Breaking News

Monthly Archives: ಮೇ 2021

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ.

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ. 52 ವರ್ಷದ ವಿಜಯಶ್ರೀ ನಾಗನೂರೆ ಸೋಂಕಿಗೆ ಬಲಿಯಾದ ಅಧಿಕಾರಿ. ಇವರು ಬೆಳಗಾವಿ ನಗರದ ಯಮನಾಪುರ ನಿವಾಸಿ. ವಿಜಯಶ್ರೀ ನಾಗನೂರೆಗೆ ಮೇ 3 ರಂದು ಕೊರೊನಾ ಸೋಂಕು ದೃಢವಾಗಿತ್ತು. ಕಳೆದ ಹನ್ನೆರಡು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 15) ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ವಿಜಯಶ್ರೀ ಸದ್ಯ …

Read More »

BIG NEWS: 2 ತಿಂಗಳು ಕರುನಾಡಿಗೆ ಬೀಳುತ್ತಾ ಬೀಗ.?

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ನಡೆಯಲಿರುವ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಲಿದೆ. ಕೊರೊನಾ ನಿಯಂತ್ರಣಕ್ಕೆ 6-8 ವಾರಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಐಸಿಎಂಆರ್ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಟಾಸ್ಕ್ ಫೋರ್ಸ್ …

Read More »

ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಸೇರಿದ್ದು ಎನ್ನಲಾದ ಸಿಡಿ, ರಮೇಶ್​ ರಾಜಕೀಯ ಜೀವನದಲ್ಲೇ ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿ ವಿವಾದದ ಬಳಿಕ ರಮೇಶ್​ ತಮ್ಮ ಖಾತೆಗೆ ರಾಜೀನಾಮೆ ನೀಡಿದ್ದು ಮಾತ್ರವಲ್ಲದೇ ಜಿಲ್ಲಾ ಉಸ್ತುವಾರಿ ಸ್ಥಾನದಿಂದಲೂ ಕೆಳಗಿಳಿದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಕೆಳಗೆ ಇಳಿದಿದ್ದರೂ ಸಹ ರಮೇಶ್​ ಜಾರಕಿಹೊಳಿ ಖದರ್​ ಕಡಿಮೆಯಾದಂತೆ ಕಾಣುತ್ತಿಲ್ಲ. ಗೋಕಾಕ್​ನ ಗೃಹ ಕಚೇರಿಗೆ ಜಿಲ್ಲಾಧಿಕಾರಿ ಹಾಗೂ ಡಿಹೆಚ್​ಓರನ್ನ ಕರೆಸಿಕೊಂಡ …

Read More »

ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದೆ. ಆದರೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮೇ 17ರಿಂದ ಐದು ದಿನ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅಗತ್ಯ …

Read More »

ಸರಕಾರ ತಪಾಸಣೆ ಕಡಿಮೆಗೊಳಿಸಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎನ್ನುತ್ತಿದೆ: ಎಂ.ಬಿ.ಪಾಟೀಲ್ ಆರೋಪ

ಬೆಂಗಳೂರು, ಮೇ 15: ರಾಜ್ಯದಲ್ಲಿ ಕೊರೋನ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರಕಾರದ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು …

Read More »

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು

ಮೈಸೂರು, : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ …

Read More »

ಶಾಕಿಂಗ್ ನ್ಯೂಸ್: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಮನೆಯಲ್ಲೇ 600 ಮಂದಿ ಸಾವು..!

ಬೆಂಗಳೂರು, ಮೇ 15- ಸಮಯಕ್ಕೆ ಸರಿಯಾಗಿ ಸಿಗದ ಬೆಡ್, ಚಿಕಿತ್ಸೆ ವಿಳಂಬದಿಂದಾಗಿ ಕಳೆದ 1 ತಿಂಗಳಿಂದ ರಾಜ್ಯದಲ್ಲಿ ಸುಮಾರು 600 ರೋಗಿಗಳು ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ‌ ಆಘಾತಕಾರಿ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ‌ಇಲಾಖೆಯಿಂದ ಹೊರಬಿದ್ದಿದೆ. ಏಪ್ರಿಲ್ 13 ರಿಂದ 30ರವರೆಗೆ ಸುಮಾರು 120 ಇದ್ದ ಸಾವಿನ ಸಂಖ್ಯೆ ಮೇ 1 ರಿಂದ ಮೇ 13ರವರೆಗೆ ಇದ್ದಕ್ಕಿದ್ದಂತೆ 479ಕ್ಕೇರಿದೆ, ಮೇ 12 ರಂದು ಅತಿ ಹೆಚ್ಚು ಸಾವು ದಾಖಲಾಗಿದ್ದು, …

Read More »

ದೇಶದ ಕೊರೊನಾ ಸ್ಥಿತಿ ಕಂಡು ಆತಂಕ ವ್ಯಕ್ತಪಡಿಸುತ್ತಿರುವ ವಿಶ್ವ ಸಂಸ್ಥೆ!

