Breaking News
Home / 2021 / ಜೂನ್ (page 2)

Monthly Archives: ಜೂನ್ 2021

ಆ ಲೆವಲ್ ಗೆ ಬಿಲ್ಡಪ್ ಕೊಡಲು ಅವರೇನು ಪ್ರಧಾನ ಮಂತ್ರಿನಾ.? ಅರುಣ್ ಸಿಂಗ್ ರಾಜ್ಯ ಭೇಟಿಗೆ ಯತ್ನಾಳ್ ವ್ಯಂಗ್ಯ

ಬೆಂಗಳೂರು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದರ ಬಗ್ಗೆ ಲೇವಡಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರೇನು ಪ್ರಧಾನಮಂತ್ರಿನಾ? ಅಷ್ಟೊಂದು ಬಿಲ್ಡಪ್ ಕೊಡಲು? ಅವರು ಬರುವಾಗಲೇ ಗೊತ್ತಿತ್ತು ಏನ್ ಹೇಳ್ತಾರೆ ಎಂದು ಅದಕ್ಕೆ ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್, ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವಾಗಲೇ ಗೊತ್ತಿತ್ತು, ನಾಯಕತ್ವ ಬದಲಾವಣೆ ವಿಚಾರವಾಗಿ ಅವರು ಏನು ಹೇಳುತ್ತಾರೆ ಎಂದು. ಗೊತ್ತಿದ್ದೇ ಅವರನ್ನು ಭೇಟಿಯಾಗಿಲ್ಲ. …

Read More »

ಬಿಎಸ್ ವೈ ವಿರುದ್ದ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ : ಸಿ ಪಿ ಯೋಗೇಶ್ವರ್

ಕೊಪ್ಪಳ: ಸಿಎಂ ಬಿ ಎಸ್ ಯಡಿಯೂರಪ್ಪ ಅವರ ವಿರುದ್ದ ನನ್ನನ್ನು ವಿಲನ್ ಮಾಡಬೇಡಿ, ಅವರ ವಿರುದ್ದ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ ಎಂದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಅವರು ಹೇಳಿದರು. ಕೊಪ್ಪಳದ ಅಂಜನಾದ್ರಿ ಬೆಟ್ಟದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಬಿಎಸ್ ವೈ ಅವರು ನಮ್ಮ ನಾಯಕರು. ಅವರನ್ನು ನಾವು ಟಾರ್ಗೇಟ್ ಮಾಡಲ್ಲ. ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನೂ ನಾವು ಮಾಡುತ್ತಿಲ್ಲ. ನಮ್ಮ ದೆಹಲಿ ಭೇಟಿ …

Read More »

ನಟ ಸಂಚಾರಿ ವಿಜಯ್‌ಗೆ ಅಮೆರಿಕ ಫ್ರಾಂಕ್ಲಿನ್‌ ಥಿಯೇಟರ್‌ ನಿಂದ ವಿಭಿನ್ನ ಗೌರವ ಸಲ್ಲಿಕೆ

ವಾಷಿಂಗ್ಟನ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ವಿಭಿನ್ನವಾಗಿ ಗೌರವ ಸಲ್ಲಿಸಲಾಗಿದೆ. ನಾನು ಅವನಲ್ಲ ಅವಳು, ಹರಿವು, ನಾತಿಚರಾಮಿ ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು. ಅವರಿಗೆ ಗೌರವ ಸಲ್ಲಿಸಲು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಒಂದು ಸಂದೇಶವನ್ನು ಬಿತ್ತರಿಸಲಾಗಿದೆ. ‘Always in our Heart, Sanchari Vijay, Gone Yet Not Forgotten’ ಇದು …

Read More »

ಯೋಗೇಶ್ವರ್-ಯತ್ನಾಳ್ ರಹಸ್ಯ ಭೇಟಿ: ಬಿಜೆಪಿಯಲ್ಲಿ ಶುರುವಾದ ತಳಮಳ

ವಿಜಯಪುರ: ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾಣೆಯಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಬಂಡಾಯ/ ಅತೃಪ್ತಿಗಳು ಇನ್ನೂ ರಾಜ್ಯ ಬಿಜೆಪಿಯಲ್ಲಿ ಮನೆಮಾಡಿದೆ ಎನ್ನಲು ಕೆಲ ದಿಢೀರ್ ಬೆಳವಣಿಗೆಗಳು ಕಂಡು ಬಂದಿವೆ. ಅತ್ತ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ದೆಹಲಿಗೆ …

Read More »

ಬಿಜೆಪಿಯ ಮೂವರಿಂದ ಅನ್ಯಾಯ : ದಿಲ್ಲಿಯಲ್ಲಿ ರಮೇಶ ಜಾರಕಿಹೊಳಿ ಹೇಳಿಕೆ

ಬೆಂಗಳೂರು : ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ದಿಢೀರ್‌ ದಿಲ್ಲಿಗೆ ತೆರಳಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಸುಳಿವು ನೀಡಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಾರಕಿಹೊಳಿ, ಬಿಜೆಪಿಯ ಮೂವರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ತಮಗೆ ಅನ್ಯಾಯ ಮಾಡಿದ್ದು, ತಕ್ಕ ಪಾಠ ಕಲಿಸುತ್ತೇನೆ ಎಂದು ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ. ಸೋಮವಾರ ರಾತ್ರಿ 2 ಗಂಟೆಗೆ ದಿಲ್ಲಿಯಿಂದ ಕರೆ ಬಂದಿತ್ತು. ಅವರ ಆಹ್ವಾನದ ಮೇರೆಗೆ ನಾನು ಬಂದಿದ್ದೇನೆ. ಯಾರನ್ನು ಭೇಟಿಯಾಗುತ್ತೇನೆ …

