Breaking News

Monthly Archives: ಮೇ 2021

ಆಹಾರ ಪೊಟ್ಟಣಗಳ ಮೇಲೆ ಕೊರೊನಾ ಸೋಂಕಿತರಿಗೆ ವಿಶೇಷ ಸಂದೇಶ ಕಳುಹಿಸಿದ ಬಾಲಕ

ಸಂಪೂರ್ಣ ವಿಶ್ವವೇ ಸಂಕಷ್ಟದಲ್ಲಿರುವ ಈ ಕಾಲದಲ್ಲಿ ಆತ್ಮವಿಶ್ವಾಸ ತುಂಬಬಲ್ಲ ಸಣ್ಣ ಮಾತೂ ಸಹ ಭಾರೀ ಖುಷಿಯನ್ನ ಕೊಡಬಹುದು. ಇದೇ ಮಾತನ್ನ ಅತ್ಯಂತ ಚಿಕ್ಕ ವಯಸ್ಸಿಗೆ ಅರ್ಥ ಮಾಡಿಕೊಂಡ ಬಾಲಕನೊಬ್ಬ ತನ್ನ ತಾಯಿ ಕೋವಿಡ್​ ರೋಗಿಗಳಿಗೆಂದು ತಯಾರು ಮಾಡಿದ್ದ ಊಟದ ಪ್ಯಾಕೆಟ್​ಗಳ ಮೇಲೆ ‘ಖುಷಿಯಾಗಿರಿ’ ಎಂದು ಬರೆದಿದ್ದಾನೆ. ಬಾಲಕ ಈ ರೀತಿ ಆಹಾರ ಪೊಟ್ಟಣಗಳ ಮೇಲೆ ಸಂದೇಶ ಬರೆಯುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆದ …

Read More »

ಹಂಪಿಯ 70ಕ್ಕೂ ಹೆಚ್ಚು ಖಾಸಗಿ ಗೈಡ್​​ಗಳಿಗೆ ಸಹಾಯ ಮಾಡಿದ ಮಾತೃ ಹೃದಯಿ ಡಾ.ಸುಧಾಮೂರ್ತಿ

ವಿಜಯನಗರ: ಈ ಕೊರೊನಾ ಬಂದಾಗಿನಿಂದ ಒಂದಲ್ಲ ಒಂದು ಸಮಸ್ಯೆ ಎಲ್ಲರನ್ನೂ ಕಾಡ್ತಿದೆ. ಯಾರನ್ನೂ ಬಿಡದ ಈ ಕೊರೊನಾದಿಂದಾಗಿ, ಅದೆಷ್ಟೋ ಜನರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಸಂಕಷ್ಟಕ್ಕೆ ಸಿಲುಕಿದವರಿಗೆ ಹಲವರು ನೆರವಿನ ಹಸ್ತವನ್ನೂ ಚಾಚಿದ್ದಾರೆ. ಅದರಲ್ಲಿ, ಸದಾ ಎಲ್ಲರ ಕಷ್ಟಗಳಿಗೆ ಸ್ಪಂದಿಸೋ ಮಾತೃ ಹೃದಯಿ ಡಾ.ಸುಧಾಮೂರ್ತಿ ಮಿಡಿದಿದ್ದಾರೆ. ಹಂಪಿ ಪ್ರವಾಸಿ ಗೈಡ್ಸ್‌ಗಳಿಗೆ ನೆರವಿನ ಸಹಾಯ ಹಸ್ತ ನೀಡಿದ್ದಾರೆ ಸುಧಾಮೂರ್ತಿ. ಕೊರೊನಾ ಹೊಡೆತಕ್ಕೆ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ …

Read More »

