Breaking News
Home / 2021 / ಮೇ (page 33)

Monthly Archives: ಮೇ 2021

ಬಾಗಲಕೋಟೆಯಿಂದ ಗದಗಕ್ಕೆ ಶವ ತಂದ ಕುಟುಂಬಸ್ಥರು, ಆದರೆ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ

ಗದಗ: ಜಿಲ್ಲೆಯುಲ್ಲಿ ಕೊರೊನಾ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಮರಗೋಳದಲ್ಲಿ ನಡೆದಿದೆ. ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಗ್ರಮದಲ್ಲೇ ವೃದ್ಧನ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಚಿಂತಿಸಿದ್ದರು. ಆದರೆ ಗ್ರಾಮದ ಜನ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು ಮಾತಿನ ಚಕಮಕಿ ನಡೆದಿದೆ. ಮೃತ ವೃದ್ಧ ಗದಗ ಬಿಟ್ಟು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ …

Read More »

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್​ಡೌನ್

ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿದ್ದು, ದಿನೇದಿನೆ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಸೀಲ್​​ಡೌನ್​ ಜಾರಿ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್​ ತಿಳಿಸಿದ್ದಾರೆ. ಉತ್ತರಕನ್ನಡದ ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳು ನಾಳೆಯಿಂದ ಮೇ 24ರ ಸಂಜೆಯವರೆಗೆ ಸೀಲ್​ಡೌನ್ ಆಗಲಿವೆ. ಇನ್ನು ಉಳಿದ ಎಲ್ಲ ತಾಲೂಕುಗಳು ಶನಿವಾರ ಮತ್ತು ಭಾನುವಾರ ಮಾತ್ರ ಸೀಲ್​ಡೌನ್​ ಆಗಲಿವೆ …

Read More »

ಮಾಜಿ ಪ್ರಧಾನಿ ರಾಜೀವ್ ಗಾಂಧಿ 30ನೇ ಪುಣ್ಯತಿಥಿ: ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರಿಂದ ಗೌರವ, ನಾಯಕರಿಂದ ಸ್ಮರಣೆ

ನವದೆಹಲಿ: ಮೇ 21, ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿ. 30 ವರ್ಷಗಳ ಹಿಂದೆ ಮೇ.21, 1991ರಲ್ಲಿ ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಜೀವ್ ಗಾಂಧಿಯವರು ಭಾಗವಹಿಸಿದ್ದ ಸಂದರ್ಭದಲ್ಲಿ ಎಲ್ ಟಿಟಿಇ ಕಾರ್ಯಕರ್ತರ ಆತ್ಮಹತ್ಯಾ ದಾಳಿಗೆ ಬರ್ಬರವಾಗಿ ಹತ್ಯೆಗೀಡಾಗಿದ್ದರು. ಇಂದು ಅವರ ಜಯಂತಿ ಸಂದರ್ಭದಲ್ಲಿ ಅವರ ಮಕ್ಕಳಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಹಲವು ರಾಜಕೀಯ ನಾಯಕರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ಮುಖಂಡರು …

Read More »

ಸಾಮಾನ್ಯ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಇನ್ನೊಂದು ನ್ಯಾಯ, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಶೆಟ್ಟರ್ ಆಪ್ತ..!

ಹುಬ್ಬಳ್ಳಿ: ಅವಳಿ ನಗರಿಯಲ್ಲಿ ಸಾಮಾನ್ಯ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಇನ್ನೊಂದು ನ್ಯಾಯ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವ ಜಗದೀಶ್ ಶೆಟ್ಟರ್ ಆಪ್ತ ಹಾಗೂ ಬಿಜೆಪಿ ಮುಖಂಡ ಆಗಿರುವ ಮಲ್ಲಿಕಾರ್ಜುನ ಸಾಹುಕಾರ್ ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾಹುಕಾರ್ ತಮ್ಮ 25ನೇ ಮದುವೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿಲ್ಲ. ನಿಯಮಗಳ ಉಲ್ಲಂಘಿಸಿ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಮಾರಂಭ ಮಾಡಿದ್ದಾರೆ. ಮೇ 18 ರಿಂದ …

Read More »

ಕೋವಿಡ್​ನಿಂದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​ ನಿಧನ

ಬೆಳಗಾವಿ: ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​ (78) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಳಗಾವಿ ‌ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ವಾರದ ಹಿಂದೆ ಬಾಬಾಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ …

Read More »

ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ

ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್‌.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …

Read More »

