Breaking News
Home / 2021 / ಜುಲೈ / 23 (page 3)

Daily Archives: ಜುಲೈ 23, 2021

ಅರವಿಂದ್ ಬೆಲ್ಲದ್ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ ; ರಾಜ್ಯ ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಕ್ಷಣಕ್ಕೊಂದು ಸ್ವರೂಪ ಪಡೆದುಕೊಳ್ತಿದ್ದು, ಇದೀಗ ಮತ್ತೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕಾಶಿ ವಿಶ್ವನಾಥನ ಭೇಟಿಗೆ ತೆರಳಿರುವ ಬೆಲ್ಲದ್, ಅಲ್ಲಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಸದ್ಯ ಖಾಸಗಿ ಹೋಟೆಲ್​ನಲ್ಲಿ ತಂಗಿರುವ ಬೆಲ್ಲದ್​ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಲ್ಲದ್ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಮಾಡಲಾಗುತ್ತದೆ ಅನ್ನೋ …

Read More »

ರಾಜ್ಯದಲ್ಲಿ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು, ಎದುರಾದ ಪ್ರವಾಹ ಭೀತಿ; ಮುಂಬೈ-ಬೆಂಗಳೂರು ರಾ.ಹೆ. ಬಂದ್

ಮುಂಬೈ-ಬೆಂಗಳೂರು ರಾ.ಹೆ. ಬಂದ್ ಇನ್ನು, ಚಿಕ್ಕೋಡಿಯಲ್ಲಿ ಮಹಾ ಮಳೆಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಮುಂಬೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಸ್ಥಗಿತಗೊಂಡಿದೆ. ವೇದ ಗಂಗಾ ನದಿಗೆ ಅಪಾರ ಪ್ರಮಾಣದ ನೀರು ಹಿನ್ನಲೆ ಸಂಚಾರ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ವೇದಗಂಗಾ ನದಿ ನೀರು ಹರಿದು ಬರುತ್ತಿದೆ. ಬೆಳಗಾವಿಯಲ್ಲಿ ಮಳೆ ಪಶ್ಚಿಮ ಘಟ ಪ್ರದೇಶದಲ್ಲಿ ‌ಭಾರೀ ಮಳೆ ಹಿನ್ನೆಲೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥ …

Read More »

ಕೊಂಕಣ ರೈಲು ಸೇವೆಗೆ ಮಳೆ ಅಡ್ಡಿ: ಮಹಾರಾಷ್ಟ್ರದಲ್ಲಿ ಸಿಲುಕಿದ 6000 ಪ್ರಯಾಣಿಕರು

ಮುಂಬೈ: ಕೊಂಕಣ ರೈಲು ಸೇವೆಗೆ ಮಳೆ ಅಡ್ಡಿ ಉಂಟಾಗಿದ್ದು ಕೊಂಕಣ ರೈಲ್ವೆ ಮಾರ್ಗದಲ್ಲಿ 6,000 ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಕೊಂಕಣ ಮಾರ್ಗದ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ತೀವ್ರ ಮಳೆಯ ಪರಿಣಾಮ ನದಿ ಉಕ್ಕಿ ಹರಿದಿದ್ದು, ರಸ್ತೆ ಹಾಗೂ ರೈಲು ಮಾರ್ಗದ ಸೇವೆಗಳಿಗೆ ಅಡ್ಡಿಯುಂಟಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಮುಂಬೈ ಅಧಿಕಾರಿಗಳು ಎನ್ ಡಿಆರ್ ಎಫ್ ನ ಸಹಾಯ ಕೋರಿದ್ದಾರೆ. ಕೊಂಕಣ ರೈಲ್ವೆ ಮಾರ್ಗದಲ್ಲಿ ಈ ವರೆಗೂ 9 ರೈಲುಗಳ …

Read More »

ಆಲಮಟ್ಟಿ ಜಲಾಶಯ: 24 ಗೇಟ್‌ಗಳಿಂದ ನೀರು ಬಿಡುಗಡೆ

ಆಲಮಟ್ಟಿ(ವಿಜಯಪುರ): ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ, ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆಯಿದೆ. ಹೀಗಾಗಿ ಜಲಾಶಯದಿಂದ 1.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಮುಂದಿನ ಎರಡು ದಿನದೊಳಗೆ ಜಲಾಶಯದ ಒಳಹರಿವು 1.5 ಲಕ್ಷ ಕ್ಯುಸೆಕ್ ದಾಟುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಗುರುವಾರ ಬೆಳಿಗ್ಗೆಯಿಂದಲೇ ಹೊರಹರಿವು ಹೆಚ್ಚಿಸಲಾಗಿದೆ. 24 ಗೇಟ್ ಮೂಲಕ ನೀರು ಹೊರಕ್ಕೆ: ‘ಜಲಾಶಯದ 26 ಗೇಟ್‌ಗಳ ಪೈಕಿ 6 ಗೇಟ್‌ಗಳನ್ನು 1 …