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ : ಸಮೀಕ್ಷೆ

ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗದ ವಿನಾಶಕಾರಿ ಎರಡನೇ ತರಂಗವನ್ನು ಹತೋಟಿಗೆ ತರಲು ದೇಶವು ತೀವ್ರವಾಗಿ ಹೆಣಗಾಡುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ ಎಂದು ಸಮೀಕ್ಷೆಯೊಂದು ಮಂಗಳವಾರ ಹೇಳಿದೆ. ಕೊರೋನಾ ಬಿಕ್ಕಟ್ಟು ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನಾಯಕತ್ವ ವಿಫಲವಾಗಿದ್ದು ಈ ಹಿನ್ನಲೆಯಲ್ಲಿ ಅವರ ಜನಪ್ರಿಯತೆಯ ಗ್ರಾಫ್ ಕುಸಿತವಾಗಿದೆ ಎಂದು ಭಾರತೀಯ ಮತ್ತು ಅಮೆರಿಕದ ಡೇಟಾ ಇಂಟಲಿಜೆನ್ಸಿ ಸಂಸ್ಥೆಯ ಸಮೀಕ್ಷೆ ಹೊರಹಾಕಿದೆ. 2014 ರಲ್ಲಿ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ …

Read More »

ಸಕಾಲಕ್ಕೆ ಆಕ್ಸಿಜನ್ ಒದಗಿಸಿ 50 ರೋಗಿಗಳ ಜೀವ ಉಳಿಸಿದ ಕಾಂಗ್ರೆಸ್ ಯುವ ನಾಯಕ

ರಾಯಚೂರು: ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಏಕಾಏಕಿ ಆಕ್ಸಿಜನ್ ಕೊರತೆ ಎದುರಾದ ಘಟನೆ ನಡೆದಿದ್ದು ಸಕಾಲಕ್ಕೆ ಕಾಂಗ್ರೆಸ್ ಯುವ ನಾಯಕ ಬಸನಗೌಡ ಬಾದರ್ಲಿ ಆಕ್ಸಿಜನ್ ಪೂರೈಸುವ ಮೂಲಕ 50 ಜನರ ಪ್ರಾಣ ಉಳಿಸಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗುತ್ತಿದ್ದಂತೆಯೇ ಸ್ವತಃ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಬಸನಗೌಡ ಬಾದರ್ಲಿ ಅವರಿಗೆ ಕರೆ ಮಾಡಿ ಆಕ್ಸಿಜನ್ ಒದಗಿಸುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಕೆಲವೇ ಹೊತ್ತಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ 15 ಜಂಬೋ …

Read More »

ಶೀಘ್ರವೇ ಮಾರುಕಟ್ಟೆ ಬರಲಿದೆ ಮೂಗಿಗೆ ಹಾಕುವ ಕೊರೊನಾ ವ್ಯಾಕ್ಸಿನ್

ಹೈದರಾಬಾದ್: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ನೇಸಲ್ ವ್ಯಾಕ್ಸಿನ್​ ಮೊದಲ ಹಂದ ಪ್ರಯೋಗ ಮುಕ್ತಾಯಗೊಂಡಿದೆ. ನಾಗ್ಪುರದ ರಾಹತೆ ಆಸ್ಪತ್ರೆಯಲ್ಲಿ 50 ಜನರ ಮೇಲೆ ನೇಸಲ್ ವ್ಯಾಕ್ಸಿನ್ ಮೊದಲ ಹಂತದ ಪ್ರಯೋಗ ಮಾಡಲಾಗಿದೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ನೇಸಲ್ ವ್ಯಾಕ್ಸಿನ್​ ಪ್ರಯೋಗಕ್ಕೆ ಅನುಮತಿ ಸಿಕ್ಕಿತ್ತು.. ಈ BBV 154 ಇಂಟ್ರಾ ನೇಸಲ್ ವ್ಯಾಕ್ಸಿನ್​ನ್ನು ಮೂಗಿನ ಎರಡೂ ಹೊಳ್ಳೆಗೆ 0.2 ml ಎರಡು ಡ್ರಾಪ್ ಹಾಕಲಾಗುತ್ತೆ. ಮ್ಯುಕೋಸಲ್ ಇಮ್ಯುನಿಟಿಯನ್ನ ಹೆಚ್ಚಿಸುವ ವ್ಯಾಕ್ಸಿನ್ …

