Breaking News
Home / 2021 / ಜುಲೈ / 22 (page 2)

Daily Archives: ಜುಲೈ 22, 2021

ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆ: ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು!

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*  

Read More »

ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಎದುರಾಯ್ತು ಮತ್ತೊಂದು ಸಮಸ್ಯೆ!

ಬೆಂಗಳೂರು, ಜು. 22: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯತ ಸಮುದಾಯದ ನಾಯಕರು ಪಕ್ಷಬೇಧ ಮರೆತು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ. ಅದರೊಂದಿಗೆ ಈಗ ಮತ್ತೊಂದು ಒತ್ತಡ ಯಡಿಯೂರಪ್ಪ ಅವರಿಗೆ ಎದುರಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ …

Read More »

ಡಿಕೆಶಿ ಬಿಟ್ಟು ಸಿದ್ದು ಜತೆ ರಾಹುಲ್‌ ಪ್ರತ್ಯೇಕ ಮಾತುಕತೆ : ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ

ಬೆಂಗಳೂರು: ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಪ್ರತ್ಯೇಕ ಮಾತುಕತೆ ನಡೆಸಿರುವುದು ಕಾಂಗ್ರೆಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್‌ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ ಆಪರೇಷನ್‌ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಸೇರಿ ಸಚಿವರಾಗಿರುವವರ ಮನಸ್ಥಿತಿ ಮತ್ತಿತರ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿರುವುದ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಬದಲಾವಣೆಯಾದರೆ ಆರು …

Read More »

ವಿಜಯಪುರ : ಕುದುರಿಸಾಲವಾಡಗಿ ಸೈನಿಕನ ಮೇಲೆ ಹಲ್ಲೆ

ವಿಜಯಪುರ: ಜಿಲ್ಲೆಯಲ್ಲಿ ಸೈನಿಕನ‌ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಸೈನಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ್ದಾನೆ. ಬಸವನ ಬಾಗೇವಾಡಿ ತಾಲೂಕಿನ ಕುದರೆಸಾಲವಾಡಗಿ ಗ್ರಾಮದ ಸಂತೋಷ ಶಿವಪ್ಪ ಹಟ್ಟಿ(30) ಸೇನೆಯಲ್ಲಿ ಹವಾಲ್ದಾರ ಆಗಿದ್ದು, 10 ವರ್ಷದಿಂದ ಸೇನೆಯಲ್ಲಿದ್ದಾರೆ. ತನ್ನ ಮದುವೆಗಾಗಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದು, ಗ್ರಾಮದ ಅರವಿಂದ ಕಡೇಮನಿ, ರಾಮಪ್ಪ ಕಡೇಮನಿ, ಬಸಗುಂಡಪ್ಪ ನಡುವಿನ ಮನಿ, ಮಲ್ಲವ್ವ ಕಡೇಮನಿ, ಭಾರತಿ ಕಡೇಮನಿ, ಸಾರ್‌ ಕಡೇಮನಿ, ರಮೇಶ ನಡುವಿನಮನಿ ಅವರು ಮಾರಕಾಸ್ತ್ರಗಳಿಂದ …

Read More »

ಹೊಸ ಸರ್ಕಾರ ರಚನೆಯಾದ್ರೆ ಬಾಂಬೆ ಟೀಂನ ಯಾರಿಗೂ ಮಂತ್ರಿಸ್ಥಾನ ನೀಡಬೇಡಿ : ವಿಶ್ವನಾಥ್

ಮೈಸೂರು : ಹೊಸ ಸಿಎಂ ನೇತೃತ್ವದ ಸರ್ಕಾರ ರಚನೆಯಾದರೆ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬುಧವಾರ ಇಲ್ಲಿ ತಿಳಿಸಿದರು. ‘ಬದಲಾವಣೆಗಾಗಿ 17 ಮಂದಿ ಬೆಂಬಲ ನೀಡಿದ್ದರು. ಆದರೆ, ಅಧಿಕಾರ ಸಿಕ್ಕ ಮೇಲೆ ಅವರು ಬದಲಾದರು. ಇವರಿಗೆಲ್ಲಾ ಮುಖ್ಯಮಂತ್ರಿ ಆಗಿದ್ದವರು ಯಡಿಯೂರಪ್ಪ ಅಲ್ಲ. ಬದಲಾಗಿ ಅವರ ಪುತ್ರ ವಿಜಯೇಂದ್ರ. ಇವರ ಸಾಧನೆ ಶೂನ್ಯ. ಹೀಗಾಗಿ, ಈ 17 ಜನಕ್ಕೆ ಅಧಿಕಾರ ನೀಡದಿದ್ದರೂ ಪರವಾಗಿಲ್ಲ. …

Read More »

