Breaking News
Home / 2021 / ಜೂನ್ (page 61)

Monthly Archives: ಜೂನ್ 2021

ಮತ್ತೂಮ್ಮೆ ಅನಾಥ ಮಕ್ಕಳ ಸರ್ವೇ: ಸಚಿವೆ ಜೊಲ್ಲೆ

ಕೊಪ್ಪಳ: ಕೋವಿಡ್‌ ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಸರಕಾರವೇ ಆಸರೆಯಾಗ ಲಿದೆ. ಕೆಲವು ಕಾರಣಗಳಿಂದ ಮಕ್ಕಳ ಅಂಕಿಅಂಶದಲ್ಲಿ ಸಣ್ಣಪುಟ್ಟ ಲೋಪಗಳಿರಬಹುದು. ಹಾಗಾಗಿ ಸರಕಾರದಿಂದ ಮತ್ತೂಮ್ಮೆ ಸರ್ವೇ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಾಥ ಮಕ್ಕಳ ಪಾಲನೆಯನ್ನು ಸರಕಾರವೇ ನೋಡಿ ಕೊಳ್ಳಲಿದೆ. ಕೆಲವು ಜಿಲ್ಲೆಗಳಲ್ಲಿ ಅನಾಥ ಮಕ್ಕಳ ಕುರಿತು ವರದಿಯಾಗಿಲ್ಲ. ಹಾಗಾಗಿ ಮತ್ತೂಮ್ಮೆ ಸರ್ವೇಗೆ ಸೂಚಿಸಲಾಗಿದೆ. ಬಾಲ …

Read More »

ಬೆಳಗಾವಿ,ದಕ್ಷಿಣ ಕನ್ನಡ ಸೇರಿದಂತೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್‌ಡೌನ್ ವಿಸ್ತರಣೆ

  ದಕ್ಷಿಣ ಕನ್ನಡ ಸೇರಿದಂತೆ 11 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಜೂನ್ 14 ರ ಬೆಳಿಗ್ಗೆ 6 ರಿಂದ ಪ್ರಸ್ತುತ ಲಾಕ್‌ಡೌನ್ ಕೊನೆಗೊಳಿಸಲು ನಿರ್ಧರಿಸಿದೆ. ‌ ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಮಂಡ್ಯ ಬೆಳಗಾವಿ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳು, 5% ಕ್ಕಿಂತ ಹೆಚ್ಚಿನ ಸಕಾರಾತ್ಮಕ ದರವನ್ನು ಹೊಂದಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಸಂಪೂರ್ಣ ಲಾಕ್‌ಡೌನ್ ಮತ್ತೊಂದು ವಾರ ಮುಂದುವರಿಯುತ್ತದೆ. …

Read More »

ತೈಲ ಬೆಲೆ: ಇಂದಿನಿಂದ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಇಂದಿನಿಂದ ಐದು ದಿನ ರಾಜ್ಯಾದ್ಯಂತ ಐದು ಸಾವಿರ ಪೆಟ್ರೋಲ್‌ ಬಂಕ್‌ಗಳ ಮುಂದೆ ಹಮ್ಮಿಕೊಂಡಿರುವ ಸರಣಿ ಪ್ರತಿಭಟನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೆಪಿಸಿಸಿಯಿಂದ ಜಿಲ್ಲಾವಾರು ಉಸ್ತುವಾರಿಗಳನ್ನು ನೇಮಿಸಲಾಗಿದೆ. ಶಾಸಕರು, ಮಾಜಿ ಸಚಿವರು ಮತ್ತು ಸಂಸದರು, ಮಾಜಿ ಸಂಸದರಿಗೆ ಜಿಲ್ಲಾವಾರು ಉಸ್ತುವಾರಿ ನೀಡಿದ್ದು, ಪ್ರತಿಯೊಬ್ಬರೂ ಪ್ರತಿಭಟನೆಯ ಮೇಲೆ ಜೂಮ್‌ ಮೂಲಕ ನಿಗಾ ಇರಿಸಿ ಕೆಪಿಸಿಸಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರತಿಭಟನೆಯ ಒಂದು …

Read More »

ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ.

ಬೆಳಗಾವಿ : ಇಲ್ಲಿಯ ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ. ಕೆಎಸ್ಆರ್ ಪಿ ಪೊಲೀಸ್ ಪೇದೆ ಸಿದ್ಧಾರೂಢ ವಡ್ಡರ್ ಬಂಧಿತ. ಈತ ಬೆಳಗಾವಿ ನಗರದಲ್ಲಿ ಸುತ್ತಾಡಿ ಅಂಗಡಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಸಾರ್ವಜನಿಕರೇ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸಧ್ಯ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Read More »

ಇಬ್ಬರು ಮಹಿಳೆಯರು, ಓರ್ವ ಮಗು ನಾಪತ್ತೆ

ಬೆಳಗಾವಿ : ಬೆಳಗಾವಿಯ  ಚೆನ್ನಮ್ಮ ನಗರದ ಗೌರಿ ಗಣೇಶ್ ರೆಸಿಡೆನ್ಸಿ ಎಚ್.ಪಿ. ಆಫೀಸ್ ಹತ್ತಿರದ ನಿವಾಸಿಯಾದ ಎರಾ ಬುಷರ ವೈಭವ ಬರ್ಡೆ(ವ.೩೬) ಎಂಬ ಹೆಸರಿನ ಮಹಿಳೆಯು, ಸೋಮವಾರ (ಜೂ.೭) ಮದ್ಯಾಹ್ನ ೧೨ ಗಂಟೆಯ ಸುಮಾರಿಗೆ ತಂದೆ, ತಾಯಿ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದು, ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ತಿಲಕವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.             ಎರಾ ಬುಷರ ವೈಭವ ಬರ್ಡೆ …

Read More »

ಬಡಪತ್ರಕರ್ತನ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ….?