Read More »

ಗ್ರಾಮಗಳಲ್ಲೇ ಕೊರೊನಾ ತಡೆಗೆ ಸ್ವಂತ ಟಫ್ ರೂಲ್ಸ್, ಊರನ್ನು ಕಾಪಾಡಿಕೊಳ್ಳಲು ಮುಂದಾದ ಜನ !

ಗದಗ: ರಾಜ್ಯದಲ್ಲೆಡೆ ಕೊರೊನಾ ಮಹಾಮಾರಿ ಅಟ್ಟಹಾಸ ಮೆರಿತಿದೆ. ಅದರಲ್ಲೂ ಕರ್ನಾಟಕದಲ್ಲಿ‌ ಆಗ್ತಿರೋ ಸಾವಿನ ಸಂಖ್ಯೆ ಭಾರತದ ಎರಡನೇ ಸ್ಥಾನದಲ್ಲಿದೆ. ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಕಣ್ಣಿಗೆ ಕಾಣದ ಮಾಯಾವಿ ಇದೀಗ ಹಳ್ಳಿ ಹಳ್ಳಿಗಳಿಗೂ ವ್ಯಾಪಿಸುತ್ತಿದೆ. ಅದಕ್ಕಂತಾನೆ‌ ಈ ಗ್ರಾಮದವರು ಮಾಡಿರೋ ಪ್ಲ್ಯಾನ್ ಏನು ಗೊತ್ತಾ. ಕೋವಿಡ್ ಎರಡನೇ ಅಲೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಚಿಕ್ಕ ನರಗುಂದ ಗ್ರಾಮ ಪಂಚಾಯತಿ ಮುಂದಾಗಿದ್ದು, ಗ್ರಾಮದಲ್ಲಿ ಮಾಸ್ಕ್ ಹಾಕದೇ ತಿರುಗುವವರಿಗೆ 100 ರೂ, ದಂಡ, …

Read More »

ಒಂದೇ ತಾಂಡಾದ 100 ಜನರಿಗೆ ಕೊರೊನಾ.. 8 ಮಕ್ಕಳಿಗೂ ಪಾಸಿಟಿವ್

ಬಳ್ಳಾರಿ: ಜಿಲ್ಲೆಯ ಮಕ್ಕಳಲ್ಲೂ ಕೊರೊನಾ ವೈರಸ್ ಕಾಣಿಸಿಕೊಳ್ತಿದ್ದು.​. ವಿಜಯನಗರ ಜಿಲ್ಲೆಯ ಕೊಡ್ಲಗಿ ತಾಲೂಕಿನ ಶ್ರೀಕಂಠಪುರ ತಾಂಡಾದ 8 ಮಕ್ಕಳಲ್ಲಿ ಕೊರೊನಾ ಕಾಣಿಕೊಂಡಿದೆ. ಹೀಗಾಗಿ, ಇಡೀ ತಾಂಡಾದ ಜನರಿಗೆ ಆತಂಕ ಶುರುವಾಗಿದೆ. 8 ರಿಂದ 15 ವರ್ಷದೊಳಗಿನ ಎಂಟು ಮಕ್ಕಳಿಗೆ ಕೋವಿಡ್ ವೈರಸ್ ಧೃಡಪಟ್ಟಿದ್ದು, ಎಲ್ಲರು ಭಯದ ವಾತಾವರಣದಲ್ಲಿದ್ದಾರೆ. ಕಳೆದ ಮಂಗಳವಾರವಷ್ಟೇ ಅರ್‌ಟಿ‍ಪಿಸಿಆರ್ ಟೆಸ್ಟ್ ನಡೆದಿತ್ತು, ಈ ಪೈಕಿ 8 ಮಕ್ಕಳಲ್ಲಿ ಕೊರೊನಾ ದೃಢ ಪಟ್ಟಿತ್ತು. ಇಂದು ಕೂಡ 20 ಪಾಸಿಟಿವ್​ …