ಲಂಚ ಸ್ವೀಕಾರ : ಯಾದಗಿರಿ ಜಿಲ್ಲೆಯ ಭ್ರಷ್ಟ ಭೂಮಾಪಕ ಎಸಿಬಿ ಬಲೆಗೆ

ಯಾದಗಿರಿ: ಜಿಲ್ಲೆಯ ಹುಣಸಗಿ ಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಭೂಮಾಪಕ ನ ಲಂಚಾವತಾರ ಬಯಲು ಮಾಡಿದ್ದಾರೆ. ಪಟ್ಟಣದ ಕಕ್ಕೇರಿ ಕ್ರಾಸ್ ಹತ್ತಿರ ರೋಡಿನಲ್ಲಿ ಸರ್ವೇಯರ್ ರವಿಕುಮಾರ್ ಬನಹಟ್ಟಿಯ ಮಹಾದೇವಪ್ಪ ಬಾಗನಗೌಡ ಬಡಿಗೇರ್ ಇವರ ಹೊಲ ಸರ್ವೆ ನಂಬರ್.53 ನೇದ್ದರ 12 ಎಕರೆ ಭೂಮಿಯಲ್ಲಿ 4 ಎಕರೆ 30 ಗುಂಟೆ ಪ್ರತ್ಯೇಕ ಮಾಡಿ ಸರ್ವೆ ಮಾಡುವ ವಿಷಯದಲ್ಲಿ 2,50,000/- ರೂ ಲಂಚದ ಹಣ ಪಡೆಯುತ್ತಿರುವಾಗ ಸಿಕ್ಕಿಬಿದ್ದಿದ್ದಾನೆ. ಕಲಬುರಗಿ ಎಸಿಬಿ …

Read More »

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಗುರುವಾರ ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ. ತೆರೆಮರೆಯಲ್ಲಿ ಈಗ ಹಲವು ಚಟುವಟಿಕೆಗಳು ವೇಗವಾಗಿ ನಡೆಯುತ್ತಿದ್ದು ಸಚಿವ ಸಂಪುಟ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳು ಹಲವು ಕ್ರಮಗಳನ್ನು ಇಂದಿನ ಸಭೆಯಲ್ಲಿ ಕೈಗೊಂಡು ಅದಕ್ಕೆ ಸಚಿವ ಸಂಪುಟ ಅನುಮೋದನೆಯನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ಈ …

Read More »

ದಿಲ್ಲಿ ಮೇಲೆ ಎಲ್ಲರ ಭಾರ! ಬಿಎಸ್‌ವೈ ಮನೆಗೆ ಮುಂದುವರಿದ ಶ್ರೀಗಳ ಭೇಟಿ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳ ನಡುವೆಯೇ ಎಲ್ಲರ ದೃಷ್ಟಿ “ದಿಲ್ಲಿ ನಿರ್ಧಾರ’ ದತ್ತ ನೆಟ್ಟಿದೆ. ಈ ಮಧ್ಯೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಯಡಿಯೂರಪ್ಪ, ಯಾರೂ ತಮ್ಮ ಪರವಾಗಿ ಹೇಳಿಕೆ ನೀಡಬಾರದು, ಪ್ರತಿಭಟನೆ ನಡೆಸಬಾರದು ಎಂದಿದ್ದಾರೆ. ಬುಧವಾರವೂ ಅವರ ನಿವಾಸಕ್ಕೆ ಸಿದ್ಧಗಂಗಾ ಮಠದ ಶ್ರೀಗಳ ಸಹಿತ 30ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. “ಯಾರೂ ತಮ್ಮ ಪರವಾಗಿ ಹೇಳಿಕೆ ಕೊಡುವುದಾಗಲಿ, ಪ್ರತಿಭಟನೆ ನಡೆಸುವುದಾಗಲಿ ಮಾಡಬಾರದು …

Read More »

ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಸೆಕ್ಸ್ ದಂಧೆ : ನಿರ್ಮಾಪಕ ಸೇರಿದಂತೆ ಮೂವರು ಅರೆಸ್ಟ್

ಸಿನಿಮಾದಲ್ಲಿ ಛಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ಆಡಿಷನ್ ಗೆ ಕರೆಯಿಸಿ ವೇಶ್ಯವಾಟಿಕೆ ದಂಧೆಗೆ ತಳ್ಳುತ್ತಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ವೇಶ್ಯಾವಾಟಿಕೆ ಅಡ್ಡಾಗೆ ತಳಳ್ಳುತ್ತಿದ್ದನು ಎನ್ನಲಾಗಿದೆ. ಗ್ರಾಹಕರ ಸೋಗಿನಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ದಾಳಿ ನಡೆಸಿ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. …

Read More »

ರಾಜಕೀಯದ ಬಗ್ಗೆ ಕುತೂಹಲದ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀಗಳಿಂದ ಶಾಕಿಂಗ್ ನ್ಯೂಸ್

ಶಿರಸಿ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತಂತೆ ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ನೇರಳಕಟ್ಟೆ ಗ್ರಾಮದ ಭೂದೇವಿ ದೇವಾಲಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಎದ್ದ ರಾಜಕೀಯ ವಿಪ್ಲವದ ಸುಖಾಂತ್ಯ ಕಾಣಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತನಾಡುವ ಸ್ವಾತಂತ್ರ್ಯವಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಅವರನ್ನು ಬೆಂಬಲಿಸಿದ …

Read More »