Breaking News
Home / 2021 / ಮೇ (page 44)

Monthly Archives: ಮೇ 2021

ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಿಸದೇ ಹೋದಲ್ಲಿ ಅನಾಹುತ ಕಾದಿದೆ: ಮಾಜಿ ಸಿಎಂ ಹೆಚ್​ಡಿಕೆ

ರಾಜ್ಯದಲ್ಲಿ ಸದ್ಯ ಲಾಕ್​ಡೌನ್​ ವಿಸ್ತರಣೆಯದ್ದೇ ಚರ್ಚೆ. ಟ್ವಿಟರ್​ನಲ್ಲಿ ಸದಾ ಲಾಕ್​ಡೌನ್​ ವಿಸ್ತರಣೆಯ ಆಗ್ರಹ ಮಾಡುತ್ತಿದ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇದೀಗ ಮತ್ತೆ ತಮ್ಮ ಹೇಳಿಕೆಯನ್ನ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಲಾಕ್​ಡೌನ್​ ವಿಸ್ತರಣೆ ಮಾಡದೇ ಹೋದಲ್ಲಿ ದೊಡ್ಡ ಅನಾಹುತವೇ ಕಾದಿದೆ ಎಂದು ಹೇಳಿದ್ರು. ರಾಜ್ಯದ ಸದ್ಯದ ಪರಿಸ್ಥಿತಿಯನ್ನ ನೋಡ್ತಿದ್ರೆ ಲಾಕ್​ಡೌನ್​ ವಿಸ್ತರಣೆ ಮಾಡದೇ ಬೇರೆ ವಿಧಿ ಇಲ್ಲ ಎಂದೆನಿಸುತ್ತಿದೆ. ಹೀಗಾಗಿ ಜನರ ಜೀವದ ಜೊತೆ ಆಟವಾಡಬೇಡಿ. …

Read More »

ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರ ಕಾರಣ : ಡಿ.ಕೆ.ಶಿವಕುಮಾರ್

ಬೆಂಗಳೂರು : ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರವೇ ಕಾರಣವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಜನರಿಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಲೇಬೇಕು. ಈ ಕಾಯಿಲೆ ಸರ್ಕಾರ ಕೊಟ್ಟಿದ್ದು, ಹಳ್ಳಿಗಳಲ್ಲೂ ಕೊರೊನಾ ಬರಲು ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದರು. ಇನ್ನು ಹಳ್ಳಿಗಳಲ್ಲಿ ಕೃಷಿ ಮಾಡ್ತಿದ್ದವರಿಗೂ ಕೊರೊನಾ ಬಂದಿದೆ. ಬೆಳಿಗ್ಗೆ ನನ್ಮ ತೀರ ಆತ್ಮಿಯರು …

Read More »

ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ: ಕಾಂಗ್ರೆಸ್ ಟೀಕೆ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ. ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು ‘ದೇವರೇ ಗತಿ’ ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ. ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ …

Read More »

ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ

ಬೆಳಗಾವಿ – ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಳೆದ 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೋಯುಸಿರೆಳೆದರು. ಹನುಮಾನ್ ನಗರ ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಪತ್ನಿ, ಮಗ, ಮಗಳು ಇದ್ದಾರೆ.

Read More »

ಪತ್ನಿಯಿಂದಲೇ ಸುಪಾರಿ ಹತ್ಯೆ;ಪತ್ನಿ ಸೇರಿ ಇಬ್ಬರ ಬಂಧನ

ಬೆಂಗಳೂರು, : ಆತನ ದೇಹ ರೈಲ್ವೇ ಹಳಿಯ ಮೇಲೆ ಛಿದ್ರವಾಗಿತ್ತು. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಅಂತಲೇ ಪೊಲೀಸರು ಭಾವಿಸಿದ್ದರು. ಆದರೆ, ಕುತ್ತಿಗೆ ಮೇಲಿನ ಗುರುತು ಕೊಲೆಯ ಬಗ್ಗೆ ಸಣ್ಣ ಅನುಮಾನ ಮೂಡಿಸಿತ್ತು. ಅದು ರೈಲ್ವೇ ಪೊಲೀಸರ ತನಿಖೆಯಲ್ಲಿ ನಿಜವಾಗಿದೆ. ಕೊಲೆ ಹಂತಕರನ್ನು ಕೇವಲ 24 ತಾಸಿನಲ್ಲಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾಗಿದ್ದು ಕೆ.ಆರ್.ಪುರಂ ನಿವಾಸಿ ಲೋಕನಾಥ್ . ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವುದು ಮೃತನ ಪತ್ನಿ ಯಶೋಧಾ, ವಿಜಿನಾಪುರದ …

Read More »

