Breaking News
Home / 2021 / ಮೇ (page 70)

Monthly Archives: ಮೇ 2021

ರಾಜ್ಯಗಳಿಗೆ ಇನ್ನೂ ಮೂರು ದಿನಗಳಲ್ಲಿ ಏಳು ಲಕ್ಷ ಕೋವಿಡ್ ಲಸಿಕೆ ಸರಬರಾಜು:ಕೇಂದ್ರ

ನವದೆಹಲಿ:ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 90 ಲಕ್ಷಕ್ಕೂ ಹೆಚ್ಚು ಕೋವಿಡ್ -19 ಲಸಿಕೆ ಪ್ರಮಾಣಗಳು ಇನ್ನೂ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ 7 ಲಕ್ಷಕ್ಕೂ ಹೆಚ್ಚಿನ ಹೆಚ್ಚುವರಿ ಪ್ರಮಾಣವನ್ನು ಪಡೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಕೇಂದ್ರವು ಈವರೆಗೆ 18 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣವನ್ನು (18,00,03,160) ರಾಜ್ಯಗಳು ಮತ್ತು ಯುಟಿಗಳಿಗೆ ಉಚಿತವಾಗಿ ನೀಡಿದೆ.ಇದರಲ್ಲಿ, ತ್ಯಾಜ್ಯಗಳು ಸೇರಿದಂತೆ ಒಟ್ಟು ಬಳಕೆ 17,09,71,429 ಪ್ರಮಾಣಗಳು. ’90 ಲಕ್ಷಕ್ಕೂ ಹೆಚ್ಚು …

Read More »

ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ

ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್​ಡೌನ್​ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್​ನಲ್ಲಿ ಸಾರ್ವಜನಿಕರಿಗೆ ಉಚಿತ ಆಹಾರ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ರಾಜ್ಯದಲ್ಲಿ ಮೇ 10ರಿಂದ ಮೇ 24ನೇ ತಾರೀಖಿನಿವರೆಗೆ ಲಾಕ್​ಡೌನ್​ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನ ಎದುರಿಸುವ ದಿನಗೂಲಿ ಕಾರ್ಮಿಕರು ಸೇರಿದಂತೆ …

Read More »

ಬೆಂಗಳೂರಿನ ಜನರಿಗೆಂದೇ ಸಿದ್ಧವಾಯ್ತು ಆಕ್ಸಿಜನ್ ಬಸ್.​..! ಪ್ರಾಣವಾಯುವಿಗಾಗಿ ಇನ್ಮುಂದೆ ಹಪಹಪಿಸಬೇಕಿಲ್ಲ

ರಾಜ್ಯದಲ್ಲಿ ಕೊರೊನಾ 2ನೆ ಅಲೆ ಮಿತಿಮೀರಿರುವ ನಡುವಲ್ಲೇ ಪ್ರಾಣವಾಯುವಿನ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದ ರಾಜಧಾನಿ ಮಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. ಇನ್ಮುಂದೆ ರಾಜಧಾನಿಯ ಮೂಲೆ ಮೂಲೆಗಳಲ್ಲಿ ಆಕ್ಸಿ ಬಸ್​ ಸಂಚರಿಸಲಿದ್ದು ಈ ಕಾರ್ಯಕ್ರಮಕ್ಕೆ ಆರೋಗ್ಯ ಸೌಧದಲ್ಲಿ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಇದೊಂದು ಮೊಬೈಲ್​ ಆಕ್ಸಿ ಬಸ್​ ಆಗಿದ್ದು ಬಿಬಿಎಂಪಿ ವತಿಯಿಂದ ಒಟ್ಟು 20 ಬಸ್​ಗಳನ್ನ ತಯಾರು ಮಾಡಲಾಗಿದೆ. ಟ್ರಾಸ್​​ ಎನರ್ಜಿ ಮಾಚನಿ ಗ್ರೂಪ್​ ಕೇವಲ 2 …

Read More »

ಕೋವಿಡ್ ಸೋಂಕಿನಿಂದ 1,952 ಉದ್ಯೋಗಿಗಳು ನಿಧನ: ಭಾರತೀಯ ರೈಲ್ವೆ ಇಲಾಖೆ

ನವದೆಹಲಿ: 2020ರಲ್ಲಿ ಆರಂಭವಾದ ಕೋವಿಡ್ ಸೋಂಕು ಭಾರತೀಯ ರೈಲ್ವೆ ಇಲಾಖೆ ಮೇಲೆ ದುರಂತ ಪರಿಣಾಮ ಬೀರಿದ್ದು, ಕೋವಿಡ್ 19 ಸೋಂಕಿನಿಂದ 1,952 ಉದ್ಯೋಗಿಗಳನ್ನು ಕಳೆದುಕೊಂಡಿರುವುದಾಗಿ ತಿಳಿಸಿದೆ. ದೇಶದ ಅತೀ ದೊಡ್ಡ ಸಾರಿಗೆ ವ್ಯವಸ್ಥೆಯಾಗಿರುವ ರೈಲು ಸಂಚಾರ ವ್ಯವಸ್ಥೆಯಲ್ಲಿ ದಿನಂಪ್ರತಿ ಒಂದು ಸಾವಿರ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ ಎಂದು ರೈಲ್ವೆ ಮಂಡಳಿ ಹೇಳಿದೆ. ರೈಲ್ವೆ ಕೂಡಾ ಯಾವುದೇ ರಾಜ್ಯ ಅಥವಾ ಪ್ರದೇಶಕ್ಕಿಂತ ಭಿನ್ನವಾಗಿಲ್ಲ. ಯಾಕೆಂದರೆ ನಾವು ಕೂಡಾ ಕೋವಿಡ್ …

