Daily Archives: ಜೂನ್ 19, 2021

ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್,ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ

ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, …

Read More »

ಸರ್ಕಾರ ಕೈ ಬಿಟ್ಟರೂ,,,ತನ್ನ ಕುಲ ಭಾಂದವರ ಕೈ ಹಿಡಿದ ಸಹೋದರರು..!!

ಬೆಳಗಾವಿ : ಕೋವಿಡ್ ಮಹಾಮಾರಿಗೆ ಹೆದರಿ ಜನರು ತಮ್ಮ ಮನೆಗಳಿಂದ ಹೊರಗೆ ಬರಲು ಹಿಂದೆ ಮುಂದೆ ನೋಡುತ್ತಿರುವ ಈಗಿನ ಪರಿಸ್ಥಿತಿಯಲ್ಲಿ ಮೇದಾರ ಸಮಾಜದ ಹಿತೈಸಿಗಳಾದ ನಾಗೇಶ ಹಾಗೂ ಅರ್ಜುನ ಕಡೋಲಿ ಸಹೋದರರು ಕೊರೋನಾಗೂ ಹೆದರದೆ ತಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡ ಹಾಗೆ ಓಡಾಡಿ ಬಡತನದ ಅಲೆಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸುತ್ತಿದ್ದಾರೆ.ಕಳೆದ ಕೆಲ ದಿನಗಳಿಂದ ಬೆಳಗಾವಿ ಜಿಲ್ಲೆಯ ವಿವಿಧ ಊರುಗಳಿಗೆ ಭೇಟಿ ನೀಡಿ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

‘ನಿನ್ನ ಮೇಲೆ ಯಾರು ಕೇಸ್ ಹಾಕ್ತಾರೋ?’ ಅಶೋಕ್, ಸವದಿಗೆ ಸಿಎಂ ಪಾಠ ಹೇಗಿತ್ತು ಗೊತ್ತಾ..?

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಕುರಿತು ಇಂದು ಸುದ್ದಿಗೋಷ್ಠಿ ಮುಗಿಸಿ ಹೊರಡುವ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪಾಠ ಮಾಡಿದ ವಿಶೇಷ ಸನ್ನಿವೇಶ ನಡೆಯಿತು. ಈ ವೇಳೆ ಸಿಎಂ ಬಿಎಸ್​ವೈ ಜಾಲಿ ಮೂಡ್​​ನಲ್ಲಿದ್ದಂತೆ ಕಂಡುಬಂದರು.. ಸಿಎಂ ಬಿಎಸ್​ವೈ, ಆರ್ ಅಶೋಕ್ ಹಾಗೂ ಸವದಿ ನಡುವಿನ ಮಾತುಕತೆ ಹೀಗಿತ್ತು.. ಸಿಎಂ :- ಅಶೋಕ್ ಎಲ್ಲಿಗೆ ಹೋಗ್ತಾಯಿದ್ಯಾ?. ಅಶೋಕ್ :- ಸಾರ್ …

Read More »

ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್​ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ​ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …

Read More »

‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಅರುಣ್​ ಸಿಂಗ್ ಬೆಂಗಳೂರು ಭೇಟಿ: HDK ಟ್ವೀಟ್

ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಬೆಂಗಳೂರು ಭೇಟಿ ಬಗ್ಗೆ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಎಂದಿದ್ದಾರೆ. ಇವರು ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ?ಪ್ರಧಾನಿ ಮೋದಿ ಪೌರುಷವೇನಿದ್ದರೂ ಪಾಕ್​ …

Read More »

ವೇದಗಂಗಾ ನದಿಯಲ್ಲಿ ಕೊಚ್ಚಿಹೋಗಿ ಮರ ಹತ್ತಿ ಕುಳಿತಿದ್ದ ಯುವಕನನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸಿದ್ನಾಳ ಗ್ರಾಮದ ಬಳಿ ವೇದಗಂಗಾ ನದಿ ದಾಟುತ್ತಿದ್ದಾಗ ಕೊಚ್ಚಿಹೋಗಿದ್ದ ಯುವಕನನ್ನು ಸತತ 5 ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಎನ್​ಡಿಆರ್​ಎಫ್​ ತಂಡ ರಕ್ಷಣಾ ಕಾರ್ಯಾಚರನೆ ನಡೆಸುತ್ತಿದ್ದರೂ ಸ್ಥಳೀಯರೇ ನದಿಯಲ್ಲಿ ಕೊಚ್ಚಿಹೋಗಿದ್ದ ದಿಗ್ವಿಜಯ್ ಕುಲಕರ್ಣಿ ಎಂಬ ಯುವಕನ್ನು ರಕ್ಷಿಸಿದ್ದಾರೆ. ಸೇತುವೆ ಮೇಲೆ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಯತ್ನಿಸಿದ್ದ ಯುವಕ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ. ನದಿಯ ಮಧ್ಯೆ …

