Home / 2021 / ಜುಲೈ / 20 (page 2)

Daily Archives: ಜುಲೈ 20, 2021

ಕ್ರಿಮಿನಲ್ ಗಳು ಒಳ್ಳೆಯ ಕೆಲಸ ಮಾಡಲು ಸಾಧ್ಯವೇ?: ಕೇಂದ್ರದ ವಿರುದ್ಧ ಕಿಡಿಕಾರಿದ ದಿನೇಶ್

ಬೆಂಗಳೂರು: ಪೆಗಸಸ್ ಸ್ಪೈವೇರ್‌ ಮೂಲಕ ಪ್ರತಿಷ್ಟಿತ ವ್ಯಕ್ತಿಗಳ ಮೇಲೆ ಕಣ್ಗಾವಲು ಇಡುವ ಕೇಂದ್ರದ ದುಷ್ಟ ಬುದ್ದಿ ಜಗತ್ತಿನ ಮುಂದೆ ಬೆತ್ತಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಮೇಲೂ ಕಣ್ಗಾವಲು ನಡೆಸಿರುವುದು ಕ್ರಿಮಿನಲ್‌ಗಳು ಮಾಡುವಂತ ಕೆಲಸ. ಕೇಂದ್ರದ ಆಯಕಟ್ಟಿನ ಜಾಗದಲ್ಲಿ ಕ್ರಿಮಿನಲ್‌ಗಳೇ ಇರುವಾಗ ಕ್ರಿಮಿನಲ್ ಕೆಲಸವಲ್ಲದೆ ಒಳ್ಳೆ ಕೆಲಸ ಮಾಡಲು ಸಾಧ್ಯವೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಅಸಮರ್ಥ ನಾಯಕನಿಗೆ ಸದಾ ಅಸ್ತಿತ್ವದ ಭಯ ಕಾಡುತ್ತದೆ. ಮೋದಿಯವರಿಗೂ …

Read More »

ಸಚಿವ ಮುರಿಗೇಶ್ ನಿರಾಣಿ ಓರ್ವ ‘ಸಿಡಿ ಬಾಬಾ’; ಅವರ ಬಳಿ 500 ಸಿಡಿಗಳಿವೆ; ಹೊಸ ಬಾಂಬ್ ಸಿಡಿಸಿದ ಆಲಂ ಪಾಷಾ

ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿಡಿಗಳಿವೆ. ಯಾರದ್ದೂ ಬೇಕಾದರೂ ಸಿಡಿ ಇರಬಹುದು. ಒಂದು ವೇಳೆ ಇವರಿಗೆ ಆರೂವರೆ ಕೋಟಿ ಜನರ ಬೆಂಬಲ ಸಿಕ್ಕರೆ ಈ ಸಿಡಿಗಳ ಸಂಖ್ಯೆ 50 ಲಕ್ಷ ಆಗಬಹುದು ಎಂದು ಉದ್ಯಮಿ ಎ.ಆಲಂ ಪಾಷ ಆರೋಪಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುರುಗೇಶ್ ನಿರಾಣಿ ರಾಜ್ಯದ ಮಂತ್ರಿಗೂ ಸಿಡಿ ಇದೆ ಎಂದು ಹೆದರಿಸಿದ್ದಾರೆ. ಅವರು ಕೋರ್ಟ್ ನಿಂದ ಸ್ಟೇ …

Read More »

ಬಾಯ್​ಫ್ರೆಂಡ್ ಜೊತೆ ಸೇರಿ ಗಂಡನನ್ನೇ ಕೊಂದು, ಸುಟ್ಟುಹಾಕಿದ ಹೆಂಡತಿ; 10 ವರ್ಷಗಳ ಬಳಿಕ ಸೆರೆ ಸಿಕ್ಕ ಹಂತಕಿ

ನವದೆಹಲಿ: ಆಕೆ ಇನ್ನೂ ಕಾಲೇಜಿನ ಮೆಟ್ಟಿಲೇರಿದ ದಿನಗಳವು. ಚೆನ್ನಾಗಿ ಓದಿ, ಒಳ್ಳೆಯ ಕೆಲಸ ಹಿಡಿದು, ತಾನಿಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಬೇಕೆಂಬ ಆಸೆ ಆಕೆಗಿತ್ತು. ಆದರೆ, ಮನೆಯಲ್ಲಿ ಆಕೆಗೆ ಇಷ್ಟವಿಲ್ಲದಿದ್ದರೂ 18ನೇ ವಯಸ್ಸಿಗೆ ಮದುವೆ ಮಾಡಿದ್ದರು. ಆದರೆ, ಆಕೆಯ ಮನಸಿನಲ್ಲಿ ಆತನಿಗೆ ಜಾಗವಿರಲಿಲ್ಲ. ಹೀಗಾಗಿ, ತನ್ನ ಬಾಯ್​ಫ್ರೆಂಡ್ ಜೊತೆ ಸೇರಿ ಗಂಡನನ್ನು ಕೊಲೆ (Murder) ಮಾಡಿದ್ದ ಆಕೆ ಆತನ ಶವವನ್ನು (Dead Body) ಸುಟ್ಟು ಹಾಕಿದ್ದಳು. ಅದೆಲ್ಲ ಆಗಿ ಬರೋಬ್ಬರಿ 10 …

Read More »

ಧಾರವಾಡ: ಮದ್ಯವ್ಯಸನಿಯಾಗಿದ್ದ ಮಗನನ್ನು ಹತ್ಯೆಗೈದ ತಂದೆ!

