ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರ್ಚುಯಲ್ ಸಭೆ ನಡೆಸಲಿದ್ದಾರೆ. ಶಿಕ್ಷಣ ತಜ್ಞರು, ಶಿಕ್ಷಕರು, ಶಾಲೆಗಳ ಆಡಳಿತ ಮಂಡಳಿ, ಪೋಷಕರೊಂದಿಗೆ ಸಚಿವರು ಶೀಘ್ರವೇ ಸಭೆ ನಡೆಸಲಿದ್ದು, ಸೋಂಕು ಕಡಿಮೆಯಾದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪರೀಕ್ಷಾ ವಿಧಾನ ಹೇಗಿರಬೇಕು ಎಂದು ಸಚಿವರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ …
Read More »Monthly Archives: ಮೇ 2021
6 ರಾಜ್ಯಗಳಿಗೆ 24 ಗಂಟೆಗಳಲ್ಲಿ 969 ಟನ್ ಆಕ್ಸಿಜನ್ ಸಾಗಿಸಿದ ರೈಲ್ವೆ ಇಲಾಖೆ
ನವದೆಹಲಿ: “ಪ್ರತಿಕೂಲ ಹವಾಮಾನದ ಮಧ್ಯೆಯೂ 12 ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು 24 ಗಂಟೆಗಳ ಅವಧಿಯೊಳಗೆ 6 ರಾಜ್ಯಗಳಿಗೆ 969 ಟನ್ ದ್ರವ ವೈದ್ಯಕೀಯ ಆಕ್ಸಿಜನ್ ಅನ್ನು ಸಾಗಿಸಿವೆ” ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಮೂರು ರೈಲುಗಳು ತಮಿಳುನಾಡಿಗೆ ತಲುಪಿದರೆ, ನಾಲ್ಕು ಆಂಧ್ರಪ್ರದೇಶಕ್ಕೆ, ತಲಾ ಒಂದೊಂದು ರೈಲುಗಳು ದೆಹಲಿ, ಮಧ್ಯಪ್ರದೇಶ, ಉತ್ತರಪ್ರದೇಶ, ಅಸ್ಸಾಂ ಹಾಗೂ ಕೇರಳಕ್ಕೆ ತಲುಪಿವೆ. “ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ನಿಂದ ಈ ರೈಲುಗಳು ಆಕ್ಸಿಜನ್ ಸಂಗ್ರಹಿಸಿಕೊಂಡು …
Read More »ಶಾಸಕನ ಅಮಾನವೀಯ ನಡೆಗೆ ಮೃತಪಟ್ಟ ವೈದ್ಯ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ರೂ ನೆರವಿಗೆ ಬಾರದೇ ನಿರ್ಲಕ್ಷ್
ಚಿಕ್ಕಮಗಳೂರು: ಅಪಘಾತದಲ್ಲಿ ವೈದ್ಯರೊಬ್ಬರು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದರೂ, ಸಮೀಪದಲ್ಲೇ ಇದ್ದ ಶಾಸಕರೊಬ್ಬರು ಸಹಾಯಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ. ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಕೋವಿಡ್ ವಾರಿಯರ್ ಡಾ. ರಮೇಶ್ ಕುಮಾರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ. ಅಪಘಾತದ ನಂತರ …
Read More »ಕರ್ನಾಟಕದ ಹೊಸ ಮುಖ್ಯಮಂತ್ರಿ ಹೆಸರು ಘೋಷಿಸಲಿರುವ ಪ್ರಧಾನಿ ಮೋದಿ!
