Breaking News
Home / 2021 / ಜುಲೈ / 13 (page 2)

Daily Archives: ಜುಲೈ 13, 2021

ಮಾಸ್ಕ್ ಧರಿಸದೇ ಜನರು ಗುಂಪುಗೂಡುವುದು ಕಳವಳಕಾರಿ: ಸಿಎಂಗಳ ಸಭೆಯಲ್ಲಿ ಪ್ರಧಾನಿ

ನವದೆಹಲಿ: ಎಂಟು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಜುಲೈ 13) ಕೋವಿಡ್ 19 ಪರಿಸ್ಥಿತಿ ಪುನರಾವಲೋಕನ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಜನರು ಮುಖಕ್ಕೆ ಮಾಸ್ಕ್ ಧರಿಸದೇ ಗುಂಪುಗೂಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೆಲವು ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳ ಆತಂಕಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ತಿಳಿಸಿದ್ದು, ಕೋವಿಡ್ ಮತ್ತಷ್ಟು …

Read More »

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ

ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು.   ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ‌ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು.   …

Read More »

ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವನ್ನು ಬದಲಾಯಿಸುವಂತೆ ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ :ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ – ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವನ್ನು ಬದಲಾಯಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆಯ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೋಲಿಸ ಆಯುಕ್ತರಿಗೆ ಸೋಮವಾರ ಮನವಿ ಸಲ್ಲಿಸಿದರು.ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವು ಮಳೆ, ಗಾಳಿಗೆ ನಾಶಗೊಳುತ್ತಿದೆ. ಈ ಕಾರಣದಿಂದ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೂಡಲೇ ಎಚ್ಚೆತುಕೊಂಡು ಬಾವುಟ ಬದಲಾವಣೆ‌ ಮಾಡಬೇಕು. ಬಾವುಟ ನಾಶಗೊಳ್ಳುತ್ತಿರುವುದರಿಂದ ಬೆಳಗಾವಿ ಸಮಸ್ತ ಕನ್ನಡಿಗರ ಭಾವನೆಗೆ ದಕ್ಕೆ ಉಂಟಾಗುತ್ತಿದೆ. …

Read More »

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಜೊತೆಗಿನ ಫೋಟೋ ವೈರಲ್ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಮತ್ತು ರಾಕ್ಲೈನ್ ವೆಂಕಟೇಶ್ ಜೊತೆಗಿರುವ ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ ಮತ್ತು ಸುಮಲತಾ ಅಂಬರೀಷ್ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದರು. ಈಗ ಇದೇ ವಿಚಾರಕ್ಕೆ ಸಂಬಂಧಿಸಿ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಾರ್ವಜನಿಕ ಜೀವನದಲ್ಲಿ 40 ವರ್ಷದಿಂದ …

Read More »

ಹೋರಾಟ ಮಾಡೋಹಾಗಿದ್ರೆ ಗಂಡಸ್ತನದಿಂದ ಹೋರಾಡೋಣ: ರಾಕ್​ಲೈನ್ ವೆಂಕಟೇಶ್

ಬೆಂಗಳೂರು: ರಾಕ್​ಲೈನ್ ವೆಂಕಟೇಶ್ ಮನೆ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಾಕ್​ಲೈನ್​ ವೆಂಕಟೇಶ್ ಹೇಳಿಕೆ ಕೊಟ್ಟಿದ್ದಾರೆ. ಇಂತಹ ಟೈಮ್​ನಲ್ಲಿ ನನ್ನ ಎದುರಿಸಬೇಕು ಅಂದ್ಕೊಂಡ್ರೆ ಅದು ಆಗಲ್ಲ, ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಕಲ್ಲು ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬಕ್ಕೆ ಸಪೋರ್ಟ್ ಮಾಡ್ತೀನಿ. ಈ ರೀತಿ ಗಲಾಟೆಗಳನ್ನ ಮಾಡಿಸಿ ನನ್ನ ಎದುರಿಸ್ತೀನಿ ಅಂದ್ಕೊಂಡ್ರೆ ಅದು ಆಗಲ್ಲ. ಅಂಬರೀಶ್ ಕುಟುಂಬದ ಹಿಂದೆ ನಾನು ಯಾವಾಗ್ಲೂ‌ ಇರ್ತೇನೆ. ಅಂಬರೀಶ್ …

Read More »

ಪ್ರಭಾವಿ ಜೆಡಿಎಸ್​ನ ನಾಯಕ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ, ಆರ್​ಎಸ್​ಎಸ್​ ನಾಯಕರ ಜೊತೆ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಭಾವಿ ಜೆಡಿಎಸ್​ನ ನಾಯಕ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿನ್ನೆ ಸಂಜೆ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡಿದ್ದಾರೆ.. ಕೇವಲ ಕಾಣಿಸಿಕೊಂಡಿದ್ದು ಮಾತ್ರವಲ್ಲ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆರ್​ಎಸ್​ಎಸ್ ನ ಕೇಂದ್ರ ಕಚೇರಿ ಕೇಶವ ಕುಂಜಕ್ಕೆ ಭೇಟಿ ನೀಡುವ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಾರೆ. ಕೇವಲ ಬಿಜೆಪಿ ನಾಯಕರಲ್ಲದೆ ಆರ್​ಎಸ್​ಎಸ್​ನ ಕೆಲ ಮುಖಂಡರು ಜೊತೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿರುವ ಪರಿಷತ್ ಸಭಾಪತಿಗಳ …

