Breaking News

Daily Archives: ಜುಲೈ 20, 2021

‘ಮರಳಿ ಬಂದಿದೆ ಸುವರ್ಣ ಯುಗ’: ಮಣಿರತ್ನಂ ಚಿತ್ರದ ಬಗ್ಗೆ ಐಶ್ವರ್ಯ ರೈ ಸಂತಸ

ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ‘ಪೊನ್ನಿಯನ್ ಸೆಲ್ವನ್’ ಸಿನಿಮಾದ ಪೋಸ್ಟರ್‌ನ್ನು ಮೊದಲ ಬಾರಿಗೆ ನಟಿ ಐಶ್ವರ್ಯ ರೈ ಬಚ್ಚನ್ ತಮ್ಮ ಇನ್ಸ್ಟಾಗ್ರಾಂ ಹಂಚಿಕೊಂಡಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯ ನಟಿಸುತ್ತಿದ್ದಾರೆ ಎಂದು ತಿಳಿದಿತ್ತು. ಆದರೆ, ಇದುವರೆಗೂ ಸಿನಿಮಾಗೆ ಸಂಬಂಧಪಟ್ಟ ಯಾವ ಪೋಸ್ಟರ್ ಸಹ ನಟಿ ಶೇರ್ ಮಾಡಿರಲಿಲ್ಲ. ಇದೀಗ, ಮೊದಲ ಪೋಸ್ಟರ್ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು, ”ಜೀವನದಲ್ಲಿ ಸುವರ್ಣ ಯುಗ ಬರುತ್ತದೆ” ಎಂದು ಕ್ಯಾಪ್ಷನ್ ಹಾಕಿದ್ದಾರೆ. ಕೊರೊನಾ ಲಾಕ್‌ಡೌನ್ ಕಾರಣದಿಂದ ಬ್ರೇಕ್ …

Read More »

ಬೆತ್ತಲೆಯಾಗಿ ಆಡಿಷನ್ ನೀಡಲು ಕೇಳಿದ್ದ: ರಾಜ್ ಕುಂದ್ರಾ ವಿರುದ್ಧ ಬಾಂಬ್ ಸಿಡಿಸಿದ ನಟಿ

ಅಶ್ಲೀಲ ವಿಡಿಯೋ ನಿರ್ಮಾಣ ಹಾಗೂ ಪ್ರದರ್ಶನ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನವಾಗಿದ್ದು, ಪ್ರಕರಣ ಸಂಬಂಧ ಹಲವು ಕುತೂಹಲಕಾರಿ ಅಂಶಗಳು ಹೊರಗೆ ಬರುತ್ತಿವೆ. ನಟಿ ಸಾಗರಿಕಾ ಸುಮನ್ ಮಾತನಾಡಿ, ”ರಾಜ್ ಕುಂದ್ರಾ, ಬೆತ್ತಲೆಯಾಗಿ ಆಡಿಷನ್ ನೀಡುವಂತೆ ಕೇಳಿದ್ದ” ಎಂದಿದ್ದಾರೆ. ”2020ರ ಆಗಸ್ಟ್‌ನಲ್ಲಿ ನನಗೆ ವೆಬ್ ಸರಣಿಯೊಂದರಲ್ಲಿ ನಟಿಸಲು ಅವಕಾಶ ಬಂತು. ರಾಜ್ ಕುಂದ್ರಾ ಸಂಸ್ಥೆಯ ವ್ಯವಸ್ಥಾಪಕ ಉಮೇಶ್ ಕಾಮತ್ ನನಗೆ ಕರೆ ಮಾಡಿದರು. ನನಗೆ ವಿಡಿಯೋ ಕಾಲ್‌ನಲ್ಲಿ …

Read More »

ಐವರು ನಿರ್ದೇಶಕರ ಒಂದು ಸಿನಿಮಾ ‘ಆದ್ದರಿಂದ’

ಒಟಿಟಿ ಸಮಯದಲ್ಲಿ ಅಂಥಾಲಜಿ ಸಿನಿಮಾಗಳು ಜನಪ್ರಿಯಗೊಳ್ಳುತ್ತಿವೆ. ಯಾವುದಾದರೂ ಒಂದು ವಿಷಯ ಆಧರಿಸಿ ಕೆಲವು ನಿರ್ದೇಶಕರು ಸೇರಿ ಅರ್ಧ ಗಂಟೆಯ ಸಿನಿಮಾ ಮಾಡುತ್ತಾರೆ. ಅದನ್ನು ಒಂದರಹಿಂದೊಂದರಂತೆ ಜೋಡಿಸಿ 2 ಅಥವಾ ಮೂರು ಗಂಟೆಯ ಸಿನಿಮಾ ರೀತಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕನ್ನಡದಲ್ಲಿಯೂ ಈ ರೀತಿಯ ಪ್ರಯತ್ನಗಳು ಈಗಾಗಲೇ ಆಗಿವೆ. ಇದೀಗ ಇಂಥಹುದೇ ಮತ್ತೊಂದು ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಅದುವೇ ‘ಆದ್ದರಿಂದ’. ಐದು ಜನ ಕನ್ನಡದ ಪ್ರತಿಭಾವಂತ ಸಿನಿಮಾ ನಿರ್ದೇಶಕರು ಒಟ್ಟಾಗಿ ಸಿನಿಮಾ ನಿರ್ದೇಶಕನ …

