Breaking News

Monthly Archives: ಜೂನ್ 2021

ವಧು- ವರರನ್ನು ಜೋಡಿಸುವ ಕೊಂಡಿಯಾಗಿರು ಮೆಟ್ರಿಮೊನಿಯಲ್ ಆನ್ ಲೈನ್ ವೆಬ್ ನಲ್ಲಿ ಫೇಕ್ ಅಕೌಂಟ್ ಮಾಡಿ ಹಣ ಸುಲಿಗೆ

ಮೆಟ್ರಿಮೊನಿಯಲ್ ವೆಬ್ ಸೈಟ್ ನಲ್ಲಿ ಅಕೌಂಟ್ ತೆರೆದು,ಅದೆಷ್ಟೋ ವಧು,ವರರು ದಾಂಪತ್ಯ ಜೀವನ ಆರಂಭಿಸಿದ್ದಾರೆ ಅದಕ್ಕೆ ಲೆಕ್ಕವೇ ಇಲ್ಲ ಆದ್ರೆ ಸೈಬರ್ ವಂಚಕರು ಇದನ್ನು ದುರುಪಯೋಗ ಪಡೆಸಿಕೊಂಡು,ಫೇಕ್ ಅಕೌಂಟ್ ತೆರೆದು,ವಿಡಿಯೋ ಕಾಲ್ ಮಾಡಿ ಹಣ ಸುಲಿಗೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಧು- ವರರನ್ನು ಜೋಡಿಸುವ ಕೊಂಡಿಯಾಗಿರು ಮೆಟ್ರಿಮೊನಿಯಲ್ ಆನ್ ಲೈನ್ ವೆಬ್ ನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ,ಐ ಲೈಕ್ ಯೂ ಅಂತಾ ಮೆಸ್ಸೇಜ್ ಮಾಡಿ,ನಂತರ ವಿಡಿಯೋ ಕಾಲ್ ಮಾಡಿ, …

Read More »

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

ನಟ ಸಂಚಾರಿ ವಿಜಯ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಅಂದಹಾಗೆ, ಸ್ಯಾಂಡಲ್​ವುಡ್​ನಲ್ಲಿ ಈ ಮೊದಲು ಕೂಡ ಸಾಕಷ್ಟು ಕಲಾವಿದರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ. ಸೌಂದರ್ಯಾ: ಅದು 2004ರ ಏಪ್ರಿಲ್ 17. ನಟಿ ಸೌಂದರ್ಯಾ ಬೆಂಗಳೂರಿನಿಂದ ಕರೀಮ್ ನಗರಕ್ಕೆ ತೆರಳಿ, ಬಿಜೆಪಿ ಪರ ಪ್ರಚಾರ ಮಾಡುವವರಿದ್ದರು. ಅಗ್ನಿ ಏರೋಸ್ಪೋರ್ಟ್ಸ್ ಒಡೆತನದ ನಾಲ್ಕು ಆಸನಗಳ ಮಿನಿ ವಿಮಾನ ಸೆಸ್ಸಾನಾ 180ಯನ್ನು ಬೆಳಗ್ಗೆ …

Read More »

ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 38 ವರ್ಷದ `ಸಂಚಾರಿ ವಿಜಯ್’ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ. ಶನಿವಾರ ರಾತ್ರಿ 11:45ರ ಸುಮಾರಿಗೆ ಬೆಂಗಳೂರಿನ ಜೆಪಿನಗರದ 7ನೇ ಹಂತದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಗೆ ವಿಜಯ್ ತಲುಪಿದ್ದರು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ವಿಜಯ್ ಅವರ ಅಂಗಾಗವನ್ನು ದಾನ …

Read More »

ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ.   ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಯೋಜನೆ ರೂಪಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯದಲ್ಲಿ ತಲಾ 25 ಅಧಿವೇಷನ, ತಲಾ ಒಂದು ಪ್ರಶ್ನೆ ಪತ್ರಿಕೆ ಬಿಡಿಸುವಿಕೆ ಇರಲಿದೆ. ಇಂದಿನಿಂದ ಜ್ಞಾನ – …

Read More »

ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ, ರಜೆ ಪಡೆಯಲು ಅರ್ಹರು; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಕೂಡ ರಜೆ, ತುಟ್ಟಿಭತ್ಯೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ದಿನಗೂಲಿ ನೌಕರರು ಕೂಡ ರಾಜ್ಯ ಸರ್ಕಾರಿ ನೌಕರರಂತೆ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ವರ್ಷಕ್ಕೆ 30 ದಿನ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದಿನಗೂಲಿ ನೌಕರರ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ಗಳಿಕೆ ರಜೆಯನ್ನು ಸರ್ಕಾರ …

Read More »

ಅಣ್ಣನ ಸಾವಿಗೆ ಆತನೇ ಕಾರಣ: ದೂರು ದಾಖಲಿಸಿದ ನಟ ಸಂಚಾರಿ ವಿಜಯ್ ಸಹೋದರ!

