Home / 2021 / ಜೂನ್ / 02 (page 2)

Daily Archives: ಜೂನ್ 2, 2021

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳ ವಶ

ದಾಂಡೇಲಿ – ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು. ಡಿಡಿಎಲ್ ವನಶ್ರೀ ಭಾಗದ …

Read More »

ವೈದ್ಯರ ಮೇಲಿನ ಹಿಂಸಾಚಾರ ತಡೆಯಲು ಕಾನೂನು ತನ್ನಿ : ಐಎಂಎ

ನವದೆಹಲಿ : ವೈದ್ಯಕೀಯ ಸೇವಾಕರ್ತರ ಮೇಲೆ ನಡೆಯುವ ಹಿಂಸಾಚಾರದ ಬಗ್ಗೆ ದೇಶದಲ್ಲಿ ಒಂದು ಸಮಗ್ರವಾದ, ಏಕರೂಪ ಮತ್ತು ಪರಿಣಾಮಕಾರಿ ಕಾನೂನನ್ನು ಜಾರಿಗೊಳಿಸಬೇಕೆಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಐಎಂಎ) ಆಗ್ರಹಿಸಿದೆ. ಈ ಕುರಿತು ಐಎಂಎ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರಿಗೆ ಪತ್ರ ಬರೆದಿದೆ. ದೇಶದಲ್ಲಿ ವೈದ್ಯರ ವಿರುದ್ಧ ವರದಿಯಾಗುತ್ತಿರುವ ಹಲ್ಲೆಗಳ ಹಿನ್ನೆಲೆಯಲ್ಲಿ ಐಎಂಎ ಈ ಮನವಿ ಮಾಡಿದೆ. ಇತ್ತೀಚಿನ ಪ್ರಕರಣದಲ್ಲಿ ಅಸ್ಸಾಂನಲ್ಲಿ ಕಿರಿಯ ವೈದ್ಯರೊಬ್ಬರನ್ನು ಮೃತರೋಗಿಯ ಸಂಬಂಧಿಕರ ದೊಡ್ಡ ಗುಂಪು …

Read More »

ಸ್ವಂತ ಖರ್ಚಿನಲ್ಲಿ ವ್ಯಾಕ್ಸಿನ್ ಕೇಂದ್ರ ನಿರ್ಮಿಸಿದ ಯಲ್ಲಾಪುರದ ಉದ್ಯಮಿ

ಕಾರವಾರ (ಜೂನ್ 2): ಕೋವಿಡ್ ಸಂಕಷ್ಟ ಕಾಲಕ್ಕೆ ಅದೆಷ್ಟೋ ಮಾನವೀಯ ವ್ಯಕ್ತಿಗಳು ಬೆಳಕಿಗೆ ಬರುತ್ತಿದ್ದಾರೆ. ವಿವಿಧ ರೂಪದಲ್ಲಿ ಬಡವರಿಗೆ ದಾರಿ ದೀಪವಾಗುತ್ತಿದ್ದಾರೆ. ಸರಕಾರ ಮಾಡಬೇಕಾದ ಕೆಲಸವನ್ನ ದಾನಿಗಳು ಮಾಡಿ ಸರಕಾರವನ್ನು ನಾಚಿಸುವಂತೆ ಮಾಡುತ್ತಿದ್ದಾರೆ. ಹೀಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಉದ್ಯಮಿ ಬಾಲಕೃಷ್ಣ ನಾಯ್ಕ್ ಸ್ವಂತ ಖರ್ಚಿನಲ್ಲಿ ಕೋವಿಡ್ ವ್ಯಾಕ್ಸಿನ್ ಕೇಂದ್ರವನ್ನೇ ತೆರೆದಿದ್ದಾರೆ. ವ್ಯಾಕ್ಸಿನ್ ಪಡೆಯುವವರಿಗೆ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಿದ್ದಾರೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ನಿವಾಸಿಯಾದ …

Read More »

ಆನ್​​ಲೈನ್​ ಗ್ಯಾಂಬ್ಲಿಂಗ್ ನಿರ್ಬಂಧ..? ಸರ್ಕಾರಕ್ಕೆ ಹೈಕೋರ್ಟ್​ ನೀಡಿದ ಸೂಚನೆ ಏನು..?

