Breaking News

Monthly Archives: ಮೇ 2021

ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ

ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ 30 ಸಾವಿರ ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, 58 ಸಾವಿರ ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 525 ಜನರು ಇಂದು ಒಂದೇ ದಿನ ಸಾವಿಗೀಡಾಗಿದ್ದಾರೆ. ಪಾಸಿಟಿವಿಟ್ ರೇಟ್ 32.50. ಸಾವಿನ ಪ್ರಮಾಣ 1.73. ಬೆಂಗಳೂರಿನಲ್ಲಿ ಇಂದು 8676 ಜನರಿಗೆ ಸೋಂಕು ಪತ್ತೆಯಾಗಿದ್ದರೆ 298 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ  …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »

ಅಭಿಮಾನಿಗಳ ಬಳಿ ಕ್ಷಮೆ ಯಾಚಿಸಿದ ಉಪೇಂದ್ರ

ಬೆಂಗಳೂರು: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿರುವ ಉಪೇಂದ್ರ ಅವರು ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆಯ ಕುರಿತಾಗಿ ಟ್ವೀಟ್ ಮಾಡುವ ಮೂಲಕವಾಗಿ ಕ್ಷಮೆಯಾಚಿಸಿದ್ದಾರೆ. ಉಪೇಂದ್ರ ಅವರು ನಿಧಿ ಸಂಗ್ರಹಿಸುವ ಮೂಲಕ ಅಗತ್ಯವಸ್ತುಗಳು ಹಾಗೂ ದಿನಸಿ ಕಿಟ್ ವಿತರಿಸುವ ಮೂಲಕ ನೆರವಾಗುತ್ತಿದ್ದಾರೆ. ಇದರ ನಡುವೆ ವಿವಾದವೊಂದಕ್ಕೀಡಾಗಿದ್ದರು. ಯೂಟ್ಯೂಬ್ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಯದೆ ತಪ್ಪಾಗಿ ಹೇಳಿಕೆ ಕೊಟ್ಟಿದ್ದು, ಅದಕ್ಕೆ ಈಗ ಕ್ಷಮೆ ಯಾಚಿಸಿದ್ದಾರೆ. ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ ಎಂದು ಹೇಳಿರುವ ಹೇಳಿಕೆ …

Read More »

ಡಿಸಿಪಿ ಕೈಗೆ ಸಿಕ್ಕಿಬಿದ್ದ ನಕಲಿ ಪತ್ರಕರ್ತ- ಬೈಕ್ ಸೀಜ್, ಕೇಸ್ ದಾಖಲು

ಹುಬ್ಬಳ್ಳಿ: ಲಾಕಡೌನ್ ವೇಳೆ ಬಂದ್ ಆಗಿರುವ ಟಿವಿ ಚಾನಲ್ ಐಡಿ ಕಾರ್ಡ ಬಳಸಿ ಪೊಲೀಸರನ್ನ ಯಮಾರಿಸುತ್ತಿದ್ದ ನಕಲಿ ಪತ್ರಕರ್ತನನ್ನ ಹುಬ್ಬಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ  ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು ವರ್ಷಗಳ ಹಿಂದೇಯೇ ಬಂದ್ …

Read More »

ಕೋವಿಡ್ ಹಿನ್ನೆಲೆಯಲ್ಲಿ ಅನಾಥ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ಧ: ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ

ಬೆಂಗಳೂರು ಮೇ.18 – ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಗಾಗು ಒಂದು ವಸತಿಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ. ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು …

Read More »

