ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಪ್ಪಳಿಸುವುದು ಖಚಿತ ಎಂದು ಎಚ್ಚರಿಸಿರುವ ತಜ್ನರು ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಮೂರನೇ ಅಲೆ ಆರಮ್ಭವಾಗಲಿದ್ದು, ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಕ್ಕಳಿಗಾಗಿಯೇ ಪ್ರತ್ಯೇಕವಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. * 5 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಪರಿಣಾಮಗಳು ಕಡಿಮೆ. ಆದರೆ 6-11 ವರ್ಷದ ಮಕ್ಕಳು ಮಾಸ್ಕ್ ಧರಿಸುವುದು ಉತ್ತಮ * 12 ವರ್ಷ ಮೇಲ್ಪಟ್ಟ …
Read More »Daily Archives: ಜೂನ್ 19, 2021
ಲಾಕ್ಡೌನ್ ನಿಯಮ ಉಲ್ಲಂಘನೆ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು, ಜೂ.18: ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶವಿಲ್ಲ ಎಂದರೆ ಯಾರಿಗೂ …
Read More »ನೀರಾವರಿ ಟೆಂಡರ್ ₹2000 ಕೋಟಿ ಕಿಕ್ ಬ್ಯಾಕ್ ಆರೋಪ ತನಿಖೆಯಾಗಲಿ: ಎಚ್ಡಿಕೆ
ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದಾಗ ನನ್ನ ಮೇಲೆ ಬಿಜೆಪಿ ನಾಯಕರು ಮಾಡಿರುವ ಗಣಿ ಲಂಚ ಆರೋಪ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತಕ್ಕೆ ನೀಡಿ ಪಾರದರ್ಶಕತೆ ಮೆರೆದಿದ್ದೆ. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ ಸ್ವಪಕ್ಷೀಯರಿದಂಲೇ ₹2000 ಕೋಟಿ ನೀರಾವರಿ ಕಿಕ್ಬ್ಯಾಕ್ ಆರೋಪ ಮಾಡಲಾಗಿದೆ. ಈ ಕುರಿತು ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, …
Read More »ದೆಹಲಿಗೆ ಬರುವಂತೆ BSYಗೆ ವರಿಷ್ಠರ ಬುಲಾವ್
ಬೆಂಗಳೂರು,ಜೂ.19-ಮೇಲ್ನೋಟಕ್ಕೆ ಪರಿಸ್ಥಿತಿ ಕೊಂಚ ಸುಧಾರಿಸಿದೆ ಎಂದು ಹೇಳಲಾಗುತ್ತಿದ್ದರೂ ನಾಯಕತ್ವ ಕುರಿತಂತೆ ಎದ್ದಿರುವ ವಿವಾದಕ್ಕೆ ಅಂತಿಮ ಹಾಡಲು ಕೇಂದ್ರ ವರಿಷ್ಠರು ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಲಿದ್ದಾರೆ. ಈ ವಾರದ ನಂತರ ಪರಿಸ್ಥಿತಿ ನೋಡಿಕೊಂಡು ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಗೆ ಆಗಮಿಸುವಂತೆ ಸಿಎಂಗೆ ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಮೂರು ದಿನಗಳ ಪ್ರವಾಸಕ್ಕೆ …
Read More »ಅರುಣ್ ಸಿಂಗ್ ಬಂದುಹೋದ ಬಳಿಕ ಜಾಲಿ ಮೂಡ್ ನಲ್ಲಿದ್ದಾರೆ ಸಿಎಂ ಯಡಿಯೂರಪ್ಪ
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿದ ಕಾರಣ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿ ಮೂರು ದಿನ ಚರ್ಚೆ ಮಾಡಿ ಹೋಗಿದ್ದಾರೆ. ಕೆಲವು ಶಾಸಕರ ಜೊತೆ ವೈಯಕ್ತಿಕವಾಗಿ ಮಾತನಾಡಿರುವ ಅರುಣ್ ಸಿಂಗ್ ಸದ್ಯ ದೆಹಲಿಗೆ ತೆರಳಿದ್ದಾರೆ. ಆದರೆ ಇದಾದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಲಿ ಮೂಡ್ ನಲ್ಲಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ ತೆರಳುವಾಗ ಸಚಿವ ಅಶೋಕ್ ಗೆ “ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದರು. ಇದಕ್ಕೆ ‘ಸರ್, …
Read More »ಕೋವಿಡ್ 3ನೇ ಅಲೆ ಅಪಾಯ: ಲಾಕ್ ಡೌನ್ ಸಡಿಲಿಕೆ ಮುನ್ನ ಎಚ್ಚರವಹಿಸಿ: ರಾಜ್ಯಗಳಿಗೆ ಕೇಂದ್ರ
ನವದೆಹಲಿ: ಕೋವಿಡ್ 19 ಸೋಂಕು ಹಾಗೂ ಸಕ್ರಿಯ ಪ್ರಕರಣಗಳ ಇಳಿಕೆಯ ಆಧಾರದ ಮೇಲೆ ಕೋವಿಡ್ ಲಾಕ್ ಡೌನ್ ನಿರ್ಬಂಧಗಳನ್ನು ಐದು ಹಂತಗಳಲ್ಲಿ ಸಡಿಲಿಕೆ ಮಾಡಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶನಿವಾರ(ಜೂನ್ 19) ಸಲಹೆ ನೀಡಿದೆ. ರಾಜ್ಯ ಸರ್ಕಾರಗಳು ಕೋವಿಡ್ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡುವ ಜತೆಗೆ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, ಲಸಿಕೆ …
Read More »ರಾಹುಲ್ ಗಾಂಧಿ ಜನ್ಮದಿನಕ್ಕೆ ಒಂದೇ ವಾಕ್ಯದಲ್ಲಿ ರಮ್ಯಾ ವಿಶ್; ಆ ಮಾತು ನೀವು ಒಪ್ಪುತ್ತೀರಾ?
