Breaking News
Home / 2021 / ಜೂನ್ / 04 (page 2)

Daily Archives: ಜೂನ್ 4, 2021

ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ರೋಗಿಗಳಿಗೆ ಉತ್ತೇಜನ ನೀಡಲು ಮುಂದಾದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಕೊರೋನಾ ಸೋಂಕಿನ ವಿಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಕೊರೋನಾ ಸೋಂಕಿತರು ಉಳಿದುಕೊಂಡಿರುವ ದಾವಣಗೆರೆಯ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಸೋಂಕಿತರಲ್ಲಿ ಆತ್ಮವಿಶ್ವಾಸ ಮೂಡಲು, ಅವರಿಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ …

Read More »

ಬೆಳಗಾವಿ: ಮುಖ್ಯಮಂತ್ರಿಗೆ ಮುತ್ತಿಗೆ ಹಾಕಲು ಬಂದಿದ್ದ ರೈತರು ವಶಕ್ಕೆ

ಬೆಳಗಾವಿ: ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಕಬ್ಬಿನ ಬಾಕಿ ಬಿಲ್ ಗಾಗಿ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ರೈತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಬೆಳಗ್ಗೆ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬಿನ ಬಿಲ್ ಬಾಕಿ ಪಾವತಿಸಲು ಸಿಎಂ ಕ್ರಮ ಕೈಗೊಳ್ಳಬೇಕು. ತರಕಾರಿ ಬೆಳೆದ …

Read More »

ಉಡುಪಿ: ಧಾರಕಾರ ಮಳೆಗೆ ಮುಳುಗಿತು ಕಾರು- ಬೈಕ್ ಗಳು

ಉಡುಪಿ: ನಗರದಲ್ಲಿ ಗುರುವಾರ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಾಂತಗಳು ಸಂಭವಿಸಿದೆ, ನಗರದ ಬಿಗ್ ಬಜಾರ್ ಪಾರ್ಕಿಂಗ್ ಪ್ರದೇಶದಲ್ಲಿ ಮಳೆ ನೀರು ನುಗ್ಗಿ ಹತ್ತಾರು ಬೈಕ್ ಗಳು ಮತ್ತು ಕಾರುಗಳು ನೀರಿನಲ್ಲಿ ಮುಳುಗಿದೆ. ತಡ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಬಿಗ್‌ ಬಜಾರ್ ಕಟ್ಟಡದ ಪಾರ್ಕಿಂಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಕಟ್ಟಡದ ನೆಲ ಮಳಿಗೆಗೆ ಮಳೆ ನೀರು ತುಂಬಿಕೊಂಡು ಪರಿಣಾಮ ಪಾರ್ಕಿಂಗ್ ಮಾಡಲಾಗಿದ್ದ ಆರು ಕಾರುಗಳು ಹಾಗೂ ಹತ್ತಕ್ಕೂ …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ

ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ರಾಜ್ಯ ಸರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ 3 ವಿಷಯದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳು ಸೇರಿ ಒಂದೇ ಪರೀಕ್ಷೆ ನಡೆಯಲು ನಿರ್ಧರಿಸಲಾಗಿದ್ದು, 120 ಅಂಕಗಳಿಗೆ ಮಲ್ಟಿಪಲ್‌ ಚಾಯ್ಸ್ ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರತಿ ವಿಷಯಕ್ಕೆ‌ 40 …

Read More »

5.7 ಲಕ್ಷದ ನಶೆ ಮಾತ್ರೆ, ಇಬ್ಬರು ವಶಕ್ಕೆ

ಹೊಸಪೇಟೆ (ವಿಜಯನಗರ): ಅಕ್ರಮವಾಗಿ ಸಾಗಿಸುತ್ತಿದ್ದ ₹5.7 ಲಕ್ಷ ಮೌಲ್ಯದ ಎಲ್‌.ಎಸ್‌.ಡಿ. ನಶೆ ಮಾತ್ರೆ ಹಾಗೂ ಇಬ್ಬರನ್ನು ಇಲ್ಲಿನ ಚಿತ್ತವಾಡ್ಗಿ ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ರಘುನಾಥ ಕುಮಾರ್‌, ಹಿರಿಯೂರಿನ ಸೊಲಮನ್‌ ಹಾಗೂ ಅವರಿಂದ ಹುಂಡೈ ಕಾರು, ಎರಡು ಮೊಬೈಲ್‌, ₹35 ಸಾವಿರ ನಗದು ಸಹ ವಶಪಡಿಸಿಕೊಂಡಿದ್ದಾರೆ. ಎಲ್ಲದರ ಒಟ್ಟು ಮೊತ್ತ ₹16.2 ಲಕ್ಷವಾಗಲಿದೆ. ‘ನಗರದ ಕಾಲೇಜು ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಕಾರು ತಡೆದು ಪರಿಶೀಲನೆ ನಡೆಸಿದಾಗ ನಶೆ ಮಾತ್ರೆ ಇರುವುದು …