ಬೆಂಗಳೂರು: ಆನ್ ಲೈನ್ ಜೂಜು ರದ್ದು ಕೋರಿದ್ದ ಪಿಐಎಲ್ ವಿಚಾರಣೆ ಇಂದು ಹೈಕೋರ್ಟ್ ಮುಖ್ಯ ವಿಭಾಗಯ ಪೀಠದಲ್ಲಿ ನಡೆಯಿತು. ಆನ್ ಲೈನ್ ಗ್ಯಾಂಬ್ಲಿಂಗ್ ನಿಯಂತ್ರಿಸಲು ಸಮ್ಮತಿಯಿದೆ.. ಆದರೆ ಸರ್ಕಾರ ಸ್ಕಿಲ್ ಗೇಮ್ ನಿರ್ಬಂಧಿಸಬಾರದು ಎಂದು ಹೈಕೋರ್ಟ್​ಗೆ ಅನ್ ಲೈನ್ ಗೇಮ್ಸ್ ಒಕ್ಕೂಟ ಮನವಿ ಸಲ್ಲಿಸಿತು. ಇದಕ್ಕೆ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿತು. ಆನ್ ಲೈನ್ ಗ್ಯಾಂಬ್ಲಿಂಗ್ ಬಗ್ಗೆ ಸರ್ಕಾರ ಪ್ರತಿಕ್ರಿಯಿಸಬೇಕು. ಈ ಕುರಿತು ರಾಜ್ಯ ಸರ್ಕಾರ ನಿರ್ಧಾರ …

Read More »

ಲಾಕ್​ಡೌನ್ ಮುಗಿದ ನಂತರ ಆರಂಭವಾಗುವ ಸಾರಿಗೆ ಸೇವೆಯಲ್ಲಿ ಲಸಿಕೆ ಪಡೆದ ಸಿಬ್ಬಂದಿಗಳಿಗೆ ಆದ್ಯತೆ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಲಾಕ್​ಡೌನ್ ಮುಗಿದ ನಂತರ ಪ್ರಾರಂಭವಾಗುವ ಸಾರಿಗೆ ಸೇವೆಗೆ ಎರಡನೇ ಸುತ್ತಿನ ಕೊವಿಡ್ ಲಸಿಕೆ ಪಡೆದಂತಹ ಚಾಲಕರು ಮತ್ತು ನಿರ್ವಾಹಕರನ್ನೇ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸ್ಪಷ್ಟಪಡಿಸಿದರು. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು (ಜೂನ್ 1) ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಸಾರಿಗೆ ಸಚಿವರು ಹಾಗೂ …

Read More »

ಸೀಜ್ ಮಾಡಲಾದ ಸಾವಿರಾರು ವಾಹನಗಳಿಂದ ಮೈದಾನ ಫುಲ್

ಕಲಬುರಗಿ: ಕೊರೊನಾ ನಿಯಂತ್ರಿಸಲು, ರಾಜ್ಯಾದ್ಯಂತ ಲಾಕ್​​ಡೌನ್ ಜಾರಿಯಲ್ಲಿದೆ. ಅಗನತ್ಯವಾಗಿ ಹೊರಗಡೆ ಓಡಾಡದಂತೆ ಜನರಿಗೆ ಸೂಚನೆ ನೀಡಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಸುಖಾಸುಮ್ಮನೆ ಹೊರಗಡೆ ಓಡಾಡುವ ಸಾವಿರಾರು ವಾಹನಗಳನ್ನ ಪೊಲೀಸರು ಸೀಜ್ ಮಾಡ್ತಿದ್ದಾರೆ. ಕಲಬುರಗಿಯಲ್ಲಿ ಹೀಗೆ ಜಪ್ತಿ ಮಾಡಲಾದ ವಾಹನಗಳಿಂದ ಇಡೀ ಮೈದಾನವೇ ತುಂಬಿಹೋಗಿದೆ.   ಅನಗತ್ಯವಾಗಿ ಹೊರಬಂದವರ ಬೈಕ್ ಹಾಗೂ ಕಾರ್​ಗಳನ್ನ ಸೀಜ್ ಮಾಡಿರುವ ಪೊಲೀಸರು, ಅವುಗಳನ್ನ ಡಿಎಆರ್ ಮೈದಾನದಲ್ಲಿ ಪಾರ್ಕ್‌ ಮಾಡ್ತಿದ್ದಾರೆ. ಜಪ್ತಿಯಾದ ಬೈಕ್, ಕಾರ್, ಆಟೋಗಳನ್ನ ಪ್ರತಿದಿನ …

