Breaking News
Home / 2021 / ಮೇ (page 104)

Monthly Archives: ಮೇ 2021

ಆಕ್ಸಿಜನ್ ಮತ್ತು ಜೀವ ರಕ್ಷಕ ರೆಮಡಿಸಿವಿಯರ್ ಇಂಜೇಕ್ಷನಗಳನ್ನು ಕೂಡಲೇ ಪೂರೈಸಬೇಕೆಂದು ರಾಜಕೀಯ ಧುರೀಣ ಅಶೋಕ ಪೂಜಾರಿ ಯವರು ಸರಕಾರವನ್ನು ಆಗ್ರಹಿಸಿದ್ದಾರೆ.

ಗೋಕಾಕ : ನಗರದ ಸರಕಾರಿ ಆಸ್ಪತ್ರೆಯ ಹಳೆಯ ಕಟ್ಟಡವನ್ನು ಆಕ್ಸಿಜನ್ ಪೂರೈಕೆಯ ನೂರು (100)ಬೆಡ್‍ಗಳ ಕರೋನಾ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸುವದರ ಜೊತೆಗೆ ಎಲ್ಲ ಕರೋನಾ ಖಾಸಗಿ ಆಸ್ಪತ್ರೆಗಳಿಗೆ ಸಮರ್ಪಕ ಆಕ್ಸಿಜನ್ ಮತ್ತು ಜೀವ ರಕ್ಷಕ ರೆಮಡಿಸಿವಿಯರ್ ಇಂಜೇಕ್ಷನಗಳನ್ನು ಕೂಡಲೇ ಪೂರೈಸಬೇಕೆಂದು ರಾಜಕೀಯ ಧುರೀಣ ಅಶೋಕ ಪೂಜಾರಿ ಯವರು ಸರಕಾರವನ್ನು ಆಗ್ರಹಿಸಿದ್ದಾರೆ. ನಗರದ ‘ಜ್ಞಾನ ಮಂದಿರ’ ಆಧ್ಯಾತ್ಮ ಕೇಂದ್ರದಲ್ಲಿ ಇಂದು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನಗರದ ಸರಕಾರಿ ಆಸ್ಪತ್ರೆ ಹಳೇಯ …

Read More »

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಒಂದು ವೇಳೆ ನಿಯಂತ್ರಣಕ್ಕೆ ಬರದಿದ್ದರೆ ಕಠಿಣಕ್ರಮ

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಸೋಂಕು ಕಡಿಮೆಯಾಗದಿದ್ದರೆ ಜನತಾ ಕರ್ಫ್ಯೂ ಮುಂದುವರೆಯಲಿದೆ. ಟಫ್ ರೂಲ್ಸ್ ವಿಸ್ತರಣೆ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ 14 ದಿನ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕೆ ಬರಬೇಕು. ಒಂದು ವೇಳೆ ನಿಯಂತ್ರಣಕ್ಕೆ ಬರದಿದ್ದರೆ ಕಠಿಣಕ್ರಮ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ಜನತಾ ಕರ್ಫ್ಯೂ ಮುಂದುವರೆಸುವ ಸುಳಿವು …

Read More »

ನಾಳೆ ಬೆಳಗಾವಿ ಲೋಕಸಭಾ ಉಪಚುನಾವಣೆ ಫಲಿತಾಂಶ : ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ‘ಕೊರೋನಾ ನೆಗೆಟಿವ್’ ವರದಿ ಕಡ್ಡಾಯ

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮೇ. 2 ಕ್ಕೆ ಬೆಳಗಾ ಲೋಕಸಭೆ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಮೇ. 2 ರಂದು ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಆರ್ ಟಿ ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೊರೊನಾ ಮಾರ್ಗಸೂಚಿಯ ಪ್ರಕಾರ …

Read More »

