Home / 2021 / ಜೂನ್ (page 10)

Monthly Archives: ಜೂನ್ 2021

ಜುಲೈ ಅಂತ್ಯದೊಳಗೆ 51.6 ಕೋಟಿ ಡೋಸ್ ಲಸಿಕೆ ನೀಡಿಕೆ; ಕೇಂದ್ರದಿಂದ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ

ದೆಹಲಿ: ಜುಲೈ ತಿಂಗಳ ಅಂತ್ಯದೊಳಗೆ ಅಂದರೆ, ಜುಲೈ 31ರ ಒಳಗೆ 51.6 ಕೋಟಿ ಡೋಸ್ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ ಮಾಡಿದೆ. ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 94 ಕೋಟಿ ಜನರಿದ್ದಾರೆ. 94 ಕೋಟಿ ಜನರಿಗೆ 188 ಕೋಟಿ ಡೋಸ್ ಲಸಿಕೆಯ ಅಗತ್ಯವಿದೆ. ಹೀಗಾಗಿ ಆಗಸ್ಟ್‌ನಿಂದ ಡಿಸೆಂಬರ್‌ಗೆ 135 ಕೋಟಿ ಡೋಸ್ ನೀಡಲಾಗುತ್ತದೆ. ಅಗತ್ಯವಿರುವಷ್ಟು ಲಸಿಕೆ ಆಗಸ್ಟ್-ಡಿಸೆಂಬರ್ ಅವಧಿಯಲ್ಲಿ ಲಭ್ಯವಾಗಲಿದೆ ಎಂದು …

Read More »

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾದಕ ವಸ್ತುಗಳ ಸರಬರಾಜು ನಿಯಂತ್ರಣಕ್ಕೆ ರೂಪಿಸಲಾಗಿರುವ ಎನ್‌ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ಕರ್ನಾಟಕದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಜೊತೆಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ …

Read More »

ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ, 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯವೇ ಇಲ್ಲ

ಬೆಂಗಳೂರು: ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ ಇವೆ. 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ. 18 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಫ್ಯಾನ್‌ ಇಲ್ಲ. ಇದನ್ನು ಸರಿಪಡಿಸಲು ಪ್ರತ್ಯೇಕ ಹಣಕಾಸಿನ ಲಭ್ಯತೆ ಇಲ್ಲ ಎಂದು ಸ್ವತಃ ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಒಪ್ಪಿಕೊಂಡಿದೆ. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಲಾದ ಲಿಖೀತ …

Read More »

ಬೆಂಗಳೂರಿಗೆ ಸ್ಮಾರ್ಟ್‌ ಪುರಸ್ಕಾರ : ತುಮಕೂರು ಡಿಜಿಟಲ್‌ ಗ್ರಂಥಾಲಯಕ್ಕೂ ಪ್ರಶಸ್ತಿ

ಬೆಂಗಳೂರು: ಕೋವಿಡ್‌ ತುರ್ತು ಪರಿಸ್ಥಿತಿ ನಿರ್ವಹಣೆಯಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ)ವನ್ನು ಅತ್ಯುತ್ತಮವಾಗಿ ಬಳಕೆ ಮಾಡಿದ ರಾಜಧಾನಿ ಬೆಂಗಳೂರಿಗೆ ಸ್ಮಾರ್ಟ್‌ ಸಿಟಿ ವಿಶೇಷ ಪುರಸ್ಕಾರ ಲಭಿಸಿದೆ. ದೇಶದ ವಿವಿಧೆಡೆ ಸ್ಮಾರ್ಟ್‌ ಸಿಟಿ ಯೋಜನೆ ಗಳ 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಸ್ಪರ್ಧೆಗಳಲ್ಲಿ ಕೇಂದ್ರ ಸರಕಾರದ ವತಿಯಿಂದ ಈ ಪುರಸ್ಕಾರ ನೀಡಲಾಗಿದೆ. ಕಾಮಗಾರಿಗಳಲ್ಲಿ ಪದವೀಧರರಿಗೆ ಇಂಟರ್ನ್ ಶಿಪ್‌ ನೀಡುವ ಯೋಜನೆಯ ವಿಭಾಗದಲ್ಲಿ ಬೆಂಗಳೂರು ಸ್ಮಾರ್ಟ್‌ ಸಿಟಿಯನ್ನು ರನ್ನರ್‌ ಅಪ್‌ ಎಂದು ಘೋಷಿಸಲಾಗಿದೆ. ಹವಾಮಾನ …

