Breaking News
Home / 2021 / ಜುಲೈ / 21 (page 2)

Daily Archives: ಜುಲೈ 21, 2021

ಸಿಎಂ ಯಡಿಯೂರಪ್ಪನವರನ್ನು ಬದಲಿಸಿದ್ರೆ ಬಿಜೆಪಿ ಸರ್ವನಾಶ; ಹೈಕಮಾಂಡ್ ಗೆ ದಿಂಗಾಲೆಶ್ವರ ಸ್ವಾಮೀಜಿ ಎಚ್ಚರಿಕೆ

ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಮಠಾಧೀಶರ ನಿಯೋಗ ಬಿಜೆಪಿ ಹೈಕಮಾಂಡ್ ಗೆ ಖಡಕ್ ಎಚ್ಚರಿಕೆ ನೀಡಿದೆ. ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಶ್ರೀ, ಸಮರ್ಥವಾಗಿ ಆಡಳಿತ ನಡೆಸುತ್ತಿರುವ ಯಡಿಯೂರಪ್ಪನರನ್ನು ಬದಲಾವಣೆ ಮಾಡಬೇಕು ಎಂಬುದು ಒಂದು ಕೆಟ್ಟ ಉದ್ದೇಶ. ಸಿಎಂ ಬಿ ಎಸ್ ವೈ ಕೇವಲ ಲಿಂಗಾಯತ ನಾಯಕ ಮಾತ್ರವಲ್ಲ, ಈ ರಾಜ್ಯದ …

Read More »

ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಗಣಿ ಸಚಿವ ಮುರುಗೇಶ್ ನಿರಾಣಿ ಕಾಶಿ ವಿಶ್ವನಾಥ ದೇವರ ದರ್ಶನ ಪಡೆದು ವಾಪಸ್ ಆಗಿದ್ದ ಬೆನ್ನಲ್ಲೇ ಇದೀಗ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು …

Read More »

ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ

ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ …

Read More »

ಪೆಗಾಸಸ್ ವಿವಾದ: ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದ ಕರ್ನಾಟಕ ಕಾಂಗ್ರೆಸ್, ಸುಪ್ರೀಂಕೋರ್ಟ್ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ಬೆಂಗಳೂರು: ಪೆಗಾಸಸ್ ಗೂಡಚಾರಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲೂ ಈ ಸಾಫ್ಟ್ ವೇರ್ ಬಳಸಿ ಪ್ರತಿಪಕ್ಷಗಳ ನಾಯಕರ ಆಪ್ತರ ಫೋನ್ ಕದ್ದಾಲಿಕೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿಯವರ ಆಪ್ತರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಬೇಹುಗಾರಿಕೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ …

Read More »

ವೀರಶೈವ ಸಮುದಾಯದವರಿಗೇ ಸಿಎಂ ಹುದ್ದೆ ನೀಡಬೇಕು; ಹೋರಾಟದ ಎಚ್ಚರಿಕೆ ನೀಡಿದ ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ವಿವಿಧ ಸ್ವಾಮೀಜಿಗಳು ಬ್ಯಾಟಿಂಗ್ ಬೀಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರಿನ ಕೊಳದ ಮಠದ ಡಾ.ಶಾಂತವೀರ ಶ್ರೀಗಳು, ಯಡಿಯೂರಪ್ಪ ಬದಲಾವಣೆ ವಿಚಾರ ಕುರಿತು ಊಹಾಪೋಹ ಕೇಳಿ ಬರುತ್ತಿದೆ. ರಾಜ್ಯಕೀಯ ಅನ್ನೋದು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ವೀರಶೈವ ಲಿಂಗಾಯತ ಜನಾಂಗದವರು ಐವತ್ತಕ್ಕು ಹೆಚ್ಚು ಜನ ಸ್ಥಾನದಲ್ಲಿದ್ದಾರೆ. ಸಮುದಾಯವನ್ನು ಕಡೆಗಣಿಸುವ ಕೆಲಸ ಆಗಬಾರದು ಅಂತ ಹೇಳಿದರು. ನಾಯಕತ್ವ ಬದಲಾವಣೆ ಮಾಡುವುದಾದರೆ …

Read More »

ಹೊಲಕ್ಕೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ, ರುಂಡ, ಕೈ ಕಾಲು ನಾಪತ್ತೆ; ಬಾಗಲಕೋಟೆಯಲ್ಲಿ ನರಬಲಿ ಶಂಕೆ

ಬಾಗಲಕೋಟೆ: ಮೇವು ತರಲೆಂದು ಹೊಲಕ್ಕೆ ಹೋದ ವೇಳೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ (Dead Body) ಪತ್ತೆಯಾದ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಮುಧೋಳ ತಾಲೂಕಿನ ಶಿರೋಳ ಬಳಿ ನಡೆದಿದೆ. ಜುಲೈ 16ರಂದು ಮೇವು ತರಲು ಹೊಲಕ್ಕೆ ಹೋಗಿದ್ದ ಮಹಿಳೆ (Women) ಮನೆಗೆ ವಾಪಾಸ್ಸಾಗಿರಲಿಲ್ಲ. ಇದೀಗ ನಾಪತ್ತೆಯಾಗಿದ್ದ ಮಹಿಳೆಯ ದೇಹ ರುಂಡ, ಕೈಕಾಲು ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ (Death) ಸುತ್ತ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮೃತ ಮಹಿಳೆಯನ್ನು ರಮೀಜಾ ಅಲಾಸ …