2 ಲಕ್ಷಕ್ಕೂ ಅಧಿಕ ಲಸಿಕೆ ತುಂಬಿದ್ದ ಟ್ರಕ್ ಪೊಲೀಸರ ವಶಕ್ಕೆ

ಭೋಪಾಲ್: ರಸ್ತೆ ಬದಿಗೆ ತುಂಬಾ ಹೊತ್ತು ನಿಂತಿದ್ದ ಟ್ರಕ್ ಅನ್ನು ಅನುಮಾನದಿಂದ ಪೊಲೀಸರು ಪರಿಶೀಲಿಸಿದಾ 2 ಲಕ್ಷಕ್ಕೂ ಅಧಿಕ ಲಸಿಕೆ ಇರುವುದು ಪತ್ತೆಯಾಗಿದೆ. ಮಧ್ಯಪ್ರದೇಶ ಕರೇಲಿ ಬಸ್‍ನಿಲ್ದಾಣದ ಬಳಿ ನರ್ಸಿಂಗ್‍ಪುರ್‍ನಲ್ಲಿ ನಿಂತಿದ್ದ ಟ್ರಕ್‍ವೊಂದನ್ನು ಪೊಲೀಸರು ತಪಾಸಣೆ ನಡಸಿದಾಗ ಅದರಲ್ಲಿ 2,40,000 ಕೊವ್ಯಾಕ್ಸಿನ್ ಲಸಿಕೆ ಇರುವುದು ಪತ್ತೆಯಾಗಿದೆ. ಟ್ರಕ್ ತುಂಬಾ ಸಮಯದಿಂದ ಒಂದೇ ಕಡೆ ನಿಂತಿತ್ತು.ಹೀಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಟ್ರಕ್‍ನಲ್ಲಿ ಸಿಕ್ಕ ಲಸಿಕೆ ಸರಿಸುಮಾರು 8 ಕೋಟಿ ರೂಪಾಯಿ …

Read More »

ಉಮೇಶ್ ಜಾಧವ್ ಗೆ ಮೂಟೆಗಟ್ಟಲೇ ಲಸಿಕೆ; ಎಲ್ಲಿಂದ ಬಂತು :ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭಿಸಿದೆ. ಆದರೆ ಲಸಿಕೆ ಲಭ್ಯತೆಯೇ ಇಲ್ಲದೇ ಅಭಿಯಾನ ಆರಂಭಿಸಿರುವುದಾದರೂ ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಕೇರ್ಸ್ ಅಭಿಯಾನದಡಿ ಕೋವಿಡ್ ಸೋಂಕಿತರ ನೆರವಿಗೆ ಆಂಬುಲೆನ್ಸ್ ಗಳಿಗೆ ಚಾಲನೆ ನೀಡಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಪೂರ್ವತಯಾರಿಯಿಲ್ಲದೇ ಲಸಿಕೆ ಅಭಿಯಾನ ಘೋಷಿಸಿದ್ದಾರೆ. ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ವ್ಯಾಕ್ಸಿನ್ ಸಿಗಬೇಕೆಂದರೆ ಆರುವರೆ ಕೋಟಿ ವ್ಯಾಕ್ಸಿನ್ ಬೇಕು. ರಾಜ್ಯದಲ್ಲಿ …

Read More »

ಕೋವಿಡ್ ಮಾಹಿತಿ ಹಂಚಿಕೆ ನಿರ್ಬಂಧಕ್ಕೆ ಗರಂ: ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾಗರಿಕರು ಸಾಮಾಜಿಕ ತಾಣಗಳಲ್ಲಿ ಹಂಚಿಕೊಳ್ಳುವುದನ್ನು ಯಾವುದೇ ಸರ್ಕಾರ ಹತ್ತಿಕ್ಕುವಂತಿಲ್ಲ. ಈ ವಿಷಯದಲ್ಲಿ ನಾಗರಿಕರಿಗೆ ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಸರ್ಕಾರಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಕರೊನಾ ಸಾಂಕ್ರಾಮಿಕ ಕುರಿತಂತೆ ಜನರು ತಮ್ಮ ಕುಂದು-ಕೊರತೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಅದು ತಪುಪ ಮಾಹಿತಿ ಆಗುವುದಿಲ್ಲ. ಆಕ್ಸಿಜನ್ ಅಥವಾ ಬೆಡ್ ದೊರಕಿಲ್ಲ ಎಂದು ಹೇಳುವುದು ಸುಳ್ಳು ಸಂಗತಿಯಲ್ಲ. ಜನರು …

Read More »

ಕರೊನಾ ಸಂಕಷ್ಟದಲ್ಲಿ ತಲೆಎತ್ತಿದೆ ಮೆಡಿಕಲ್​ ಮಾಫಿಯಾ: ಬೆಚ್ಚಿಬೀಳಿಸುವ ವರದಿ ಇದು..!