Read More »

ದಕ್ಷಿಣ ಕನ್ನಡದಲ್ಲಿ18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಹಂತವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಹಾಗೂ ನಾಲ್ಕು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಮಂಗಳವಾರ ಲಸಿಕೆ ನೀಡಲಾಗುತ್ತಿದೆ. ಮಂಗಳವಾರ ವೆನ್ಲಾಕ್ ನಲ್ಲಿ 250 ಮಂದಿ 18 ರಿಂದ 44 ವರ್ಷದವರಿಗೆ ಆನ್ ಲೈನ್ ನೋಂದಣಿ ಪಡೆದವರಿಗೆ ಲಸಿಕೆ ನೀಡಲಾಗುತ್ತಿದ್ದು ಯುವಕರು ಉತ್ಸಾಹದಿಂದ ಕೇಂದ್ರಕ್ಕೆ ಲಸಿಕೆ …

Read More »

ಹುಬ್ಬಳ್ಳಿ: ಪತ್ರಕರ್ತರಗೆ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್, ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಹಾಗೂ ಪತ್ರಕರ್ತರಿಗಾಗಿ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ ನೀಡಲಾಯಿತು. ಕಿಮ್ಸ್‌ನಲ್ಲಿ ಜನದಟ್ಟಣೆ ಹೆಚ್ಚಿತ್ತು. ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಬಹುತೇಕ ಕೇಂದ್ರಗಳಲ್ಲಿ ಎರಡನೇ ಡೋಸ್ ಮಾತ್ರ ನೀಡಲಾಗುತ್ತಿದೆ  

Read More »

ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ

ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್‌ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ.     ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …

Read More »

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ : ಸಿದ್ದರಾಮಯ್ಯ

ಬೆಂಗಳೂರು : ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಮುಂದಿನ ಕೆಲವು ತಿಂಗಳಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಒಂದೆರಡು ತಿಂಗಳಲ್ಲಿ ಸಂಪೂರ್ಣ ಲಸಿಕೆ ಹಾಕಿಸಿ ಮುಗಿಸಬೇಕು. ಲಸಿಕೆಗಳನ್ನು ಕೇಂದ್ರದಿಂದಾದರೂ …

Read More »

ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ : ಸುಧಾಕರ್ ವಿರುದ್ದ ಗುಂಡುರಾವ್ ಕಿಡಿ

ಬೆಂಗಳೂರು: ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ ತಕ್ಷಣ ವಜಾಗೊಳಿಸಿ ಎಂದು ಸುಧಾಕರ್ ವಿರುದ್ದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಆರೋಗ್ಯ ಸಚಿವರ ಸ್ವ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆಗೆ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಲಸಿಕೆ ಪಡೆದಿರೋದಾಗಿ ತಿಳಿದು ಬಂದಿವ ವಿಚಾರವಾಗಿ ಟ್ವೀಟ್ ಮಾಡಿರುವ ಅವರು , ” ಸಚಿವ ಸುಧಾಕರ್ ಅವರೇ ಲಸಿಕೆ ವಿತರಣೆಯಲ್ಲೂ …

Read More »

ಮೂಗು ನೋಯುತ್ತೆ ಅಂತಾ ಮಾಸ್ಕ್ ಹಾಕಿಲ್ಲ, ನಮ್ಮನ್ನ ಬಿಟ್ಟು ದೇಶ ಲೂಟಿ ಮಾಡೋರನ್ನು ಹಿಡೀರಿ- ದಂಪತಿ ಹೈ ಡ್ರಾಮಾ

ಯಾದಗಿರಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಜನ ಆಕ್ಸಿಜನ್, ಬೆಡ್ ಕೊರತೆಯಿಂದ ನರೆಳಿ ಸಾಯುತ್ತಿದ್ದಾರೆ. ಇಷ್ಟಾದರೂ ಕೆಲವರು ಮಾತ್ರ ಉದ್ಧಟತನ ಮೆರೆಯುತ್ತಿದ್ದಾರೆ. ಮೂಗೂ ನೋವು ಆಗುತ್ತೆ ಎಂದು ದಂಪತಿ ಮಾಸ್ಕ್ ಹಾಕದೆ, ಸಿಟಿ ರೌಂಡ್ಸ್ ಹೊಡೆಯುತ್ತಿದ್ದು, ಪ್ರಶ್ನಿಸಿದ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಸುಭಾಷ್ ವೃತ್ತದಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಹಾಕದೇ ಮೊಪೆಡ್‍ನಲ್ಲಿ ನಗರ ಸುತ್ತುತ್ತಿದ್ದ ದಂಪತಿಯನ್ನು ಪ್ರಶ್ನಿಸಿದ್ದಕ್ಕೆ ಹೈ ಡ್ರಾಮಾ ಮಾಡಿ, ಉದ್ಧಟತನ ಮೆರೆದಿದ್ದಾರೆ. ಮಾಸ್ಕ್ ಹಾಕದ್ದಕ್ಕೆ …

Read More »