ಗ್ರಾಮೀಣರಿಗೆ ಆಘಾತ ತಂದ ಕೋವಿಡ್ ಸೋಂಕು

ಗುಳೇದಗುಡ್ಡ: ತಾಲೂಕಿನಲ್ಲಿ ಕೊರೊನಾ ತೀವ್ರಗತಿಯಲ್ಲಿ ಹರಡುತ್ತಿದ್ದು, ಗುಳೇ ಹೋಗಿಬಂದವರಿಗೆ ಹಾಗೂ ಮೃತಪಟ್ಟವರ ಮನೆಗೆ ಸಾಂತ್ವನ ಹೇಳಲು ಹೋದವರಿಗೆ ಕೊರೊನಾ ವಕ್ಕರಿಸಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಕೊರೊನಾ ವಕ್ರದೃಷ್ಟಿ ಬೀರಿದೆ. ಕಳೆದ ಎರಡು ತಿಂಗಳು ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಕೊರೊನಾ ಕೇಸ್‌ಗಳಿಲ್ಲದೇ ಸ್ವತ್ಛಂದವಾಗಿದ್ದವು. ಆದರೆ, ಏಪ್ರಿಲ್‌ ಮೊದಲ ವಾರದಿಂದ ಕೊರೊನಾದಿಂದ ಪ್ರತಿ ಗ್ರಾಮದಲ್ಲಿಯೂ ಈಗ ಕೊರೊನಾ ರೋಗಿಗಳು ಕಂಡುಬರುತ್ತಿದ್ದಾರೆ. ಗುಳೇದಗುಡ್ಡ ತಾಲೂಕಿನಲ್ಲಿ ಒಟ್ಟು 35 ಗ್ರಾಮಗಳಿದ್ದು, ಎರಡು ಪ್ರಾಥಮಿಕ ಆರೋಗ್ಯ …

Read More »

ಅಭಯ ಪಾಟೀಲ, ಅನಿಲ ಬೆನಕೆಯಿಂದ ಸ್ಥಳ ಪರಿಶೀಲನೆ

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ  ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಆಕ್ಷಿಜನ್ ಘಟಕ  ಸ್ಥಾಪನೆಯಾದಲ್ಲಿ ಸುಮಾರು 50 …

Read More »

ವೈದ್ಯರನ್ನೇ ಕಂಗೆಡಿಸಿದ ಮಾರಣಾಂತಿಕ Covid 2ನೇ ಅಲೆ.ಈವರೆಗೆ ಸಾವನ್ನಪ್ಪಿರುವ ವೈದ್ಯರೆಷ್ಟು

ಕೋವಿಡ್ ಒಂದನೇ ಮತ್ತು ಎರಡನೇ ಅಲೆಗೆ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ದು, ಎರಡನೇ ಅಲೆಯಲ್ಲಿ ಮಧ್ಯವಯಸ್ಕರು, ಯುವಕರು ಸಾವಿಗೀಡಾಗುತ್ತಿರುವುದು ಮತ್ತಷ್ಟು ಗಾಬರಿಗೆ ಕಾರಣವಾಗಿದೆ. ಈ ಮಾರಣಾಂತಿಕ ಕೋವಿಡ್ ಸೋಂಕು ಜನಸಾಮಾನ್ಯರಷ್ಟೇ ವೈದ್ಯರನ್ನು ಕಂಗೆಡಿಸಿದೆ ಎಂಬುದಕ್ಕೆ ಈ ವರದಿ ಸಾಕ್ಷಿ. ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯ ಕಿರಿಯ ರೆಸಿಡೆಂಟ್ ಡಾಕ್ಟರ್ ಅನಾಸ್ ಮುಜಾಹಿದ್(26ವರ್ಷ) ಕೋವಿಡ್ ನಿರ್ವಹಣೆಯ ತಜ್ಞರಾಗಿದ್ದರು. ಆದರೆ ಕೋವಿಡ್ ಪಾಸಿಟಿವ್ ಬಂದ ಗಂಟೆಯೊಳಗೆ ಡಾ.ಅನಾಸ್ ಕೊನೆಯುಸಿರೆಳೆದಿದ್ದರು. ಈ ವರ್ಷದ …

Read More »

ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ

ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ ವತಿಯಿಂದ ವಿಶೇಷ …

Read More »

ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಗವಿಶ್ರೀಗಳಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ

ಕೊಪ್ಪಳ: ನಾಡಿನ ಪ್ರಸಿದ್ದ ಕೊಪ್ಪಳದ ಶ್ರೀ ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು‌ ಸೋಂಕಿತರಿದ್ದು ಅವರ ಆರೈಕೆ ಬಗ್ಗೆ ಹೆಚ್ಚು‌ ಗಮನ ಹರಿಸಿರುವ ಶ್ರೀಗಳು, ನಿಮಗೆ ಏನೂ ಆಗಲ್ಲ. ಧೈರ್ಯವಾಗಿರಿ. ನಿಮ್ಮನ್ನು ಪ್ರತಿ ದಿನವೂ ವೈದ್ಯರು ಚಿಕಿತ್ಸೆ ನೀಡುವ ಮೂಲಕ ನಿಮ್ಮ ಆರೋಗ್ಯದ ಹೆಚ್ಚು‌ ನಿಗಾ ಇರಿಸಿದ್ದಾರೆ. ನಿಮಗೆ ಏನೇ ಸಮಸ್ಯೆಯಾದರೂ …

Read More »