Read More »

ಅಪಾಯಮಟ್ಟದಲ್ಲಿ ಹರಿಯುತ್ತಿರುವ ವಶಿಷ್ಟಿ ನದಿ: ಕೊಂಕಣ ರೈಲು ಸಂಚಾರ ವ್ಯತ್ಯಯ

: ಮಹಾರಾಷ್ಟ್ರದಲ್ಲಿ ಕೊಂಕಣ ರೈಲ್ವೆ ಮಾರ್ಗದ ಚಿಪ್ಳೂಣ್ ಹಾಗೂ ಕಮತೆ ನಿಲ್ದಾಣಗಳ ನಡುವೆ ರತ್ನಗಿರಿ ಪ್ರಾಂತ್ಯದಲ್ಲಿ ಹರಿ ಯುವ ವಶಿಷ್ಟಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆಯಲ್ಲಿ ಹಾದುಹೋಗುವ ರೈಲು ಹಳಿಗಳ ಮೇಲೂ ನೀರು ಹರಿಯುತ್ತಿರುವು ದರಿಂದ ರೈಲು ಸಂಚಾರವನ್ನು ಪ್ರಯಾಣಿಕರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿದ್ದು, ಇನ್ನು ಕೆಲವು ರೈಲುಗಳನ್ನು ಕಮತೆ ನಿಲ್ದಾಣದಲ್ಲಿ …

Read More »

ಮಾಮೂಲಿ ಕೊಡದ್ದಕ್ಕೆ ಸುಳ್ಳು ಕೇಸ್ ದಾಖಲಿಸಿದ್ದ ಲೇಡಿ ಇನ್​ಸ್ಪೆಕ್ಟರ್, ಸಬ್​ ಇನ್​ಸ್ಪೆಕ್ಟರ್ ಸೇರಿ ಮೂವರ ಸಸ್ಪೆಂಡ್

ಬೆಂಗಳೂರು: ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕನ ವಿರುದ್ಧ ಸುಳ್ಳು ಕೇಸ್​ ದಾಖಲಿಸಿದ್ದ ಮಹಿಳಾ ಇನ್​​ಸ್ಪೆಕ್ಟರ್​, ಈ ಪ್ರಕರಣದ ಆಂತರಿಕ ತನಿಖೆ ನಡೆಸುತ್ತಿದ್ದ ಡಿಸಿಪಿ ವಿರುದ್ಧವೇ ಸ್ಟಿಂಗ್ ಆಪರೇಷನ್​ಗೆ ಯತ್ನಿಸಿದ್ದ ಸಬ್​ ಇನ್​ಸ್ಪೆಕ್ಟರ್​ ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಅಮಾನತುಗೊಳಿಸಿದ್ದಾರೆ. ಆರ್​ಎಂಸಿ ಯಾರ್ಡ್ ಪೊಲೀಸ್ ಇನ್​ಸ್ಪೆಕ್ಟರ್​ ಪಾರ್ವತಮ್ಮ ಹಾಗೂ ಸಬ್​ ಇನ್​ಸ್ಪೆಕ್ಟರ್​ ಅಂಜಿನಪ್ಪ ಹಾಗೂ ಇನ್ನೊಬ್ಬ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇನ್​ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಎಸ್‌ಐ …

Read More »

ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳಿಂದ ಅಲಂಕಾರ

ಬೆಂಗಳೂರು ಜುಲೈ 22: ಕೊರೊನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್‌, ಪ್ಯಾರಾಸಿಟಮಾಲ್‌, ವಿಟಮಿನ್‌ ಸಿ, ಆಲ್ಕಾಫ್‌, ಬಿ ಕಾಂಫ್ಲೆಕ್ಸ್‌ ನಂತಹ ಮಾತ್ರೆಗಳನ್ನೇ …

Read More »

