Breaking News
Home / 2021 / ಜುಲೈ / 11 (page 3)

Daily Archives: ಜುಲೈ 11, 2021

ಕೈ ನಾಯಕತ್ವದಲ್ಲಿ ಭಾರೀ ಬದಲಾವಣೆ? ಮಲ್ಲಿಕಾರ್ಜುನ ಖರ್ಗೆಗೆ ಪ್ರಮುಖ ಸ್ಥಾನ?

ನವದೆಹಲಿ: ಉತ್ತರಪ್ರದೇಶ ಮತ್ತು ಪಂಜಾಬ್‌ನಂತಹ ಪ್ರಮುಖ ರಾಜ್ಯಗಳ ಚುನಾವಣೆ ಹತ್ತಿರದಲ್ಲಿರುವುದರಿಂದ ಕಾಂಗ್ರೆಸ್‌ ತನ್ನ ಸಂಘಟನಾತ್ಮಕ ಸ್ವರೂಪದಲ್ಲಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಯುವ ನಾಯಕ ಸಚಿನ್‌ ಪೈಲಟ್‌, ಟಿ.ಎಸ್‌.ಸಿಂಗ್‌ ದೇವ್‌ ಅವರು ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಇಷ್ಟಾದರೂ ಗಾಂಧಿ ಕುಟುಂಬದವರೇ ಪಕ್ಷದ ಅಗ್ರನಾಯಕತ್ವ ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ರಾಹುಲ್‌ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನ …

Read More »

ಮತ್ತೆ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ದೇಶಾದ್ಯಂತ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ 100.91ರೂ ಮತ್ತು ಡೀಸೆಲ್ 89.88 ರೂಗೆ ಏರಿಕೆಯಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್‍ಗೆ 109.24 ರೂ. ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಲೀಟರ್‌ ಗೆ 92.97 ರೂ ರಷ್ಟಾಗಿದೆ. ಗುರುವಾರ ಪೆಟ್ರೋಲಿಯಂ ಖಾತೆ ಸಚಿವರಾಗಿ ಅಧಿಕಾರಿ ವಹಿಸಿಕೊಂಡ ಹರ್ದೀಪ್ ಸಿಂಗ್ ಪುರಿ ಮಾತನಾಡಿ, …

Read More »

ವಿಶ್ವ ಸಂಸ್ಥೆಯ ಕಾರ್ಮಿಕ ಕಾರ್ಡ್ ನೀಡೋದಾಗಿ ಮಹಿಳೆಯರಿಗೆ ವಂಚನೆ‌: ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ಗದಗ: ಹಳ್ಳಿಗಾಡಿನ ಮಹಿಳೆಯರನ್ನೇ ಟಾರ್ಗೆಟ್​ ಮಾಡಿಕೊಂಡು ವಂಚಿಸುತ್ತಿದ್ದ ವ್ಯಕ್ತಿಗೆ ಗದಗದ ಮಸಾರಿ ಪ್ರದೇಶದಲ್ಲಿ ಜನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಕಾರ್ಮಿಕ ಕಾರ್ಡ್ ಮಾಡಿಸಿದ್ರೆ ವಿಶ್ವ ಸಂಸ್ಥೆಯಿಂದ ಹಣ ಬರುತ್ತೆ. ಅಂತಹ ಕಾರ್ಮಿಕ ಕಾರ್ಡ್ ತಾನು ನೀಡೋದಾಗಿ ಮಹಿಳೆಯರಿಗೆ ಆ ವ್ಯಕ್ತಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಗದಗದ ಮಸಾರಿ ಪ್ರದೇಶದಲ್ಲಿ ಹಳ್ಳಿಯ ಮಹಿಳೆಯರನ್ನೇ ಟಾರ್ಗೆಟ್​ ಮಾಡಿ ವಂಚಿಸುತ್ತಿದ್ದ ಕುಮಾರ್ ಎಂಬ ವ್ಯಕ್ತಿಗೆ ಸ್ಥಳೀಯರು ಸೇರಿಕೊಂಡು ಬಾರಿಸಿದ್ದಾರೆ. ಚಿತ್ರದುರ್ಗ ಮೂಲದ ಡೆವಲೆಪ್ …

Read More »

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ: ಚಾಕು, ಗಾಂಜಾ ಸೇರಿದಂತೆ ಹಲವು ವಸ್ತು ವಶಕ್ಕೆ

ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿ ಕೈದಿಗಳ ಬಳಿ ಇದ್ದ ಗಾಂಜಾ, ಚಾಕು, ಮೊಬೈಲ್ಸ್, ಸಿಮ್ಸ್‌, ಮೆಮೋರಿ ಕಾರ್ಡ್‌ಗಳನ್ನು ವಶಪಡಿಸಿಕೊಂಡರು. ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕೈದಿಗಳು ಮೊಬೈಲ್ ಬಳಸಿ ಅಕ್ರಮ ಚಟುವಟಿಕೆಗಳ ನಡೆಸುತ್ತಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ. ಶನಿವಾರ ನಸುಕಿನ 5 ಗಂಟೆಗೆ ಶ್ವಾನ ದಳದ ಮೂಲಕ ಸಿಸಿಬಿ ತಂಡ ದಾಳಿ ನಡೆಸಿದೆ ಎಂದು ಸಿಸಿಬಿ …

Read More »

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಕಾರವಾರದಲ್ಲಿ ಇಬ್ಬರು ಅರೆಸ್ಟ್

ಕಾರವಾರ: ನಗರದ ಕೋಡಿಭಾಗದ ಸಾಗರ ದರ್ಶನ ಹಾಲ್ ಹಿಂಭಾಗದಲ್ಲಿ ಇಬ್ಬರು ಅಕ್ರಮವಾಗಿ ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಅಧಿಕಾರಿಗಳು ದಾಖಲಿ ನಡೆಸಿ ಇಬ್ಬರನ್ನು ಬಂಧಿಸಿದ್ದು 3.20 ಲಕ್ಷ ರೂ. ಗಾಂಜಾ ಜಪ್ತಿ ಮಾಡಿಕೊಂಡ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ಸಂಕ್ರಿವಾಡಾದ ರಿಜ್ವಾನ್ ಅಕ್ಬರ್ ಶೇಖ್ (30) ಹಾಗೂ ನಗರದ ಗುನಗಿವಾಡಾದ ಸಾಹಿಲ್ ನಾದರ್ ಭಾಷಾ ಶೇಖ್ (20) ಎನ್ನುವ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. …

Read More »