Breaking News
Home / 2021 / ಜೂನ್ / 05 (page 3)

Daily Archives: ಜೂನ್ 5, 2021

ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ಸರ್ಕಾರ ವರ್ತಿಸುತ್ತಿದೆ’

ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಮೇಯರ್​ ಶಿಲ್ಪಾ ನಾಗ್​ ನಡುವಿನ ಜಟಾಪಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸರ್ಕಾರ ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ವರ್ತಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗಳು.. ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ …

Read More »

ರಾಜ್ಯದಲ್ಲಿ KSRTC ಟ್ರೇಡ್​ ಮಾರ್ಕ್​​ ನಿಷೇಧ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ”ಕೆಎಸ್​​ಆರ್​​ಟಿಸಿ” ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧ ಬಂದಿಲ್ಲ ಅಂತಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿ ಕೆಎಸ್​ಆರ್​​ಟಿಸಿ ಸ್ಪಷ್ಟನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ”ಕೆಎಸ್‌ಆರ್‌ಟಿಸಿ” ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ಸ್​ ರಿಜಿಸ್ಟರಿ ಅವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ …

Read More »

ಪೈಲಟ್ ತರಬೇತಿ ಕೇಂದ್ರ: 2 ಸಂಸ್ಥೆಗಳಿಗೆ ಒಪ್ಪಿಗೆ -ಮಂಗಲಾ ಅಂಗಡಿ

ಬೆಳಗಾವಿ: ‘ವಿಮಾನ ಹಾರಾಟ ಕ್ಷೇತ್ರದಲ್ಲಿ ಅಗತ್ಯ ತರಬೇತಿ ನೀಡುವ ಸಂಸ್ಥೆ ಅಥವಾ ಕೇಂದ್ರವನ್ನು (‍ಪೈಲಟ್ ತರಬೇತಿ ಕೇಂದ್ರ) ನಗರದ ಸಮೀಪದಲ್ಲಿ ಪ್ರಾರಂಭಿಸಲು 2 ಖಾಸಗಿ ತರಬೇತಿ ಸಂಸ್ಥೆಗಳಿಗೆ ಕೇಂದ್ರ ವಿಮಾನಯಾನ ಸಚಿವಾಲಯವು ಇತ್ತೀಚೆಗೆ ಒಪ್ಪಿಗೆ ಸೂಚಿಸಿದೆ’ ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಆಯ್ಕೆಯಾದ ಈ ಎರಡು ಸಂಸ್ಥೆಗಳಿಗೆ ತಲಾ 5ಸಾವಿರ ಚ.ಮೀ. ಅಳತೆಯಂತೆ ಒಟ್ಟು 10ಸಾವಿರ ಚ.ಮೀ. …

Read More »

ಮಾವುತನೊಬ್ಬನ ಅಂತ್ಯಕ್ರಿಯೆಯ ಸ್ಥಳಕ್ಕೆ ಧಾವಿಸಿದ ಗಜರಾಜ, ಕಣ್ಣೀರ ವಿದಾಯ ನೀಡಿರುವ ಹೃದಯ ವಿದ್ರಾವಕ ಘಟನೆ

ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಮಾವುತನೊಬ್ಬನ ಅಂತ್ಯಕ್ರಿಯೆಯ ಸ್ಥಳಕ್ಕೆ ಧಾವಿಸಿದ ಗಜರಾಜ, ಕಣ್ಣೀರ ವಿದಾಯ ನೀಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಕಳೆದ 25 ವರ್ಷಗಳಿಂದ ಈ ಆನೆಯ ಪರಿಪಾಲನೆಯನ್ನು ಮಾವುತ ದಾಮೋದರ್ ನಾಯರ್ ನೋಡಿಕೊಳ್ಳುತ್ತಿದ್ದರು. 74 ವರ್ಷದ ದಾಮೋದರ್ ಇಹಲೋಕ ತ್ಯಜಿಸಿದಾಗ ಮೂಕ ಪ್ರಾಣಿಯು ಮಾವುತನಿಗೆ ಭಾವನಾತ್ಮಕ ಅಶ್ರುತರ್ಪಣಗೈದ ವಿಡಿಯೊ ಎಂಥಹ ಕಲ್ಲು ಹೃದಯವನ್ನು ಕರಗಿಸಿಬಿಡುತ್ತದೆ. ಬ್ರಹದತ್ತನ್ ಎಂಬ ಆನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾವುತನ …

Read More »

ಹಿರಿಯ ನಟಿ ಬಿ. ಜಯಾರ ಮೃತದೇಹವನ್ನ ಕಸದರಾಶಿ ಬಳಿ ಇಟ್ಟು ಅವಮಾನ! ವಿಡಿಯೋ ವೈರಲ್​

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದ ಜಯಾ, ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜನಪ್ರಿಯರಾಗಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. ಇಂತಹ ಜನಪ್ರಿಯ ನಟಿ ಅಗಲಿಕೆ ಸುದ್ದಿ ಅಭಿಮಾನಿಗಳ ಪಾಲಿಗೆ ದುಃಖಕರ. …