ಧಾರವಾಡ: ಮದ್ಯ ವ್ಯಸನಿಯಾಗಿ ಸದಾ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹತ್ಯೆ ಮಾಡಿರುವ ಘಟನೆ ನಗರದ ತೇಲಗಾರ ಓಣಿಯಲ್ಲಿ ನಡೆದಿದೆ. ಬಸವರಾಜ ಹಿರೇಕುಂಬಿ (36 ವ) ಎಂಬಾತನೇ ಹತ್ಯೆಗೀಡಾದ ವ್ಯಕ್ತಿ. ಈತ ಮದ್ಯವೆಸನಿಯಾಗಿದ್ದ. ಪ್ರತಿದಿನ ಮದ್ಯ ಕುಡಿಯುವುದಕ್ಕಾಗಿ ತನ್ನ ತಂದೆಗೆ ಹಣಕ್ಕಾಗಿ ಎಂದು ಪೀಡಿಸುತ್ತಿದ್ದ. ಸೋಮವಾರ ರಾತ್ರಿ ಕೂಡ ತನ್ನ ತಂದೆ ಫಕ್ಕೀರಪ್ಪನೊಂದಿಗೆ ಹಣ ಕೊಡುವಂತೆ ಜಗಳ ಮಾಡಿದ್ದ. ಈ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಫಕ್ಕೀರಪ್ಪ ಕಬ್ಬಿನ ಹಾರೆಕೋಲಿನಿಂದ ತನ್ನ ಮಗನನ್ನೇ …

Read More »

ಬೆಳಗಾವಿ ಜಿಲ್ಲಾ ಪೋಲೀಸರು ಬಕ್ರೀದ್ ಹಬ್ಬದ ಮುನ್ನಾದಿನ 209 ಆಕಳು ಕರುಗಳನ್ನು ರಕ್ಷಿಸಿದ್ದಾರೆ‌

ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …

Read More »

ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ: ಮಠಾಧೀಶರು ವರಿಷ್ಠರಿಗೆ ಎಚ್ಚರಿಕೆ

ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯಮಂತ್ರಿ ಬದಲಿಸಿದರೆ ಬಿಜೆಪಿಗೆ ಉಳಿಗಾಲವಿಲ್ಲ ಎಂದು ಮಠಾಧೀಶರು ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಚರ್ಚೆ ಬೆನ್ನಲ್ಲೇ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಯಡಿಯೂರಪ್ಪನವರನ್ನು ಭೇಟಿಯಾದ ಸ್ವಾಮೀಜಿಗಳ ನಿಯೋಗ ಬಿಜೆಪಿ ಹೈಕಮಾಂಡ್ ಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ದಿಂಗಾಲೇಶ್ವರ ಶ್ರೀಗಳು, ಯಡಿಯೂರಪ್ಪನವರನ್ನು ಬದಲಾವಣೆ ಮಾಡಿದರೆ …

Read More »

ಹತ್ತು ಲಕ್ಷ ರೂ ಊಡಾಯಿಸಿದ್ದ ಆರೋಪಿಯನ್ನು ಬಂಧಿಸಿ ,ಆತನ ನೂರಾರು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿ ಗಡ್ಡೇಕರ ನೇತ್ರತ್ವದ ಸೈಬರ್ ಕ್ರೈಂ ಪೋಲೀಸ್ ತಂಡ ಯಶಸ್ವಿಯಾಗಿದೆ.

ಬೆಳಗಾವಿ-ಕೆಲವು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಅವ್ಯಾಹತವಾಗಿ ಸರಗಳ್ಳತನ ಮಾಡುತ್ತಿದ್ದ ಜಾಮತಾರಾ chine scratching ಗ್ಯಾಂಗ್ ಮೇಲೆ ಗೋಲೀಬಾರ್ ಮಾಡಿ ಸರಗಳ್ಳರನ್ನು ಎನ್ ಕೌಂಟರ್ ಮಾಡಿ ಬೆಳಗಾವಿ ನಗರವನ್ನು ಸರಗಳ್ಳರಿಂದ ಮುಕ್ತ ಮಾಡಿದ್ದ ಸಿಪಿಐ ಗಡ್ಡೇಕರ ಈಗ ಸೈಬರ್ ಕ್ರೈಂ ಸಿಪಿಐ ಆಗಿ ಅಲ್ಪಾವಧಿಯಲ್ಲೇ ಪ್ರಕರಣವೊಂದನ್ನು ಪತ್ತೆ ಮಾಡಿ ವಿಶೇಷ ಸಾಧನೆಗೈದಿದ್ದಾರೆ‌.     ಕಳೆದ ತಿಂಗಳು ಬೆಳಗಾವಿಯ ಬಿಎಸ್ಎನ್ಎಲ್ ನಿವೃತ್ತ ಸಿಬ್ಬಂಧಿಯೊಬ್ಬರ ಖಾತೆಯಿಂದ ಸಮಾರು ಹತ್ತು ಲಕ್ಷ ರೂ ಊಡಾಯಿಸಿದ್ದ …

Read More »

ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …

Read More »

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …

Read More »

ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ

ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು.   ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ.     ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …

Read More »