ಮೈಸೂರು : ವರ್ಗಾವಣೆಗೊಂಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಜಿಲ್ಲಾಧಿಕಾರಿಯಾಗಿ ಮರಳಬೇಕೆಂಬ ಅಭಿಯಾನ ಶುರುವಾಗಿದೆ . ಚೇಂಜ್ ಆರ್ಗ್ ಎಂಬ ಸಂಸ್ಥೆ ರೋಹಿಣಿ ಸಿಂಧೂರಿಯವರನ್ನು ಮರಳಿ ಜಿಲ್ಲಾಧಿಕಾರಿಯಾಗಿ ಮಾಡಬೇಕೆಂದು ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಎಂಬ ಆನ್ ಲೈನ್ ಅಭಿಯಾನ ಶುರು ಮಾಡಿದೆ . ಇದಕ್ಕೆ ಸಾಕಷ್ಟು ಜನ ಕೈಜೋಡಿಸಿದ್ದಾರೆ ಚೇಂಜ್ ಆರ್ಗ್ ಸಂಸ್ಥೆ ಈ ಸಹಿ ಅಭಿಯಾನವನ್ನು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಗೆ ತಲುಪಿಸಿದೆ . ರೋಹಿಣಿ …
Read More »Daily Archives: ಜೂನ್ 12, 2021
ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ …
Read More »ಕೋವಿಡ್-19: ರಾಜ್ಯದಲ್ಲಿ 2 ತಿಂಗಳ ಬಳಿಕ ದೈನಂದಿನ ಸೋಂಕು ಪ್ರಮಾಣ ಅತಿಕಡಿಮೆ!
ಬೆಂಗಳೂರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಘೋಷಣೆ ಹೊರಬಿದ್ದ ಬೆನ್ನಲ್ಲೇ ಅಚ್ಚರಿ ರೀತಿಯಲ್ಲಿ ರಾಜ್ಯ ಸಹಜ ಸ್ಥಿತಿಗೆ ಬರಲಾರಂಭಿಸಿದೆ. ರಾಜ್ಯದಲ್ಲಿ ಶುಕ್ರವಾರ 8249 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 2 ತಿಂಗಳ ಬಳಿಕ ದೈನಂದಿನ ಸೋಂಕು ಕನಿಷ್ಟಕ್ಕೆ ಕುಸಿದಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಕೊರೋನಾ ಅಬ್ಬರ ಕಡಿಮೆಯಾಗಿದ್ದು, ನಿನ್ನೆ 1,154 ಹೊಸ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಏಪ್ರಿಲ್ 13 ರಂದು 8,778 ಪ್ರಕರಣಗಳು ಪತ್ತೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ …
Read More »ಪೆಟ್ರೋಲ್-ಡೀಸೆಲ್, ಕರೆಂಟ್ ಬಿಲ್ ಜೊತೆ ತರಕಾರಿ ಬೆಲೆಯೂ ಗಗನಕ್ಕೇರಿಕೆ..!
ಬೆಂಗಳೂರು : ತೈಲ ಬೆಲೆ, ವಿದ್ಯುತ್ ಬೆಲೆ ಏರಿಕೆ ಬಳಿಕ ರಾಜ್ಯದಲ್ಲಿ ಅಗತ್ಯ ವಸ್ತುವಾಗಿರುವ ತರಕಾರಿ ಬೆಲೆಯೂ ಗಗನಕ್ಕೇರಿದೆ. ಇದರ ಪರಿಣಾಮ ಈಗಾಗಲೇ ಕೊರೋನಾ ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ತರಕಾರಿ ಬೆಲೆ ಏರಿಕೆಯಾಗಿದೆ. ಸಾಂಕ್ರಾಮಿಕ ರೋಗ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪರಿಣಾಮ ಬೆಲೆ ಏರಿಕೆಯಾಗಿದೆ. ಕೇವಲ ಇದೊಂದೇ ಅಲ್ಲ, ಗ್ರಾಮೀಣ ಭಾಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವುದರಿಂದಲೂ ಬೆಲೆ …
Read More »ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್
ಬೆಂಗಳೂರು, ಜೂ.12- ಕೋವಿಡ್-19 ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್ ಬರಲು ಆರಂಭಿಸಿದ್ದು, ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೊಮ್ಮೆ ಸ್ಫೋಟಗೊಳ್ಳುವ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಂದ ಬರುವ ವಲಸಿಗರಿಗೆ ರೈಲ್ವೇ ಹಾಗೂ ಬಸ್ ನಿಲ್ದಾಣಗಳಲ್ಲೇ ಕೋವಿಡ್ ಪರೀಕ್ಷೆಗೊಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಲಾಕ್ಡೌನ್ ಸಡಿಲಿಕೆಯಾದ ಬಳಿಕ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ. ಬೆಂಗಳೂರು ನಗರಕ್ಕೆ ಹೆಚ್ಚಿನ …
Read More »ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲ : ಡಿಕೆಶಿ
