Breaking News
Home / 2021 / ಮೇ (page 17)

Monthly Archives: ಮೇ 2021

ಅತ್ಯಾಚಾರವೆಸಗಿ, ಮಹಿಳೆಯನ್ನ ವಿದ್ಯುತ್​ ಕಂಬಕ್ಕೆ ನೇತು ಹಾಕಿದ ಕಾಮುಕರು

ಪಾಟ್ನಾ: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್​ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ. ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್​ ಕಂಬಕ್ಕೆ ಕಟ್ಟಿ ನೇತು …

Read More »

ಬಾಬಾ ರಾಮ್‍ದೇವ್ ಅವರಿಗೆ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದ ಐಎಂಎ

ನವದೆಹಲಿ: ಅಲೋಪತಿ ಔಷಧಿ ಕುರಿತು ಯೋಗ ಗುರು ಬಾಬಾ ರಾಮ್‍ದೇವ್ ನೀಡಿದ ಹೇಳಿಕೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ)ದ ಉತ್ತರಾಖಂಡ್ ವಿಭಾಗ ಬರೋಬ್ಬರಿ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದೆ. ಬಾಬಾ ರಾಮ್‍ದೇವ್ ಅವರು ತಮ್ಮ ಹೇಳಿಕೆ ಕುರಿತು ವೀಡಿಯೋ ಪೋಸ್ಟ್ ಮಾಡಬೇಕು ಹಾಗೂ 15 ದಿನಗಳೊಳಗೆ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು.  ಇಲ್ಲವಾದಲ್ಲಿ 1000 ಕೋಟಿ ರೂ.ಗಳನ್ನು ಬೇಡಿಕೆ ಇಡುತ್ತೇವೆ ಎಂದು ಐಎಂಎ ನೋಟಿಸ್‍ನಲ್ಲಿ ಬರೆಯಲಾಗಿದೆ. ಅಲ್ಲದೆ ಐಎಂಎ …

Read More »

ಕಿಮ್ಸ್‌ನಲ್ಲಿ 96 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಮಾಹಿತಿ ನೀಡಿರುವ ಅವರು, ಮೇ 24ರ ವರೆಗೆ ನಮ್ಮ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ 109 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ಸೋಂಕಿತರು ತಮ್ಮ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿದ್ದಾರೆ. ಸದ್ಯ ಕಿಮ್ಸ್ …

Read More »

ಪೊಲೀಸ್ ಇಲಾಖೆಗೆ ಸ್ವರ್ಣ ಉದ್ಯಮ ಸಮೂಹ ಸಂಸ್ಥೆಯು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಕ್ಸ್ ಗಳ ದೇಣಿಗೆ

ಹುಬ್ಬಳ್ಳಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಫ್ರಂಟ್ ಲೈನ್ ವಾರಿಯರ್ಸ್‍ಗಳಾಗಿರುವ ಪೊಲೀಸ್ ಇಲಾಖೆಗೆ ಸ್ವರ್ಣ ಉದ್ಯಮ ಸಮೂಹ ಸಂಸ್ಥೆಯು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಕ್ಸ್ ಗಳನ್ನ ದೇಣಿಗೆಯಾಗಿ ನೀಡಿ ಸಾಮಾಜಿಕ ಕಾರ್ಯ ಕೈಗೊಂಡಿದೆ. ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ವಿ ಪ್ರಸಾದ್ ಅವರು 2100 ಮಾಸ್ಕ್ ಮತ್ತು 2100 ಸ್ಯಾನಿಟೈಸರ್ ಬಾಕ್ಸ್ ಗಳನ್ನು ವಿತರಣೆ ಮಾಡುವ ಮೂಲಕ ಪೊಲೀಸ್ ಸಿಬ್ಬಂದಿಗೆ ನೆರವು ನೀಡಿದ್ದಾರೆ. ನವನಗರದಲ್ಲಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ …

Read More »

ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ದಾವಣಗೆರೆಯಲ್ಲಿ ಸೋಂಕಿತೆ ಸಾವು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಕ್ಸಿಜನ್ ಸಮಸ್ಯೆಯೂ ದೊಡ್ಡ ಮಟ್ಟದಾಗಿ ಕಾಡುತ್ತಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಹರಿಹರ ತಾಲೂಲು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ಸೋಂಕಿತೆ ಸಾವನ್ನಪ್ಪಿದ್ದಾರೆ. ಸಾಯುವುದಕ್ಕೂ ಮುನ್ನ ಸೋಂಕಿತೆ ವಿಡಿಯೋ ಮಾಡಿದ್ದಾರೆ. ಸಾಯುವುದಕ್ಕೂ ಮುನ್ನ ಅಕ್ಸಿಜನ್ ಬರುತ್ತಿಲ್ಲ ಎಂದು ಸೋಂಕಿತ ಮಹಿಳೆ ವಿಡಿಯೋ ಮಾಡಿದ್ದಾರೆ. ಸರಿಯಾದ ಸಮಯಕ್ಕೆ …

Read More »

