Breaking News
Home / 2021 / ಮೇ (page 59)

Monthly Archives: ಮೇ 2021

ಬೆಳಗಾವಿ ಜಿಲ್ಲೆಯಲ್ಲಿ 1592 ಪಾಸಿಟಿವ್ ಪ್ರಕರಣ ಪತ್ತೆ : ಹೆಚ್ಚಿದ ಆತಂಕ

ಬೆಳಗಾವಿ: ಕೊರೊನಾ ಪಾಸಿಟಿವ್ ಸಂಖ್ಯೆ ಪ್ರಮಾಣದಲ್ಲಿ ಶುಕ್ರವಾರ ದಿಢೀರ್ ಏರಿಕೆ ಆಗಿದ್ದು, ಒಂದೇ ದಿನ 1592 ಜನರಿಗೆ ಸೋಂಕು ತಗುಲಿದೆ. ಕೆಲ ದಿನಗಳ ಹಿಂದೆ ಸಾವಿರ ಸಮೀಪ ಅಥವಾ ಸಾವಿರದೊಳಗೆ ಪಾಸಿಟಿವ್ ಬರುತ್ತಿದ್ದ ಜಿಲ್ಲೆಯಲ್ಲಿ ಈಗ ಒಂದೇ ದಿನ 1500 ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಒಟ್ಟು 43,557 ಜನರಿಗೆ ಸೋಂಕು ತಗುಲಿದಂತಾಗಿದೆ. ಸದ್ಯ 6583 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯಾದ್ಯಂತ ಒಂದೇ ದಿನ 358 ಜನ ಗುಣಮುಖರಾಗಿದ್ದಾರೆ. ಈವರೆಗೆ …

Read More »

ಜನಿ ಪುತ್ರಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ

ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್ ಹಾಗೂ ಅವರ ಕುಟುಂಬಸ್ಥರು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸೌಂದರ್ಯ ರಜನಿಕಾಂತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೌಂದರ್ಯ ರಜನಿಕಾಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಮಾವ ಶ್ರೀ ಎಸ್.ಎಸ್. ವನಂಗಮುಡಿ, ಪತಿ ವಿಶಾಗನ್, ಅವರ ಸಹೋದರಿ ಮತ್ತು ನಾನು ಇಂದು ಬೆಳಗ್ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‍ರವರನ್ನು ಭೇಟಿ …

Read More »

ಸದ್ಯದ `ಡಿಸ್ಕೌಂಟ್ ಲಾಕ್‍ಡೌನ್’ ಪೂರ್ಣ ಪ್ರಮಾಣದಲ್ಲಿ ಯಶಸ್ವಿ ಆಗಿಲ್ಲ,ಮೇ 24ರ ನಂತರವೂ ಲಾಕ್‍ಡೌನ್ ಮುಂದುವರಿಕೆ?

ಬೆಂಗಳೂರು: ರಾಜ್ಯದಲ್ಲಿ ಘೋಷಣೆ ಆಗಿರುವ ಲಾಕ್‍ಡೌನ್ ಮೇ 24ರ ನಂತರವೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ರಾಜ್ಯದಲ್ಲಿ ಇವತ್ತು 41 ಸಾವಿರ ಕೇಸ್, 373 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ, 5.98 ಲಕ್ಷ ಸಕ್ರಿಯ ಕೇಸ್‍ಗಳೊಂದಿಗೆ ದೇಶದಲ್ಲೇ ಕರ್ನಾಟಕ ನಂಬರ್ 1 ಆಗಿದೆ. ಶೇಕಡವಾರು ಪ್ರಮಾಣದಲ್ಲಿ ಭಾರತದ್ದು 20.80ರಷ್ಟಿದೆ. ಇದರ ಲೆಕ್ಕಾಚಾರದಂತೆ ದೇಶದ ಪ್ರತಿ ಐವರಲ್ಲಿ ಒಬ್ಬರಿಗೆ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ 32.86% ಪಾಸಿಟೀವ್ ರೇಟ್ ಇದೆ. 10 ಜನರ ಪೈಕಿ …

Read More »

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ, ಇದೀಗ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

ಹಾವೇರಿ: ಗೃಹಸಚಿವ ಬಸವರಾಜ ಬೊಮ್ಮಾಯಿ ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಹಾವೇರಿಯಲ್ಲಿ ಮೂಡುತ್ತಿರುವ ಕೊರೋನ ಸೋಂಕನ ಪ್ರಭಾವವನ್ನು ಕಡಿಮೆಗೊಳಿಸಲು ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರೊಬ್ಬರ ನಿವಾಸವನ್ನು ಕೋವಿಡ್ ಕೇರ್ ಕೇಂದ್ರ ಮಾಡಲಾಗಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಮಾರ್ಪಡಿಸಿ 50 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ವ್ಯವಸ್ಥೆ ಕೂಡ ಅಲ್ಲಿ ಮಾಡಲಾಗಿದೆ. ಇದರಿಂದ …

