Breaking News

Daily Archives: ಜುಲೈ 5, 2021

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.

ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …

Read More »

ಬೆಂಗಳೂರು: ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು: ರಾಜ್ಯಕ್ಕೆ ನೆರೆ ರಾಜ್ಯದಿಂದ ಗಾಂಜಾ ಘಾಟು ಎಗ್ಗಿಲ್ಲದೇ ಕಾಲಿಡುತ್ತಿದೆ. ಕಳೆದ ಮೂರು ವಾರದಿಂದ ಕಣ್ಣಿಟ್ಟಿದ್ದ ಖಾಕಿ ಪಡೆಯಿಂದ ಇಂದು ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಕೆಂಗೇರಿ ಗೇಟ್ ಎಸಿಪಿ ಸ್ಕ್ವಾಡ್‌ನಿಂದ ಈರ್ವರನ್ನು ಬಂಧಿಸಲಾಗಿದ್ದು, ಅವರಿಂದ 50 ಲಕ್ಷ ರೂ. ಮೌಲ್ಯದ 110 ಕೆಜಿ ಶುದ್ಧ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್‌ ಬಳಿ ಕಾರು ತಡೆದು ಆರೋಪಿಗಳಾದ ಅಪ್ಪಣ್ಣ, ಸುಬ್ರಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಖಪಟ್ಟಣಂನ ಗುಡ್ಡಗಾಡು ಪ್ರದೇಶದಲ್ಲಿ …

Read More »

ಖಾಸಗಿ ಬಸ್ ಪ್ರಯಾಣ ದರ ಏರಿಕೆಗೆ ತಡೆ : ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಜು.5: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಲಾಕ್‌ ಡೌನ್ ಮುಂಚೆ ಚಾಲ್ತಿಯಲ್ಲಿದ್ದ ಪ್ರಯಾಣ ದರವನ್ನು ತೆಗೆದುಕೊಳ್ಳಬೇಕು ಎಂದು ಮಾಲಕರಿಗೆ ಸೂಚಿಸಲಾಗಿದೆ. ಪ್ರಯಾಣ ದರ ಏರಿಕೆಗೆ ಸಂಬಂಧಿಸಿ ಈ …

Read More »

ಬೆಳಗಾವಿ: ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಿ ಎಂದು ಕರ್ನಾಟಕದಲ್ಲೇ ಪ್ರತಿಭಟನೆ ಮಾಡುವ ಸ್ಥಿತಿ!

ಬೆಳಗಾವಿ: ಬಣ್ಣ ಮಾಸಿ, ಹರಿದು ಹೋಗಿರುವ ಕನ್ನಡ ಧ್ವಜವನ್ನು ಬದಲಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಸಂಘಟನೆಗಳು ಧರಣಿ ಕೈಗೊಂಡಿವೆ. ಮೂರು ತಿಂಗಳಿಂದ ಮನವಿ ಮಾಡುತ್ತಿದ್ದರೂ ಧ್ಚಜ ಬದಲಾವಣೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಪಾಲಿಕೆ ಹೀಗೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕನ್ನಡ ಧ್ವಜ ಹಾಗೂ ಹಗ್ಗ ತೆಗೆದುಕೊಂಡು ಬಂದಿರುವ ಕನ್ನಡಪರ ಹೋರಾಟಗಾರರು ಕೊರಳಿಗೆ ಹಗ್ಗ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಧ್ವಜಸ್ತಂಭದ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. …

Read More »

ಮೋದಿ ಎದುರು ಮೇಕೆದಾಟು ಬಗ್ಗೆ ಮಾತನಾಡುವ ಶಕ್ತಿ ಬಿಜೆಪಿಯವರಿಗೆ ಇಲ್ಲ : ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ರಾಮನಗರ : ಕೇಂದ್ರ – ರಾಜ್ಯ ವಿರುದ್ಧ ಕಾಂಗ್ರೆಸ್​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಿ‌.ಕೆ.ಸುರೇಶ್ ಮೇಕೆದಾಟು ಯೋಜನೆ ವಿಚಾರವಾಗಿ ಕೆಂಡಕಾರಿದ್ದಾರೆ. ರಾಜ್ಯದ ಯಾವ ಸಂಸದರಿಗೂ, ಸಚಿವರಿಗೂ ಪ್ರಧಾನಿ ಮೋದಿ ಎದುರು ಯೋಜನೆ ಬಗ್ಗೆ ಪ್ರಸ್ತಾಪ ಮಾಡುವ ಶಕ್ತಿಯಿಲ್ಲ. ನಿಷ್ಕ್ರಿಯರಾಗಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಹಸಿರು ಪೀಠ ಈಗಾಗಲೇ ಯೋಜನೆಗೆ ಅಸ್ತು ಎಂದಿದೆ. ಆದರೆ ಈ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ …

Read More »

