Breaking News
Home / 2021 / ಜೂನ್ / 16 (page 3)

Daily Archives: ಜೂನ್ 16, 2021

ಲಕ್ಷಾಂತರ ರೂ.ಮೌಲ್ಯದ ನಕಲಿ ರಸಗೊಬ್ಬರ ಸಾಗಾಣಿಕೆ: ಪೊಲೀಸರು-ಅಧಿಕಾರಿಗಳ ದಾಳಿ

ಗಂಗಾವತಿ: ನಕಲಿ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮಾರಾಟ ಪ್ರಕರಣಗಳು ಹೆಚ್ಚುತ್ತಿದ್ದು ,ಗಂಗಾವತಿಯಲ್ಲಿ ಕೃಷಿ ಜಾಗೃತದಳ ಹಾಗೂ ಪೊಲೀಸರು ದಾಳಿ ನಡೆಸಿ ಸುಮಾರು 300 ಚೀಲ (15 ಟನ್) ಜೈಕಿಸಾನ್ ರಸಗೊಬ್ಬರದ ಚೀಲಗಳಲ್ಲಿ ತುಂಬಿದ್ದ ಡಿಎಪಿ ರಸಗೊಬ್ಬರ ವಶಕ್ಕೆ ಪಡೆದು ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೃಷಿ ಜಾಗೃತ ದಳದ ಅಧಿಕಾರಿಗಳಾದ ಎಡಿಎ ಸಂತೋಷ ಪಟ್ಟದಕಲ್ಲು, ತಾಂತ್ರಿಕ ಅಧಿಕಾರಿ ಲಿಂಗಪ್ಪ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದಲ್ಲಿ …

Read More »

ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ

ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು.     ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ …

Read More »

ಮಲೇರಿಯಾ ವಿರೊಧಿ ಮಾಸಚಾರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮ.

      ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ತಾಲೂಕ ಆರೊಗ್ಯ ಅಧಿಕಾರಿಗಳ ಕಛೇರಿಯ ಸಭಾ ಭವನದಲ್ಲಿ ರಾಷ್ರ್ಟೀಯ ರೋಗವಾಹಕ ಆಶ್ರಿತ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿ ಅರ್ಚನಾ ಕುಲಕರ್ಣಿ ಮಾತನಾಡಿ.ಡೆಂಗ್ಯೂ ರಕ್ತದ ಸಗ್ರಹ 238 ಜನರಿಗೆ ಮಾಡಲಾಗಿದ್ದು ಅದರಲ್ಲಿ ಖಚಿತ ಪ್ರಕರಣ16 ಚಿಕನಗುನ್ಯಾ ರಕ್ತದ ಮಾದರಿ ಸಂಗ್ರಹ63 ತಾಲೂಕಿನಲ್ಲಿ …

Read More »

17 ಜನರ ತ್ಯಾಗದಿಂದಲೇ ಈಶ್ವರಪ್ಪ ಸಚಿವರಾಗಿದ್ದು: ಬಿ.ಸಿ.ಪಾಟೀಲ

ಮೈಸೂರು: ಬಿಜೆಪಿಗೆ ಹೊರಗಿನಿಂದ ಬಂದ 17 ಮಂದಿಯ ತ್ಯಾಗದಿಂದಲೇ ತಾವು ಸಚಿವರಾಗಿರುವುದು ಎಂಬುದನ್ನು ಕೆ.ಎಸ್.ಈಶ್ವರಪ್ಪ ಮರೆಯಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.‌ ಇಲ್ಲಿನ ಸುತ್ತೂರು ಮಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.‌ ಹೊರಗಿನಿಂದ ಬಂದ 17 ಮಂದಿಯಿಂದ ಬಿಜೆಪಿಯಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಈಶ್ವರಪ್ಪ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅವರು ಆ ರೀತಿ ಹೇಳಿದ್ದರೆ, ಈ 17 ಮಂದಿಯಿಂದಲೇ …

Read More »

ವೇರ್ ಈಸ್ ಪಿಂಕಿ’ ನಟನೆಗಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಅಕ್ಷತಾ

ರಂಗಭೂಮಿ ಕಲಾವಿದೆ, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ವೇರ್ ಈಸ್ ಪಿಂಕಿ’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ನ್ಯೂಯಾರ್ಕ್‌ನ ಇಂಡಿಯನ್ ಫಿಲಂ ಫೆಸ್ಟಿವಲ್‌ನಲ್ಲಿ ‘ವೇರ್ ಈಸ್ ಪಿಂಕಿ’ (ಪಿಂಕಿ ಎಲ್ಲಿ) ಚಿತ್ರಕ್ಕೆ ಎರಡು ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ನಟಿ ವಿಭಾಗದಲ್ಲಿ ವಿಶೇಷ ಗಮನ ಸೆಳೆದಿದೆ.   ಈ ಕುರಿತು ಅಕ್ಷತಾ ಪಾಂಡವಪುರ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ …

Read More »