Read More »

ಕೊರೋನಾ ನಿಯಮ ಉಲ್ಲಂಘನೆ; 448 ವಾಹನ ಜಪ್ತಿ, 3.26 ಕೋಟಿ ರೂ. ದಂಡ ಸಂಗ್ರಹ

ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಮಂದಿ ನಿಯಮಗಳನ್ನು ಉಲ್ಲಂಘಿಸಿ ಎಲ್ಲೆಡೆ ಸಂಚರಿಸುತ್ತಿದ್ದಾರೆ. ನಿಯಮ ಮೀರಿ ರಸ್ತೆಗಳಿದಿದ್ದ ವಾಹನಗಳನ್ನು ನಗರ ಪೊಲೀಸರು ಗುರುವಾರ ಜಪ್ತಿ ಮಾಡಿದ್ದು, ಅಂತೆಯೇ 3.26 ಕೋಟಿ ರೂ. ದಂಡ ಸಂಗ್ರಹಣೆ ಮಾಡಿದ್ದಾರೆ. ಕಳೆದ 20 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ 448 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 429 ದ್ವಿಚಕ್ರ ವಾಹನ, 11 ತ್ರಿಚಕ್ರ ವಾಹನ, 8 ನಾಲ್ಕು ಚಕ್ರದ ವಾಹನ ಸೇರಿ …

Read More »

ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣ; 52 ಮಂದಿ ಬಲಿ

ಮುಂಬೈ: ಒಂದೆಡೆ ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರವಾಗುತ್ತಿದೆ ಇನ್ನೊಂದೆಡೆ, ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ. ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಲೀನ ಪರಿಸರದಲ್ಲಿ ವಾಸ ಮಾಡುವ ದುರ್ಬಲ ಕಾಯರಿಗೆ ಫಂಗಸ್‌ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದ್ದು, ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರೊಂದಿಗೆ ಈ ರೋಗದಿಂದ 52 ಮಂದಿ ಮೃತಪಟ್ಟಿದ್ದಾರೆಂದು …

Read More »

ಲಾಕ್ ಡೌನ್ ಮಧ್ಯಯೇ ಹಸೆಮಣೆ ಏರಿದ ಚಂದನವನದ ಜೋಡಿ

ಬೆಂಗಳೂರು : ಲಾಕ್ ಡೌನ್ ಮಧ್ಯಯೇ ಸಿಂಪಲ್ ಆಗಿ ಹಸೆಮಣೆ ಏರಿದ ಚಂದನವನದ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ. ಚಂದನ್ ತಮ್ಮ ಇನ್ಮಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡು ಮನೆ ಮದುವೆ , ಮದುವೆ ಮನೆ . ಗೋರಿಯಸ್ ಆಗಿಲ್ಲ , ಆದರೆ , ಸಂತಸದಿಂದ ತುಂಬಿದೆ ಎಂದು ಬರೆದುಕೊಂಡಿದ್ದಾರೆ . ‘ ಲಕ್ಷ್ಮೀ ಬಾರಮ್ಮ ‘ ಧಾರಾವಾಹಿಯ ಮೂಲಕ ಪರಿಚಿತವಾದ ಈ ಜೋಡಿ ಏ .1 ರಂದು ಎಂಗೇಜೆಂಟ್ …

Read More »

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು : ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ಅವರು ಕೊರೊನಾಗೆ ಬಲಿಯಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. 10 ದಿನಗಳ ಹಿಂದೆ ಮಹಾದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರು ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದ ಮಹಾದೇವ ಪ್ರಕಾಶ್ …

Read More »

ಕಾಲ್ ಸೆಂಟರ್ ನ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್- ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರು :ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ …

Read More »

ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ: 13 ರೋಗಿಗಳು ಸಾವು

ಪಣಜಿ: ಕಳೆದ ಕೆಲವು ದಿನಗಳಿಂದ ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ ಸಾವಿಗೀಡಾದವರ ಸಂಖ್ಯೆ 75ಕ್ಕೇರಿದೆ. ಸತತ 6 ರಾತ್ರಿ ಇಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ಏರಿಳಿತ ಕಂಡು ಬಂದಿದ್ದು, ಕಳೆದ ರಾತ್ರಿ 13 ರೋಗಿಗಳು ಮೃತಪಟ್ಟಿದ್ದಾರೆ. ರೋಗಿಗಳ ಸಂಬಂಧಿಕರು ಸೋಷಿಯಲ್ ಮೀಡಿಯಾದಲ್ಲಿ ಸಹಾಯ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದು, ಆರೋಗ್ಯ ಕಾರ್ಯದರ್ಶಿ ರವಿ ಧವನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸರಬರಾಜನ್ನು ಪುನಃಸ್ಥಾಪಿಸಲು ಆಸ್ಪತ್ರೆಗೆ ಧಾವಿಸಿದ್ದಾರೆ. …

Read More »