Breaking News
Home / 2021 / ಜೂನ್ (page 27)

Monthly Archives: ಜೂನ್ 2021

ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10 ರಷ್ಟು ಹೆಚ್ಚು ಲಾಭ: ಸಚಿವ ಗೋಪಾಲಯ್ಯ

ಬೆಂಗಳೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ.10 ರಷ್ಟು ಹೆಚ್ಚು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ 18 ರಿಂದ 44 ವಯಸ್ಸಿನವರಿಗೆ 3 ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಲಾಕ್ ಡೌನ್ ಆದ ಮೇಲೆ ಏಪ್ರಿಲ್ 1 ರಿಂದ ಜೂನ್ 15 ರವರೆಗೆ ಅಬಕಾರಿ ಇಲಾಖೆಗೆ …

Read More »

ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತ

ಖಾನಾಪುರ: ಶನಿವಾರ ಇಡೀ ದಿನ ಸತತ ವರ್ಷಧಾರೆಯ ಪರಿಣಾಮ ತಾಲ್ಲೂಕಿನ ಲೋಂಡಾ ಗ್ರಾಮದ ಬಳಿ ಹರಿಯುವ ಪಾಂಡರಿ ನದಿಯಲ್ಲಿ ಪ್ರವಾಹವೇರ್ಪಟ್ಟಿದ್ದರಿಂದ ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನದ ಬಳಿಕ ಲೋಂಡಾ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪಾಂಡರಿ ನದಿಯ ನೀರು ಹರಿದುಬಂದಿದ್ದರಿಂದ ಕೆಳ ಸೇತುವೆ, ಪ್ರವೇಶದ್ವಾರ, ರೈಲ್ವೆ ಹಳಿಗಳು, ಮೊದಲ ಪ್ಲಾಟ್ ಫಾರ್ಮ್ ಸೇರಿದಂತೆ ರೈಲು ನಿಲ್ದಾಣ ಮತ್ತು ಅಕ್ಕಪಕ್ಕದ …

Read More »

ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ : ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 7ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು …

Read More »

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಬಿಎಸ್​ವೈ ಚಾಲನೆ

ಬೆಂಗಳೂರು: ಇಂದು ಇಡೀ ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ನಿವಾಸದಲ್ಲೇ ಯೋಗ ಮಾಡಿದ ಸಿಎಂ ಬಿಎಸ್​ವೈ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿ ಎನ್ನುವ ಸಂದೇಶ ನೀಡಿದರು.

Read More »

3 ವರ್ಷಗಳ ಹಿಂದಿನ ಖೋಟಾನೋಟು ಪ್ರಕರಣಕ್ಕೆ ಟ್ವಿಸ್ಟ್: ಪ್ರಮುಖ ಬಾಂಗ್ಲಾದ ಆರೋಪಿ ಅರೆಸ್ಟ್

ಬೆಂಗಳೂರು: ಕರ್ನಾಟಕದಲ್ಲಿ‌ ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಎಂಬಾತನನ್ನ ಎನ್​ಐಎ ಬಂಧಿಸಿದೆ. ಈತನನ್ನ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬಾಪುರದಲ್ಲಿ ಬಂಧಿಸಲಾಗಿದೆ.. ಬಾಂಗ್ಲಾ ಮೂಲದ ವ್ಯಕ್ತಿಗಳಿಂದ ಈತ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಹಾಗೂ ಕರ್ನಾಟಕದಲ್ಲಿ ಆ ಖೋಟಾನೋಟುಗಳನ್ನ ಚಲಾವಣೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದ ಎನ್ನಲಾಗಿದೆ. ಏನಿದು ಪ್ರಕರಣ..? 2018 ರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಖೋಟಾನೋಟು ಚಲಾವಣೆ ಪ್ರಕರಣ ದಾಖಲಾಗಿತ್ತು. …

Read More »

ಆಂಬುಲೆನ್ಸ್ ನಿಂದ ಜಿಗಿದು ರಸ್ತೆ ಮಧ್ಯೆದಲ್ಲೇ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ!

