Breaking News
Home / 2021 / ಜೂನ್ / 15 (page 2)

Daily Archives: ಜೂನ್ 15, 2021

ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.3.05ಕ್ಕೆ ಇಳಿಕೆ

ಬೆಂಗಳೂರು: ಕೊರೊನಾದಿಂದ ಸಂಕಷ್ಟದಿಂದ ಸಿಲುಕಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಮಧ್ಯೆ ಆತಂಕ ಸುದ್ದಿ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆ ಆಗಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಳಿಕೆ ಆಗ್ತಿದೆ. 5% ಒಳಗಡೆಯೇ ಏರಿಳಿಕೆ ಆಗ್ತಿದೆ. ನಿನ್ನೆ ಬೆಂಗಳೂರಿನಲ್ಲಿ 3.05% ಗೆ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ಕಳೆದ 10 ದಿನಗಳಿಂದ ಪಾಸಿಟಿವಿಟಿ ರೇಟ್ ಒಂದೊಂದೆ ಪರ್ಸೆಂಟ್ ಇಳಿಕೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಕಡಿಮೆ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ …

Read More »

ಬಿಎಸ್ ವೈ, ವಿಜಯೇಂದ್ರ ಸೇರಿ 6 ಜನರ ವಿರುದ್ಧ EDಗೆ ದೂರು: ಏನಿದು ಕೋಟಿ ಹಣ -ವಾಟ್ಸಪ್ ವಿವಾದ?

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ, ಪಕ್ಷದೊಳಗಿನ ಬಿಕ್ಕಟ್ಟು, ಕೋವಿಡ್ ನಿರ್ವಹಣೆ ನಡುವೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರು ದುರುಪಯೋಗ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಸೇರಿ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಗೆ ದೂರು ನೀಡಲಾಗಿದೆ. ಟಿ.ಜೆ.ಅಬ್ರಾಹಂ ಎನ್ನುವವರು ದೂರು ನೀಡಿದ್ದು, ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಮನವಿ …

Read More »

ದೆಹಲಿ ಕೋಮು ಗಲಭೆ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್‌ ಜಾಮೀನು

ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ. ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿದ್ದರು. …

Read More »

ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತದೆ: ಶಶಿಕಲಾ ಜೊಲ್ಲೆ

ಹಾವೇರಿ: ರಾಜ್ಯದಲ್ಲಿ ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರೆಯುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ  ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆಯೂ ನಮ್ಮ ಸರ್ಕಾರವೆ ಅಧಿಕಾರಕ್ಕೆ ಬರುತ್ತದೆ. ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತವೆ. ಅದರಂತೆ ಪಕ್ಷದಲ್ಲಿ ಏನಾದರೂ ಆಗಿರಬಹುದು. ಪಕ್ಷದ ಹಿರಿಯರು ಅವುಗಳನ್ನ …

Read More »

ಬೆಳಗಾವಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಯುವಕರ ಗುಂಪು….

ಬೆಳಗಾವಿ- ನಿನ್ನೆ ರಾತ್ರಿ ಹೊತ್ತು,ಅಟೋ ರಿಕ್ಷಾದಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ಯುವಕರಿಗೆ ಮನೆಗೆ ಹೋಗುವಂತೆ ಸೂಚಿಸಿದ ಪೋಲೀಸ್ ಪೇದೆಗಳ ಮೇಲೆ ಯುವಕರ ಗುಂಪೊಂದು ದಾಳಿ ಮಾಡಿದ ಘಟನೆ ಬೆಳಗಾವಿ ದರ್ಬಾರ್ ಗಲ್ಲಿಯಲ್ಲಿ ನಡೆದಿದೆ. ಪೋಲೀಸರು ಬರುತ್ತಿದ್ದಂತೆಯೇ ರಿಕ್ಷಾದಲ್ಲಿದ್ದ ಕೆಲವು ಯುವಕರು ಮನೆಗೆ ಹೋಗಿದ್ದಾರೆ,ಆದ್ರೆ ಇಬ್ಬರು ಯುವಕರು ಪೋಲೀಸರ ಜೊತೆ ವಾದಕ್ಕಿಳಿದು,ಪೋಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಇಬ್ಬರು ಯುವಕರು ಪೋಲೀಸರ ಜೊತೆ ವಾದ ಶುರು ಮಾಡುತ್ತಿದ್ದಂತೆಯೇ,ಅಲ್ಲಿ ಯುವಕರ ಗುಂಪು ಜಮಾವಣೆಯಾಗಿದೆ.ಎಲ್ಲರೂ ಸೇರಿ …

Read More »

