Breaking News
Home / 2021 / ಮೇ (page 103)

Monthly Archives: ಮೇ 2021

ಸರ್ಕಾರದಿಂದ ಮತ್ತೆ ಮಾರ್ಗಸೂಚಿ ಪರಿಷ್ಕರಣೆ – ನಾಳೆಯಿಂದ ರಾಜ್ಯಾದ್ಯಂತ ಮಾರುಕಟ್ಟೆಗಳು ಸ್ತಬ್ಧ

ಬೆಂಗಳೂರು: ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ತನ್ನ ಮಾರ್ಗಸೂಚಿಯನ್ನ ಪರಿಷ್ಕರಣೆ ಮಾಡಿದೆ. ನಾಳೆಯಿಂದ ಎಲ್ಲಾ ರೀತಿಯ ಸಂತೆಗಳು, ವಾರದ ಸಂತೆಗಳ ಬಂದ್ ಆಗಲಿವೆ.   ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ನೀಡಲಾಗಿದೆ. ಈ ಮೊದಲು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಿತ್ತು. ಜನಸಂದಣಿ ತಡೆಯುವ ಹಿನ್ನೆಲೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಮಾರುಕಟ್ಟೆ ಬಂದ್ ಆದ್ರೂ ಬೆಳಗ್ಗೆ …

Read More »

ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್

ಬೆಳಗಾವಿ – ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಭಾನುವಾರ ನಡೆಯಲಿರುವ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಎಂದು ನಿಯಮ ಮಾಡಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ಕೊರೋನಾ ಟೆಸ್ಟ್ ಮಾಡಲಾಯಿತು. ಒಟ್ಟೂ 70 ಪತ್ರಕರ್ತರು ಟೆಸ್ಟ್ ಗೆ ಒಳಗಾಗಿದ್ದರು. ಅವರಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ಅವರ ಪೈಕಿ 11 ಜನರಿಗೆ ಕೊರೋನಾದ ಯಾವುದೇ ಲಕ್ಷಣಗಳಿಲ್ಲ. ಈ ಎಲ್ಲ …

Read More »

ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

Read More »

ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಕಾರ್ಯ ಕೂಡ ಆರಂಭವಾಗಿದೆ.

ಬೆಳಗಾವಿ – ದೇಶಾದ್ಯಂತ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಅಧಿಕೃತವಾಗಿ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂ ತೆರೆಯಲಾಗುತ್ತದೆ. ಈ ಬಾರಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕಿರುವುದರಿಂದ ಪ್ರತಿಬಾರಿಯಷ್ಟು ವೇಗವಾಗಿ ಫಲಿತಾಂಶ ಸಿಗುವುದು ಕಷ್ಟ. ಪಶ್ಚಿಮ ಬಂಗಾಳ ಫಲಿತಾಂಶ ಎಲ್ಲಕ್ಕಿಂತ ಹೆಚ್ಚು ಕುತೂಹಲ ಮೂಡಿಸಿದ್ದು, ತಮಿಳುನಾಡು, ಕೇರಳ, ಆಸ್ಸಾಂ, ಪುದುಚೆರಿ ವಿಧಾನಸಭೆ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟವಾಗಲಿದೆ. …

Read More »

ಮರಣಮೃದಂಗ: ದೆಹಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ, ವೈದ್ಯ ಸೇರಿದಂತೆ 8ಮಂದಿ ಸಾವು

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ ಮರಣಮೃದಂಗ ಮುಂದುವರಿದಿದ್ದು, ಆಕ್ಸಿಜನ್ ಕೊರತೆಯಿಂದಾಗಿ ವೈದ್ಯರೊಬ್ಬರು ಸೇರಿದಂತೆ ಎಂಟು ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಶನಿವಾರ(ಮೇ 01) ನಡೆದಿದೆ ಎಂದು ವರದಿ ತಿಳಿಸಿದೆ. “ನಾವು ಇನ್ನೂ ಐದು ಮಂದಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳನ್ನು ಉಳಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಡಾ.ಎಸ್ ಸಿಎಲ್ ಗುಪ್ತಾ ಅವರು ತಿಳಿಸಿರುವುದಾಗಿ ಪಿಟಿಐ ನ್ಯೂಸ್ ವರದಿ ಮಾಡಿದೆ. ಇಂದು ಸಾವನ್ನಪ್ಪಿರುವ ಎಂಟು ಮಂದಿಯಲ್ಲಿ ಒಬ್ಬರು ಬಾತ್ರಾ …

Read More »

KA 03 NB 4648 Registration ಗಾಡಿಯಲ್ಲಿ ಬಂದ ಮಹಿಳೆಯರ ಈ ಕಾರ್ಯಕ್ಕೆ ಏನೆನ್ನಬೇಕು?