ವಿಜಯವಾಡ: ಮಹಾಮಾರಿ ಕರೊನಾ ವೈರಸ್​ ನಡುವೆಯೇ ಆಂಧ್ರ ಪ್ರದೇಶದಲ್ಲಿ ಮೆಡಿಕಲ್​ ಮಾಫಿಯಾ ತಲೆಎತ್ತಿದೆ. ಈ ಬಗ್ಗೆ ಸ್ಥಳೀಯ 10ಟಿವಿ ಮಾಧ್ಯಮದ ತನಿಖಾವರದಿಯು ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಗಂಭೀರ ಸ್ಥಿತಿಯಲ್ಲಿರುವ ಕರೊನಾ ರೋಗಿಗಳಿಗೆ ಬಳಸುವ ಚುಚ್ಚುಮದ್ದನ್ನು ಡ್ರಗ್ಸ್​ ಮಾಫಿಯಾ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದೆ. ಇಡೀ ದೇಶವು ಕರೊನಾದಿಂದ ದಿಕ್ಕೆಟ್ಟಿರುವ ಸಂದರ್ಭದಲ್ಲಿ ಕರೊನಾದಿಂದ ಬದುಕುಳಿದ ರೋಗಿಗಳನ್ನು ಸಹಜ ಸ್ಥಿತಿಗೆ ತರಲು ತುರ್ತು ಚುಚ್ಚುಮದ್ದಿನ ಬೇಡಿಕೆ ಇದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕುಟುಂಬದ …

Read More »

ಅಕ್ರಮವಾಗಿ ರೆಮ್ಡೆಸಿವಿರ್ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : ಸಿಎಂ ಬಿಎಸ್ ವೈ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಯಾರಾದ್ರೂ ರೆಮ್ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ಅಭಿಯಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಮತ್ತು …

Read More »

ಅಕ್ರಮ ಮದ್ಯ ಸಾಗಾಣಿಕೆ8 ಲಕ್ಷ ರೂ ಬೆಲೆ ಬಾಳುವ ಮಾಲನ್ನ ವಶಪಡಿಸಕೊಳ್ಳಲಾಗಿದೆ.: ಎ.ರವಿಶಂಕರ್

ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮಾಲನ್ನ ವಶಪಡಿಸಕೊಳ್ಳಲಾಗಿದೆ. ಮಾನ್ಯ ಅಬಕಾರಿ ಜಂಟಿ ಆಯುಕ್ತರಾದ ಶ್ರೀಯುತ ಗಿರಿಯವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಆಯುಕ್ತರಾದ ಶ್ರೀಯುತ ಎ.ರವಿಶಂಕರ್ ರವರ ನಿರ್ದೇಶನದ ಮೇರೆಗೆ ಮಾನ್ಯ ಅಬಕಾರಿ ಊಪ ಅಧೀಕ್ಷಕರು ಕೋಲಾರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಎಂ. ನಟರಾಜ್ ರವರ ನೇತೃತ್ವದಲ್ಲಿ ಕೋಲಾರ ತಾಲ್ಲೂಕು ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ ಡೋನ್ ಹಿನ್ನೆಲೆಯಲ್ಲಿ ಗಸ್ತು ನಿರ್ವಹಿಸುವಾಗ …

Read More »

ಪುತ್ತೂರು ನಿಡ್ಪಳ್ಳಿಯಲ್ಲಿ ನೇಣು‌ ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಪುತ್ತೂರು, ಮೇ 01: ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ‌ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ.‏ ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ ಕಟ್ಟಡದ ಹೊರ ಜಗಲಿಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮುಂಜಾನೆ ಪತ್ತೆಯಾಗಿದೆ. ತಲೆಯಲ್ಲಿ ಮುಂಡಾಸು ಕಟ್ಟಿದ ಹಾಗೆಯೇ ಇರುವುದಲ್ಲದೆ ಕೈಗಳು ಕಟ್ಟಡದ ಕಂಬಕ್ಕೆ ತಾಗು ರೀತಿಯಲ್ಲಿತ್ತು. …

Read More »