ಚಲಿಸುತ್ತಿದ್ದ ಆಂಬುಲೆನ್ಸ್ ನಿಂದ ಜಿಗಿದ ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಮಧ್ಯೆದಲ್ಲೇ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರು ಜಿಲ್ಲೆಯ ತಿ‌. ನರಸೀಪುರ ತಾಲೂಕಿನಲ್ಲಿ ನಡೆದಿದೆ. ತಿ. ನರಸೀಪುರ ತಾಲೂಕಿನ ಕನ್ನಳ್ಳಿ ಮೋಳೆ ಗ್ರಾಮದ ಶಿವಣ್ಣ (42) ಮೃತ ವ್ಯಕ್ತಿ.‌ ಮಾನಸಿಕ‌ ಅಸ್ವಸ್ಥ ಶಿವಣ್ಣನನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಯಬುಲೆನ್ಸ್​ನಿಂದ ಜಿಗಿದು ರಸ್ತೆ ಮಧ್ಯೆ ಕುಳಿತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ‌. ಈತನ ವರ್ತನೆ ಕಂಡು ಸಾರ್ವಜನಿಕರು …

Read More »

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಜುಲೈ 1 ರಿಂದ ತರಗತಿಗಳು ಆರಂಭ : ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ಮತ್ತು ದೂರದರ್ಶನದಿಂದಷ್ಟೇ ಪಾಠ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ನೇರ ತರಗತಿ ಆರಂಭವಿಲ್ಲ. ಆನ್ ಲೈನ್ ಹಾಗೂ ದೂರದರ್ಶನದ ಮೂಲಕ ಶಿಕ್ಷಣ ನೀಡಲಾಗುವುದು. ಸರ್ಕಾರದ ಮಾರ್ಗಸೂಚಿ ಪಡೆದು ಶಾಲೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರಿ …

Read More »

ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. ಸುರಕ್ಷತೆ ಕ್ರಮಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು 17 ಅಂಶಗಳನ್ನೊಳಗೊಂಡ ಮಧ್ಯಂತರ ವರದಿಯನ್ನು ತಜ್ಞರ ಕಾರ್ಯಪಡೆ ಸರ್ಕಾರಕ್ಕೆ ಸಲ್ಲಿಸಿದೆ. ದೀರ್ಘಾವಧಿ ಶಾಲೆಗೆ ಮಕ್ಕಳು ಹೋಗಲು ಸಾಧ್ಯವಾಗದಿದ್ದರೆ ಶೈಕ್ಷಣಿಕವಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಸುರಕ್ಷತೆ ಕ್ರಮಗಳೊಂದಿಗೆ ಶಾಲೆ ಆರಂಭಿಸಬಹುದು. ಸೋಂಕಿನ …

Read More »

ಮೂರನೇ ಅಲೆ ತಡೆಗೆ ಮಹತ್ವದ ಕ್ರಮ: ಆರೋಗ್ಯ ವ್ಯವಸ್ಥೆ ಉತ್ತಮ ಪಡಿಸಲು 7500 ವೈದ್ಯ ಸಿಬ್ಬಂದಿ ನೇಮಕ

ಮೈಸೂರು: ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಮೈಸೂರು ಜಿಲ್ಲೆ ಸರಗೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಆವರಣದಲ್ಲಿ ಕೋವಿಡ್ ವಾರ್ಡ್ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು, ನರ್ಸುಗಳು, ಡಿ ಗ್ರೂಪ್, ಪ್ಯಾರಾ ಮೆಡಿಕಲ್ ಸೇರಿದಂತೆ 7500 ವೈದ್ಯ ಸಿಬ್ಬಂದಿಯನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಮೂರನೇ ಅಲೆ ಸೇರಿ …

Read More »

ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್‌ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು ಪಿಎಸ್‌ಐ ಅಜಂ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ರಾಯಚೂರಿನ ಚಂದ್ರಮೌಳೇಶ್ವರ ವೃತ್ತದಲ್ಲಿ ತರಕಾರಿ, ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಅಲ್ಲಿಗೆ ಬಂದ ಅಜಂ ಕಾಲಿನಿಂದ ತರಕಾರಿ, ಸೊಪ್ಪು ಒದ್ದು ಚೆಲ್ಲಾಪಿಲ್ಲಿ ಮಾಡಿದ್ದರು. ರಾಯಚೂರಿನ ಚಂದ್ರಮೌಳೇಶ್ವರ ವೃತ್ತದ …

Read More »