Breaking News

Daily Archives: ಜೂನ್ 15, 2021

ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್​ ಅಂಗಾಂಗಗಳು ಯಾರಿಗೆಲ್ಲ ಜೀವ ತುಂಬಿದೆ ಗೊತ್ತಾ?

ಬೆಂಗಳೂರು: ನಡುರಾತ್ರಿ ನಡೆದಿದ್ದ ಆಕಸ್ಮಿಕ ಅಪಘಾತದಲ್ಲಿ ಅಕಾಲಿಕವಾಗಿ ಪ್ರಾಣತೆತ್ತ ಯುವ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬದವರು ಸಂಚಾರಿ ವಿಜಯ್ ಅವರ ಅಂಗಾಂಗಳನ್ನ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದರು. ಹಾಗಾಗಿ, ಸಂಚಾರಿ ವಿಜಯ್​ ಅವರ ಅಂಗಾಂಗ ಟ್ರಾನ್ಸ್​ಪ್ಲಾಂಟೇಷನ್ ಯಶಸ್ವಿಯಾಗಿ ನಡೆದಿದೆ. ಸಂಚಾರಿ ವಿಜಯ್​ ಅವರ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಯಶಸ್ವಿಯಾಗಿದ್ದು ಮಹಿಳೆಯೊಬ್ಬರಿಗೆ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಮಾಡಲಾಗಿದೆ. 34 ವರ್ಷದ ಮಹಿಳೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕಿಡ್ನಿ …

Read More »

100 ಹೆಚ್ಚುವರಿ ರೈಲು ಸಂಚಾರ ಆರಂಭಿಸಲು ಸಿದ್ಧತೆ

ನವದೆಹಲಿ: ಹಲವಾರು ರಾಜ್ಯಗಳು ಲಾಕ್‌ಡೌನ್‌ ಸಡಿಲಿಕೆ ಮಾಡುತ್ತಿದ್ದು, ಪ್ರಯಾಣಿಕರ ಬೇಡಿಕೆ ಪೂರೈಸುವುದಕ್ಕಾಗಿ ಹೆಚ್ಚು ರೈಲುಗಳ ಕಾರ್ಯಾಚರಣೆ ಮಾಡಲು ಭಾರತೀಯ ರೈಲ್ವೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು 100 ಹೆಚ್ಚುವರಿ ರೈಲುಗಳನ್ನು ಈ ವಾರವೇ ಓಡಿಸಲು ನಿರ್ಧರಿಸಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಮುಂಗಡವಾಗಿ ಕಾಯ್ದಿರಿಸುವ ದರ್ಜೆಗೆ ಪ್ರಯಾಣಿಕರು ಹೆಚ್ಚು ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದಾಗಿ ಹೆಚ್ಚು ಅಂತರದ ಸ್ಥಳಗಳ ನಡುವೆ ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳ ಚಾಲನೆ ಮಾಡಲಾಗುವುದು ಎಂದು ಅಧಿಕಾರಿಗಳು …

Read More »

ಅಧಿಕಾರ ಬಿಟ್ಟು ತೊಲಗಲಿ: ಪ್ರತಿಭಟನೆ

ಮಂಡ್ಯ: ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಖಂಡಿಸಿ 3ನೇ ದಿನವಾದ ಭಾನುವಾರ ಹೋಬಳಿವ್ಯಾಪ್ತಿಯ ತಗ್ಗಹಳ್ಳಿ ಜಿಲ್ಲಾ ಪಂಚಾಯತ್‌ ಕ್ಷೇತ್ರದ ಕಾಂಗ್ರೆಸ್‌ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು. ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿರುವ ಭಾರತ್‌ಪೆಟ್ರೋಲಿಯಂ ಬಂಕ್‌ ಬಳಿ ಜಮಾವಣೆಗೊಂಡಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಜನರ ಶೋಷಣೆ ಮಾಡುವುದೇ ಕೇಂದ್ರ ಹಾಗೂ ರಾಜ್ಯಸರ್ಕಾರಗಳ ನೀತಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಪ್ರತಿದಿನ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಮಾಡಿಕೊಂಡು, ಜನರ …

Read More »

ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ: ಡಿ.ಕೆ. ಸುರೇಶ್

ಚನ್ನಪಟ್ಟಣ (ಜೂನ್ 14): ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಸಂಕಷ್ಟ ಮತ್ತು ಲಾಕ್​ಡೌನ್ ಸಮಸ್ಯೆಯ ನಡುವೆಯೂ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಹೆಚ್ಚಿಸುತ್ತಲೇ ಇದೆ. ಪರಿಣಾಮ ದಿನೋಪಯೋಗಿ ವಸ್ತುಗಳ ಬೆಲೆಯೂ ಏರುತ್ತಲೇ ಇದ್ದು, ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಸತತ ವಾಗ್ದಾಳಿ ನಡೆಸುತ್ತಲೇ ಇದೆ. ಈ ನಡುವೆ ಇಂದು ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಂಸದ …

Read More »

ಖಾತಾ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ವಸತಿ ಸಮುಚ್ಚಯದ ಖಾತಾ ನೋಂದಣಿ ಸರಳೀಕರಣಗೊಳಿಸಲಾಗಿದೆ. ಸಕಾಲ ಯೋಜನೆಯಡಿ ಸೌಲಭ್ಯ ಕಲ್ಪಿಸಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ಸೂಚನೆ ನೀಡಲಾಗಿದೆ. ವಸತಿ ಸಮುಚ್ಚಯದಲ್ಲಿ ನಿವಾಸಿ ಖಾತಾ ನೋಂದಣಿಗೆ ಅರ್ಜಿ ಸಲ್ಲಿಸಿದರೆ ವಸತಿ ಸಮುಚ್ಚಯದ ಎಲ್ಲ ಘಟಕಗಳಿಗೂ ಮುನ್ಸಿಪಲ್ ಸಂಖ್ಯೆಯನ್ನು ಸೃಷ್ಟಿಸಲು ಒಂದೇ ಬಾರಿ ಕಡತ ಮಂಡಿಸಿ ಸಂಬಂಧಿತ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ತಿಳಿಸಲಾಗಿದೆ. ವಸತಿ ಸಮುಚ್ಚಯದ ಘಟಕಗಳ ಮಾಲೀಕರು ಖಾತೆ ನೋಂದಣಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಮತ್ತೊಮ್ಮೆ …

Read More »

ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!

ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ.   ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ.   ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …

Read More »

ಕರ್ನಾಟಕ; ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು, ಜೂನ್ 15; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಜೊತೆಗೆ ಸಾವಿನ ಪ್ರಮಾಣವೂ ಇಳಿಕೆಯಾಗಿದೆ. ಸೋಮವಾರ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿನ ಮರಣ ಪ್ರಮಾಣ ಶೇ 1.75. ಲಾಕ್‌ಡೌನ್ ಘೋಷಣೆ ಬಳಿಕ ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿತ್ತು. ಆದರೆ ಮರಣ ಪ್ರಮಾಣ ಕಡಿಮೆಯಾಗದಿರುವುದು ಚಿಂತೆಗೆ ಕಾರಣವಾಗಿತ್ತು. ಸರ್ಕಾರ ಸಹ ಜಿಲ್ಲಾಡಳಿತಕ್ಕೆ ಮರಣ ಪ್ರಮಾಣ ಕಡಿಮೆ ಮಾಡಲು ಸೂಚನೆಗಳನ್ನು ನೀಡಿತ್ತು.   ಸೋಮವಾರದ ವರದಿಯಂತೆ ರಾಜ್ಯದಲ್ಲಿ …

Read More »

ಟೀಂ ಇಂಡಿಯಾ ಕಟ್ಟಿದ್ದು ‘ದಾದ’ ಅಲ್ಲ, ದ್ರಾವಿಡ್: ಕುತೂಹಲ ಕೆರಳಿಸಿದ ರೈನಾ ಮಾತು

ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರ ಸುರೇಶ್ ರೈನಾ ತಮ್ಮ ಆತ್ಮಕತೆ ‘ಬಿಲೀವ್’ ಪುಸ್ತಕದಲ್ಲಿ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲೂ ಟೀಂ ಇಂಡಿಯಾ ಕಟ್ಟಿದ್ದು, ಸೌರವ್ ಗಂಗೂಲಿ, ಧೋನಿ ಅಲ್ಲ, ಬದಲಾಗಿ ರಾಹುಲ್ ದ್ರಾವಿಡ್ ಎನ್ನುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ‘ದಾದ’ ಒಬ್ಬರೇ ತಂಡ ಕಟ್ಟಿದರು ಎಂದು ನಾನೆಲ್ಲಿಯೂ ಹೇಳಿಕೊಂಡಿಲ್ಲ ಎಂದ ರೈನಾ ದ್ರಾವಿಡ್ ಬಗ್ಗೆ ವಿಶೇಷವಾಗಿ ಹೊಗಳಿದ್ದಾರೆ. ‘ರಾಹುಲ್ ನಮಗೆ ಕುಟುಂಬ ಸದಸ್ಯರಂತಿದ್ದರು. ಕಿರಿಯ ಆಟಗಾರರಿಗಾಗಿ ಯಾವತ್ತೂ …

Read More »

ನಟ ಚೇತನ್ ವಿರುದ್ಧ ಕುಣಿಗಲ್ ಠಾಣೆಯಲ್ಲಿ ದೂರು ದಾಖಲು

ತುಮಕೂರು: ಬ್ರಾಹ್ಮಣ ಸಮುದಾಯದ ವಿರುದ್ದ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ನಟ ಚೇತನ್ ವಿರುದ್ದ ಕುಣಿಗಲ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಚೇತನ್ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯದ ಗೌರವಕ್ಕೆ ಧಕ್ಕೆ ಉಂಟಾಗಿದೆ. ಅವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನ ಮಾಡಿದ್ದಾರೆ ಎಂದು ಶ್ರೀರಾಮ ಸೇವಾ ಮಂಡಳಿ ಹಾಗೂ ಬ್ರಾಹ್ಮಣ ಸಂಘ ದೂರು ನೀಡಿದೆ. ಕೂಡಲೆ ನಟ ಚೇತನ್ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.     ಅಂದ್ಹಾಗೆ …

Read More »

5 ಲಕ್ಷ ಲಂಚ ಸ್ವೀಕರಿಸಿದ್ದ ಏಎಸ್‌ಐ ಮನೆ ಮೇಲೆ ಏಸಿಬಿ ದಾಳಿ

ಬೆಂಗಳೂರು : ಲಂಚದ ಪಡೆದ ಆರೋಪದಡಿ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ದಯಾನಂದ ಸ್ವಾಮಿ ಅಮಾನತುಗೊಂಡ ಬೆನ್ನಲೇ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಮೇಲೆ 15 ಮಂದಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ‌. ಮನೆಯಲ್ಲಿ ದೊರೆತ ದಾಖಲಾತಿ ಪತ್ರಗಳನ್ನು ಪರಿಶೀಲಿಸುತ್ತಿದೆ. ಚರಾಸ್ತಿ ಹಾಗೂ ಸಿರಾಸ್ತಿ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸುಮಾರು 6 ಕೋಟಿ ರೂ. …

Read More »