ ವೈದ್ಯರು ಒಂದು ಕಾಲು ತೆಗೆದಿದ್ದರು. ಇಂದು ಮತ್ತೆ ಚಿಕಿತ್ಸೆ ಪಡೆದು, ಕಾಲಿಗೆ ಡ್ರೆಸ್ಸಿಂಗ್‌ ಮಾಡಿಸಿಕೊಂಡು ಔಷಧತೆಗೆದುಕೊಂಡು ಹೋಗಲು …

Read More »