ಇಂಧನ ಟ್ಯಾಂಕರ್ ಓಡಿಸುವ ಮಲಯಾಳಿ ಹುಡುಗಿ: ಭೇಷ್ ಎನ್ನುತ್ತಿರುವ ನೆಟ್ಟಿಗರು

ಕಳೆದ ಮೂರು ವರ್ಷಗಳಿಂದ ನಾನು ಟ್ಯಾಂಕರ್ ಲಾರಿಯನ್ನು ಓಡಿಸುತ್ತಿರುವುದನ್ನು ಯಾರೂ ನೋಡಿಲ್ಲ ಎಂಬುದನ್ನು ನನಗೆ ನಂಬಲಿಕ್ಕೇ ಆಗುವುದಿಲ್ಲ’ ಎಂದು ನಗುತ್ತಾಳೆ ಡೆಲಿಶಾ ಡೇವಿಸ್. ಕೇರಳದ ತ್ರಿಶೂರ್ ಜಿಲ್ಲೆಯ ಕಂದಸಂಕದವು ಎಂಬಲ್ಲಿನ 23 ವರ್ಷ ವಯಸ್ಸಿನ ಯುವತಿ, ಕೆಲವು ವಾರಗಳ ಹಿಂದೆ ಎರ್ನಾಕುಲಂನ ಇರುಂಪನಮ್‍ನ ಹಿಂದುಸ್ಥಾನ್ ಪೆಟ್ರೋಲಿಯಂ ಎಲ್‍ಪಿಜಿ ಪ್ಲಾಂಟ್‍ನಿಂದ ಮಲಪ್ಪುರಂ ಜಿಲ್ಲೆಯ ತಿರೂರ್‌ಗೆ ಟ್ಯಾಂಕರ್ ಓಡಿಸುವ ಮೂಲಕ ಸುದ್ದಿ ಮಾಡಿದ್ದರು.   ‘ಸಾಮಾನ್ಯವಾಗಿ, ಡೀಸೆಲ್ ಅಥವಾ ಪೆಟ್ರೋಲ್ ತೆಗೆದುಕೊಂಡು ಹೋಗುವ …

Read More »

ರವೀಂದ್ರ ಕಲಾಕ್ಷೇತ್ರಕ್ಕೆ ಬಂದ ವಿಜಯ್​ ಪಾರ್ಥಿವ ಶರೀರ, ಸ್ನೇಹಿತನ ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ​ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದರು. ಬೆಳಗ್ಗೆ 8ಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣಕ್ಕೆ ವಿಜಯ್​ ಅವರ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದು ಬೆಳಗ್ಗೆ 10.30ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್​ರ ಅಂತಿಮ ದರ್ಶನಕ್ಕೆ ಸರ್ಕಾರದ ಕಡೆಯಿಂದಲೇ ವ್ಯವಸ್ಥೆ ಮಾಡಲಾಗಿದ್ದು, ನಂತರ ಹುಟ್ಟೂರು ಚಿಕ್ಕಮಗಳೂರಿನ ಕಡೂರು …

Read More »

ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನದ ಟೈರ್ ಸ್ಫೋಟ

ಹುಬ್ಬಳ್ಳಿ:ಕಣ್ಣೂರುನಿಂದ ಆಗಮಿಸಿದ್ದ ಇಂಡಿಗೋ ವಿಮಾನ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ಟೈರ್ ಸ್ಫೋಟ ಗೊಂಡ ಘಟನೆ, ಸೋಮವಾರ ರಾತ್ರಿ8:30ರ ಸುಮಾರಿಗೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. 15 ಪ್ರಯಾಣಿಕರನ್ನು ಹೊತ್ತುಕೊಂಡು ಬಂದಿದ್ದ ವಿಮಾನವನ್ನು, ಪೈಲಟ್‌ ಮೊದಲು ರನ್ ವೇ ದಲ್ಲಿ ಇಳಿಸಲು ಪ್ರಯತ್ನಿಸಿದ್ದಾನೆ. ಆಗದಿಂದಾಗ ಎರಡನೇ ಬಾರಿ ಇಳಿಸಲು ಯತ್ನಿಸಿದಾಗ ಟಾಯರ್ ಬ್ಲಾಸ್ಟ್ ಆಗಿದೆ ಎಂದು ಮೂಲಗಳು ತಿಳಿಸಿವೆ. ಕಣ್ಣೂರಿನಿಂದ ಆಗಮಿಸಿದ್ದ ವಿಮಾನ ನಂತರ ಬೆಂಗಳೂರಿಗೆ …

Read More »

ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್​ಡೇಟ್​ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ …

Read More »

ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿ

ಹಾವೇರಿ: ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಾದ ಇಸ್ಪೀಟ್‌, ಓಸಿ, ಗಾಂಜಾ ಎಗ್ಗಿಲ್ಲದೇ ನಡೆಯುತ್ತಿವೆ. ಕೂಡಲೇ ಅವುಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, ‘ಹಾವೇರಿ ಜಿಲ್ಲೆ ನಾಡಿನ ಹೆಸರಾಂತ ಸಂತ ಶರಣರ ಹಾಗೂ ಸಾಹಿತಿಗಳ ನೆಲೆಬೀಡಾಗಿದೆ. ಇಂತಹ ನೆಲದಲ್ಲಿ ಅಕ್ರಮ ಚಟುವಟಿಕೆಗಳು …

Read More »