Read More »

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆ

ಬೆಳಗಾವಿ- ಇನ್ನು ಮುಂದೆ ಬೆಳಗಾವಿಯಲ್ಲಿ ಎಂದಿಗೂ ಆಕ್ಸೀಜನ್ ಸಮಸ್ಯೆ ಎದುರಾಗುವದಿಲ್ಲ,ಯಾಕಂದ್ರೆ ಶಾಸಕ ಅಭಯ ಪಾಟೀಲ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ.ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆಯಾಗಿದೆ. ಬೆಳಗಾವಿಯಲ್ಲಿ ಆಮ್ಲಜನಕ ಕೊರತೆನ್ನು ಗಮನಿಸಿದ ಶಾಸಕ, ಅಭಯ ಪಾಟೀಲ ರವರು ಆಮ್ಲಜನಕ ತಯಾರಿಕಾ ಘಟವನ್ನು ಸ್ಥಾಪಿಸುವಂತೆ ಎಲ್&ಟಿ ಕಂಪನಿಯ ಅವರಿಗೆ ವೈಯಕ್ತಿಕವಾಗಿ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿರುವ L&T ಕಂಪನಿ ನಿಗದಿತ ಅವಧಿಯಲ್ಲಿ ಆಮ್ಲಜನಕ. …

Read More »

ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ- ಗೋಕಾಕ್ ಜಲಪಾತಕ್ಕೆ ಜೀವ ಕಳೆ

ಬೆಳಗಾವಿ: ಘಟ್ಟ ಪ್ರದೇಶ ಸೇರಿ ಜಿಲ್ಲೆಯ ಹಲವೆಡೆ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ನದಿ, ಹಳ್ಳ, ಕೆರೆಗಳು ಮೈದು0ಬಿವೆ. ಮೂರು ದಿನಗಳ ಮಳೆಗೆ ಗೋಕಾಕ್ ಜಲಪಾತಕ್ಕೆ ಸಹ ಜೀವ ಕಳೆ ಬಂದಿದ್ದು, ಧುಮ್ಮಿಕ್ಕಿ ಹರಿಯುತ್ತಿದೆ. ಕರ್ನಾಟಕದ ನಯಾಗರ ಎಂದೇ ಕರೆಯಲಾಗುವ ಗೋಕಾಕ್ ಜಲಪಾತ ಈಗ ಧುಮ್ಮಿಕ್ಕುತ್ತಿದ್ದು, ಕಣ್ಮನ ಸೆಳೆಯುತಿದ್ದೆ. ಘಟಪ್ರಭಾ ನದಿಯ ಸೌಂದರ್ಯ ಗೋಕಾಕ್ ಜಲಪಾತದಲ್ಲಿ ಗರಿಬಿಚ್ಚಿದೆ. ಸುತ್ತಲೂ ಹಚ್ಚ ಹಸಿರು ನಡುವೆ ನೀರ ಧಾರೆಯ ಸೊಬಗು, …

Read More »

ಸಿಎಂ ಸ್ಥಾನದ ರೇಸ್ ನಲ್ಲಿ ನಮ್ಮ ಮೂರು ಹುಲಿಗಳಿವೆ ಎಂದ ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀ

ದಾವಣಗೆರೆ: ಸಿಎಂ ಸ್ಥಾನದ ರೇಸ್ ನಲ್ಲಿ ನಮ್ಮ ಮೂರು ಹುಲಿಗಳಿವೆ ಎಂದು ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಒಂದು ವೇಳೆ ನಾಯಕತ್ವ ಬದಲಾವಣೆ ಮಾಡಿದರೆ ಉತ್ತರ ಕರ್ನಾಟಕದ ಲಿಂಗಾಯತ ನಾಯಕರಿಗೆ ಮಾನ್ಯತೆ ನೀಡಲು ಕೇಳಿದ್ದೇನೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಉತ್ತರ ಕರ್ನಾಟಕದವರೇ ಸಿಎಂ ಆದ್ರೆ ಸೂಕ್ತ ಎಂದು ತಿಳಿಸಿದರು. …

Read More »