Read More »

ಸಿಂಗಾಪುರ, ಯುಎಇಯಲ್ಲಿ 12-15 ವರ್ಷದ ಮಕ್ಕಳಿಗೂ ಕೊರೋನಾ ಲಸಿಕೆ : ಭಾರತದಲ್ಲಿ ಯಾವಾಗ?

ನವದೆಹಲಿ : ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದ ನಂತರ, ಸಿಂಗಾಪುರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ 12-15 ವಯೋಮಾನದ ತುರ್ತು ಬಳಕೆಗಾಗಿ ಫೈಜರ್-ಬಯೋಎನ್ ಟೆಕ್ ಕೋವಿಡ್-19 ಲಸಿಕೆಯನ್ನು ಅನುಮೋದಿಸಿವೆ. ಯುರೋಪಿಯನ್ ವೈದ್ಯಕೀಯ ಏಜೆನ್ಸಿಯು ಮಕ್ಕಳಲ್ಲಿ ಫೈಜರ್ ಲಸಿಕೆಯ ಬಳಕೆಯನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ. ಕೊರೊನಾ ವೈರಸ್ ನ ಹೆಚ್ಚು ಟ್ರಾನ್ಸ್ ಮಿಸಿಬಲ್ ರೂಪಾಂತರಗಳು ಹೊರಹೊಮ್ಮುತ್ತಿರುವುದರಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೆಲವು ದೇಶಗಳು ಮಕ್ಕಳಲ್ಲಿ ಹೆಚ್ಚಿನ ಸೋಂಕುಗಳನ್ನು ನೋಡುತ್ತಿರುವ ನಡುವೆ …

Read More »

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಇಳಿಕೆ: ಮೂರನೇ ಅಲೆ ಎದುರಿಸಲು ಸಿದ್ಧತೆ

ದೆಹಲಿ, ಮೇ 20: ಕಳೆದ ನಾಲ್ಕು ವಾರಗಳ ಹಿಂದೆ ದೇಶದ ರಾಜಧಾನಿ ದೆಹಲಿ ಕೊರೊನಾ ವೈರಸ್‌ನಿಂದ ತತ್ತರಿಸಿಹೋಗಿತ್ತು. ಎರಡನೇ ಅಲೆ ದೇಶಾದ್ಯಂತ ದೊಡ್ಡ ಆಘಾತವನ್ನು ನೀಡುತ್ತಿರುವಂತೆಯೇ ದೆಹಲಿ ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್, ಬೆಡ್ ಸಮಸ್ಯೆಗಳು ಭಾರೀ ಪ್ರಮಾಣದಲ್ಲಿ ತಲೆದೂರಿತ್ತು. ಆದರೆ ಸದ್ಯ ಕೊರೊನಾ ವೈರಸ್‌ ಪ್ರಕರಣಗಳು ದೆಹಲಿಯಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ದೆಹಲಿ ಸರ್ಕಾರ ಮೂರನೇ ಅಲೆ ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೂರನೇ ಅಲೆ ಎದುರಿಸಲು …

Read More »

ಕೊರೊನಾವೈರಸ್: ಹೊಸ ಪ್ರಕರಣಗಳ ಇಳಿಕೆ, ಗುಣಮುಖರ ಸಂಖ್ಯೆ ಏರಿಕೆ!

ನವದೆಹಲಿ, ಮೇ 20: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಏರುಮುಖವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲಿ ಮಹಾಮಾರಿಗೆ 3,874 ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿ ಒಟ್ಟು 2,57,72,400 …

Read More »