Read More »

ಬಾಂಗ್ಲಾ ಯುವತಿ ಅತ್ಯಾಚಾರ ಆರೋಪಿಗಳಿಂದ ವಿದೇಶಗಳಿಗೆ ಮಹಿಳೆಯರ ಸಾಗಾಟ

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಯುವತಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯಲ್ಲಿ ಪೋಲೀಸರಿಗೆ ಇವರು ಇತರ ದೆಶಗಳಿಗೆ ಮಹಿಳೆಯರ ಸಾಗಾಟ ಮಾಡುತ್ತಿರುವ ಮಾಹಿತಿ ತಿಳಿದು ಬಂದಿದೆ. ಬಾಂಗ್ಲಾದೇಶ ದಿಂದ ಸಮುದ್ರದ ಮೂಲಕ ಚೆನ್ನೈ ತಲುಪಿಸಿ, ಅಲ್ಲಿಂದ ಕರ್ನಾಟಕ, ಕೇರಳ, ತಮಿಳು, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಇಲ್ಲಿನ ಯುವಕ – ಯುವತಿಯನ್ನು ಬಳಸಿಕೊಳ್ಳುವುದು ಒಂದು ಕಡೆಯಾದ್ರೆ, ಮತ್ತೊಂದು ಕಡೆ ಇದೇ ಯುವತಿಯನ್ನು ಕೆಲ ಕಿಂಗ್ ಪಿನ್ …

Read More »

ನಾಳೆಯಿಂದ ಆ.15ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ನವದೆಹಲಿ: ಭಾರತದ ಪುರಾತತ್ವ ಸಮೀಕ್ಷೆಯ ಆದೇಶದ ಪ್ರಕಾರ ಜುಲೈ 21 ರಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಾಮಾನ್ಯವಾಗಿ, ಸ್ವಾತಂತ್ರ್ಯ ದಿನಾಚರಣೆಗೂ ಒಂದು ವಾರ ಮೊದಲೇ ಕೋಟೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘2021ರ ಜುಲೈ 21ರ ಬೆಳಿಗ್ಗೆಯಿಂದ 2021ರ ಆಗಸ್ಟ್ 15 ರಿಂದ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಯೊಳಗೆ ಯಾವುದೇ ಪ್ರವೇಶವಿರಬಾರದು’ ಎಂದು ಭಾರತದ …

Read More »

ಮಹಿಳೆಗೆ ಅಶ್ಲೀಲ ಉತ್ತರ ಕೊಟ್ಟ ಮೈಸೂರು ಮಹಾನಗರ ಪಾಲಿಕೆ ಜೋನಲ್​ ಅಧಿಕಾರಿಗೆ ಕಚೇರಿಯಲ್ಲೇ ಧರ್ಮದೇಟು: ವಿಡಿಯೋ ವೈರಲ್

ಮೈಸೂರು: ಆಶ್ರಯ ಮನೆಗಾಗಿ ವಾಸ ದೃಢೀಕರಣ ಪತ್ರ ಕೇಳಿದ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ (Mysuru City Corporation) ಜೋನಲ್ ಅಧಿಕಾರಿಗೆ ಮಹಿಳೆಯರು ಧರ್ಮದೇಟು ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜೋನಲ್ ಅಧಿಕಾರಿ ವಿಷಕಂಠೇಗೌಡ ಎನ್ನುವವರು ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಆರೋಪ ಎದುರಿಸುತ್ತಿದ್ದು, ಅವರ ವರ್ತನೆಯಿಂದ (Misbehave) ಕುಪಿತರಾದ ಮಹಿಳೆಯರು ಶಾರದಾದೇವಿ ನಗರದ ವಲಯ ಕಚೇರಿಗೆ ನುಗ್ಗಿ ಥಳಿಸಿದ ವಿಡಿಯೋ ಇದೀಗ ವೈರಲ್ (Viral Video) …

Read More »

ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಮನೆ: ಗಂಡ ಸಜೀವ ದಹನ, ಪತ್ನಿ ಸ್ಥಿತಿ ಗಂಭೀರ

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದು ಹೊತ್ತಿ ಉರಿದಿದ್ದು, ಮಲಗಿದ್ದಲ್ಲೇ ವ್ಯಕ್ತಿಯೊಬ್ಬ ಸಜೀವ ದಹನ ಆಗಿದ್ದಾರೆ. ಪ್ರಕಾಶ್ (55) ಮೃತ ದುರ್ದೈವಿ. ಇವರ ಪತ್ನಿ ಗಂಭೀರ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕಾಶ್​ ಮನೆಯಲ್ಲೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಬೆಳಗಿನ ಜಾವ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನಿದ್ರೆ ಮಾಡುತ್ತಿದ್ದ ಪ್ರಕಾಶ್​ ಅಲ್ಲೇ ಸುಟ್ಟುಕರಕಲಾಗಿದ್ದಾರೆ. ಕಿರಾಣಿ ಅಂಗಡಿಯಲ್ಲಿದ್ದ ಸಾಮಗ್ರಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. …

Read More »