Breaking News

Daily Archives: ಜುಲೈ 10, 2021

ವ್ಯಕ್ತಿಯ ಬಳಿ ಇದ್ದದ್ದನ್ನೆಲ್ಲಾ ದೋಚಿದ್ದ ಕಳ್ಳರು ಇಂದು ಅಂದರ್..!

ಬೆಳಗಾವಿ: ಜುಲೈ 8 ರಂದು ಮುಂಜಾನೆ ವ್ಯಕ್ತಿಯನ್ನು ದರೋಡೆ ಮಾಡಿದ 2 ಆರೋಪಿಗಳನ್ನು ಗಾಂಧಿ ನಗರ ಬಳಿ ಮಾಳ ಮಾರುತಿ ಪೊಲೀಸರು ಇಂದು ಬಂಧಿಸಿದ್ದಾರೆ. ಪರ್ವೇಜ್ ಪರಿಷ್ಟಾಡಿ ಮತ್ತು ಹೊಸ ಗಾಂಧಿ ನಗರದ ಜುಬರ್ ದಲಾಯತ್ ಬಂಧಿತ ಆರೋಪಿಗಳು. ಚಿಕ್ಕೋಡಿ ಮೂಲದ ತಮನ್ನಾ ಎಂಬಾತನ ಮೇಲೆ ಈ ಇಬ್ಬರು ಆರೋಪಿಗಳು ಹಲ್ಲೆ ನಡೆಸಿ ನಗದು, ಎಟಿಎಂ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡಿದ್ದರು.

Read More »

ಭರ್ಜರಿ ಬೇಟೆ: 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಜಪ್ತಿ: ನಾಲ್ವರ ಬಂಧನ

ದೆಹಲಿ: ದೆಹಲಿ ಪೊಲೀಸರ ವಿಶೇಷ ತಂಡ ಅಂತರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಪತ್ತೆಹಚ್ಚಿದ್ದು, ಬರೋಬ್ಬರಿ 2,500 ಕೋಟಿ ರೂಪಾಯಿ ಮೌಲ್ಯದ 354 ಕಿಲೋ ಗ್ರಾಮ್ ಉತ್ತಮ ಗುಣಮಟ್ಟದ ಹೆರಾಯಿನ್ ಅನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಹರ್ಯಾಣದ ಮೂವರು ಹಾಗೂ ದೆಹಲಿ ಓರ್ವ ವ್ಯಕ್ತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ತಂಡ ಈವರೆಗೆ ಪತ್ತೆ ಹಚ್ಚಿದ ಅತೀ ದೊಡ್ಡ ಡ್ರಗ್ಸ್ ಜಾಲ ಇದಾಗಿದೆ. ಈ ಮೂಲಕ …

Read More »

ಕೇಂದ್ರ ಸಂಪುಟ: 33 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, 70 ಸಚಿವರು ಕೋಟ್ಯಧೀಶ್ವರರು!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟವನ್ನು ವಿಸ್ತರಿಸಿ 36 ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಒಟ್ಟು ಕೇಂದ್ರ ಸಂಪುಟದ ಸಚಿವರ ಸಂಖ್ಯೆ 78ಕ್ಕೆ ಏರಿಕೆಯಾಗಿತ್ತು. ಇದರಲ್ಲಿ 33 ಸಚಿವರ ವಿರುದ್ಧ (ಶೇ.42) ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದಾಗಿ ಎಡಿಆರ್ ತಿಳಿಸಿದೆ.   24 ಸಚಿವರು ಕ್ರಿಮಿನಲ್ ಪ್ರಕರಣಗಳಲ್ಲಿ ಕೊಲೆ, ಕೊಲೆ ಯತ್ನ ಮತ್ತು ದರೋಡೆಯಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ವಿವರಿಸಿದೆ. ಸಚಿವರು ಚುನಾವಣಾ ಆಯೋಗಕ್ಕೆ …

Read More »

ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ: ಡಾ.ಕೆ ಸುಧಾಕರ್

ದಾವಣಗೆರೆ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾಸ್ಪತ್ರೆಯ ಭೇಟಿಗಿಂತ ಮೊದಲು ಜಿಎಂಐಟಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿ ಹೇಳುತ್ತಿದ್ದು, ಹಾಗಂತ ಯಾವ ಪೋಷಕರು ಮೈಮರೆಯುವಂತಿಲ್ಲ. ಲಾಕ್‍ಡೌನ್ ಸಡಿಲಿಕೆ ಆಗಿದೆ ಎಂದು ಜನರು ಕೂಡ ಮೈಮೆರಯುವಂತಿಲ್ಲ. ಪ್ರತಿಯೊಬ್ಬರು ಎರಡನೇ ಡೋಸ್ ಪಡೆಯುವವರೆಗೂ ಎಲ್ಲರೂ …