ಪ್ರತಿದಿನ 2GB ಡೇಟಾ, 28 ದಿನ ವ್ಯಾಲಿಡಿಟಿ: ನಂ. 1 ಸ್ಥಾನಕ್ಕೆ ಏರ್ಟೆಲ್-ಜಿಯೋ ನಡುವೆ ಗುದ್ದಾಟ

ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ (Jio) ಹಾಗೂ ಏರ್‌ಟೆಲ್​ಗಳ (Airtel) ನಡುವೆ ಸಮತ ಮುಂದುವರೆಯುತ್ತಲೇ ಇದೆ. ನಂಬರ್ ಒನ್ ಪಟ್ಟಕ್ಕೇರಲು ಏರ್ಟೆಲ್ ಹರಸಾಹಸ ಪಡುತ್ತಿದ್ದು, ಹೊಸ ಹೊಸ ಆಕರ್ಷಕ ಪ್ಲಾನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಜಿಯೋ ಕೂಡ ಎಂದಿನಂತೆ ಕಡಿಮೆ ಬೆಲೆಗೆ ಆಕರ್ಷಕ ಡೇಟಾ ಪ್ಲಾನ್​ಗಳನ್ನು ಪರಿಚಯಿಸುತ್ತಿದೆ. ಗ್ರಾಹಕರನ್ನು ತನ್ನತ್ತ ಸೆಳೆಯರಲು ಎರಡೂ ನೆಟ್​ವರ್ಕ್ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಇದರ ನಡುವೆ ಸರ್ಕಾರಿ ಸ್ವಾಮ್ಯದ ಬಿಎಸ್​ಎನ್​ಎಲ್ (BSNL) ಮತ್ತು ವೊಡಾಫೋನ್ – ಐಡಿಯಾ …

Read More »

`ರಾಜೀನಾಮೆ’ಗೆ ಮೊದಲೇ ವಲಸಿಗ ಸಚಿವರಲ್ಲಿ ಮನೆ ಮಾಡಿದ ಆತಂಕ!

ಬೆಂಗಳೂರು, ಜು. 23: ರಾಜ್ಯದಲ್ಲಿ `ಮುಖ್ಯಮಂತ್ರಿ ಬದಲಾವಣೆ’ ಚರ್ಚೆ ಬೆನ್ನಲ್ಲೆ `ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಮೂಲ ಕಾರಣಕರ್ತರು’ ಎನ್ನಲಾದ ವಲಸಿಗ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಗುರುವಾರ ವಿಧಾನಸೌಧದಲ್ಲಿನ ನಡೆದ ಸಚಿವ ಸಂಪುಟ ನಡುವೆಯೇ ವಲಸಿಗರು ಒಂದೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾವೂ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಸಚಿವ ಬಿ.ಎ. ಬಸವರಾಜ್ (ಭೈರತಿ) ಕೊಠಡಿಯಲ್ಲಿ ಆರು ಮಂದಿ ಸಚಿವರು ಒಟ್ಟಿಗೆ ಸಭೆ …

Read More »

ಮುಖ್ಯಮಂತ್ರಿ ಬದಲಾವಣೆಯ ಸಂದರ್ಭದಲ್ಲಿ ಸರ್ಕಾರ ರಚನೆ ಯತ್ನ ಬೇಡ; ಕಾಂಗ್ರೆಸ್‌ ಹೈ ಕಮಾಂಡ್‌

ಬೆಂಗಳೂರು, – ಬಿಜೆಪಿ ನಾಯಕತ್ವದ ಬದಲಾವಣೆಯ ನಂತರದಲ್ಲಿ ಉಂಟಾಗಬಹುದಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸರ್ಕಾರ ರಚನೆ ಮಾಡುವ ಪ್ರಯತ್ನ ಬೇಡ ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟಪಡಿಸಿದೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಸುದೀರ್ಘ ಚರ್ಚೆಯಲ್ಲಿ ಅವಕಾಶಗಳು ಎದುರಾದರೆ ಸರ್ಕಾರ ರಚನೆಯ ಪ್ರಸ್ತಾವವನ್ನು ರಾಜ್ಯ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದಾರೆ. ಆದರೆ, ಇದಕ್ಕೆ ಹೈಕಮಾಂಡ್ ಸ್ಪಷ್ಟ ನಕಾರ ವ್ಯಕ್ತಪಡಿಸಿದ್ದು, ಸಂಪೂರ್ಣ ಬಹುಮತ ಬರದ ಹೊರತು ಮೈತ್ರಿ ಅಥವಾ …

Read More »