Read More »

ಇಂದು ಸಂಜೆ ಸಿಎಂ ಮಹತ್ವದ ಸಭೆ, ಲಾಕ್ ಡೌನ್ ವಿಸ್ತರಣೆ ಫಿಕ್ಸ್..!?

ಬೆಂಗಳೂರು : ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದರೂ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡುವ ಸಂಬಂಧ ಇಂದು ಸಂಜೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಸಂಜೆ ಎರಡು ಪ್ರಮುಖ ಸಭೆಗಳು ನಡೆಯಲಿದ್ದು,ರಾಜ್ಯದಲ್ಲಿ ಪುನಃ ಲಾಕ್ ಡೌನ್ ಮುಂದುವರೆಸುವ ಕುರಿತಾಗಿ ತೀರ್ಮಾನ ಹೊರಬೀಳುವ ಸಂಭವವಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4.30ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಕೋವಿಡ್ ತಜ್ಞರು, ವೈದ್ಯರು …

Read More »

ಟೊಮ್ಯಾಟೋ ಟ್ರೇನಲ್ಲಿ ತಮಿಳುನಾಡಿಗೆ ಅಕ್ರಮ ಮದ್ಯ ಸಾಗಾಟ- ಕೇರಳದ ಆರೋಪಿ ಅರೆಸ್ಟ್

ಚಾಮರಾಜನಗರ: ಟೊಮ್ಯಾಟೋ ಟ್ರೇಯಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ನಗರದಲ್ಲಿ ಆರೋಪಿ ಸಿಕ್ಕಿಬಿದ್ದಿದ್ದು, ಕೇರಳ ಮೂಲದ ಗಫೂರ್(37) ಬಂಧಿತ ಆರೋಪಿ. ತಮಿಳುನಾಡಿನಲ್ಲಿ ಕಠಿಣ ಲಾಕ್‍ಡೌನ್ ಜಾರಿಯಲ್ಲಿದ್ದು, ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ತಮಿಳುನಾಡಿಗೆ ಮದ್ಯ ಸಾಗಣೆ ಮಾಡುತ್ತಿದ್ದ. ಅಲ್ಲದೆ ಯಾರಿಗೂ ತಿಳಿಯದಂತೆ ಟೊಮ್ಯಾಟೋ ಟ್ರೇಗಳ ಜೊತೆ ಮದ್ಯದ ಬಾಟಲಿ ಇಟ್ಟು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭವಿಷ್ಯವೊಂದನ್ನು ಹಾಸನ ಜಿಲ್ಲೆಯ ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಕೊರೊನಾದಂತಹ ಮಾರಣಾಂತಿಕ ಕಾಯಿಲೆ ದೂರವಾಗಲು ಸುಮಾರು 10 ವರ್ಷಗಳೇ ಬೇಕು. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ …

Read More »

ಡಿಕೆಶಿ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ – 10 ಸಾವಿರ ರೂಪಾಯಿ ದಂಡ..!

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹುಬ್ಬಳ್ಳಿಗೆ ಆಗಮಿಸಿದ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಪರಿಣಾಮ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಸಭೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡದೇ ಇರುವುದು. ಸರಿಯಾಗಿ ಮಾಸ್ಕ್ ಧರಿಸದೇ ಇರುವುದರಿಂದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಮೇ 31 ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ …

Read More »