Read More »

ಕೇಂದ್ರ ಸಚಿವೆ ಕರಂದ್ಲಾಜೆಯನ್ನು ಹಾಡಿ ಹೊಗಳಿದ ಬಿಎಸ್‍ವೈ

ಕಲಬುರಗಿ: ಬಿಜೆಪಿ ಸರ್ಕಾರ ಬಂದು ಎರಡು ವರ್ಷವಾದರೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ತುಟಿ ಬಿಚ್ಚದ ಸಿಎಂ ಬಿ.ಎಸ್ ಯಡಿಯೂರಪ್ಪ ಕಲಬುರಗಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಕರಂದ್ಲಾಜೆ ಅವರನ್ನು ಹಾಡಿ ಹೊಗಳಿದ್ದಾರೆ. ಕಲಬುರಗಿ ನಗರದಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಬಿಎಸ್‍ವೈ, ರೈತರ ಬಗ್ಗೆ ಸದಾ ಕಾಳಜಿ ವಹಿಸುವ ಶೋಭಾ ಕರಂದ್ಲಾಜೆ ಅವರನ್ನು ಪ್ರಧಾನಿ ಮೋದಿ ಕೃಷಿ ಸಚಿವರನ್ನಾಗಿ …

Read More »

ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆ

ಬೆಳಗಾವಿ:  ಕಾರ್ಯಕರ್ತರ ಸಹನೆ, ಸಹಕಾರ ಹಾಗೂ ಅವರ ನಿಸ್ವಾರ್ಥ ಸೇವೆಯಿಂದ ಬಿಜೆಪಿ ಪಕ್ಷ ಇಂದು ಪ್ರಪಂಚದಲ್ಲಿಯೆ ಅತಿಹೆಚ್ಚು ಕಾರ್ಯಕರ್ತರನ್ನು ಹೊಂದಿದ ಸಮರ್ಥ ಪಕ್ಷ ಎನ್ನುವದು ಜಗಜ್ಜನಿತವಾಗಿದೆ ಎಂದು ಉಪಸಭಾಪತಿ ಆನಂದ ಮಾಮನಿ ಹೇಳಿದರು. ನಗರದ ಗೋಮಟೇಶ್ವರ ಸಭಾ ಭವನದಲ್ಲಿ ಶನಿವಾರ ನಡೆದ ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆಯನ್ನು ಉದ್ಘಾಟಸಿ ಮಾತನಾಡಿ, ಚುನಾವಣೆಗೆ ಮಾತ್ರ ಸೀಮಿತವಾಗದೆ ಜನರ ಸಂಕಷ್ಟಕ್ಕೆ ಸದಾ ಸ್ಪಂದಿಸುವದೆ ಪಕ್ಷದ ಸಿದ್ದಾಂತವಾಗಿದೆ. ಬಿಡುವಿಲ್ಲದೆ ದೇಶದ ಜನರ …

Read More »

ಜನರನ್ನು ಮಕ್ಕಳ ರೀತಿಯಲ್ಲಿ ನೋಡಬೇಕು’; ಆಲೋಚನೆಗಳನ್ನು ಹಂಚಿಕೊಂಡ ಉಪೇಂದ್ರ

ನಟ ಉಪೇಂದ್ರ ಪ್ರಜಾಕೀಯ ಪಕ್ಷ ಸ್ಥಾಪಿಸಿ ಅದರ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯದಲ್ಲಿ ಹೊಸ ಬದಲಾವಣೆ ತರಬೇಕು ಎನ್ನುವ ಕನಸನ್ನು ಅವರು ಕಂಡಿದ್ದಾರೆ. ಈಗ ಜನರೊಂದಿಗೆ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಫೇಸ್​ಬುಕ್​ ಲೈವ್​ ಬಂದಿದ್ದರು. ಈ ವೇಳೆ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಯಾವ ಪಕ್ಷ ಬರುತ್ತದೆ, ಯಾರು ನಾಯಕ, ಯಾವ ಜಾತಿ ಎಂಬಿತ್ಯಾದಿ ನೋಡಿಕೊಂಡು ನಾವು ಮತ ಹಾಕುತ್ತಿದ್ದೇವೆ. ಆ ರೀತಿ ಆಗಬಾರದು. ಅದು ಸಂಪೂರ್ಣವಾಗಿ ಅಳಿಸಿ ಹೋಗಬೇಕು. …