Read More »

ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2ನೇ ಲಾಕ್ ಡೌನ್ ಬಳಿಕ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಮೊದಲ ಸಿನಿಮಾ ತಂಡ ಇದಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಇದೀಗ ಹ್ಯಾಟ್ರಿಕ್ ಹೀರೋ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಶಿವಣ್ಣ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ-2’ ಸಿನಿಮಾ ‘ಸೆಪ್ಟಂಬರ್ 10’ರಂದು ಬಿಡುಗಡೆಯಾಗಲಿದೆ …

Read More »

ಪೆಟ್ರೋಲ್ ಬೆಲೆ ಏರಿಕೆ; ಸಂಸತ್​​ಗೆ ಸೈಕಲ್​​​ ತುಳಿದು ಬಂದು ಡಿ.ಕೆ ಸುರೇಶ್​​ ಪ್ರತಿಭಟನೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಇಡೀ ದೇಶಾದ್ಯಂತ ಸೈಕಲ್ ಜಾಥಾ ನಡೆಸುತ್ತಿದೆ. ಇದರ ಭಾಗವಾಗಿ ಇಂದು ಮುಂಗಾರು ಅಧಿವೇಶನ ಸಲುವಾಗಿ ದೆಹಲಿಗೆ ತೆರಳಿರುವ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್​​ ಸೈಕಲ್ ಜಾಥಾ ನಡೆಸಿದರು. ಕಾವೇರಿ ಅಪಾರ್ಟ್​ಮೆಂಟ್​​ನಲ್ಲಿರುವ ನಿವಾಸದಿಂದ ಸಂಸತ್​​ ಭವನದವರೆಗೂ ಸಂಸದ ಡಿ.ಕೆ ಸುರೇಶ್​​​ ನಡೆಸಿದ ಸೈಕಲ್​​​ ಜಾಥದಲ್ಲಿ ಹಲವು ಕಾಂಗ್ರೆಸ್​ ಮುಖಂಡರು ಭಾಗಿಯಾಗಿದ್ದರು. ಈ ಸೈಕಲ್​​​ ಜಾಥದಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ …

Read More »

ಧುಮುಕುತ್ತಿರುವ ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಯುವಕರ ಹುಚ್ಚು ಸಾಹಸ

ಕಲಬುರಗಿ: ಮುಂಗಾರಿನ ಅಬ್ಬರ ಮಳೆಯಿಂದ ಭೋರ್ಗರೆಯುತ್ತಿದ್ದ ಜಲಪಾತದಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದ ಯುವಕರನ್ನು ರಕ್ಷಣೆ ಮಾಡಿರುವ ಘಟನೆ ಚಿಂಚೋಳಿ ತಾಲೂಕಿನ ಎತ್ತಿಪೋತ ಜಲಪಾತ ಬಳಿ ನಡೆದಿದೆ. ಸತತವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭರ್ಜರಿ ಮಳೆಗೆ ಎತ್ತಿಪೋತ ಜಲಪಾತ ಧುಮುಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸಿದೆ. ಹೀಗೆ ಮೈದುಂಬಿ ಹರಿಯುತ್ತಿರುವ ಜಲಪಾತ ನೋಡಲು ತೆರಳಿದ್ದ ಯುವಕರಿಬ್ಬರು ಸೆಲ್ಫಿ ತೆಗೆಯುವ ದುಸ್ಸಾಹಸಕ್ಕೆ ಮುಂದಾಗಿ ನೀರಿಗಿಳಿದಿದ್ದರು. ಆದರೆ ಜಲಪಾತದ ರಭಸಕ್ಕೆ …

Read More »