ಕೋವಿಡ್ ಗೆ ಬಲಿಯಾದ ಹಿರಿಯ ಪತ್ರಕರ್ತ ಸಂಜೀವಕುಮಾರ ನಾಡಿಗೇರ ಕುಟುಂಬಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ಧನಸಹಾಯ       ಬೆಳಗಾವಿ: ಎಷ್ಟೇ ಅಧಿಕಾರ, ಶ್ರೀಮಂತಿಕೆ ಇದ್ದರೂ ಬಡವರ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರುವುದು ಮುಖ್ಯ. ಹೃದಯ ಶ್ರೀಮಂತಿಕೆ, ಉದಾರ ಮನೋಭಾವದವರಲ್ಲಿ ಮಾತ್ರ ಇಂತಹ ಗುಣ ಕಾಣಲು ಸಾಧ್ಯ. ಇಂತಹ ಅಪರೂಪದ ರಾಜಕಾರಣಿಗಳ ಸಾಲಿನಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತೊಮ್ಮೆ ಸಾಬೀತುಪಡಿಸಿದರು. ಹಾದು, ಪತ್ರಿಕಾರಂಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ …

Read More »

ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ.   ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.   14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, …

Read More »

: ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ ‘ ಉಚಿತ ಲಸಿಕೆ ನೀಡಿ..ಇಲ್ಲವೇ ಅಧಿಕಾರ ಬಿಡಿ’

ಬೆಳಗಾವಿ : ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ #ಉಚಿತ_ಲಸಿಕೆ_ಕೊಡಿ_ಇಲವೇ_ ಅಧಿಕಾರ ಬಿಡಿ ಎಂದು ಕೇಂದ್ರ ಸರಕಾರದ ವಿರುದ್ಧ ನಗರದ ವಾಲ್ಮೀಕಿ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು.   *ಹಕ್ಕೊತ್ತಾಯಗಳು*   *1. ಉಚಿತ ಲಸಿಕೆ*   ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ …

Read More »

‘ಲಾಕ್ಡೌನ್’ ನಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ, ‘ಅನ್ಲಾಕ್’ ಬಗ್ಗೆ ಇಂದು ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಜಾರಿ ಮಾಡಲಾದ ಲಾಕ್ಡೌನ್ ಹಂತಹಂತವಾಗಿ ತೆರವುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆ ವರೆಗೆ ಅವಕಾಶ ನೀಡಲಾಗುವುದು. ಕೈಗಾರಿಕೆ ಚಟುವಟಿಕೆಗಳಿಗೆ ಮತ್ತಷ್ಟು ಅವಕಾಶ ನೀಡಲಿದ್ದು, ಆಟೋ, ಟ್ಯಾಕ್ಸಿ, ಕ್ಯಾಬ್ ಗಳಿಗೆ …

Read More »

ದೇಸೂರು ಗ್ರಾಮಕ್ಕೆ ​ಲಕ್ಷ್ಮೀ ತಾಯಿ ಫೌಂಡೇಷನ್ ಹಾಗೂ ಹರ್ಷ ಶುಗರ್ಸ್ ವತಿಯಿಂದ​ ಉಚಿತ ಅಂಬ್ಯುಲೆನ್ಸ್

ಬೆಳಗಾವಿ​ – ಬೆಳಗಾವಿ​ ಗ್ರಾಮೀಣ​ ವಿಧಾನಸಭಾ ಕ್ಷೇತ್ರದ ದೇಸೂರು ಗ್ರಾಮಕ್ಕೆ ​ಲಕ್ಷ್ಮೀ ತಾಯಿ ಫೌಂಡೇಷನ್ ಹಾಗೂ ಹರ್ಷ ಶುಗರ್ಸ್ ವತಿಯಿಂದ​ ಉಚಿತ ಅಂಬ್ಯುಲೆನ್ಸ್ ವಾಹನದ ಸೇವೆಯನ್ನು ಒದಗಿಸ​ಲಾಗಿದೆ. ಕೊರೋನಾ ಈ ಸಂಕಷ್ಟದ ಸಮಯದಲ್ಲಿ ಸೋಂಕಿನಿಂದಾಗಿ ಜನರು ತತ್ತರಿಸಿದ್ದು, ಜನರ ಆರೋಗ್ಯದ ವಿಶೇಷ ಕಾಳಜಿಯಡಿ ​ಈ ಸೇವೆ ಒದಗಿಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.​ ​ ಜನರು ಭಯಪಡದೇ ಹೆಚ್ಚಿನ ಪ್ರಮಾಣದಲ್ಲಿ ಗಂಟಲು ದ್ರವಗಳ ಮಾದರಿಯ​ ನೀಡಿ ಪರೀಕ್ಷಿಸಿಕೊಳ್ಳಬೇಕು. ಜೊತೆಗೆ ಕೋವಿಡ್ ಲಸಿಕೆಗಳನ್ನು (ವ್ಯಾಕ್ಸಿನೇಷನ್‌) …

Read More »