Read More »

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್​ಎಸ್​ ಡ್ಯಾಂ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಹೆಚ್​ಡಿಕೆ ನಡುವಿನ ಸಂಘರ್ಷದ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ನಮ್ಮ ಡ್ಯಾಂ ಸುರಕ್ಷಿತವಾಗಿದೆಯಾ ಅನ್ನೋದಷ್ಟೇ ಮುಖ್ಯ ಎಂದು ಹೇಳಿದ್ರು. ಸಂಸದೆ ಸುಮಲತಾ ಅಂಬರೀಶ್​ ಹಾಗೂ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ …

Read More »

ಭೀಕರ ಅಪಘಾತಕ್ಕೆ ಬಲಿ ಮೃತರು ಹುಕ್ಕೇರಿ ತಾಲೂಕಿನ ಬೆಲ್ಲದ-ಬಾಗೇವಾಡಿ ಗ್ರಾಮದವರು

ಅಮಾವಾಸೆ ಪೂಜೆಗೆಂದು ತೆರಳಿದ್ದ ಯುವಕರಿಬ್ಬರು ಲಾರಿಗೆ ಹಿಂದಿನಿಂದ ಬೈಕ್ ಗುದ್ದಿಸಿದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸಮೀಪದ ನಿಪ್ಪಾಣಿ -ಮುದೋಳ ರಾಜ್ಯ ಹೆದ್ದಾರಿಯಲ್ಲಿ ಕಬ್ಬೂರ ಟೋಲ್ ಗೇಟ್ ಹತ್ತಿರ ಟೋಲ್ ಹಣ ಕಟ್ಟಲು ನಿಂತಿದ್ದ ಲಾರಿಗೆ ಬೈಕ್ ಸವಾರರಿಬ್ಬರು ಹಿಂಬದಿಯಿಂದ ಗುದ್ದಿ ಅಪಘಾತವಾಗಿದೆ. ಸ್ಥಳದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಘಟನೆ ಶುಕ್ರವಾರ ರಾತ್ರಿ ೯ರ ವೇಳೆಗೆ ನಡೆದಿದೆ. ಮೃತರು ಹುಕ್ಕೇರಿ ತಾಲೂಕಿನ ಬೆಲ್ಲದ-ಬಾಗೇವಾಡಿ ಗ್ರಾಮದ ಸಿದ್ದಾರ್ಥ ಅಶೋಕ ಖೆಮಲಾಪುರೆ(೨೬) ಮತ್ತು ಪ್ರಮೋದ ಕರಿಯಪ್ಪಾ …

Read More »

ಗಂಡನ ಕೊಲೆ: ಪತ್ನಿ ಸೇರಿ ನಾಲ್ವರ ಬಂಧನ

ಯಲ್ಲಾಪುರ: ಗಂಡನನ್ನು ಕೊಲೆ ಮಾಡಿ, ನಂತರ ಆತ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದ ಆರೋಪಿ ಮಹಿಳೆ ಹಾಗೂ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಬಳಗಾರಿನ ಅತ್ತಗಾರಿನ, ಪ್ರಸ್ತುತ ಚಿಕ್ಕಮಾವಳ್ಳಿಯಲ್ಲಿರುವ ಶ್ವೇತಾ ರಾಜೇಶ ನಾಯ್ಕ (29), ಅವರ ತಂದೆ ದೀಪಕ್ ಬುದ್ದಾ ಮರಾಠಿ (53), ತಮ್ಮ ಗಂಗಾಧರ ಮರಾಠಿ (26) ಹಾಗೂ ತಾಯಿ ಯಮುನಾ ಮರಾಠಿ (50) ಬಂಧಿತರು. ರಾಜೇಶ ನಾರಾಯಣ ನಾಯ್ಕ (29) ಕೊಲೆಯಾದವರು. ಪತ್ನಿ ಶ್ವೇತಾ, ತನ್ನ …

Read More »