Read More »

ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ. ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ …

Read More »

ಹೊರಗುತ್ತಿಗೆ ಸಿಬ್ಬಂದಿಗೆ ನಿಯಮಿತವಾಗಿ ವೇತನ ನೀಡದಿದ್ದರೆ ಶಿಸ್ತುಕ್ರಮ : ಸಚಿವ ಸುಧಾಕರ್‌

ಮಡಿಕೇರಿ : ಕೋವಿಡ್‌ ಅವಧಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡ ನರ್ಸಿಂಗ್‌ ಸಿಬ್ಬಂದಿಗಳಿಗೆ ತಕ್ಷಣ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಭರವಸೆ ನೀಡಿದ್ದಾರೆ. ಅನೇಕ ದಿನಗಳಿಂದ ಹೊರ ಗುತ್ತಿಗೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಈ ಸಿಬ್ಬಂದಿಗೆ ಇದುವರೆಗೂ ವೇತನ ನೀಡಿಲ್ಲ ಎಂಬುದನ್ನು ಕೊಡಗು ಜಿಲ್ಲಾ ಕೋವಿಡ್‌ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಂಗಳವಾರ ಈ ಭರವಸೆ ನೀಡಿದರು. …

Read More »

ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿ ವಿಜಯಪುರಕ್ಕೆ ಸ್ಥಳಾಂತರವಾಗಲಿ : ಯತ್ನಾಳ್ ಆಗ್ರಹ

ವಿಜಯಪುರ : ಪಾರಂಪರಿಕ ಹಿನ್ನೆಲೆ ವಿಜಯಪುರ ನಗರ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕಗಳನ್ನು ಹೊಂದಿದೆ. ಜಗತ್ತಪ್ರಸಿದ್ಧ ಗೋಲಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ನೂರಕ್ಕೂ ಹೆಚ್ಚು ಸ್ಮಾರಕಗಳು ವಿಜಯಪುರ ನಗರದಲ್ಲಿವೆ. ಹೀಗಾಗಿ ವಿಶ್ವದರ್ಜೆಯ ಸ್ಮಾಕರಗಳೇ ಇಲ್ಲದ ಧಾರವಾಡ ನಗರದಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿಯನ್ನು ವಿಜಯಪುರ ಪಾರಂಪರಿಕ ನಗರಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಮಂಗಳವಾರ ನಗರದಲ್ಲಿ ಭೂತನಾಳ ಬಳಿ ಪ್ರವಾಸೋದ್ಯಮ ನಿಮಗದಿಂದ ನಿರ್ಮಿಸುತ್ತಿರುವ ತ್ರಿಸ್ಟಾರ್ …

Read More »

ಬೆಳಗಾವಿ ದಕ್ಷಿಣ ಮತಕ್ಷೇತ್ರದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ವ್ಯಾಕ್ಸೀನ್ ಹಾಕಿಸುವ ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ,

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ವ್ಯಾಕ್ಸೀನ್ ಹಾಕಿಸುವ ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ, ಕ್ಷೇತ್ರದಲ್ಲಿ ಲಸಿಕಾ ಕ್ರಾಂತಿಗೆ ಮುಂದಾಗಿದ್ದಾರೆ. ನೂರಕ್ಕೂ ಹೆಚ್ಚು ಕಾರ್ಯಕರ್ತರ ಪಡೆಯನ್ನು ಲಸಿಕಾ ಕಾರ್ಯದ ನೆರವಿಗೆ ನಿಯೋಜಿಸಿರುವ ಶಾಸಕ ಅಭಯ ಪಾಟೀಲ ಈಗಾಗಲೇ ಕ್ಷೇತ್ರದ ಸಾವಿರಾರು ಜನರಿಗೆ ವ್ಯಾಕ್ಸೀನ್ ದೊರಕಿಸಿಕೊಟ್ಟಿದ್ದು, ಶೀಘ್ರದಲ್ಲೇ ಕ್ಷೇತ್ರದಲ್ಲಿ ಬಹು ದೊಡ್ಡ ಲಸಿಕಾ ಅಭಿಯಾನ ನಡೆಸಲು ನಿರ್ಧರಿಸಿದ್ದಾರೆ. ಜನಸಂಘದ ಸಂಸ್ಥಾಪಕ ಡಾ. ಶಾಮಪ್ರಸಾದ ಮುಖರ್ಜಿ …

Read More »

ರಮೇಶ ಜಾರಕಿಹೊಳಿ ಶೀಘ್ರವೇ ಮತ್ತೆ ಸಚಿವ: ಉಮೇಶ ಕತ್ತಿ

ಬಾಗಲಕೋಟೆ: ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಳ ಸರಳ ಮನುಷ್ಯ. ಅವರ ಕ್ಯಾಸೆಟ್‌ (ಸಿಡಿ) ಕ್ರಿಯೆಟ್‌ ಮಾಡಿ ಅವರಿಗೆ ದುಃಖ ತಂದಿದ್ದಾರೆ. ಅವರು ಎರಡು ವರ್ಷ ಶಾಸಕರಾಗಿ ಇರುತ್ತಾರೆ. ಪ್ರಸಂಗ ಬಂದರೆ ಶೀಘ್ರವೇ ಸಚಿವರೂ ಆಗುತ್ತಾರೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡುವ ಪ್ರಯತ್ನ ನಮ್ಮ ಸಚಿವ ಸಂಪುಟದಿಂದ ನಡೆದಿದೆ. ನಾನು, ಜಾರಕಿಹೊಳಿ ಒಂದೇ …

Read More »