18+ ಲಸಿಕೆ ನಾಳೆ ಮತ್ತೆ ಆರಂಭ

ಬೆಂಗಳೂರು: ರಾಜ್ಯದಲ್ಲಿ 18-44 ವರ್ಷ ವಯೋಮಾನದವರಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪುಗಳನ್ನು ಗುರುತಿಸಿ ಮೇ 22ರಿಂದ ಕೋವಿಡ್ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಲಸಿಕೆ ಕೊರತೆಯಿಂದ 18-44 ವರ್ಷ ದವರ ಲಸಿಕೆ ಅಭಿಯಾನ ತಾತ್ಕಾಲಿಕ ಸ್ಥಗಿತವಾಗಿತ್ತು. ಸದ್ಯ ಮೇ 15ರಂದು ನಡೆದ ತಜ್ಞರ ಸಮಿತಿ ಸಭೆಯ ತೀರ್ಮಾನದಂತೆ ಕೊರೊನಾ ಮುಂಚೂಣಿ ಕಾರ್ಯಕರ್ತರು ಆದ್ಯತಾ ವಲಯದ 18ರಿಂದ 44 ವರ್ಷ ದವರಿಗೆ ಲಸಿಕೆ ನೀಡಬಹುದು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ …

Read More »

ಬೇಡಿಕೆ ಕುಸಿತ; ಒಣಗಿ ಬೀಳುತ್ತಿರುವ ವಿಳ್ಯಾದೆಲೆ

ಕೊಲ್ಹಾರ: ವಿಳ್ಯಾದೆಲೆಗೆ ಕೊರೊನಾ ಪರಿಣಾಮ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತವಾಗಿ ಧಾರಣೆಯೂ ಇಲ್ಲದಂತಾಗಿದೆ. ಎಲೆಬಳ್ಳಿ ಕೃಷಿಯನ್ನೇ ಅವಲಂಭಿಸಿರುವ ತಾಲ್ಲೂಕಿನ ನೂರಾರು ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ವ್ಯಾಪಾರಿಗಳ ಬದುಕನ್ನು ಕೊರೊನಾ ಲಾಕಡೌನ್ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಕೊಲ್ಹಾರ ತಾಲ್ಲೂಕಿನ ಕೂಡಗಿ, ತಳೇವಾಡ, ಕಲಗುರ್ಕಿ, ಮಸೂತಿ, ಮಲಘಾಣ, ಆಸಂಗಿ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಅಂದಾಜು 300 ಎಕರೆಯಷ್ಟು ಪ್ರದೇಶದಲ್ಲಿ ಎಳೆಬಳ್ಳಿ ಕೃಷಿ ಮಾಡಲಾಗಿದೆ. ಎಲೆಬಳ್ಳಿ ವರ್ಷಪೂರ್ತಿ ಪ್ರತಿ 15-20 ದಿನಗಳಿಗೊಮ್ಮೆ ಕಟಾವಿಗೆ …

Read More »

ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವೀಡಿಯೋ ಸಂವಾದ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಡುವೆ “ಸಂಘರ್ಷ’ ಏರ್ಪಟ್ಟಿದೆ. ವೀಡಿಯೋ ಸಂವಾದ ನಡೆಸುವ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದಕ್ಕೆ, “ಮಾಹಿತಿ ಪಡೆಯಬಹುದು. ಆದರೆ ವೀಡಿಯೋ ಸಂವಾದ ನಡೆಸಲು ಅವಕಾಶ ಇಲ್ಲ ಎಂದು ಮುಖ್ಯ ಮಂತ್ರಿಯವರಿಂದ ನಿರ್ದೇಶಿತನಾಗಿ ದ್ದೇನೆ’ ಎಂಬ ಉತ್ತರ ಸಿಕ್ಕಿದೆ. ಇದರಿಂದ …

Read More »

ಬೆಳಗಾವಿಯಲ್ಲಿ ಮಕ್ಕಳ ಲಸಿಕೆ ಪ್ರಯೋಗ

ಬೆಳಗಾವಿ: ಕೋವಿಡ್ ಮೂರನೇ ಅಲೆ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹದಿನೆಂಟಕ್ಕಿಂತ ಕಡಿಮೆ ಪ್ರಾಯದ ಮಕ್ಕಳಿಗೂ ಲಸಿಕೆ ನೀಡುವ ಸಂಬಂಧ ಪ್ರಯೋಗಗಳಿಗೆ ವೇಗ ದೊರೆತಿದೆ. ಝೈಡಸ್‌ ಕ್ಯಾಡಿಲಾ ಕಂಪೆನಿ ಅಭಿವೃದ್ಧಿಪಡಿಸುತ್ತಿರುವ ಝೈಕೋವ್‌-ಡಿ ಮೂರು ಹಂತದ ವೈದ್ಯ ಕೀಯ ಪ್ರಯೋಗ (ಕ್ಲಿನಿಕಲ್‌ ಟ್ರಯಲ್ಸ್‌) ನಲ್ಲಿ ರಾಜ್ಯದ 1,500ಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದಾರೆ. ವಿಶೇಷವೆಂದರೆ ವಯಸ್ಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಕೊವ್ಯಾಕ್ಸಿನ್‌ ಹಾಗೂ ಕೊವಿಶೀಲ್ಡ್‌ 2 ಡೋಸ್‌ಗಳಿದ್ದರೆ, ಮಕ್ಕಳಿಗೆ ಪ್ರಯೋಗ ಮಾಡುತ್ತಿರುವ ಈ ಲಸಿಕೆ ಮೂರು …

Read More »