Breaking News
Home / 2021 / ಜೂನ್ (page 13)

Monthly Archives: ಜೂನ್ 2021

ಐಎಂಎ ಹಗರಣ: ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್’ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು. ಅರ್ಜಿ …

Read More »

ಪ್ರಧಾನಮಂತ್ರಿ ಆವಾಸ್‌ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ

\: ಪ್ರಧಾನಮಂತ್ರಿ ಅವಾಸ್‌ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆ ಸೀಮಿತಗೊಳ್ಳಲಿದೆ. ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷ ಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರ ನಿರ್ಮಾಣವಾಗಲಿದೆ. ಆಗಸ್ಟ್‌ 15 ರೊಳಗೆ 5 ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್‌ಗಾಂಧಿ ವಸತಿ …

Read More »

ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ

ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

Read More »

ಜಿಲ್ಲಾ ಪಂಚಾಯತಿ‌ ಮಾಜಿ ಉಪಾಧ್ಯಕ್ಷೆಇಂದು ಮುಂಜಾನೆ ತೀರಿಕೊಂಡರು.

ಬೆಳಗಾವಿ: ಜಿಲ್ಲಾ ಪಂಚಾಯತಿ‌ ಮಾಜಿ ಉಪಾಧ್ಯಕ್ಷೆ ಹಾಗೂ ಚಿಕ್ಕೋಡಿ ಜಿಲ್ಲಾ ಕೆಪಿಸಿಸಿ ಮಹಿಳಾ ಮೋರ್ಚಾದ ಅಧ್ಯಕ್ಷೆ ತೇಜಸ್ವಿನಿ ಅರ್ಜುನ ನಾಯಿಕವಾಡಿ (51) ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮ್ಮ ಮೃದು ಸ್ವಭಾವದದ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ರಾಯಬಾಗ ತಾಲೂಕು ಕಂಕಣವಾಡಿ ಮೂಲದವರಾದ ತೇಜಸ್ವಿನಿ ಅವರು, ಕೆಲವು ದಿನಗಳ ಹಿಂದಷ್ಟೆ ಕೋವಿಡ್ ನಿಂದ ಗುಣಮುಖರಾಗಿದ್ದರು. ಆದರೆ ಕಡಿಮೆ ರಕ್ತದೊತ್ತಡದ ಕಾರಣಕ್ಕೆ ಆಕಸ್ಮಿಕವಾಗಿ ಇಂದು ಮುಂಜಾನೆ ತೀರಿಕೊಂಡರು. ಇಂದು ಮಧ್ಯಾಹ್ನ ಕಂಕಣವಾಡಿಯಲ್ಲಿ ಅಂತ್ಯಕ್ರಿಯೆ …

Read More »

ಸುಪ್ರೀಂ ಚಾಟಿ ಬಳಿಕ SSLC,PUC ಪರೀಕ್ಷೆ ಬ್ಯಾನ್ ಮಾಡಿದ ಸರ್ಕಾರ

ಅಮರಾವತಿ: ಹೆಮ್ಮಾರಿ ಸೋಂಕಿನ ಮಧ್ಯೆಯೂ ಎಸ್ ಎಸ್ ಎಲ್ ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆ ರದ್ದು ಮಾಡದ ಆಂಧ್ರ ಪ್ರದೇಶದ ಸರ್ಕಾರದ ವಿರುದ್ಧ ಸುಪ್ರೀಂ ಚಾಟಿ ಬೀಸಿದ ಬೆನ್ನಲ್ಲೇ ಸರ್ಕಾರ ಪರೀಕ್ಷೆ ಬ್ಯಾನ್ ಮಾಡಿದೆ.ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಚಾರವಾಗಿ ನಿನ್ನೆ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಕೋವಿಡ್ ನಿಂದಾಗಿ ಯಾವುದೇ ಮಾರಣಾಂತಿಕ ಘಟನೆಗಳು ಸಂಭವಿಸಿದಲ್ಲಿ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. …

Read More »

ಜುಲೈ 31ರೊಳಗೆ ದ್ವಿತೀಯ ಪಿಯು ಫಲಿತಾಂಶ: ಸುರೇಶ್‌ ಕುಮಾರ್

ಬೆಂಗಳೂರು: ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಜುಲೈ 31ರೊಳಗೆ ಫಲಿತಾಂಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ 12ನೇ ತರಗತಿ ಮಕ್ಕಳಿಗೆ ಜು.31ರೊಳಗೆ ಫಲಿತಾಂಶ ನೀಡಲು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾಜ್ಯದಲ್ಲೂ ಅಷ್ಟರೊಳಗೆ ಫಲಿತಾಂಶ ನೀಡುತ್ತೇವೆ’ ಎಂದು ಹೇಳಿದರು. ‘ಶೀಘ್ರದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ …

Read More »

ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿದ, ಎಸ್.ಆರ್. ಪಾಟೀಲ

ಬೆಳಗಾವಿ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿ, ಸದ್ಯದ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಎಸ್.ಆರ್. ಪಾಟೀಲ ಅವರು ಜಿಲ್ಲಾಧಿಕಾರಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಧಿಕಾರಿಗಳು ಅನೇಕ ಮಾಹಿತಿ ನೀಡಿದರು. ಮೂರನೇ ಅಲೆಗೆ ತಯಾರಿ ಬಗ್ಗೆ ಮಾಹಿತಿ: ಸಭೆಯ ನಂತರ ಸುದ್ದಿಗಾರರೊಂದಿಗೆ …

Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ವಿಜಯಶಾಂತಿ

ನಟಿ ವಿಜಯಶಾಂತಿ ಇಂದು ತಮ್ಮ 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಕಲ್ಲುಕ್ಕುಲ್ ಈರಮ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. 1983ರಂದು ‘ಕೆರಳಿದ ಹೆಣ್ಣು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. ವಿಜಯಶಾಂತಿ ತೆಲುಗು ಹಾಗೂ ತಮಿಳಿನ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. 2006ರಂದು ಕೊನೆಯದಾಗಿ ನಟಿಸಿದ್ದ ವಿಜಯಶಾಂತಿ ಕಳೆದ ವರ್ಷ ಮಹೇಶ್ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಮತ್ತೊಮ್ಮೆ ಕಮ್ ಬ್ಯಾಕ್ ಮಾಡಿದ್ದಾರೆ. ಇಂದು ಸಾಮಾಜಿಕ …

Read More »

ದಂಗಾಗಿಸುತ್ತೆ ಹೊಸ ಚಿತ್ರಕ್ಕೆ ನಟ ಧನುಷ್ ಪಡೆಯುತ್ತಿರುವ ʼಸಂಭಾವನೆʼ

ಕೇವಲ ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್ ಹಾಗೂ ಹಾಲಿವುಡ್ ಮಟ್ಟದಲ್ಲೂ ಮಿಂಚುತ್ತಿರುವ ನಟ ಧನುಷ್ ಮೇಲಿಂದ ಮೇಲೆ ಹಿಟ್ ಚಿತ್ರಗಳನ್ನು ಕೊಡುತ್ತಲೇ ಸಾಗಿದ್ದಾರೆ.   ಸದ್ಯದ ಮಟ್ಟಿಗೆ ಬಹಳ ಬ್ಯುಸಿಯಾಗಿರುವ ಧನುಷ್‌ ಅವರು ಶೇಖರ್‌ ಕಮ್ಮುಲಾ ಜೊತೆಗೆ ನಿರ್ಮಿಸುತ್ತಿರುವ ಹೊಸ ಚಿತ್ರಕ್ಕೆ ಸಂಭಾವನೆ ರೂಪದಲ್ಲಿ 50 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದಾರೆ ಎಂದು ಲೇಟೆಸ್ಟ್ ವರದಿಯೊಂದು ತಿಳಿಸಿದೆ. ಚಿತ್ರವೊಂದಕ್ಕೆ ಧನುಷ್ ಪಡೆಯುತ್ತಿರುವ ಅತ್ಯಂತ ಹೆಚ್ಚಿನ ಸಂಭಾವನೆ ಇದಾಗಿದ್ದು, ಈ ಮೂಲಕ ತಮಿಳು …

Read More »

ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್

ತುಮಕೂರು: ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದು ತಮಕೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರಕ್ಕೆ ಭೇಟಿ ನೀಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಸ್ಟೇಡಿಯಂ, ರಾಧಕೃಷ್ಣ ರಸ್ತೆ, ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಕಾಮಗಾರಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ವೀಕ್ಷಣೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕೆಲ ವ್ಯತ್ಯಾಸ ಆಗಿದೆ. ಕೆಲವೇ ದಿನದಲ್ಲಿ ಸತ್ಯಾಂಶ ಹೊರಬರಲಿದ್ದು, …

Read More »