Read More »

ಪ್ರವಾಹ, ಕೋವಿಡ್‌ ಮೂರನೇ ಅಲೆ ತಡೆಗೆ ಸಜ್ಜು: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌.

ಯಾದಗಿರಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಅವರೊಂದಿಗೆ ‘ಪ್ರಜಾವಾಣಿ’ ಸೋಮವಾರ ಹಮ್ಮಿಕೊಂಡಿದ್ದ ಫೋನ್‌ ಇನ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರಕಿತು. ಕೋವಿಡ್‌ ಮೂರನೇ ಅಲೆಗೆ ಸಿದ್ಧತೆ, ಸಂಭವನೀಯ ಪ್ರವಾಹ ಎದುರಿಸಲು ಕೈಗೊಂಡ ಕ್ರಮಗಳು, ಕೋವಿಡ್‌ ಲಸಿಕೆಯ ಮಾಹಿತಿ ಸೇರಿದಂತೆ ಜಮೀನು ಸರ್ವೆ, ಗ್ರಾಮ ಪಂಚಾಯಿತಿ ಸ್ವಚ್ಛತೆ, ಪಿಎಂ ಕಿಸಾನ್‌ ಸಮ್ಮಾನ್ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿಗೆ ಓದುಗರು ಪ್ರಶ್ನೆಗಳನ್ನು ಕೇಳಿದರು. ಓದುಗರ ಎಲ್ಲ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌ ಅವರು …

Read More »

ಪಶುಸಂಗೋಪನೆ ಇಲಾಖೆಯಿಂದ ಅನ್ಯ ಇಲಾಖೆಗಳಿಗೆ ನಿಯೋಜನೆಗೆ ನಿರ್ಬಂಧ: ಪ್ರಭು ಚವ್ಹಾಣ

ಬೆಂಗಳೂರು: ಅನ್ಯ ಇಲಾಖೆಗಳಿಗೆ ನಿಯೋಜನೆಗೊಂಡಿರುವ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಇದೇ 31 ರೊಳಗೆ ವಾಪಸ್‌ ಪಡೆಯಲು ನಿರ್ಧರಿಸಲಾಗಿದೆ ಎಂದು ಇಲಾಖಾ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ. ಇನ್ನು ಮುಂದೆ ಪಶುಸಂಗೋಪನೆ ಇಲಾಖೆಯಿಂದ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಅನ್ಯ ಇಲಾಖೆಗಳಿಗೆ ನಿಯೋಜನೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಅನ್ಯ ಇಲಾಖೆಗಳಿಗೆ ನಿಯೋಜನೆ ಮೇಲೆ ಹೋಗಿರುವುದರಿಂದ ಸಿಬ್ಬಂದಿ ಕೊರತೆ ಉಂಟಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಬರುತ್ತಿರುವ ರೈತರ ಕರೆಗಳನ್ನು …

Read More »

ಗ್ರಾ.ಪಂ. ಲೈಬ್ರರಿಯಲ್ಲಿ ವಿದ್ಯಾರ್ಥಿಗಳ ಕಲಿಕೆ : ಆನ್‌ಲೈನ್‌ ಶಿಕ್ಷಣ ವಂಚಿತರಿಗೆ ವ್ಯವಸ್ಥೆ

ಆನ್‌ಲೈನ್‌ ಬೋಧನೆಯಿಂದ ವಂಚಿತರಾಗುತ್ತಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್‌ ಗ್ರಂಥಾಲಯಗಳಲ್ಲಿ ಕಲಿಕೆಗೆ ವ್ಯವಸ್ಥೆ ಕಲ್ಪಿಸಲು ಸರಕಾರ ಚಿಂತನೆ ನಡೆಸುತ್ತಿದೆ. ಮೊಬೈಲ್‌, ಟಿ.ವಿ. ಮೂಲಕ ಕಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆದರೆ ಎಷ್ಟೋ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ವಿಲ್ಲ. ಇದನ್ನು ಸರಿದೂಗಿಸಲು ಗ್ರಾ.ಪಂ. ಗ್ರಂಥಾಲಯಗಳನ್ನು ಬಳಸಿಕೊಳ್ಳಲು ಸರಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ 5,766 ಗ್ರಂಥಾಲಯಗಳಿವೆ. ಅವುಗಳನ್ನು ಬಳಸಿಕೊಂಡು, ಗ್ರಾಮೀಣ …

Read More »