Breaking News

Daily Archives: ಜೂನ್ 3, 2021

ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …

Read More »

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …

Read More »

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. …

Read More »

ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಸೆಲೆಬ್ರಿಟಿಗಳು ಮಾತ್ರವಲ್ಲ ಅವರ ಕುಟುಂಬದವರ ಮೇಲೂ ಅಭಿಮಾನಿಗಳು ಕಣ್ಣಿಟ್ಟಿರುತ್ತಾರೆ. ತಮ್ಮಿಷ್ಟದ ನಟ/ನಟಿಯ ಕುಟುಂಬದವರು ಏನು ಮಾಡುತ್ತಾರೆ? ಯಾರ ಜತೆ ಸುತ್ತಾಟ ನಡೆಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಈಗ ನಟಿ ಅನುಷ್ಕಾ ಶರ್ಮಾ ಅವರ ಸಹೋದರ ಕರ್ಣೇಶ್​ ಶರ್ಮಾ ಮೇಲೆ ಅಭಿಮಾನಿಗಳ ಕಣ್ಣುಬಿದ್ದಿದೆ. ಅಷ್ಟೇ ಅಲ್ಲ ಅವರ ಡೇಟಿಂಗ್​ ವಿಚಾರವನ್ನು ಅಭಿಮಾನಿಗಳು ಬಯಲಿಗೆಳೆದಿದ್ದಾರೆ. ನೆಟ್​​ಫ್ಲಿಕ್ಸ್​ನಲ್ಲಿ ರಿಲೀಸ್​ ಆದ ಬುಲ್​ಬುಲ್​ ಸಿನಿಮಾ ನಟಿ ತೃಪ್ತಿ ದಿಮ್ರಿ ನಟಿಸಿದ್ದರು. ಈಗ ಅವರ …

Read More »

ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ

ಹುಬ್ಬಳ್ಳಿ: ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್​, ಆಕ್ಸಿಜನ್​, ವೆಂಟಿಲೇಟರ್ ಬೆಡ್​​, ಔಷಧ, ರೆಮಿಡಿಸಿವರ್​ ಇಂಜಕ್ಷನ್​ ಸಿಗದೆ ಸಾಯುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್​ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ …

Read More »

ಕೇರಳ ರಾಜ್ಯದ ಪಾಲಾದ KSRTC ಟ್ರೇಡ್‌ ಮಾರ್ಕ್‌! ಬರೀ ಹೆಸರಲ್ಲ, ಎಮೋಷನ್ ಎಂದ ನೆಟ್ಟಿಗರು

ಬೆಂಗಳೂರು, ಜೂನ್ 03: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್‌ಆರ್‌ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಕೆಎಸ್‌ಆರ್‌ಟಿಸಿ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ಆದೇಶ ಹೊರಡಿಸಲಾಗಿದೆ. ಟ್ರೇಡ್ ಮಾರ್ಕ್‌ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್‌) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ …

Read More »

ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ …

Read More »

ಮಾಜಿ ಸ್ಪೀಕರ್​ ರಮೇಶ್​ಕುಮಾರ್​ ಪ್ರತಿಭಟನೆ: ಲಾಕ್​ಡೌನ್ ವೇಳೆ ಕಿರುಕುಳ ನೀಡ್ತಿದ್ದ PSI ಅಮಾನತು

ಕೋಲಾರ: ಲಾಕ್​ಡೌನ್​ ಸಂದರ್ಭದಲ್ಲಿ ಆಂಧ್ರ ಹಾಗೂ ಕರ್ನಾಟಕ ಗಡಿಯ ಚೆಕ್​ಪೋಸ್ಟ್​ನಲ್ಲಿ ರೈತರ ವಾಹನಗಳನ್ನು ಹಿಡಿದು ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಪೊಲೀಸ್​ ಠಾಣೆ ಪಿಎಸ್​ಐ ನರಸಿಂಹಮೂರ್ತಿ ಯನ್ನು ಅಮಾನತು ಮಾಡಲಾಗಿದೆ. ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ಗೆ ಸ್ಥಳೀಯರಿಂದ ಪಿಎಸ್​ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂಬ ದೂರು ಬಂದ …

Read More »

ಪ್ಯಾಕೇಜ್ ನೀಡಿದ ನಂತರವೇ ಲಾಕ್ ಡೌನ್ ಘೋಷಿಸಿ: ಕಾಂಗ್ರೆಸ್

ಬೆಂಗಳೂರು: ಸರಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್‌ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್‌ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್‌ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ …

Read More »