ಚಿತ್ರದುರ್ಗ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲವೆಂದು ಡಿಕೆಶಿ ಆಕ್ರೋಶ ಹೊರಹಾಕಿ, ಕಾರ್ಯಕರ್ತರಿಗೆ ಶಿಸ್ತು ಕಲಿಸಿ ಎಂದು ಜಿಲ್ಲಾಧ್ಯಕ್ಷ ತಾಜ್ ಪೀರ್ಗೆ ಸೂಚನೆ ನೀಡಿದರು. ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಮಧ್ಯದಲ್ಲಿ ಮಾತನಾಡಿದ್ದರು. ಇದಕ್ಕೆ ಸಿಟ್ಟುಗೊಂಡ ಡಿಕೆಶಿ ಕಾರ್ಯಕರ್ತರ ವಿರುದ್ಧ ಗರಂ …
Read More »ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆ ಜಾರಿಗೊಳಿಸಲು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ : ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ (ಒಎನ್ ಒಆರ್ ಸಿ) ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಪಶ್ಚಿಮ ಬಂಗಾಳ, ಛತ್ತೀಸ್ ಗಢ ಮತ್ತು ಅಸ್ಸಾಂ ಇನ್ನೂ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸುತ್ತಿದ್ದಂತೆ ಈ ಅಭಿಪ್ರಾಯ ಬಂದಿದೆ. ಈ ಯೋಜನೆಯು ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಅವರ ಕೆಲಸದ ಸ್ಥಳದಲ್ಲಿ ಮತ್ತು ಅವರ …
Read More »ಫೋನ್ ಮಾಡಿದ ಸೈಬರ್ ಖದೀಮರು, 102,ಬಾರಿ ಓಟಿಪಿ ಶೇರ್, ಬರೊಬ್ಬರಿ ಹತ್ತು ಲಕ್ಷ ರೂ ಗುಳುಂ
ಬೆಳಗಾವಿ- ಅಜ್ಞಾತರು ಫೋನ್ ಮಾಡಿ ಓಟಿಪಿ ಕೇಳಿದ್ರೆ ಕೊಡಬೇಡಿ ಎಂದು ಎಷ್ಟೇ ಬೊಬ್ಬೆ ಹೊಡೆದರೂ ಜನ ಜಾಗೃತರಾಗುತ್ತಿಲ್ಲ,ಒಂದೆರಡು ಬಾರಿ ಅಲ್ಲ,ಬರೊಬ್ಬರಿ 102,ಬಾರಿ ಓಟಿಪಿ ಶೇರ್ ಮಾಡಿದವನ ಖಾತೆಯಿಂದ ಬರೊಬ್ಬರಿ ಹತ್ತು ಲಕ್ಷ ರೂ ಗುಳುಂ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ರೀತಿ ವಂಚನೆಗೊಳಗಾದ ವ್ಯೆಕ್ತಿ ಅಜ್ಞಾನಿಯೂ ಅಲ್ಲ,ಅನಕ್ಷರಸ್ಥನೂ ಅಲ್ಲ,102 ಬಾರಿ ಓಟಿಪಿ ಶೇರ್ ಮಾಡಿ ವಂಚನೆಗೊಳಗಾದ ವ್ಯೆಕ್ತಿ ಬಿಎಸ್ಎನ್ಎಲ್ ನಿವೃತ್ತ ಅಧಿಕಾರಿ ಅನ್ನೋದು ವಿಶೇಷ. ಇತ್ತೀಚಿಗೆ ಸೈಬರ್ ಕ್ರೈಂ …
Read More »ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ?
ಬೆಂಗಳೂರು: ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾನು ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಮಧ್ಯೆ ಶಾಸಕ ಅರವಿಂದ ಬೆಲ್ಲದ್ ದೆಹಲಿ ಭೇಟಿಯು ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಹಿನ್ನೆಲೆಯಲ್ಲಿ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ. ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು …
Read More »ಸೋನು ಸೂದ್ ರನ್ನ ಭೇಟಿಯಾಗಲು 700 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಿ ಬಂದ ಅಭಿಮಾನಿ..!
ಬಾಲಿವುಡ್ ನಟ ಸೋನು ಸೂದ್ ನಟನೆಗಿಂತ ಹೆಚ್ಚಾಗಿ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಬಡ ಜನರ ಪರವಾಗಿ ನಿಂತಿರುವ ಸೂನ್ ಸೂದ್ರನ್ನ ಭೇಟಿಯಾಗಬೇಕು ಅಂತಾ ವೆಂಕಟೇಶ್ ಎಂಬಾತ ಹೈದರಾಬಾದ್ನಿಂದ ಮುಂಬೈವರೆಗೆ ಕಾಲ್ನಡಿಗೆಯಲ್ಲೇ ಸಾಗಿ ಬಂದಿದ್ದಾನೆ. ಟ್ವಿಟರ್ನಲ್ಲಿ ಅಭಿಮಾನಿಯನ್ನ ಭೇಟಿಯಾದ ಫೋಟೋ ಶೇರ್ ಮಾಡಿರುವ ಸೋನು ಸೂದ್, ಅಭಿಮಾನಿಗಳ ಬಳಿ ನನ್ನ ಭೇಟಿಯಾಗಲು ಈ ರೀತಿಯ ಕಷ್ಟವನ್ನ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ. …
Read More »