ಉಳ್ಳಾಲ: ನೇತ್ರಾವತಿ ನದಿ ತೀರವನ್ನು ಮಾಲಿನ್ಯ ಮಾಡುವ ಕಾರ್ಯ ಕಳೆದ ಹಲವು ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ. …

Read More »

ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳು ಹಾಗೂ ಯುಪಿಐ ಹಗರಣಗಳು

ನವದೆಹಲಿ: ದೇಶದ ಪೂರ್ವ ರಾಜ್ಯಗಳು ಮಾರುಕಟ್ಟೆಗಳ ಮೂಲಕ ಹೆಚ್ಚಿನ ಮಟ್ಟದ ಡಿಜಿಟಲ್ ವಂಚನೆಗಳು ಅಥವಾ ಯುಪಿಐ ಹಗರಣಗಳಿಗೆ (ಶೇಕಡಾ 41) ಸಾಕ್ಷಿಯಾಗುತ್ತಿವೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಪಾವತಿ ಅಪ್ಲಿಕೇಶನ್‌ಗಳು ಮತ್ತು ಆನ್‌ಲೈನ್ ಟ್ರಸ್ಟ್‌ಚೆಕರ್ ಪ್ರಕಾರ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಅಸ್ಸಾಂ, ಕಾಶ್ಮೀರ, ಅರುಣಾಚಲ ಪ್ರದೇಶ, ಮೇಘಾಲಯ, ತ್ರಿಪುರ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ, ಹಿಮಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ವಂಚನೆ ದತ್ತಾಂಶ ಒಳನೋಟಗಳು ಮತ್ತು ವಿಶ್ಲೇಷಣೆಯ ಪ್ರಾರಂಭ ಕೆವೈಸಿ, ನಕಲಿ …

Read More »

ದೆಹಲಿ ಆಸ್ಪತ್ರೆಯಲ್ಲಿಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದ್ದು, ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ ದೆಹಲಿಯ ಆಸ್ಪತ್ರೆಯಲ್ಲಿ ನಡೆದಿದೆ. ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ಸರ್ ಗಂಗಾರಾಮ್ ಆಸ್ಪತ್ರೆ ಹಾಗೂ ಜೈಪುರ ಗೋಲ್ಡನ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗಿ ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಬಾತ್ರಾ ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ಇಲ್ಲದೇ …

Read More »

ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ …

Read More »

ಮುಂದಿನ 24 ಘಂಟೆಯಲ್ಲಿ ಜಿಲ್ಲೆಯ ಸಂಪೂರ್ಣ ಕೋವಿಡ್ ವಿವರ ಮೊಬೈಲ್ ನಲ್ಲಿ – ಡಿಸಿ

ಬೆಳಗಾವಿ – ಬೆಳಗಾವಿ ಜಿಲ್ಲೆಯ ಕೊರೋನಾ ಸಂಬಂಧಿತ ಸಮಗ್ರ ಮಾಹಿತಿ ಈಗ ಒಂದೇ ಕಡೆ ಲಭ್ಯ. ಈವರೆಗೆ ಬೆಡ್ ಮಾಹಿತಿ ಸೇರಿದಂತೆ ಎಲ್ಲದಕ್ಕೂ ತಡಕಾಡಬೇಕಿತ್ತು. ಆದರೆ ಈಗ ನಿಮ್ಮ ಬೆರಳ ತುದಿಯಲ್ಲಿ ಎಲ್ಲ ಮಾಹಿತಿಗಳೂ ಲಭ್ಯವಾಗುವಂತೆ ಮಾಡಿದ್ದಾರೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್. ಹರೀಶ್ ಕುಮಾರ ನಿನ್ನೆಯಷ್ಟೆ ಮಾಹಿತಿ ನೀಡಿದ್ದರು, 24 ಗಂಟೆಯಲ್ಲಿ ಎಲ್ಲ ಮಾಹಿತಿ ನಿಮ್ಮ ಮೊಬೈಲ್ ನಲ್ಲಿ ಸಿಗುವಂತೆ ಮಾಡಲಾಗುವುದು ಎಂದು ಟೆಸ್ಟಿಂಗ್ ಇನ್ಫಾರ್ಮೇಶನ್, ಆಸ್ಪತ್ರೆ ಮತ್ತು ಬೆಡ್ …

Read More »