ನವದೆಹಲಿ : ಭಾರತ ದೇಶದಲ್ಲಿ ಕೊರೊನಾ ಸ್ಥಿತಿ ಭೀಕರವಾಗುತ್ತಿದೆ. ಅಲ್ಲಿನ ಕೆಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಇದನ್ನು ಗಮನಿಸಿದರೆ ಎರಡನೇ ವರ್ಷ ಇನ್ನೂ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‌ಒ) ಆತಂಕ ವ್ಯಕ್ತಪಡಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಕುರಿತು ಮಾತನಾಡಿ, ಭಾರತದ ಪರಿಸ್ಥಿತಿಗೆ ವಿಶ್ವ ಸಂಸ್ಥೆ ಸ್ಪಂದಿಸುತ್ತಿದೆ. ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್ ಗಳು, ಮೊಬೈಲ್ ಫೀಲ್ಡ್ …

Read More »

ರೆಮ್‌ಡಿಸಿವಿರ್‌ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ: ಸ್ಟಾಲಿನ್‌ ಎಚ್ಚರಿಕೆ

ಚೆನ್ನೈ: ‘ಕೋವಿಡ್‌ ಚಿಕಿತ್ಸೆಗೆ ಬಳಸಲಾಗುತ್ತಿರುವ ರೆಮ್‌ಡಿಸಿವಿರ್‌ ಔಷಧಿಯನ್ನು ಸಂಗ್ರಹಿಸುವುದು ಮತ್ತು ಆಮ್ಲಜನಕ ಸಿಲಿಂಡರ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಲಾಗುವುದು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶನಿವಾರ ಹೇಳಿದರು. ‘ಕೋವಿಡ್‌ ಪ್ರಸರಣವನ್ನು ತಡೆಯಲು ಹೇರಲಾಗಿರುವ ಲಾಕ್‌ಡೌನ್‌ ಎಂಬ ‘ಕಹಿ ಗುಳಿಗೆ’ಯನ್ನು ಸಾರ್ವಜನಿಕರು ಸ್ವೀಕರಿಸಿದ್ದಾರೆ. ಇಂತಹ ಸಂದರ್ಭದಲ್ಲೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ರೆಮ್‌ಡಿಸಿವಿರ್‌ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೆಚ್ಚಿನ ಬೆಲೆಯಲ್ಲಿ …

Read More »

ಆರ್ಡರ್​ ಮಾಡಿದ್ದ ಮೌಥ್​​ವಾಶ್ ಬಂದಿದ್ದು ರೆಡ್​ಮಿ ನೋಟ್​ 10 ಫೋನ್​

ಮುಂಬೈ: ಆನ್​ಲೈನ್​ ಶಾಪಿಂಗ್​ ಅಮೇಜಾನ್​.ಕಮ್​ನಲ್ಲಿ ಕೊಲ್ಗೇಟ್​ ಮೌಥ್​​ವಾಶ್ ಆರ್ಡರ್​ ಮಾಡಿದ್ದ ಮುಂಬೈ ನಿವಾಸಿ, ಡೆಲಿವರಿ ಬಾಯ್​ ತಂದುಕೊಂಡ ಆರ್ಡರ್​ ಪ್ಯಾಕೇಜ್​ ತೆರೆದಾಗ ಅಚ್ಚರಿಯೇ ಕಾದಿತ್ತು. ಲೋಕೇಶ್​ ದಗಾ ಅವರು ತಾವು ಮೌಥ್​ವಾಶ್​ ಬುಕ್​ ಮಾಡಿದ್ದಾಗಿ ಅದಕ್ಕೆ ಸಂಬಂಧಿಸಿ ಫೋಟೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನನ್ನ ಆರ್ಡರ್​ ಬದಲಾವಣೆ ಆಗಿರುವುದಾಗಿ ಸೆಕ್ಯುರಿಟಿ ಗಾರ್ಡ್​ ತಿಳಿಸಿದರು. ಪ್ಯಾಕೇಜ್​ ಚಿಕ್ಕದಾಗಿದ್ದರಿಂದ ನನಗೂ ಆಶ್ಚರ್ಯವಾಯಿತು. ತೆಗೆದು ನೋಡಿದಾಗ ಮೌಥ್​ವಾಶ್​ ಬದಲು ರೆಡ್​ಮಿ ನೋಟ್​ 10 …

Read More »