ಮೈಕ್ರೊಸಾಫ್ಟ್‌ ಎಡ್ಜ್‌ ಬದಲಾವಣೆಗಳೊಂದಿಗೆ

ಬ್ರೌಸರ್‌ ಎಂದ ಕೂಡಲೇ ಹಲವರಿಗೆ ನೆನಪಾಗುವುದು ಗೂಗಲ್‌ ಕ್ರೋಮ್‌ ಹಾಗೂ ಮೊಜಿಲ್ಲಾ ಫೈರ್‌ಫಾಕ್ಸ್‌. ಈ ವಿಷಯದಲ್ಲಿ ಹಿಂದೆ ಉಳಿದಿದ್ದ ಮೈಕ್ರೊಸಾಫ್ಟ್‌ ತನ್ನ ಬ್ರೌಸರ್‌ ಲೋಪಗಳನ್ನು ಸರಿಪಡಿಸಿ ಹಲವು ವೈಶಿಷ್ಟ್ಯಗಳನ್ನು ಸೇರಿಸಿದೆ. ಅಂತರ್ಜಾಲದಲ್ಲಿ ಮಾಹಿತಿಯನ್ನು ಕಲೆ ಹಾಕುವುದಕ್ಕೆ, ಯಾವುದಾದರೂ ಸೇವೆ ಪಡೆಯುವುದಕ್ಕೆ – ಹೀಗೆ ಹಲವು ನಿತ್ಯಕೆಲಸಗಳಿಗೆ ಬ್ರೌಸರ್‌ಗಳು ನೆರವಾಗುತ್ತಿವೆ. ಆದರೆ ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ನಿಖರವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಕಡಿಮೆ ಮೊಮೊರಿ ಹಾಗೂ ಪ್ರೊಸೆಸರ್‌ ಶಕ್ತಿಯನ್ನು ಕಡಿಮೆ …

Read More »

K.L.E. ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನ

ಬೆಳಗಾವಿ: ಐಡಿಯಾ ಅಭಿವೃದ್ಧಿ, ಮೌಲ್ಯಮಾಪನ ಮತ್ತು ಪ್ರಯೋಗಾಲಯ ಸ್ಥಾಪಿಸಲು ಇಲ್ಲಿನ ಕೆಎಲ್‌ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನವನ್ನು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಮಂಜೂರು ಮಾಡಿದೆ. ‘ರಾಷ್ಟ್ರ ಮಟ್ಟದ ಅತ್ಯಂತ ಕಠಿಣ ಆಯ್ಕೆ ಪ್ರಕ್ರಿಯೆಯಲ್ಲಿ 210 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 49 ಕಾಲೇಜುಗಳಿಗೆ ಮಾತ್ರ ಇಷ್ಟು ದೊಡ್ಡ ಪ್ರಮಾಣದ ಅನುದಾನ ಲಭಿಸಿದೆ. ಇದು ನಮ್ಮ ಕಾಲೇಜು ನಿರ್ವಹಿಸುವ ಗುಣಮಟ್ಟದ ಮಾನದಂಡಗಳನ್ನು ಸಾಬೀತುಪಡಿಸಿದೆ’ …

Read More »

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – ಅಗ್ನಿಶಾಮಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಅಗ್ನಿಶಾಮಕ ಅಧಿಕಾರಿಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ನೋಂದಣಿ-ಕಮ್-ಅಪ್ಲಿಕೇಶನ್ ಜೂನ್ 15, 2021 ರಿಂದ ಪ್ರಾರಂಭವಾಗಿದ್ದು ಜೂನ್ 28, 2021 ರಂದು ಮುಕ್ತಾಯಗೊಳ್ಳುತ್ತದೆ. ಎಸ್‌ಬಿಐ ಅಗ್ನಿಶಾಮಕ ಅಧಿಕಾರಿ ಉದ್ಯೋಗ 2021 ಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐ ಎಸ್‌ಒ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಡಿಸೆಂಬರ್ 31, 2020 ರ …

Read More »

ಸಾರಿಗೆ ನೌಕರರ ಕೂಟದಲ್ಲಿ ಒಡಕು, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತಿರುಗಿಬಿದ್ದ ಪದಾಧಿಕಾರಿಗಳು

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ರಾಜ್ಯದ್ಯಂತ ನಡೆಸಿದ್ದ ಮುಷ್ಕರ ಯಾವುದೇ ಪ್ರಯೋಜನವಿಲ್ಲದೇ ತಾರ್ಕಿಕ ಅಂತ್ಯ ಕಂಡಿದೆ. ಸಾರಿಗೆ ನೌಕರರ ಕೂಟದಲ್ಲಿ ಒಡಕುಮೂಡಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಕೆಲವು ಪದಾಧಿಕಾರಿಗಳು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು, ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೆಲವು ಪದಾಧಿಕಾರಿಗಳು ತಿರುಗಿಬಿದ್ದಿದ್ದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅಧ್ಯಕ್ಷ ಚಂದ್ರು ಅವರ ಏಕಪಕ್ಷೀಯ ನಿರ್ಧಾರದಿಂದ …

Read More »

ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ನಿರ್ಮಾಣ: ಡಿಸಿಎಂ ಸವದಿ

ಬೆಂಗಳೂರು: ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಅವಶ್ಯಕತೆ ಇರುವಂತಹ ಯಂತ್ರ ಹಾಗೂ ಸಾಮಾಗ್ರಿಗಳು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು …

Read More »