Read More »

ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.11 ಇದ್ದು, ಶೇ.5ಕ್ಕೆ ಬಂದರೆ ಅನ್ ಲಾಕ್ : ಸಿಎಂ BSY

ಹುಬ್ಬಳ್ಳಿ: ರಾಜ್ಯದಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದು, ಸದ್ಯ 11.09 ರಷ್ಟಿದೆ. ಈ ಪಾಸಿಟಿವಿಟಿ ದರ ಶೇ.5ಕ್ಕೆ ಬಂದರೆ ರಾಜ್ಯದಲ್ಲಿ ಅನ್ ಲಾಕ್ ಮಾಡುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಲ್ಲಿನ ಸವಾಯಿ ಗಂಧರ್ವ ಹಾಲಿನಲ್ಲಿ ಕೋವಿಡ್ ನಿಯಂತ್ರಣದ ಕುರಿತು ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರ ಅಭಿಪ್ರಾಯದಂತೆ ಪಾಸಿಟಿವಿಟಿ ದರ ಶೇ.5 ಕ್ಕಿಳಿದರೆ ಅನ್ ಲಾಕ್ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೆ ಜನರು ಕೂಡ ಕೈ ಜೋಡಿಸಬೇಕು …

Read More »

ಕೊರೋನಾ ಹೀಗೆ ಇದ್ರೆ SSLC ಪರೀಕ್ಷೆಯೂ ರದ್ದು, ಕಡಿಮೆಯಾದ್ರೆ ಮಾತ್ರ ಎಕ್ಸಾಂ: ಸಿಎಂ B.S.Y.

ಬೆಳಗಾವಿ: ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿ ಎಲ್ಲ ಸಾಮಾನ್ಯ ಸ್ಥಿತಿಗೆ ಮರಳಿದಾಗ ಮಾತ್ರ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ಕಡಿಮೆಯಾಗದಿದ್ದರೆ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ಕೂಡ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಮಾಹಿತಿ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿ ಸಹಜ ಸ್ಥಿತಿಗೆ ಮರಳಿ ಪರಿಸ್ಥಿತಿ …

Read More »

ಮುಂಗಾರು ಆಗಮನ : ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಣೆ

ಬೆಂಗಳೂರು: ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೇ ಅಂತ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆ, ದಕ್ಷಿಣ ಒಳನಾಡು ಪ್ರವೇಶಿಸಿರುವ ಮುಂಗಾರು, ಉತ್ತರ ಒಳನಾಡಿಗೆ ಶನಿವಾರ ಪ್ರವೇಶಸಲಿದ್ದು, ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದರು. ಧಾರವಾಡ, ಹಾವೇರಿ, ಬಿಜಾಪುರ …

Read More »

ಪಿಯುಸಿ ಪರೀಕ್ಷೆಯನ್ನು ರದ್ದು ಮಾಡುವುದಾದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾಕೆ ನಡೆಸಬೇಕು?

ಬೆಳಗಾವಿ: ಪಿಯುಸಿ ಪರೀಕ್ಷೆಯನ್ನು ರದ್ದು ಮಾಡುವುದಾದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾಕೆ ನಡೆಸಬೇಕು?ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಯಸ್ಸಿನ ಅಂತರ ಎರಡು ವರ್ಷವಷ್ಟೇ. ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಲಾಗುವುದು ಎಂದು ಈಗಾಗಲೇ ಸರ್ಕಾರ ತಿಳಿಸಿದೆ. ಅಂದ ಮೇಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರವು ಸಿಬಿಎಸ್ಇ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಪಡಿಸಿದೆ. ಕೇಂದ್ರದಿಂದ ಒಂದು ನಿರ್ಧಾರ ರಾಜ್ಯದಿಂದ ಒಂದು ನಿರ್ಧಾರ ಸರಿಯಲ್ಲ. …

Read More »

ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಹಣ ಜನರಿಗೆ ತಲುಪಿದಾಗ ನಮಗೆ ಸಮಾಧಾನವಾಗುತ್ತದೆ: ಸತೀಶ ಜಾರಕಿಹೊಳಿ

ಬೆಳಗಾವಿ: ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಹಣ ಜನರಿಗೆ ತಲುಪಿದಾಗ ನಮಗೆ ಸಮಾಧಾನವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಸುಮ್ಮನೆ ಪ್ಯಾಕೇಜ್ ಘೋಷಣೆ ಮಾಡುವುದರಿಂದ ಪ್ರಯೋಜನವಿಲ್ಲ. ಅರ್ಹರಿಗೆ ಆ ಹಣ ತಲುಪಬೇಕು. ಕಳೆದ ಬಾರಿ ಘೋಷಣೆ ಮಾಡಿದ ಹಣ ಇನ್ನುವರೆಗೂ ಕೂಡ ಜನರಿಗೆ ತಲುಪಿಲ್ಲ. ಹೀಗಾಗಿ, ನಮಗೆ ಆತಂಕವಿದೆ. …

Read More »