Read More »

ಸಾರಿಗೆ ಮುಷ್ಕರ: ಡಿ.31ರ ವರೆಗೆ ನಿಷೇಧ

ಬೆಂಗಳೂರು: ಅಗತ್ಯ ಸೇವೆಗಳ ಅಡಿಯಲ್ಲಿ ಸಾರಿಗೆ ನೌಕರರ ಮುಷ್ಕರವನ್ನು ಇದೇ 30ರವರೆಗೆ ನಿಷೇಧಿಸಿದ್ದ ರಾಜ್ಯ ಸರ್ಕಾರ, ಇದೀಗ ಡಿ. 31ರವರೆಗೆ ಆ ಆದೇಶವನ್ನು ವಿಸ್ತರಿಸಿದೆ. ‘ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ- 2013ರಡಿ ಅಗತ್ಯ ಸೇವೆಗಳಲ್ಲಿ ಮುಷ್ಕರ ನಿಷೇಧಿಸಿ, ಫೆ. 2ರಂದು ಆದೇಶ ಹೊರಡಿಸಲಾಗಿತ್ತು. ಪ್ರತಿ ಆರು ತಿಂಗಳಿಗೊಮ್ಮೆ ಇಂಥ ಆದೇಶ ಹೊರಡಿಸಲಾಗುತ್ತದೆ’ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ ‘ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಮತ್ತೆ ಮುಷ್ಕರಕ್ಕೆ …

Read More »

ಲಾಕ್ ಡೌನ್, ನೌಕರರ ಮುಷ್ಕರದಿಂದ ಕೆಎಸ್ ಆರ್ ಟಿಸಿಗೆ 4,000ಕೋಟಿ ರೂ ನಷ್ಟ- ಲಕ್ಷ್ಮಣ ಸವದಿ

ಬೆಳಗಾವಿ: ಲಾಕ್ ಡೌನ್ ಮತ್ತು ನೌಕರರ ಮಷ್ಕರದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಕಳೆದ 15 ತಿಂಗಳಲ್ಲಿ 4,000 ಕೋಟಿ ರೂ ನಷ್ಟ ಅನುಭವಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೊದಲನೇ ಅಲೆ ನಂತರ ಕೆಎಸ್ ಆರ್ ಟಿಸಿ ನೌಕರರು ಮುಷ್ಕರಕ್ಕೆ ಇಳಿದರು. ಮುಷ್ಕರ ಕೊನೆಗೊಳಿಸುತ್ತಿದ್ದಂತೆ ಸಾಂಕ್ರಾಮಿಕದ ಎರಡನೇ ಅಲೆ ಆರಂಭವಾಯಿತು. ಇಲಾಖೆ …

Read More »

ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.   ಜುಲೈ 1ರಿಂದ ಡಿಸೆಂಬರ್​​ 31ರವರೆಗೆ …

Read More »

ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ, ರಾಜ್ಯದ ರಾಜೀವ್ ಚಂದ್ರಶೇಖರ್ ಸೇರಿ 27 ಮಂದಿಗೆ ಸಚಿವ ಸ್ಥಾನ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್ ವಿಸ್ತರಣೆ ಅಥವಾ ಪುನರ್ರಚನೆಯ ಕುರಿತು ಯಾವುದೇ ಅಧಿಕೃತ ಮಾತುಗಳು ಇಲ್ಲದಿದ್ದರೂ ಸಂಪುಟ ವಿಸ್ತರಣೆಯಂತೂ ಖಚಿತವೆಂದು ಹೇಳಲಾಗುತ್ತಿದೆ. ಪ್ರಮುಖ ನಾಯಕರಾದ ಜ್ಯೋತಿರಾಧಿತ್ಯ ಸಿಂಧ್ಯ, ಸುಶೀಲ್ ಮೋದಿ, ಸರ್ಬಾನಂದ ಸೋನೋವಾಲ್, ನಾರಾಯಣ ರಾಣೆ ಮತ್ತು ಭೂಪೆಂದ್ರ ಯದವ್ ಸೇರಿದಂತೆ 27 ಮಂದಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ. ನರೇಂದ್ರ ಮೋದಿ ಸಂಪುಟಕ್ಕೆ ಸೇರುವ ಹೊಸ ಮಂತ್ರಿಗಳೆಂದರೆ, ಮಧ್ಯಪ್ರದೇಶದ ಕಾಂಗ್ರೆಸ್ ಮಾಜಿ …

Read More »

ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!

ದಾವಣಗೆರೆ: ಜನಪ್ರತಿನಿಧಿಗಳೆಂದರೆ ಸಾಮಾನ್ಯವಾಗಿ ಭೇಟಿಗೆ ಸಿಗುವುದೇ ಅಪರೂಪ. ಇನ್ನು ಏನಾದರೂ ಕೆಲಸ ಆಗಬೇಕೆಂದರೆ ಗೆದ್ದ ಮೇಲೆ ಅವರು ಪ್ರಜೆಗಳ ಪಾಲಿಗೆ ಗಗನಕುಸುಮ. ಹೀಗಿರುವಾಗ ಇಲ್ಲೊಬ್ಬ ಜನಪ್ರತಿನಿಧಿ ತನ್ನ ತಮ್ಮನ ಮದುವೆಗಾಗಿ ಎರಡು ದಿನ ರಜೆ ತೆಗೆದುಕೊಳ್ಳಲಿಕ್ಕೂ ಅರ್ಜಿ ಹಾಕಿ ಮನವಿ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮಪಂಚಾಯಿತಿಯ ಅರೇಹಳ್ಳಿ ಗ್ರಾಮದ ವಾರ್ಡ್-04ರ ಸದಸ್ಯ ಚೇತನ್​ ಕುಮಾರ್ ಅರೇಹಳ್ಳಿ ಹೀಗೆ ರಜೆ ಅರ್ಜಿ ಸಲ್ಲಿಸಿ ವಿನಂತಿಸಿಕೊಳ್ಳುವ ಮೂಲಕ ಹಲವರ …

Read More »

ಪೊಲೀಸರೊಂದಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಾಗ್ವಾದ

ಬಾಗಲಕೋಟೆ : ಜಿಲ್ಲೆಯ ಇಳಕಲ್ಲ ನಗರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪೊಲೀಸರೊಂದಿಗೆ ವಾಗ್ವಾದ ನಡೆದ ಪ್ರಸಂಗ ಶನಿವಾರ ಸಂಜೆ ನಡೆದಿದೆ. ಮಾಜಿ ಶಾಸಕ ಕಾಶಪ್ಪನವರ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ವಿಚಾರಣೆಗೆ ಹಾಜರಾಗುವ ಜಾಮೀನುಸಹಿತ ವಾರೆಂಟ್ ಜಾರಿಯಾಗಿದ್ದು, ಅದನ್ನು ತಲುಪಿಸಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಇದಕ್ಕೂ ಮುಂಚೆ ಕಾಶಪ್ಪನವರ ಮನೆಯಲ್ಲಿ ಕೌಟುಂಬಿಕ ಜಗಳ ನಡೆದಿದೆ ಎಂದು ಅಕ್ಕ-ಪಕ್ಕದ ಮನೆಯವರು ಫೋನ್ ಕಾಲ್ ಮಾಡಿ, ದೂರಿದ್ದರು. …

Read More »