Read More »

ಕಪ್ಪು ಶಿಲೀಂಧ್ರ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ

ಹುಬ್ಬಳ್ಳಿ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ಇಲ್ಲಿನ ಕಿಮ್ಸ್ ಆಸ್ಪತ್ರೆ ಹಿಂಭಾಗದ ಬೈಲಪ್ಪನವರ ನಗರದ ಪೈ ಹೊಟೇಲ್ ಬಳಿಯ ಔಷಧ ಅಂಗಡಿಯಲ್ಲಿ ಕಾಳಸಂತೆಯಲ್ಲಿ ಮಾರಾಟ …

Read More »

ಯುವಕನನ್ನು ಕಾಲಿನಿಂದ ಒದ್ದು, ಅವಾಚ್ಯ ಪದಗಳಿಂದ ನಿಂದಿಸಿದ ಎಎಸ್‍ಐ ಸಸ್ಪೆಂಡ್

ಚಾಮರಾಜನಗರ: ಲಾಕ್‍ಡೌನ್ ವೇಳೆ ಮಾತ್ರೆ ಖರೀದಿಸಲು ಬಂದಿದ್ದ ಯುವಕನಿಗೆ ದರ್ಪ ತೋರಿ ಕಾಲಿನಿಂದ ಒದ್ದು ನಿಂದಿಸಿದ್ದ ಎಎಸ್‍ಐ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮೇ 23 ರಂದು ಯುವಕನೋರ್ವ ಮಾತ್ರೆ ಖರೀದಿಸಲು ಬೈಕ್‍ನಲ್ಲಿ ನಗರಕ್ಕೆ ಬಂದಿದ್ದ. ಈ ವೇಳೆ ಕೊಳ್ಳೇಗಾಲ ಪಟ್ಟಣ ಠಾಣೆಯ ಎಎಸ್‍ಐ ರಾಮಸ್ವಾಮಿ, ಯುವಕನಿಗೆ ದರ್ಪ ತೋರಿ ಕಾಲಿಂದ ಒದ್ದು ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದರು. ಯುವಕನಿಗೆ ನಿಂದಿಸಿ, ಒದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು,ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಯಡಿಯೂರಪ್ಪ ಸಂಘದ ಹಿರಿಯ ಪ್ರಚಾರದ ಹರಿಭಾವು ವಝೆ ಅವರ ಆರೋಗ್ಯ ವಿಚಾರಿಸಿದರು ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು. ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಿಲ್ …

Read More »

ಸ್ಲಂ, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡಿ -ಸರ್ಕಾರಕ್ಕೆ ಹೈಕೋರ್ಟ್​ ಆದೇಶ

ಬೆಂಗಳೂರು: ಕೋವಿಡ್ ಸಂಬಂಧ ಪ್ರಕರಣಗಳ PIL ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಸ್ಲಮ್, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡುವಂತೆ ಆದೇಶ ಹೊರಡಿಸಿದೆ. ಎನ್​​ಜಿಒಗಳ ಸಹಕಾರ ಪಡೆದು ಪೌರ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಆದ್ಯತಾ ವಲಯಗಳಿಗೆ ವ್ಯಾಕ್ಸಿನ್ ನೀಡಿ. ಇವರ ಕುಟುಂಬದವರಿಗೂ ವ್ಯಾಕ್ಸಿನೇಷನ್​ಗೆ ಕ್ರಮವಹಿಸಿ. ಇದಕ್ಕಾಗಿ ನಡೆಸಿದ ವಿಶೇಷ ಅಭಿಯಾನಗಳ ಮಾಹಿತಿ ನೀಡಿ. ವಿಶೇಷ ಚೇತನರಿಗೆ ವ್ಯಾಕ್ಸಿನೇಷನ್‌ ಬಗ್ಗೆಯೂ ಮಾಹಿತಿ ನೀಡಿ ಎಂದು ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ …

Read More »

ಕೆಎಸ್​ಆರ್​ಟಿಸಿಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಹೆಸರಿಡಲು ಸಂಸದೆ ಸುಮಲತಾ ಅಂಬರೀಷ್ ಸಲಹೆ

ಮಂಡ್ಯ: ಲೊಗೋ ಮತ್ತು ಟ್ರೇಡ್​ಮಾರ್ಕ್​ ಕೇರಳ ರಾಜ್ಯದ ಪಾಲಾದ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆಗೆ ಬಾಬಾ ಸಾಹೇಬ್​​ ಸಾರಿಗೆ ಸಂಸ್ಥೆ ಎಂದು ಹೆಸರಿಡುವಂತೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಮನವಿ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು‌ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿರುವ ಅವರು, ಕನ್ನಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಗೆ ಹೊಸ ಹೆಸರು ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) …

Read More »