ಬೆಂಗಳೂರು: ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್​​ ಅವರ ಮೆದುಳು ನಿಷ್ಕ್ರಿಯವಾಗಿರುದರಿಂದ ಅಂಗಾಂಗ ದಾನಕ್ಕೆ ಕುಟುಂಬ ಒಪ್ಪಿದೆ. ಕಿಡ್ನಿ, ಲಿವರ್​​, ಕಣ್ಣು ಸೇರಿ ಕೆಲ ಅಂಗಾಂಗಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಪಡೆದುಕೊಂಡು ನಾಳೆ ವಿಜಯ್​ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಆಸ್ಪತ್ರೆಯವರು ಹಸ್ತಾಂತರಿಸಲಿದ್ದಾರೆ. ಆ ಮೂಲಕ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಾವನ್ನು ಅಪೋಲೋ ಆಸ್ಪತ್ರೆ ದೃಢಪಡಿಸಿದೆ. ಸಂಚಾರಿ ವಿಜಯ್​ ತಂದೆ-ತಾಯಿ ತೀರಿಕೊಂಡಿದ್ದಾರೆ, ಮದುವೆ ಸಹ ಇನ್ನೂ ಆಗಿರಲಿಲ್ಲ. ಒಬ್ಬ ತಮ್ಮ ಇದ್ದು …

Read More »

ಯಡಿಯೂರಪ್ಪ ಇನ್ನೂ ಎರಡು ವರ್ಷ ಮುಖ್ಯಮಂತ್ರಿ ಆಗಿರಲಿ: ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಾಧ್ಯಂತ ಈಗಾಗಲೇ ಬೈಲಹೊಂಗಲ, ಗೋಕಾಕ,ಬೆಳಗಾವಿ, ಕುಡಚಿ,ರಾಯಭಾಗ ಮತ್ತು ಕಾಗವಾಡ ಸೇರಿದಂತೆ ಹಲವೆಡೆ ಭೇಟಿ ನೀಡಿ ಕೊರೊನಾ ಸೊಂಕಿತರು ಮತ್ತು ವೈದ್ಯರಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇವೆ. ಸಮಸ್ಯೆಗಳನ್ನು ಸರ್ಕಾರದ ಮುಂದಿಡಲಿದ್ದೇವೆ ಎಂದರಲ್ಲದೆ ತೈಲ …

Read More »

ಲಾಕ್‌ಡೌನ್ ಸಡಿಲಿಕೆ; ಹೆಚ್ಚಿದ ಜನಸಂದಣಿ

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಜಾರಿಗೊಳಿಸಲಾಗಿರುವ ಲಾಕ್‌ಡೌನ್‌ ಭಾಗಶಃ ಸಡಿಲಿಕೆ ಮಾಡಲಾಗಿದ್ದು, ನಗರದಲ್ಲಿ ಸೋಮವಾರ ಬಹುತೇಕ ಕಡೆ ಜನ ಸಂದಣಿ ಹೆಚ್ಚಾಗಿತ್ತು. ನಗರದ ಮೆಜೆಸ್ಟಿಕ್, ಯಶವಂತಪುರ, ಪೀಣ್ಯ, ಚಾಮರಾಜಪೇಟೆ, ಸ್ಯಾಟ್‌ಲೈಟ್ ನಿಲ್ದಾಣ ಹಾಗೂ ಇತರೆ ಪ್ರದೇಶಗಳಲ್ಲಿ ಜನರು ಗುಂಪು ಸೇರಿ ಓಡಾಡಿದ್ದು ಕಂಡುಬಂತು. ಲಾಕ್‌ಡೌನ್‌ನಿಂದಾಗಿ ನಗರ ತೊರೆದು ತಮ್ಮೂರಿಗೆ ಹೋಗಿದ್ದ ಸಾವಿರಾರು ಮಂದಿ ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ಸೋಮವಾರ ವಾಪಸು ಬಂದರು. ನಗರದ ಕ್ರಾಂತಿವೀರ …

Read More »

ಬೆಂಗಳೂರಿಗೆ ಬರುವವರಿಗೆ ಗಡಿಯಲ್ಲೇ ಕೋವಿಡ್ ಪರೀಕ್ಷೆ

ಬೆಂಗಳೂರು, ಜೂನ್ 15: ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ನಗರದ ಗಡಿಯಲ್ಲಿ ರ್‍ಯಾಂಡಮ್ ಪರೀಕ್ಷಾ ತಂಡಗಳನ್ನು ನಿಯೋಜಿಸಲು ಮುಂದಾಗಿದ್ದಾರೆ. ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾರ್ಖಾನೆ, ಗಾರ್ಮೆಂಟ್ಸ್, ಕಚೇರಿಗಳು ಕೂಡ ಮುಚ್ಚಿದ್ದವು, ಇದರಿಂದಾಗಿ ಕೆಲಸವಿಲ್ಲದೆ ತಮ್ಮ ಊರುಗಳಿಗೆ ಹೋಗಿದ್ದ ಕಾರ್ಮಿಕರು, ಉದ್ಯೋಗಿಗಳು ಲಾಕ್‌ಡೌನ್ ತೆರವಿನಿಂದಾಗಿ ಪುನಃ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಸೋಂಕು ಹೆಚ್ಚಿರುವ ಜಿಲ್ಲೆಗಳು ಸೇರಿ ವಿವಿಧ ಜಿಲ್ಲೆಗಳ ಕಡೆಗಳಿಂದ ಕಟ್ಟಡ ಕಾರ್ಮಿಕರು, ಕಾರು, ಆಟೋ …

Read More »

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಜೈ ಹನುಮಾನ ನಗರದ ತೋಟ ಮನೆಯ ಕಬ್ಬಿನ ಗದ್ದೆಯಲ್ಲಿ ಶನಿವಾರ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಮಾರುತಿ ಪೂಜೇರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 14ವರ್ಷ ಬಾಲಕಿ ತನ್ನ ಮಾವನ ಮನೆಯಲ್ಲಿ ಬಹಳ ದಿನದಿಂದ ವಾಸ ಇದ್ದಳು. ಶನಿವಾರ ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನನೊಂದು ವಿಷ ಸೇವಿಸಿದ್ದು, ಆ …

Read More »