ರೆಮ್‌ಡಿಸಿವಿರ್ ಅಕ್ರಮ ಮಾರಾಟ: ಮೂವರು ದಂಧೆಕೋರರ ಬಂಧನ

ಬೆಂಗಳೂರು, ಮೇ. 26: ನೆರೆ ರಾಜ್ಯ ಕೇರಳದಿಂದ ರೆಮ್‌ಡಿಸಿವಿರ್ ಚುಚ್ಚು ಮದ್ದು ತಂದು ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ದಂಧೆಕೋರರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ದೊಡ್ಡ ತೋಗೂರು ನಿವಾಸಿಗಳಾದ ಸಂಜೀವ್ ಕುಮಾರ್, ಪ್ರತೀಕ್ ಹಾಗೂ ಅಭಿಜಿತ್ ಬಂಧಿತರು. ಕೊರೊನಾ ಸೋಂಕಿತರಿಗೆ ಬಳಸುವ ರೆಮ್‌ಡಿಸಿವಿರ್‌ಗೆ ರಾಜ್ಯದಲ್ಲಿ ಇರುವ ಬಹು ಬೇಡಿಕೆಯನ್ನು ಅರಿತಿದ್ದ ಮೂವರು ಕೇರಳದಲ್ಲಿ ನೂರಾರು ರೆಮ್‌ಡಿಸಿವಿರ್ ಚುಚ್ಚು ಮದ್ದು ವಯಲ್‌ಗಳನ್ನು ತಂದಿದ್ದರು. …

Read More »

ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯ

ಮುದ್ದೇಬಿಹಾಳ: ಎಲ್ಲೆಡೆ ಕೊರೊನಾ ಮಹಾಮಾರಿ ಸೋಂಕು ಹೆಚ್ಚಾಗುತ್ತಿದ್ದು, ಮನೆ ಸದಸ್ಯರೇ ಸೋಂಕಿಗೊಳಗಾದವರನ್ನ ಮುಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ತಾಲೂಕಿನ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರು ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿ ಧೈರ್ಯ ತುಂಬಿದ್ದಾರೆ. ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯತಾಲೂಕಿನ ಕಾಳಗಿ ಸಮುದಾಯ ಆರೋಗ್ಯ ಕೇಂದ್ರ ಎರಡು ಬಾರಿ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿದ್ದು, ಹೆರಿಗೆಗೆಂದು ಬರುವ ಗರ್ಭಿಣಿಯರಿಗೆ ಒಳ್ಳೆಯ ಸೌಲಭ್ಯ ಕಲ್ಪಿಸಲಾಗಿದೆ. ಸದ್ಯಕ್ಕೆ …

Read More »

ಕೋರೋಣ ವಾರಿಯರ್ಸ್ ಗೆ ಬಿಜೆಪಿ ಗೃಹ ಕಚೇರಿಯಲ್ಲಿ ಕೋವಿಡ್ ಕಿಟ್ ರಮೇಶ್ ಜಾರಕಿಹೊಳಿವಿತರಣೆ ಮಾಡಿದರು

ಗೋಕಾಕ:  ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಛೇರಿಯಲ್ಲಿ ವೈಯಕ್ತಿಕವಾಗಿ ತಾಲೂಕಿನ ಕೊರೋನಾ ವಾರಿಯರ್ಸಗಳಾದ.     ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ,ಪತ್ರಕರ್ತರು,ಪುರಸಭೆ,ನಗರಸಭೆ,ಕಂದಾಯ ಇಲಾಖೆ,ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೈನಿಟೈಜರ, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಟಿ.ಆರ್ ಕಾಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

Read More »

ಫೋಟೋ ಮೇಲೆ ಹಾಲು ಸುರಿಯದೆ ಹಸಿದವರಿಗೆ ನೀಡಿ ಎಂದ ಸೋನು ಸೂದ್‌

ಮುಂಬೈ: ಕೊರೊನಾ ಸಂಕಷ್ಟದಲ್ಲಿ ನೆರವಿಗೆ ನಿಂತಿರು ಬಾಲಿವುಡ್ ನಟ ಸೋನು ಸೂದ್ ಅಭಿಮಾನಿಗಳಿಗೆ ದೊಡ್ಡ ಕರೆಯೊಂದನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ದಯಮಾಡಿ ಎಲ್ಲರೂ ಹಾಲನ್ನು ಉಳಿಸಿ, ಅಗತ್ಯ ಇರುವವರಿಗೆ ನೀಡಿ. ಯಾರೂ ನನ್ನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಬೇಡಿ ಎಂದು ಮನವಿ ಮಾಡಿಕೊಂಡು ಟ್ವೀಟ್ ಮಾಡಿ ಸೋನು ಅವರ ಭಾವ ಚಿತ್ರಕ್ಕೆ ಹಾಲಿನ ಅಭೀಷೆಕ ಮಾಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಆಂಧ್ರಪ್ರದೇಶದ ಕುರ್ನೂಲ್ ಮತ್ತು ನೆಲ್ಲೂರಿನಲ್ಲಿ ಸೋನು ಸೂದ್ ಫೋಟೋಗೆ ಹಾಲಿನ …

Read More »

ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ

    ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ. ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು …

Read More »