ಬೆಂಗಳೂರು, ಮೇ. 26: ವಯೋ ಸಹಜ ಕಾರಣದಿಂದ ಬಿ.ಎಸ್.ಯಡಿಯೂರಪ್ಪ ಅವರ ಸಿಎಂ ಪಟ್ಟದಿಂದ ಕೆಳಗೆ ಇಳಿಯಲಿದ್ದಾರೆ. ಅಂದುಕೊಂಡಂತೆ ಆದಲ್ಲಿ ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ‘ಯಂಗ್ ಸಿಎಂ’ ಹೆಸರನ್ನು ಪ್ರಧಾನಿ ಮೋದಿ ಅವರೇ ಘೊಷಣೆ ಮಾಡಲಿದ್ದಾರೆ. ಆ ಅಚ್ಚರಿಯ ಹೊಸ ಸಿಎಂ ಯಾರು ಅಂತ ಈವರೆಗೂ ಯಾರಿಗೂ ಗುಟ್ಟು ಬಿಟ್ಟು ಕೊಟ್ಟಿಲ್ಲ! ಹೌದು. ಬಿಜೆಪಿ ವಲಯದಲ್ಲಿ ಬಹು ಚರ್ಚೆಗೆ ಕಾರಣವಾಗಿರುವ ವಿಚಾರವಿದು. ಬಿಜೆಪಿ ಪಕ್ಷದ ನೀತಿ ಸಂಹಿತೆ …
Read More »ಯಡಿಯೂರಪ್ಪ ಸಿಎಂ ಪಟ್ಟ ಬಿಟ್ಟರೆ ಈ ಸಚಿವರೂ ಬದಲಾಗುತ್ತಾರೆ
ಬೆಂಗಳೂರು, ಮೇ. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬದಲು ಮಾಡುವ ಜತೆಗೆ ರಾಜ್ಯದಲ್ಲಿ ಸಚಿವರ ಖಾತೆಗಳು ಬದಲಾಗಲಿವೆ. ಕೆಲವರಿಗೆ ಸಚಿವ ಸಂಪುಟ ಭಾಗ್ಯ ಸಿಕ್ಕಿದರೆ, ಇನ್ನೂ ಕೆಲವರು ಸಚಿವ ಸ್ಥಾನ ಕಳೆದುಕೊಳ್ಳುವುದು ಗ್ಯಾರೆಂಟಿ ಎಂಬ ಮಹತ್ವದ ಸಂಗತಿಯೊಂದು ಬಿಜೆಪಿ ಪಾಳಯದಿಂದಲೇ ಹೊರಗೆ ಬಿದ್ದಿದೆ. ಆಪರೇಷನ್ ಕಮಲ ಮಾಡಿ ಪಕ್ಷಾಂತರಿಗಳಿಗೆ ಮಣೆ ಹಾಕಿ ಯಡಿಯೂರಪ್ಪ ಅವರು ಸಚಿವ ಸಂಪುಟ ರಚನೆ ಮಾಡಿದ್ದರು. ಮಹತ್ವದ ಖಾತೆಗಳನ್ನು ವಲಸೆ ನಾಯಕರಿಗೆ ಕೊಟ್ಟು ಮೂಲ …
Read More »ನಾಯಕತ್ವ ಬದಲಾವಣೆ ವಿಚಾರ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ನಿರಾಣಿ; ಊಹಾಪೋಹ ಎಂದ ಬೊಮ್ಮಾಯಿ
ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಒಬ್ಬೊಬ್ಬರು ಸಚಿವರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಪ್ರತ್ಯೇಕ ಸಭೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚಟುವಟಿಕೆ ನಡೆಯುತ್ತಿರುವುದು ಶೇಕಡಾ ನೂರರಷ್ಟು ನಿಜ. ಕೆಲ ಸಚಿವರೇ ಪ್ರತ್ಯೇಕ ಸಭೆಯನ್ನೂ ನಡೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್ …
Read More »ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ
ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಜಿಂದಾಲ್ ಗೆ ಜಮೀನು ನೀಡಿದ ವಿಚಾರ ದೆಹಲಿವರೆಗೆ ತಲುಪಿದೆ. ಸಚಿವ ಆನಂದ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಜಿಂದಾಲ್ ಗೆ ಜಮೀನು ನೀಡಿದ ನಿರ್ಧಾರ ವಾಪಸ್ ಪಡೆಯುವಂತೆ ಒತ್ತಾಯಿಸುವ ಸಾಧ್ಯತೆ ಇದೆ. ಇದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಹಲವು ಶಾಸಕರು ಹೇಳಿದ್ದು, ಹೈಕಮಾಂಡ್ ಗೂ ದೂರು …
