ವಿಜಯಪುರ: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 50 ಕೆಜಿ ಗಾಂಜಾ ಸಹಿತ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಾಗಠಾಣ ಗ್ರಾಮದಲ್ಲಿ ದಾಳಿ ನಡೆಸಿ ಮಂಜುನಾಥ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.
Read More »Daily Archives: ಜೂನ್ 28, 2021
ಹದಿನೇಳು ದಿನಗಳ ಅಂತರದಲ್ಲಿ ಮದುವೆಯಾದ ಇಬ್ಬರು ಹೆಣ್ಣುಮಕ್ಕಳು ಗಂಡನ ಮನೆಯಲ್ಲಿ ಸಾವು!
ಹಾಸನ: ಅದೊಂದು ಬಡಕುಟುಂಬ. ಆದರೆ ಅವರ ಸಂಸಾರದಲ್ಲಿ ಸುಖ, ಸಂತೋಷಕ್ಕೇನು ಕಡಿಮೆಯಿರಲಿಲ್ಲ. ತಂದೆ – ತಾಯಿ ಕೂಲಿ ಮಾಡಿ ತಮ್ಮ ನಾಲ್ಕು ಹೆಣ್ಣು ಮಕ್ಕಳಿಗೆ ಯಾವುದಕ್ಕೂ ಕೊರತೆಯಾಗದಂತೆ ಸಾಕುತ್ತಿದ್ದರು. ಆದರೆ ಆ ಸುಂದರ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ, ಒಂದೇ ತಿಂಗಳಲ್ಲಿ ಮದುವೆಯಾಗಿದ್ದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಇಡೀ ಕುಟುಂಬದ ಕಣ್ಣೀರಿನಲ್ಲಿ ಮುಳುಗಿದೆ. ಹಾಗಾದ್ರೆ ಆ ಕುಟುಂಬದಲ್ಲಿ ಅಂತಹದ್ದು ಏನಾಯಿತು. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು ಹೇಗೆ ಈ …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆ ನಡೆಸಲು ಅನುಮತಿ: ಜಿಲ್ಲಾಧಿಕಾರಿ
ಮಂಗಳೂರು: ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಛತ್ರ, ಹೊಟೇಲ್, ರೆಸಾರ್ಟ್, ಸಭಾಂಗಣಗಳಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಇಂದಿನಿಂದ ಜಿಲ್ಲೆಯಾದ್ಯಂತ ಅವಕಾಶ ಕಲ್ಪಿಸಲಾಗಿದೆ. ಆದರೆ, 40ಕ್ಕಿಂತ ಹೆಚ್ಚು ಜನರು ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ,ವಿ. ಆದೇಶ ನೀಡಿದ್ದಾರೆ. ಮದುವೆ ನಡೆಸುವವರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಸ್ಥೆಯ ಮುಖ್ಯಾಧಿಕಾರಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು. ಸಂಬಂಧಪಟ್ಟ ಅಧಿಕಾರಿ 40 ಜನರ ಹೆಸರು …
Read More »ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ 8 ವರ್ಷದ ಬಾಲಕಿ
ಹಾವೇರಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಗುಂಡಗಟ್ಟಿ ಗ್ರಾಮದ ಕುಮಾರ ಗುಡದಳ್ಳಿ ಹಾಗೂ ಪೂರ್ಣಿಮಾ ದಂಪತಿಯ ಮಗಳಾದ 8 ವರ್ಷದ ನಮ್ರತಾ ಕುಮಾರ ಗುಡದಳ್ಳಿ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ನಮ್ರತಾ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆ ಅಕ್ಕಿಆಲೂರಿನಲ್ಲಿ ಓದುತ್ತಿದ್ದಾಳೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ತನ್ನ ಹೆಸರನ್ನು ದಾಖಲಿಸಲು ಹಲವರು ವಿಷಯಗಳಲ್ಲಿ ಪ್ರಾವಿಣ್ಯತೆ ಪಡೆದಿದ್ದಾಳೆ. 28 ರಾಜ್ಯಗಳು ಅವುಗಳ ರಾಜಧಾನಿಗಳು, 9 …
Read More »ಬಿಜೆಪಿ ಸರ್ಕಾರ ಪಾಪದ ಹಣದಿಂದಲೇ ಈ ದಿನ ಅಧಿಕಾರ ನಡೆಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬಿಜೆಪಿ ಸರ್ಕಾರ ಪಾಪದ ಹಣದಿಂದಲೇ ಈ ದಿನ ಅಧಿಕಾರಕ್ಕೆ ಬಂದು ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಪಂಚಾಯಿತಿ ಮೆಂಬರ್ ವರೆಗೆ ಖರೀದಿ ಮಾಡುವ ನಡವಳಿಕೆ ಇಟ್ಟುಕೊಂಡಿರುವ ಬಿಜೆಪಿ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗುಡುಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿ.ಕೆ ಪಾಳ್ಯದಲ್ಲಿ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಹಾಗೂ ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ …
Read More »