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿ

ಬೆಂಗಳೂರು, ಜು. 20: ಕರ್ನಾಟಕದಲ್ಲಿ ಮಂಗಳವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 445 ವಿದ್ಯಾರ್ಥಿಗಳು 600 ಅಂಕಗಳಿಗೆ ಸರಾಸರಿ 600 ಅಂಕ ಗಳಿಸಿದ್ದಾರೆ. ಮಂಗಳವಾರ ಸಂಜೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದರು. ಪರೀಕ್ಷೆ ಇಲ್ಲದಿದ್ದರೂ ಪ್ರಥಮ ಪಿಯುಸಿ ಹಾಗೂ ಎಸ್‌ಎಸ್‌ಎಲ್ ಸಿ ಯಲ್ಲಿ …

Read More »

‘ಪರೀಕ್ಷೆ ರದ್ದು ಮಾಡಿ’ ಅಂತ ವಿಶ್ವವಿದ್ಯಾಲಯದ ಮುಂದೆಯೇ ಪ್ರತಿಭಟನೆಗೆ ಕುಳಿತ ಸ್ಟುಡೆಂಟ್ಸ್

ದಾವಣಗೆರೆ: ಸ್ನಾತಕೋತ್ತರ ಮತ್ತು ಪದವಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ಕೋರಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ ದಾವಣಗೆರೆಯ ವಿಶ್ವ ವಿದ್ಯಾಲಯದಲ್ಲಿ ನಡೆದಿದೆ. ಇತ್ತೀಚೆಗೆ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಮತ್ತು ಪದವಿ ಪರೀಕ್ಷೆಯ ವೇಳಾ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಸದ್ಯ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗ್ತಿದೆ. ಆದರೆ ಯಾವುದೇ ಕ್ಲಾಸ್​ ನಡೆಸದೇ ಕೇವಲ ಎರಡು ತಿಂಗಳ ಆನ್ಲೈನ್ ಕ್ಲಾಸ್ ಮಾಡಿದ್ದು ಮತ್ತು ಎರಡು ತಿಂಗಳ ಅಂತರದಲ್ಲಿ ಎರಡು ಸೆಮ್ ಗಳ ಪರೀಕ್ಷೆ ನಡೆಸುತ್ತಿರೋದಕ್ಕೆ …

Read More »

ಪೊಲೀಸ್‌ ಮಕ್ಕಳ ಅಧ್ಯನಕ್ಕೆ ಗ್ರಂಥಾಲಯ

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಮೈದಾನದ ಕಟ್ಟಡದಲ್ಲಿ ಪೊಲೀಸ್‌ ಸಿಬ್ಬಂದಿ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ನೂತನ ಗ್ರಂಥಾಲಯ ತೆರೆಯಲಾಗಿದೆ. ಕನ್ನಡ, ಇಂಗ್ಲೀಷ ಭಾಷೆಯಲ್ಲಿರುವ 750 ಪುಸ್ತಕಗಳು ಲಭ್ಯವಿದ್ದು, ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಯೋಗದಲ್ಲಿ ಆರಂಭಿಸಲಾಗಿದೆ. ಐಎಎಸ್‌, ಕೆಪಿಎಸ್‌, ಪಿಡಿಒ ಸೇರಿದಂತೆ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳು ಇಲ್ಲಿವೆ. ಏಕಕಾಲದಲ್ಲಿ 25 ಮಂದಿ ಕೂತು ಅಧ್ಯಯನ ನಡೆಸಲು ಅನುಕೂಲವಾಗುವಂತೆ …

Read More »

ಕೊಲೆ ಆರೋಪಿಯ ಮದುವೆಗೆ ಪೊಲೀಸರು ಹಾಜರ್.. ಕಡ್ಡಾಯ ರಜೆ ಶಿಕ್ಷೆ ಕೊಟ್ಟ ಎಸ್​ಪಿ

ಕೊಪ್ಪಳ: ಜಾಮೀನಿನ ಮೇಲೆ ಹೊರ ಬಂದ ಕೊಲೆ ಆರೋಪಿಯ ಮದುವೆಯಲ್ಲಿ ಭಾಗವಹಿಸಿದ ಪೊಲೀಸ್​ ಅಧಿಕಾರಿಗಳಿಗೆ ಎಸ್​ಪಿ ಕಡ್ಡಾಯ ರಜೆ ಶಿಕ್ಷೆ ನೀಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.     ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿ ಹನುಮೇಶ್ ನಾಯಕನ ಮಗ, ಮಹಾಂತೇಶ್ ನಾಯಕ ಕೂಡ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ ಎನ್ನಲಾಗಿದ್ದು ಕಳೆದ ಎರಡು ದಿನಗಳ ಹಿಂದೆ ಕನಕಗಿರಿ ತಾಲೂಕಿನ, ಹುಲಿಹೈದರ್ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾನೆ. ಈ ಮದುವೆಯಲ್ಲಿ ಗಂಗಾವತಿ ಡಿವೈಎಸ್​ಪಿ …

Read More »