ನಟಿ ರಮ್ಯಾ ಈಗ ಸ್ಯಾಂಡಲ್ವುಡ್ನಲ್ಲೂ ಇಲ್ಲ, ರಾಜಕೀಯದಲ್ಲೂ ಇಲ್ಲ. ಹಾಗಿದ್ದರೂ ಕೂಡ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಸದಾ ಕಾಲ ಆಯಕ್ಟೀವ್ ಆಗಿರುತ್ತಾರೆ. ರಾಜಕೀಯ ಮತ್ತು ಸಿನಿಮಾ ಕ್ಷೇತ್ರದಲ್ಲಿನ ತಮ್ಮ ಆತ್ಮೀಯರ ಹುಟ್ಟುಹಬ್ಬಕ್ಕೆ ವಿಶ್ ಮಾಡುತ್ತಾರೆ. ಇಂದು (ಜೂ.19) ರಾಹುಲ್ ಗಾಂಧಿ ಜನ್ಮದಿನಕ್ಕೆ ರಮ್ಯಾ ಶುಭ ಕೋರಿದ್ದಾರೆ. ಅದು ಅನೇಕರ ಗಮನ ಸೆಳೆಯುತ್ತಿದೆ. ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ರಾಹುಲ್ ಗಾಂಧಿಗೆ ರಮ್ಯಾ ವಿಶ್ ಮಾಡಿದ್ದಾರೆ. …
Read More »ನೀವು ಸದಾ ಜೀವಂತವಾಗಿರುತ್ತೀರಿ’; ಮಿಲ್ಖಾ ಸಿಂಗ್ ನಿಧನಕ್ಕೆ ಫರ್ಹಾನ್ ಅಖ್ತರ್ ಸಂತಾಪ
ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ಅವರು ಶುಕ್ರವಾರ (ಜೂ.18) ಮಧ್ಯರಾತ್ರಿ ನಿಧನರಾದರು. ಅವರ ಅಗಲಿಕೆಗೆ ಲಕ್ಷಾಂತರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮಿಲ್ಖಾ ಸಿಂಗ್ ಜೀವನವನ್ನು ಆಧರಿಸಿ ‘ಭಾಗ್ ಮಿಲ್ಖಾ ಭಾಗ್’ ಸಿನಿಮಾ ತಯಾರಾಗಿತ್ತು. 2013ರಲ್ಲಿ ಬಂದ ಆ ಸಿನಿಮಾದಲ್ಲಿ ಮಿಲ್ಖಾ ಸಿಂಗ್ ಪಾತ್ರವನ್ನು ಫರ್ಹಾನ್ ಅಖ್ತರ್ ಮಾಡಿದ್ದರು. ಆ ಚಿತ್ರಕ್ಕೆ ರಾಕೇಶ್ ಓಂಪ್ರಕಾಶ್ ಮೆಹ್ರಾ ನಿರ್ದೇಶನ ಮಾಡಿದ್ದರು. ಬಾಕ್ಸ್ ಆಫೀಸ್ನಲ್ಲಿ …
Read More »ಕಲಾವಿದರ ಸಂಘದಲ್ಲಿ .ವಿಷ್ಣು ಹೆಸರು ಹಾಕದೆ ಅಗೌರವ ; ನಟ ಅನಿರುಧ್ ಬೇಸರ
ಬೆಂಗಳೂರು: ಕಲಾವಿದರ ಸಂಘದಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಹೆಸರನ್ನು ಹಾಕದೆ ಅಗೌರವ ನೀಡಲಾಗಿದೆ ಎಂದು ವಿಡಿಯೋ ಮೂಲಕ ನಟ ಅನಿರುಧ್ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಡಾ.ರಾಜ್ಕುಮಾರ್ ಭವನ, ಅಂಬರೀಷ್ ಆಡಿಟೋರಿಯಂ ಇದೆ. ಈ ಎರಡೂ ಹೆಸರನ್ನು ನೋಡಿದಾಗ ನನಗೆ ತುಂಬಾ ಸಂತೋಷ ಆಯ್ತು. ಈ ಬಗ್ಗೆ ನನಗೆ ಗೌರವ ಇದೆ. ಆದರೆ ವಿಷ್ಣು ಅಪ್ಪಾಜಿಗೂ ಅಲ್ಲಿ ಸ್ಥಾನ ನೀಡಿದ್ದರೆ ಚೆನ್ನಾಗಿರುತ್ತಿತ್ತು. ನಾನು …
Read More »ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ ಎಂದ ಜಿಲ್ಲಾಧಿಕಾರಿ,ವಿವಿಧ ಜಿಲ್ಲೆಗಳ ಜೊತೆ ಸಂವಾದ ನಡೆಸಿದ B.S.Y.
ಬೆಳಗಾವಿ : ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಎಂದು ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಸಚಿವರು ತಿಳಿಸಿದ್ದಾರೆ. ಇದರಿಂದ ಪ್ರವಾಹ ಸ್ಥಿತಿಯ ಸಮರ್ಪಕ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಪ್ರವಾಹ ಸಿದ್ಧತೆ ಕುರಿತು ಬೆಳಗಾವಿ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ (ಜೂ.19) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜಲಾಶಯಗಳಿಂದ ನೀರು ಬಿಡುಗಡೆ ಕುರಿತ …
Read More »