Read More »ಐಸಿಎಐ ಸಿಎ ಪರೀಕ್ಷೆ ಮುಂದೂಡಿಕೆ
ನವದೆಹಲಿ: ಮೇ 21 ಮತ್ತು 22ರಂದು ನಡೆಯಬೇಕಿದ್ದ ಐಸಿಎಐ ಸಿಎ ಮಧ್ಯಂತರ ಮತ್ತು ಅಂತಿಮ ಪರೀಕ್ಷೆಗಳು ಜೂನ್ 5 ರಿಂದ ನಡೆಯಲಿವೆ ಎಂದು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ಐಸಿಎಐ) ತಿಳಿಸಿದೆ. ಆದ್ರೆ, ಪರೀಕ್ಷೆಗಳ ಸಮಯ ಸೇರಿದಂತೆ ವಿವರವಾದ ಅಧಿಸೂಚನೆಯನ್ನು ಇನ್ನೂ ಘೋಷಿಸಲಾಗಿಲ್ಲ. ‘ಕೋವಿಡ್-19 ಸಾಂಕ್ರಾಮಿಕ ರೋಗ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮ ಮತ್ತು ಅವರ ಕಷ್ಟಗಳನ್ನು ತಗ್ಗಿಸಲು, ಅಂತಿಮ ಮತ್ತು ಮಧ್ಯಂತರ ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆಗಳನ್ನ ಮುಂದೂಡಲು …
Read More »ಮುಖ್ಯಮಂತ್ರಿ ಬದಲಾವಣೆ ವಿಚಾರ ಶೇ.100 ರಷ್ಟು ನಿಜ,: ಆರ್ ಅಶೋಕ್
ಬೆಂಗಳೂರು: ಕೊರೋನಾ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ. ಆದ್ರೆ, ಅವಧಿಗೂ ಮುನ್ನ ಅವರನ್ನ ಬದಲಿಸಿ ಬೇರೆಯವರಿಗೆ ಸಿಎಂ ಪಟ್ಟಕಟ್ಟುವ ಕಸರತ್ತು ನಡೆದಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಶಾಸಕರು, ಸಚಿವರುಗಳು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ. ಇವೆಲ್ಲಾ ಬೆಳಗವಣಿಗೆಗಳು ನಡೆಯುತ್ತಿರುವುದು ನಿಜ ಎಂದು ಸ್ವತಃ ಕಂದಾಯ ಸಚಿವ ಆರ್. ಅಶೋಕ್ ಖಚಿತಪಡಿಸಿದ್ದಾರೆ. ಇದರೊಂದಿಗೆ …
Read More »ಇಬ್ಬರು ಸಹೋದರರು ಸೇರಿಂತೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಶಿಕ್ಷಕರು ಕೋವಿಡ್ಗೆ ಪ್ರಾಣ ಕಳೆದುಕೊಂಡಿದ್ದಾರೆ.
ಚಿಕ್ಕೋಡಿ: ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಹೋದರರಿಬ್ಬರು ಮಹಾಮಾರಿ ಕೊರೊನಾಗೆ ಬಲಿಯಾಗಿರುವ ಘಟನೆ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗರ್ಲಜುಂಜಿಯ ಗ್ರಾಮದ ಪಿ.ಕೆ ಕುಂಬಾರ ಹಾಗೂ ಅವರ ತಮ್ಮ ನಾರಾಯಣ್ ಕೆ.ಕುಂಬಾರ ಮೃತರು. ಈ ಇಬ್ಬರು ಸಹೋದರರು ತೋಪಿನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಲವು ವರ್ಷಗಳಿಂದ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ತಮ್ಮನಾದ ನಾರಾಯಣ್ ಕೆ.ಕುಂಬಾರಗೆ ಕಳೆದ ಹತ್ತು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಆತನಿಂದ …
Read More »