ಕೊರೊನಾ ವ್ಯಾಕ್ಸಿನ್ ಅನ್ನ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯೆ ಪುಷ್ಪಿತಾಳ ಇನ್ನೊಂದು ಕರ್ಮಕಾಂಡ ಬಯಲಾಗಿದೆ. ಮಂಜುನಾಥ ನಗರ ಆರೋಗ್ಯಕೇಂದ್ರದಲ್ಲಿ ವ್ಯಾಕ್ಸಿನ್ ಹಾಕಿಸಿಕೊಂಡ ಕೊರೊನಾ ವಾರಿಯರ್ ಗಳಿಗೆ ಮತ್ತು ನಾಗರೀಕರಿಗೆ ಭಯ ಅವರಿಸಿದೆ. ಬೆಂಗಳೂರಿನಲ್ಲಿ ಹಾಫ್ ಡೋಸ್ ಇಂಜೆಕ್ಷನ್ ಕರ್ಮಕಾಂಡ ಬಯಲಾಗಿದೆ. ಕೊರೊನಾ ವಾರಿಯರ್ಸ್ ಪೊಲೀಸರಿಗೂ ಹಾಫ್ ಡೋಸ್ ವ್ಯಾಕ್ಸಿನ್ ಹಾಕಿರೋ ಗಂಭೀರ ಆರೋಪ ಕೇಳಿ ಬಂದಿದೆ. ಹಗಲಿರುಳೆನ್ನದೇ ಜೀವ ಒತ್ತೆಯಿಟ್ಟು ಕೆಲಸ ಮಾಡೋ ಕೊರೊನಾ ವಾರಿಯರ್ಸ್ಗೆ ದೋಖಾ ಮಾಡಲಾಗಿದೆ. …
Read More »Monthly Archives: ಜೂನ್ 2021
ನಿತ್ಯಾನಂದ ಭಾರತದಲ್ಲಿ ಕಾಲಿಟ್ಟ ಬಳಿಕವೇ ಕೊರೊನಾ ನಿರ್ಮೂಲನೆ; ಕೈಲಾಸವಾಸಿ ಭವಿಷ್ಯವಾಣಿ..!
ನವದೆಹಲಿ: ಭಾರತ ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಸ್ವಯಂ ಘೋಷಿತ ದೇವ ಮಾನವ ಮತ್ತೊಮ್ಮೆ ವಿವಾದತ್ಮಾಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ನಿತ್ಯಾನಂದ ಸದ್ಯ ಈಕ್ವೆಡಾರ್ ದ್ವೀಪವೊಂದನ್ನು ಖರೀದಿ ಮಾಡಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿ ಅಲ್ಲಿಯೇ ನೆಲೆಸಿದ್ದಾರೆ. ಈ ನಡುವೆ ನಿತ್ಯಾನಂದ ತನ್ನ ಹೊಸ ವೀಡಿಯೊ ಒಂದನ್ನ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ನಾನು ಭಾರತಕ್ಕೆ ಕಾಲಿಟ್ಟರೆ ಮಾತ್ರ ದೇಶದಲ್ಲಿ …
Read More »ಶಾಲಾರಂಭಕ್ಕೆ ದಿನ ನಿಗದಿ, ನಿರ್ಧಾರವಾಗದ ಶುಲ್ಕ : ಜೂ. 15ರಿಂದ ದಾಖಲಾತಿ; ಜು.1ರಿಂದ ತರಗತಿ
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ, ದಾಖಲಾತಿ, ಶಾಲಾರಂಭದ ದಿನಾಂಕ ಪ್ರಕಟಿಸಿದ್ದರೂ ಶುಲ್ಕದ ಗೊಂದಲವನ್ನು ಮಾತ್ರ ಸರಕಾರ ಬಗೆಹರಿಸಿಲ್ಲ. 2020-21ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಬೋಧನ ಶುಲ್ಕದಲ್ಲಿ ಶೇ. 30ರಷ್ಟು ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ಜೂ. 15ರಿಂದ ದಾಖಲಾತಿ ಆರಂಭವಾಗಿ, ಜು. 1ರಿಂದ ತರಗತಿಗಳು ಪ್ರಾರಂಭ ವಾಗಲಿವೆ. ಆದರೆ ಹೆತ್ತವರು ಶುಲ್ಕ ಪಾವತಿಗೆ ಹಿಂದೇಟು ಹಾಕುತ್ತಿದ್ದಾರೆ. ಪ್ರತ್ಯಕ್ಷ ತರಗತಿಗಳು ನಡೆಯದೆ ಇರುವುದರಿಂದ ಪೂರ್ಣ ಶುಲ್ಕ …
Read More »ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೃಷಿ ಪ್ರೀತಿ
ಬೆಂಗಳೂರು: ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಕೆ.ಎಂ. ನಟರಾಜ್ ಅವರು ಉನ್ನತ ಹುದ್ದೆಯಲ್ಲಿದ್ದರೂ ತಮ್ಮ ಜಮೀನಿನಲ್ಲಿ ಕೃಷಿ ಮಾಡುವ ಕಾಯಕ ಮರೆತಿಲ್ಲ. ಸುಪ್ರೀಂ ಕೋರ್ಟ್ ರಜೆ ಅವಧಿಯಲ್ಲಿ ತಮ್ಮ ಕೃಷಿ ಪ್ರೀತಿ ಮುಂದುವರಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಕೊನೆತೋಟ ಮಹಾಬಲೇಶ್ವರ ನಟರಾಜ್ ಅವರು ಕೃಷಿ ಕುಟುಂಬದಲ್ಲಿ ಹುಟ್ಟಿ ಬೆಳೆದು ವಕೀಲ ವೃತ್ತಿಯಲ್ಲಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಇವರು …
Read More »ರಾಜ್ಯದಲ್ಲಿ 10 ಸಾವಿರಕ್ಕಿಂತ ಕಡಿಮೆ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದ್ದು, ಕಳೆದ 55 ದಿನಗಳಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ (9,808) ಕಡಿಮೆ ಸಂಖ್ಯೆಯ ಪ್ರಕರಣ ಮಂಗಳವಾರ ವರದಿಯಾಗಿದೆ. ಕಳೆದ ಏ.14ರಂದು ಪ್ರಕರಣ ಗಳ ಸಂಖ್ಯೆ 10 ಸಾವಿರದ ಗಡಿ ದಾಟಿತ್ತು. ಬಳಿಕ ಏರುಗತಿ ಪಡೆದು, 50 ಸಾವಿರದ ಗಡಿಯ ಆಸುಪಾಸಿಗೆ ಏರಿಕೆ ಕಂಡಿತ್ತು. ಈಗ ಎರಡು ವಾರಗಳಿಂದ ಇಳಿಮುಖ ಕಂಡಿದ್ದು, ಸೋಂಕು ದೃಢ …
Read More »ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು : ಡಿ. ಕೆ. ಶಿ
ಬೆಂಗಳೂರು : ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು. ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು …
Read More »ನವದೆಹಲಿ : 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲ್ಲ; ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ
ನವದೆಹಲಿ : ಹೆಮ್ಮಾರಿ ಸೋಂಕಿಗೆ ಹೆದರದವರಿಲ್ಲ. ಡೆಡ್ಲಿ ಸೋಂಕಿನ 3ನೇ ಅವತಾರ ಮಕ್ಕಳಿಗೆ ಮಾರಕ ಎನ್ನುವ ಮಾತುಗಳು ಎಲ್ಲೇಡೆ ಸಾಮಾನ್ಯವಾಗದೆ. ಈ ಆತಂಕಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತೆರೆ ಎಳೆದಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೋಟ್ಯಾಂತರ ಪೋಷಕರಲ್ಲಿ ನೆಮ್ಮದಿ ತಂದಿದೆ. ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ಗುಲೆರಿಯಾ ಹೇಳಿದ್ದಾರೆ. ಆದರೆ ಮುಂಜಾಗ್ರತ ಕ್ರಮವಾಗಿ ಮಾಸ್ಕ್ …
Read More »ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನ.
ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.
Read More »ಪೆಟ್ರೋಲ್ ದರ ಹೆಚ್ಚಳ: ಜಾಗಟೆ ತಟ್ಟೆ ಬಾರಿಸಿ ವಿನೂತನ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್
ಶಿವಮೊಗ್ಗ: ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ ಶಂಕ ಬಾರಿಸಿ ಅಣಕು ಸಂಭ್ರಮಾಚರಣೆಯ ಮೂಲಕ ಪ್ರತಿಭಟಿಸಿದರು. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತಟ್ಟೆ ಜಾಗಟೆ ಶಂಕಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ …
Read More »ಮುದ್ದೇಬಿಹಾಳ ಬಳಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆ ಶಂಕೆ
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ಸೆತುವೆ ಪೈಪ್ ನಲ್ಲಿ ಅಪರಿಚಿತ ಯುವತಿಯ ಶವ ಪತ್ತೆ ಆಗಿದೆ. ಸುಮಾರು 18 ವಯಸ್ಸಿನ ಯುವತಿಯ ಕತ್ತಿಗೆ ವೇಲ್ ನಿಂದ ಬಿಗಿದು, ತಲೆ ಮೇಲೆ ಕಲ್ಲು ಎತ್ತಿಹಾಕಿದಂತೆ ತಲೆಗೆ ಭಾರಿ ಪೆಟ್ಟು ಬಿದ್ದು ರಕ್ತಸ್ರಾವ ಆಗಿದೆ. ಸ್ಥಳದಲ್ಲಿನ ಸ್ಥಿತಿಯನ್ನು ಆಧರಿಸಿ ಪೊಲೀಸರು ಪ್ರಾಥಮಿಕ ಹಂತದಲ್ಲಿ ಇದು ಕೊಲೆ ಎಂದು ಶಂಕಿಸಿದ್ದಾರೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಮುದ್ದೇಬಿಹಾಳ …
Read More »