ಜಿಯೋದಿಂದ ಎರಡು ಹೊಸ ಸಬ್‌ಸೀ ಕೇಬಲ್ ವ್ಯವಸ್ಥೆ ಯೋಜನೆ

ಮುಂಬೈ, : ಭಾರತದ ಮುಂಚೂಣಿ 4ಜಿ ಮತ್ತು ಮೊಬೈಲ್ ಬ್ರಾಡ್‌ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (ಜಿಯೋ), ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಅತಿ ದೊಡ್ಡ ಅಂತಾರಾಷ್ಟ್ರೀಯ ಜಲಾಂತರ್ಗಾಮಿ (ಸಬ್‌ಮೆರಿನ್) ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ವಿವಿಧ ಪ್ರಮುಖ ಜಾಗತಿಕ ಪಾಲುದಾರರು ಮತ್ತು ವಿಶ್ವದರ್ಜೆಯ ಜಲಾಂತರ್ಗಾಮಿ ಕೇಬಲ್ ಪೂರೈಕೆದಾರ ಸಬ್‌ಕಾಮ್ ಸಹಯೋಗದೊಂದಿಗೆ ಜಿಯೋ ಪ್ರಸ್ತುತ ಪ್ರದೇಶದೆಲ್ಲೆಡೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಡೇಟಾ ಬೇಡಿಕೆಗೆ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರಿನ …

Read More »

ಲಾಕ್​ಡೌನ್​ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟ ಪ್ರಧಾನಿ ಮೋದಿ

ನವದೆಹಲಿ: ಕರೊನಾ ವೈರಸ್​ ಬಿಕ್ಕಟ್ಟು ಹಿನ್ನೆಲೆಯಲ್ಲಿ 9 ರಾಜ್ಯಗಳ ಸಿಎಂ, 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ, ಲಾಕ್​ಡೌನ್​ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟರು. ಕರೊನಾ ನಿಯಂತ್ರಿಸಲು ಎಲ್ಲರು ಒಗ್ಗಟಾಗಿ ಕೆಲಸ ಮಾಡಬೇಕು. ಕರೊನಾ ವಾರಿಯರ್ಸ್​ಗೆ ಸ್ಫೂರ್ತಿ ತುಂಬಿರಿ. ನಿಮ್ಮ ಸ್ಫೂರ್ತಿದಾಯಕ ಮಾತುಗಳಿಂದ ವಾರಿಯರ್ಸ್​ಗೆ ವಿಶ್ವಾಸ ಹೆಚ್ಚುತ್ತದೆ. ಕರೊನಾ ನಿಯಂತ್ರಿಸಲು ಯಾವುದೇ ಮಾರ್ಗವಿದ್ದರೂ ಅದನ್ನು ಅಳವಡಿಸಿಕೊಳ್ಳಿ ಎಂದು ಪ್ರಧಾನಿ …

Read More »

ಕೊರೊನಾ ವೈರಸ್ ಗೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಕೊರೊನಾ ವೈರಸ್ ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಶಶಿಕಲಾ ಜೊಲ್ಲೆ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟ 12 ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.   ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರನಾ ವೈರಸ್ ಸೋಂಕಿನ …

Read More »

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಮಂಗಳೂರು: ಅವರ ವಯಸ್ಸಿನ್ನೂ 24 ವರ್ಷ. ಚಿಕ್ಕ ವಯಸ್ಸಿಗೆ ಪೊಲೀಸ್​ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಕೋಲಾರ ಮೂಲದ ಯುವತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಆಗಿದ್ದರು. 7 ತಿಂಗಳ ಗರ್ಭಿಣಿ ಆಗಿದ್ದ ಅವರು ಹೆರಿಗೆ ರಜೆ ಮೇಲೆ ತವರಿಗೆ ಹೋಗಿದ್ದರು. ಎಲ್ಲವೂ ಸರಿಯಾಗಿದ್ದರೆ ಇನ್ನೆರಡು ತಿಂಗಳಲ್ಲಿ ಆ ಮನೆಗೆ ಪುಟ್ಟ ಕಂದನ ಆಗಮನದ ಖುಷಿಯ ಹೂರಣವೇ ತುಂಬಿರುತ್ತಿತ್ತು. ಅಷ್ಟರಲ್ಲಿ ಕ್ರೂರಿ ಕರೊನಾ ಗರ್ಭಿಣಿ ಪಿಎಸ್​ಐ ಅನ್ನು …

Read More »

88ನೇ ವಸಂತಕ್ಕೆ ಕಾಲಿಟ್ಟ ಎಚ್‌.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಗಳವಾರ 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಇಂದು ಬೆಳಿಗ್ಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ಇತ್ತ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ ಸುಮಲತಾ ಅಂಬರೀಶ್, ಸಚಿವರಾದ ಡಾ.ಕೆ.ಸುಧಾಕರ್, …

Read More »