ಕುರಿ ಸಾಕಾಣಿಕೆ ಆರಂಭಿಸಿದ ಮಾಜಿ ಸಿಎಂ ಹೆಚ್​ಡಿಕೆ

ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ತಮ್ಮ ಜಮೀನಿನಲ್ಲಿ ಇಸ್ರೇಲ್ ಮಾದರಿ ಕುರಿ ಸಾಕಾಣಿಕೆ ಆರಂಭ ಮಾಡಿದ್ದು, ಆ ಮೂಲಕ ಪ್ರಗತಿ ಪರ ರೈನತನಾಗಿ ಇತರರಿಗೂ ಮಾದರಿಯಾಗುವ ಕಾರ್ಯವನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಕೃಷಿ ಚಟುವಟಿಕೆಗಳಿಗಾಗಿ ಹೊಸ ಟ್ರ್ಯಾಕ್ಟರ್​ ಖರೀದಿಸಿದ್ದ ಕುಮಾರಸ್ವಾಮಿ ಅವರು, ಸದ್ಯ ಬಿಡದಿಯ ತೋಟದಲ್ಲಿ ಕುರಿ ಸಾಕಾಣಿಕೆಗೆ ಅತ್ಯಾಧುನಿಕವಾಗಿ ಇಸ್ರೇಲ್​ ಮಾದರಿಯಲ್ಲಿ ಕುರಿ ಸಾಕಾಣಿಕೆ ಆರಂಭಿಸಿದ್ದಾರೆ. ಈ ಕುರಿತ …

Read More »

“ಸಿದ್ದರಾಮಯ್ಯ ಬಿಜೆಪಿಗೆ ಬೇಕಾದರೆ ಬರಲಿ” -ಸಚಿವ ಜೆ.ಸಿ ಮಾಧುಸ್ವಾಮಿ

ತುಮಕೂರು: ‘ಮಾಜಿ ಸಿಎಂ ಸಿದ್ದರಾಮಯ್ಯನವರೇ ಬೇಕಾದರೆ ಬಿಜೆಪಿಗೆ ಬರಲಿ’ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ಆಹ್ವಾನ ನೀಡಿದ್ದಾರೆ. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​​ ಯಾರು ಬೇಕಾದರೂ ಕಾಂಗ್ರೆಸ್​​ಗೆ ಬರಬಹುದು, ಬಿಜೆಪಿಗೆ ಹೋದ 17 ಮಂದಿಗೂ ಸ್ವಾಗತ ಎಂದಿದ್ದರು. ಈಗ ಡಿ.ಕೆ ಶಿವಕುಮಾರ್​​ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಪ್ರತಿಕ್ರಿಯಿಸುತ್ತಿದ್ದಾರೆ. ಸದ್ಯ ಸಚಿವ ಜೆ.ಸಿ ಮಾಧುಸ್ವಾಮಿ ಕೂಡ ಡಿಕೆಶಿಗೆ ಟಾಂಗ್​​ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ …

Read More »

ನನಗೂ ಸಿಎಂ ಆಗಬೇಕೆಂಬ ಆಸೆ ಇದೆ – ಸಚಿವ ಉಮೇಶ್ ಕತ್ತಿ

ಬಾಗಲಕೋಟೆ: ನಾನು ಸಿಎಂ ಸ್ಥಾನದ ಆಕಾಂಕ್ಷಿಯಾಗಿರೋದು ನಿಜ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಸಚಿವ ಉಮೇಶ್ ಕತ್ತಿ, ನಾನು ಆರು ಬಾರಿ ಶಾಸಕನಾಗಿದ್ದೇನೆ. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಸಿಎಂ ಆಗಲು ಬೇಕಾದ ಅರ್ಹತೆ ಎಲ್ಲವೂ ನನಗಿದೆ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆಯಿಲ್ಲದ ಕಾರಣ ಸಿಎಂ ಬದಲಾವಣೆ ಆದಾಗ ನೋಡೋಣ ಎಂದರು. ರಾಜ್ಯ ಸಿಎಂ ಬದಲಾವಣೆಯಾಗಲೀ, ಮುಂದಿನ ಚುನಾವಣೆ ಬರಲಿ. …

Read More »

ಸಂಕಷ್ಟದಲ್ಲಿ ಅಮಿತಾಬ್ ಪ್ರೀತಿಯ ಬಂಗಲೆ: ನೆಲಸಮ ಮಾಡಲು ಮುಂದಾದ ಮುಂಬೈ ಮಹಾನಗರ ಪಾಲಿಕೆ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಪ್ರೀತಿಯ ಪ್ರತೀಕ್ಷ ಬಂಗಲೆಯ ಒಂದು ಭಾಗವನ್ನು ಕೆಡವಲು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ನಿರ್ಧರಿಸಿದೆ ಎಂದು ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಮಿತಾಬ್ ಮೊದಲು ಖರೀದಿಸಿದ ಬಂಗಲೆ ಇದಾಗಿದ್ದು, ಮುಂಬೈನ ಜುಹು ಪ್ರದೇಶದಲ್ಲಿದೆ. ರಸ್ತೆ ಅಗಲೀಕರಣಕ್ಕಾಗಿ ಅಮಿತಾಬ್ ಬಚ್ಚನ್ ಬಂಗಲೆಯ ಒಂದು ಭಾಗ ನೆಲಸಮವಾಗಲಿದೆ. ಸಂತಸ ಜ್ಞಾನೇಶ್ವರ ಮಾರ್ಗ್ ರಸ್ತೆಯಲ್ಲಿ ಅಮಿತಾಬ್ ಮನೆ ಇದೆ. ಈ ರಸ್ತೆಯನ್ನು ಅಗಲೀಕರಣ ಮಾಡಲು ಮುಂಬೈ …

Read More »